Homeಮುಖಪುಟಒಂದು ವರ್ಷದ ನಡುವೆ ಯುಎಸ್‌ನಲ್ಲಿ 90 ಸಾವಿರಕ್ಕೂ ಅಧಿಕ ಅಕ್ರಮ ಭಾರತೀಯ ವಲಸಿಗರ ಬಂಧನ :...

ಒಂದು ವರ್ಷದ ನಡುವೆ ಯುಎಸ್‌ನಲ್ಲಿ 90 ಸಾವಿರಕ್ಕೂ ಅಧಿಕ ಅಕ್ರಮ ಭಾರತೀಯ ವಲಸಿಗರ ಬಂಧನ : ವರದಿ

- Advertisement -
- Advertisement -

ಅಪಾಯಕಾರಿ ಪ್ರಯಾಣ ಮತ್ತು ಗಡಿ ದಾಟಲು ಪ್ರಯತ್ನಿಸುತ್ತಿರುವವರ ಸಾವಿನ ಸರಣಿಯ ಹೊರತಾಗಿಯೂ, ಅಕ್ರಮವಾಗಿ ಯುಎಸ್‌ಗೆ ಪ್ರವೇಶಿಸಲು ಯತ್ನಿಸುತ್ತಿರುವ ಭಾರತೀಯರ ಸಂಖ್ಯೆ ಹೆಚ್ಚಾಗುತ್ತಲೇ ಇದ್ದು, ಕಳೆದ ಒಂದು ವರ್ಷದ ಅವಧಿಯಲ್ಲಿ 1 ಲಕ್ಷದಷ್ಟು ಭಾರತೀಯರು ಅಕ್ರಮ ಪ್ರವೇಶಿಕ್ಕೆ ಯತ್ನಿಸಿ ಬಂಧನಕ್ಕೊಳಗಾಗಿದ್ದಾರೆ ಎಂದು ಟೈಮ್ಸ್‌ ಆಫ್ ಇಂಡಿಯಾ ವರದಿ ಮಾಡಿದೆ.

ಯುಎಸ್‌ ಆರ್ಥಿಕ ವರ್ಷ-2024ರಲ್ಲಿ ಅಂದರೆ, ಅಕ್ಟೋಬರ್ 1,2023 ರಿಂದ ಸೆಪ್ಟೆಂಬರ್ 30, 2024 ರವರೆಗೆ 29 ಲಕ್ಷ ಅಕ್ರಮ ವಲಸಿಗರು ಮೆಕ್ಸಿಕೋ ಮತ್ತು ಕೆನಡಾ ಮೂಲಕ ದೇಶ ಪ್ರವೇಶಿಸಲು ಪ್ರಯತ್ನಿಸಿದ್ದಾರೆ. ಇವರಲ್ಲಿ ಭಾರತೀಯರ ಸಂಖ್ಯೆ 90,415 ಎಂದು ಯುಎಸ್‌ ಕಸ್ಟಮ್ಸ್ ಮತ್ತು ಬಾರ್ಡರ್ ಪ್ರೊಟೆಕ್ಷನ್ (ಯುಎಸ್‌-ಸಿಬಿಪಿ) ಡೇಟಾ ತೋರಿಸಿದೆ.

ಒಟ್ಟು 90,415 ಭಾರತೀಯ ಅಕ್ರಮ ವಲಸಿಗರಲ್ಲಿ ಶೇ. 50ರಷ್ಟು ಜನರು ಗುಜರಾತ್‌ ಮೂಲದವರು ಎಂದು ಅಕ್ರಮ ವಲಸೆಯನ್ನು ಪತ್ತೆ ಹಚ್ಚುವ ಭಾರತೀಯ ಏಜೆನ್ಸಿಗಳ ಮೂಲಗಳು ತಿಳಿಸಿದೆ. ಪ್ರತಿ ಗಂಟೆಗೆ 10 ಭಾರತೀಯರನ್ನು ಬಂಧಿಸಲಾಗಿದೆ ಎಂದೂ ಕೂಡ ಹೇಳಬಹುದು. ಉತ್ತರದಲ್ಲಿ ಕೆನಡಾದೊಂದಿಗಿನ ಯುಎಸ್ ಗಡಿಯಲ್ಲಿ 43,764 ಜನರನ್ನು ಒಂದು ವರ್ಷದ ಅವಧಿಯಲ್ಲಿ ಬಂಧಿಸಲಾಗಿದೆ. ಇದು ಇಲ್ಲಿಯವರೆಗೆ ಈ ಗಡಿಯಲ್ಲಿ ಅತಿ ಹೆಚ್ಚು ಭಾರತೀಯರನ್ನು ಸೆರೆಹಿಡಿದಿರುವುದಾಗಿದೆ.

ಯುಎಸ್‌-ಸಿಬಿಪಿ ಡೇಟಾವು ಕಳೆದ ವರ್ಷಕ್ಕೆ ಹೋಲಿಸಿದರೆ ಯುಎಸ್‌ಗೆ ಪ್ರವೇಶಿಸುವಾಗ ಸಿಕ್ಕಿಬಿದ್ದ ಒಟ್ಟು ಅಕ್ರಮ ವಲಸಿಗರು ಮತ್ತು ಭಾರತೀಯರ ಸಂಖ್ಯೆಯಲ್ಲಿ ಕುಸಿತವನ್ನು ತೋರಿಸಿದೆ. ಅಲ್ಲದೆ, ಮೆಕ್ಸಿಕೋ ಮೂಲಕ ಪ್ರವೇಶಿಸುವ ಭಾರತೀಯ ವಲಸಿಗರ ಸಂಖ್ಯೆಯೂ ಕಡಿಮೆಯಾಗಿರುವುದನ್ನು ಹೇಳಿದೆ.

2023ರ ಆರ್ಥಿಕ ವರ್ಷದಲ್ಲಿ ಯುಎಸ್‌ಗೆ ಪ್ರವೇಶಿಸುವಾಗ ಸಿಕ್ಕಿಬಿದ್ದ ಒಟ್ಟಾರೆ ಅಕ್ರಮ ವಲಸಿಗರ ಸಂಖ್ಯೆ 32 ಲಕ್ಷ ಇತ್ತು ಅದು 2024ರಲ್ಲಿ 29 ಲಕ್ಷಕ್ಕೆ ಕುಸಿದಿದೆ. 2023ರಲ್ಲಿ ಬಂಧಿತರಾದ ಒಟ್ಟು ಭಾರತೀಯರ ಸಂಖ್ಯೆ 96,917 ಇತ್ತು. ಅದು 2024ಕ್ಕೆ 94,415ಕ್ಕೆ ಇಳಿದಿದೆ. ಮೆಕ್ಸಿಕೋ ಗಡಿಯ ಸಿಕ್ಕಿಬಿದ್ದ ಭಾರತೀಯರ ಸಂಖ್ಯೆ 41,770 ಆಗಿತ್ತು. 2024ರ ಆರ್ಥಿಕ ವರ್ಷದಲ್ಲಿ ಅದು 25,616ಕ್ಕೆ ಕಡಿಮೆಯಾಗಿದೆ.

ಎರಡು ಪ್ರಮುಖ ಕಾರಣಗಳಿಂದಾಗಿ ಜನರು ಮೆಕ್ಸಿಕೋ ಮೂಲಕ ಕತ್ತೆಗಳನ್ನು ಬಳಸಿ ಯುಎಸ್‌ ಪ್ರವೇಶಿಸುವುದನ್ನು ನಿಲ್ಲಿಸಿದ್ದಾರೆ. ಒಂದು ಮೆಕ್ಸಿಕೋಗೆ ತೆರಳುವ ಮೊದಲು ಅವರನ್ನು ದುಬೈ ಅಥವಾ ಟರ್ಕಿಯಲ್ಲಿ ತಡೆಯಲಾಗುತ್ತಿದೆ. ಯುಎಸ್ ಏಜೆನ್ಸಿಗಳು ಕಳೆದ ಕೆಲವು ವರ್ಷಗಳಿಂದ ಇಲ್ಲಿ ತೀವ್ರ ನಿಗಾ ವಹಿಸುತ್ತಿವೆ.

ಮೂಲವೊಂದು ಹೇಳುವಂತೆ, “ಗುಜರಾತಿಗಳು ಕೂಡ ಮೆಕ್ಸಿಕೋಕ್ಕಿಂತ ಕೆನಡಾವನ್ನು ಆಯ್ಕೆ ಮಾಡಲು ಪ್ರಾರಂಭಿಸಿದ್ದಾರೆ. ಏಕೆಂದರೆ, ಇಲ್ಲಿ ಸುಲಭವಾಗಿ ಟ್ಯಾಕ್ಸಿಯನ್ನು ಬಾಡಿಗೆಗೆ ತೆಗೆದುಕೊಂಡು ಯುಎಸ್‌ಗೆ ದಾಟಬಹುದು. ಇತ್ತೀಚೆಗೆ, ಯುಎಸ್ ಅಧಿಕಾರಿಗಳು ಈ ಗಡಿಯಲ್ಲಿ ನಿಗಾವನ್ನು ಬಿಗಿಗೊಳಿಸಿದ್ದಾರೆ. ಅಕ್ರಮ ವಲಸಿಗರನ್ನು ಕೆನಡಾಕ್ಕೆ ವಾಪಸ್ ಕಳುಹಿಸುತ್ತಿದ್ದಾರೆ ಆದರೂ, ಅಕ್ರಮ ವಲಸಿಗರು ಅದೇ ಮಾರ್ಗದಲ್ಲಿ ಸ್ವಲ್ಪ ಸಮಯದ ನಂತರ ಮತ್ತೆ ಪ್ರವೇಶಿಸಲು ಪ್ರಯತ್ನಿಸುತ್ತಾರೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ವಿವರಿಸಿದೆ.

ಇದನ್ನೂ ಓದಿ : ಅಮಿತ್ ಶಾ ವಿದೇಶ ಪ್ರಯಾಣದ ಸೂಕ್ಷ್ಮ ಮಾಹಿತಿಗೆ $1 ಮಿಲಿಯನ್ ಬಹುಮಾನ – ನಿಷೇಧಿತ ‘ಸಿಖ್ಸ್ ಫಾರ್ ಜಸ್ಟಿಸ್’ ಸಂಘಟನೆ ಘೋಷಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...

ಆಕಸ್ಮಿಕವಾಗಿ ಗಡಿ ದಾಟಿದ್ದ 7 ಭಾರತೀಯರನ್ನು ಹಸ್ತಾಂತರಿಸಿದ ಪಾಕಿಸ್ತಾನ

2023 ರ ಪ್ರವಾಹದ ಸಮಯದಲ್ಲಿ ಅಜಾಗರೂಕತೆಯಿಂದ ಗಡಿ ದಾಟಿದ ನಂತರ ಬಂಧಿಸಲ್ಪಟ್ಟ ಏಳು ಭಾರತೀಯ ನಾಗರಿಕರನ್ನು ಪಾಕಿಸ್ತಾನ ಶನಿವಾರ ಸ್ವದೇಶಕ್ಕೆ ವಾಪಸ್ ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನ ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ನಲ್ಲಿ...