Homeಮುಖಪುಟಒಂದು ವರ್ಷದ ನಡುವೆ ಯುಎಸ್‌ನಲ್ಲಿ 90 ಸಾವಿರಕ್ಕೂ ಅಧಿಕ ಅಕ್ರಮ ಭಾರತೀಯ ವಲಸಿಗರ ಬಂಧನ :...

ಒಂದು ವರ್ಷದ ನಡುವೆ ಯುಎಸ್‌ನಲ್ಲಿ 90 ಸಾವಿರಕ್ಕೂ ಅಧಿಕ ಅಕ್ರಮ ಭಾರತೀಯ ವಲಸಿಗರ ಬಂಧನ : ವರದಿ

- Advertisement -
- Advertisement -

ಅಪಾಯಕಾರಿ ಪ್ರಯಾಣ ಮತ್ತು ಗಡಿ ದಾಟಲು ಪ್ರಯತ್ನಿಸುತ್ತಿರುವವರ ಸಾವಿನ ಸರಣಿಯ ಹೊರತಾಗಿಯೂ, ಅಕ್ರಮವಾಗಿ ಯುಎಸ್‌ಗೆ ಪ್ರವೇಶಿಸಲು ಯತ್ನಿಸುತ್ತಿರುವ ಭಾರತೀಯರ ಸಂಖ್ಯೆ ಹೆಚ್ಚಾಗುತ್ತಲೇ ಇದ್ದು, ಕಳೆದ ಒಂದು ವರ್ಷದ ಅವಧಿಯಲ್ಲಿ 1 ಲಕ್ಷದಷ್ಟು ಭಾರತೀಯರು ಅಕ್ರಮ ಪ್ರವೇಶಿಕ್ಕೆ ಯತ್ನಿಸಿ ಬಂಧನಕ್ಕೊಳಗಾಗಿದ್ದಾರೆ ಎಂದು ಟೈಮ್ಸ್‌ ಆಫ್ ಇಂಡಿಯಾ ವರದಿ ಮಾಡಿದೆ.

ಯುಎಸ್‌ ಆರ್ಥಿಕ ವರ್ಷ-2024ರಲ್ಲಿ ಅಂದರೆ, ಅಕ್ಟೋಬರ್ 1,2023 ರಿಂದ ಸೆಪ್ಟೆಂಬರ್ 30, 2024 ರವರೆಗೆ 29 ಲಕ್ಷ ಅಕ್ರಮ ವಲಸಿಗರು ಮೆಕ್ಸಿಕೋ ಮತ್ತು ಕೆನಡಾ ಮೂಲಕ ದೇಶ ಪ್ರವೇಶಿಸಲು ಪ್ರಯತ್ನಿಸಿದ್ದಾರೆ. ಇವರಲ್ಲಿ ಭಾರತೀಯರ ಸಂಖ್ಯೆ 90,415 ಎಂದು ಯುಎಸ್‌ ಕಸ್ಟಮ್ಸ್ ಮತ್ತು ಬಾರ್ಡರ್ ಪ್ರೊಟೆಕ್ಷನ್ (ಯುಎಸ್‌-ಸಿಬಿಪಿ) ಡೇಟಾ ತೋರಿಸಿದೆ.

ಒಟ್ಟು 90,415 ಭಾರತೀಯ ಅಕ್ರಮ ವಲಸಿಗರಲ್ಲಿ ಶೇ. 50ರಷ್ಟು ಜನರು ಗುಜರಾತ್‌ ಮೂಲದವರು ಎಂದು ಅಕ್ರಮ ವಲಸೆಯನ್ನು ಪತ್ತೆ ಹಚ್ಚುವ ಭಾರತೀಯ ಏಜೆನ್ಸಿಗಳ ಮೂಲಗಳು ತಿಳಿಸಿದೆ. ಪ್ರತಿ ಗಂಟೆಗೆ 10 ಭಾರತೀಯರನ್ನು ಬಂಧಿಸಲಾಗಿದೆ ಎಂದೂ ಕೂಡ ಹೇಳಬಹುದು. ಉತ್ತರದಲ್ಲಿ ಕೆನಡಾದೊಂದಿಗಿನ ಯುಎಸ್ ಗಡಿಯಲ್ಲಿ 43,764 ಜನರನ್ನು ಒಂದು ವರ್ಷದ ಅವಧಿಯಲ್ಲಿ ಬಂಧಿಸಲಾಗಿದೆ. ಇದು ಇಲ್ಲಿಯವರೆಗೆ ಈ ಗಡಿಯಲ್ಲಿ ಅತಿ ಹೆಚ್ಚು ಭಾರತೀಯರನ್ನು ಸೆರೆಹಿಡಿದಿರುವುದಾಗಿದೆ.

ಯುಎಸ್‌-ಸಿಬಿಪಿ ಡೇಟಾವು ಕಳೆದ ವರ್ಷಕ್ಕೆ ಹೋಲಿಸಿದರೆ ಯುಎಸ್‌ಗೆ ಪ್ರವೇಶಿಸುವಾಗ ಸಿಕ್ಕಿಬಿದ್ದ ಒಟ್ಟು ಅಕ್ರಮ ವಲಸಿಗರು ಮತ್ತು ಭಾರತೀಯರ ಸಂಖ್ಯೆಯಲ್ಲಿ ಕುಸಿತವನ್ನು ತೋರಿಸಿದೆ. ಅಲ್ಲದೆ, ಮೆಕ್ಸಿಕೋ ಮೂಲಕ ಪ್ರವೇಶಿಸುವ ಭಾರತೀಯ ವಲಸಿಗರ ಸಂಖ್ಯೆಯೂ ಕಡಿಮೆಯಾಗಿರುವುದನ್ನು ಹೇಳಿದೆ.

2023ರ ಆರ್ಥಿಕ ವರ್ಷದಲ್ಲಿ ಯುಎಸ್‌ಗೆ ಪ್ರವೇಶಿಸುವಾಗ ಸಿಕ್ಕಿಬಿದ್ದ ಒಟ್ಟಾರೆ ಅಕ್ರಮ ವಲಸಿಗರ ಸಂಖ್ಯೆ 32 ಲಕ್ಷ ಇತ್ತು ಅದು 2024ರಲ್ಲಿ 29 ಲಕ್ಷಕ್ಕೆ ಕುಸಿದಿದೆ. 2023ರಲ್ಲಿ ಬಂಧಿತರಾದ ಒಟ್ಟು ಭಾರತೀಯರ ಸಂಖ್ಯೆ 96,917 ಇತ್ತು. ಅದು 2024ಕ್ಕೆ 94,415ಕ್ಕೆ ಇಳಿದಿದೆ. ಮೆಕ್ಸಿಕೋ ಗಡಿಯ ಸಿಕ್ಕಿಬಿದ್ದ ಭಾರತೀಯರ ಸಂಖ್ಯೆ 41,770 ಆಗಿತ್ತು. 2024ರ ಆರ್ಥಿಕ ವರ್ಷದಲ್ಲಿ ಅದು 25,616ಕ್ಕೆ ಕಡಿಮೆಯಾಗಿದೆ.

ಎರಡು ಪ್ರಮುಖ ಕಾರಣಗಳಿಂದಾಗಿ ಜನರು ಮೆಕ್ಸಿಕೋ ಮೂಲಕ ಕತ್ತೆಗಳನ್ನು ಬಳಸಿ ಯುಎಸ್‌ ಪ್ರವೇಶಿಸುವುದನ್ನು ನಿಲ್ಲಿಸಿದ್ದಾರೆ. ಒಂದು ಮೆಕ್ಸಿಕೋಗೆ ತೆರಳುವ ಮೊದಲು ಅವರನ್ನು ದುಬೈ ಅಥವಾ ಟರ್ಕಿಯಲ್ಲಿ ತಡೆಯಲಾಗುತ್ತಿದೆ. ಯುಎಸ್ ಏಜೆನ್ಸಿಗಳು ಕಳೆದ ಕೆಲವು ವರ್ಷಗಳಿಂದ ಇಲ್ಲಿ ತೀವ್ರ ನಿಗಾ ವಹಿಸುತ್ತಿವೆ.

ಮೂಲವೊಂದು ಹೇಳುವಂತೆ, “ಗುಜರಾತಿಗಳು ಕೂಡ ಮೆಕ್ಸಿಕೋಕ್ಕಿಂತ ಕೆನಡಾವನ್ನು ಆಯ್ಕೆ ಮಾಡಲು ಪ್ರಾರಂಭಿಸಿದ್ದಾರೆ. ಏಕೆಂದರೆ, ಇಲ್ಲಿ ಸುಲಭವಾಗಿ ಟ್ಯಾಕ್ಸಿಯನ್ನು ಬಾಡಿಗೆಗೆ ತೆಗೆದುಕೊಂಡು ಯುಎಸ್‌ಗೆ ದಾಟಬಹುದು. ಇತ್ತೀಚೆಗೆ, ಯುಎಸ್ ಅಧಿಕಾರಿಗಳು ಈ ಗಡಿಯಲ್ಲಿ ನಿಗಾವನ್ನು ಬಿಗಿಗೊಳಿಸಿದ್ದಾರೆ. ಅಕ್ರಮ ವಲಸಿಗರನ್ನು ಕೆನಡಾಕ್ಕೆ ವಾಪಸ್ ಕಳುಹಿಸುತ್ತಿದ್ದಾರೆ ಆದರೂ, ಅಕ್ರಮ ವಲಸಿಗರು ಅದೇ ಮಾರ್ಗದಲ್ಲಿ ಸ್ವಲ್ಪ ಸಮಯದ ನಂತರ ಮತ್ತೆ ಪ್ರವೇಶಿಸಲು ಪ್ರಯತ್ನಿಸುತ್ತಾರೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ವಿವರಿಸಿದೆ.

ಇದನ್ನೂ ಓದಿ : ಅಮಿತ್ ಶಾ ವಿದೇಶ ಪ್ರಯಾಣದ ಸೂಕ್ಷ್ಮ ಮಾಹಿತಿಗೆ $1 ಮಿಲಿಯನ್ ಬಹುಮಾನ – ನಿಷೇಧಿತ ‘ಸಿಖ್ಸ್ ಫಾರ್ ಜಸ್ಟಿಸ್’ ಸಂಘಟನೆ ಘೋಷಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...