Homeಅಂತರಾಷ್ಟ್ರೀಯಅಮಿತ್ ಶಾ ವಿದೇಶ ಪ್ರಯಾಣದ ಸೂಕ್ಷ್ಮ ಮಾಹಿತಿಗೆ $1 ಮಿಲಿಯನ್ ಬಹುಮಾನ - ನಿಷೇಧಿತ 'ಸಿಖ್ಸ್...

ಅಮಿತ್ ಶಾ ವಿದೇಶ ಪ್ರಯಾಣದ ಸೂಕ್ಷ್ಮ ಮಾಹಿತಿಗೆ $1 ಮಿಲಿಯನ್ ಬಹುಮಾನ – ನಿಷೇಧಿತ ‘ಸಿಖ್ಸ್ ಫಾರ್ ಜಸ್ಟಿಸ್’ ಸಂಘಟನೆ ಘೋಷಣೆ

- Advertisement -
- Advertisement -

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ವಿದೇಶ ಪ್ರವಾಸಗಳ ‘ಸೂಕ್ಷ್ಮ ಮಾಹಿತಿ’ಗಳನ್ನು ಹಂಚಿಕೊಳ್ಳುವವರಿಗೆ 1 ಮಿಲಿಯನ್ ಡಾಲರ್ ಬಹುಮಾನ ನೀಡುವುದಾಗಿ ನಿಷೇಧಿತ ಸಂಘಟನೆಯಾದ ‘ಸಿಖ್ಸ್ ಫಾರ್ ಜಸ್ಟಿಸ್ (SFJ)’ ಮುಖ್ಯಸ್ಥ ಗುರುಪತ್‌ವಂತ್ ಸಿಂಗ್ ಪನ್ನುನ್ ಘೋಷಿಸಿದ್ದಾರೆ.

ಇತ್ತೀಚೆಗೆ ಬಿಡುಗಡೆ ಮಾಡಿದ ವೀಡಿಯೋವೊಂದರಲ್ಲಿ ಪನ್ನುನ್ ಅವರು ಕೇಂದ್ರೀಯ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್) 1984 ರಲ್ಲಿ ಪಂಜಾಬ್‌ನಲ್ಲಿ ದೌರ್ಜನ್ಯ ಎಸಗಿದೆ ಎಂದು ಆರೋಪಿಸಿದ್ದಾರೆ.

“ಸಿಖ್ಖರ ಕಾನೂನುಬಾಹಿರ ಹತ್ಯೆಗಳಿಗೆ ಸಿಆರ್‌ಪಿಎಫ್ ಅಧಿಕಾರಿಗಳು, ಕೆಪಿಎಸ್ ಗಿಲ್‌ನಿಂದ ಹಿಡಿದು ವಿಕಾಶ್ ಯಾದವ್ ವರೆಗೂ ಕಾರಣರಾಗಿದ್ದಾರೆ. ಇದು ಮೊದಲು ಪಂಜಾಬ್‌ನಲ್ಲಿ ಸಂಭವಿಸಿತ್ತು ಮತ್ತು ಈಗ ವಿದೇಶಗಳಲ್ಲಿ ನಡೆಯುತ್ತಿದೆ” ಎಂದು ಅವರು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಅಮಿತ್ ಶಾ ಅವರು ಅರೆಸೇನಾ ಪಡೆಯ ಮುಖ್ಯಸ್ಥರಾಗಿದ್ದು, ಕೂಲಿ ಸೈನಿಕರನ್ನು ನೇಮಿಸಿಕೊಳ್ಳುವ ಜವಾಬ್ದಾರಿಯನ್ನು ಹೊಂದಿದ್ದಾರೆ ಎಂದು ಪನ್ನುನ್ ಆರೋಪಿಸಿದ್ದಾರೆ.

ಅಕ್ಟೋಬರ್ 26 ರಂದು ನಾಗಪುರ, ದೆಹಲಿ (ರೋಹಿಣಿ ಮತ್ತು ದ್ವಾರಕಾ), ಸೋನಿಪತ್, ಪಿಂಜೋರ್ ಮತ್ತು ಜಲಂಧರ್‌ನಲ್ಲಿ ಸಿಆರ್‌ಪಿಎಫ್ ಶಾಲೆಗಳನ್ನು ಸಂಪೂರ್ಣವಾಗಿ ಮುಚ್ಚುವಂತೆ ಅವರು ಕರೆ ನೀಡಿದ್ದಾರೆ. ಅಕ್ಟೋಬರ್ 20 ರಂದು ದೆಹಲಿಯ ರೋಹಿಣಿ ಪ್ರದೇಶದಲ್ಲಿ CRPF ಶಾಲೆಯ ಬಳಿ ನಿಗೂಢ ಸ್ಫೋಟ ಸಂಭವಿಸಿದ ನಂತರ ಪನ್ನುನ್ ಕರೆ ನೀಡಿದ್ದಾರೆ.

ಶಾಲೆಯ ಬಳಿ ಸಂಭವಿಸಿದ ಸ್ಪೋಟ ಭದ್ರತಾ ಎಚ್ಚರಿಕೆಯನ್ನು ಹುಟ್ಟುಹಾಕಿದೆ. ಕಚ್ಚಾ ಬಾಂಬ್‌ನಿಂದ ಸ್ಫೋಟ ನಡೆದಿದೆ ಎಂದು ಕಂಡುಬಂದಿದೆ. ಸ್ಪೋಟದಿಂದ ಶಾಲೆಯ ಗೋಡೆಗೆ ಭಾಗಶಃ ಹಾನಿಯಾಗಿದ್ದು, ಹತ್ತಿರದಲ್ಲಿ ನಿಲ್ಲಿಸಿದ್ದ ಕೆಲವು ಕಾರುಗಳಿಗೆ ಕೂಡಾ ಹಾನಿಯಾಗಿದೆ. ಅದಾಗ್ಯೂ, ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ವರದಿಗಳು ಉಲ್ಲೇಖಿಸಿವೆ.

ಅದೇ ದಿನ ಸಂಜೆ ‘ಜಸ್ಟೀಸ್ ಲೀಗ್ ಇಂಡಿಯಾ’ ಹೆಸರಿನ ಟೆಲಿಗ್ರಾಂ ಚಾನೆಲ್‌ನ ಸ್ಕ್ರೀನ್‌ಶಾಟ್ ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕವಾಗಿ ಹರಡಿತ್ತು. ರೋಹಿಣಿ ಸ್ಫೋಟದ ವೀಡಿಯೊವನ್ನು ಆಪಾದಿತ ಚಾನೆಲ್ ‘ಖಲಿಸ್ತಾನ್ ಜಿಂದಾಬಾದ್’ ವಾಟರ್‌ಮಾರ್ಕ್‌ನೊಂದಿಗೆ ಪೋಸ್ಟ್ ಮಾಡಿತ್ತು. ಖಲಿಸ್ತಾನಿ ಪರ ಗುಂಪಿನ ಕೈವಾಡ ಇದರಲ್ಲಿ ಇದೆ ಎಂದು ಸೂಚಿಸುವ ಬೆದರಿಕೆ ಸಂದೇಶವನ್ನೂ ಅದು ಹೊಂದಿತ್ತು.

ಆದಾಗ್ಯೂ, ಟೆಲಿಗ್ರಾಮ್ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ಪರಿಶೀಲನೆಗೆ ಒಳಪಟ್ಟಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಈ ಸಂಬಂಧ ಪೊಲೀಸರು ಟೆಲಿಗ್ರಾಮ್‌ಗೆ ಪತ್ರವನ್ನೂ ಬರೆದಿದ್ದಾರೆ.

ನವೆಂಬರ್ 1 ರಿಂದ 19 ರವರೆಗೆ ಏರ್ ಇಂಡಿಯಾ ವಿಮಾನಗಳಲ್ಲಿ ಪ್ರಯಾಣಿಸದಂತೆ ಸೋಮವಾರ ಜನರಿಗೆ ಎಚ್ಚರಿಕೆ ನೀಡಿದ್ದ ಪನ್ನುನ್, ಆ ದಿನಗಳಲ್ಲಿ ದಾಳಿ ನಡೆಯುವ ಸಾಧ್ಯತೆಯಿದೆ ಎಂದು ಹೇಳಿದ್ದರು.

ಇದನ್ನೂ ಓದಿ: ಕಡಪ: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಪೊಲೀಸ್ ಅಧಿಕಾರಿ; ಪೋಕ್ಸೋ ಕೇಸ್ ದಾಖಲು

ಕಡಪ: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಪೊಲೀಸ್ ಅಧಿಕಾರಿ; ಪೋಕ್ಸೋ ಕೇಸ್ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...