Homeಮುಖಪುಟಜ್ಞಾನವಾಪಿ ಮಸೀದಿಯಲ್ಲಿ ಉತ್ಖನನ ಕೋರಿ ಸಲ್ಲಿಸಿದ ಮನವಿ ತಿರಸ್ಕೃತ

ಜ್ಞಾನವಾಪಿ ಮಸೀದಿಯಲ್ಲಿ ಉತ್ಖನನ ಕೋರಿ ಸಲ್ಲಿಸಿದ ಮನವಿ ತಿರಸ್ಕೃತ

- Advertisement -
- Advertisement -

ಭಾರತೀಯ ಪುರಾತತ್ವ ಸರ್ವೇಕ್ಷಣಾ ಸಂಸ್ಥೆಯಿಂದ ಜ್ಞಾನವಾಪಿ ಮಸೀದಿ ಸಂಕೀರ್ಣದ ಹೆಚ್ಚುವರಿ ಸಮೀಕ್ಷೆ ನಡೆಸಬೇಕು ಎಂದು ಕೋರಿ ಸಲ್ಲಿಸಲಾಗಿರುವ ಹಿಂದೂ ಅರ್ಜಿದಾರರ ಮನವಿಯನ್ನು ವಾರಣಾಸಿಯ ತ್ವರಿತ ನ್ಯಾಯಾಲಯವು ಶುಕ್ರವಾರ ತಿರಸ್ಕರಿಸಿದೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.

ವಕೀಲ ವಿಜಯ್ ಶಂಕರ್ ರಸ್ತೋಗಿ ಸಲ್ಲಿಸಿರುವ ಅರ್ಜಿಯಲ್ಲಿ ಮಸೀದಿಯ ಕೇಂದ್ರ ಗುಮ್ಮಟದ ಅಡಿಯಲ್ಲಿ ಪ್ರಾಚೀನ ಹಿಂದೂ ದೇವಾಲಯದ ಅವಶೇಷಗಳನ್ನು ಪಡೆಯಲು ಆಕ್ರಮಣಕಾರಿ ಉತ್ಖನನ ವಿಧಾನಗಳನ್ನು ಬಳಸಲು ಪುರಾತತ್ವ ಸಂಸ್ಥೆಗೆ ನಿರ್ದೇಶನ ನೀಡಬೇಕು ಎಂದು ಕೋರಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಜನವರಿ 31 ರಂದು, ವಾರಣಾಸಿ ಜಿಲ್ಲಾ ನ್ಯಾಯಾಲಯವು ಹಿಂದೂಗಳಿಗೆ ಸಂಕೀರ್ಣದ ನೆಲಮಾಳಿಗೆಯಲ್ಲಿ ಪ್ರಾರ್ಥನೆ ಸಲ್ಲಿಸಲು ಅನುಮತಿ ನೀಡಿತ್ತು. ಭಾರತೀಯ ಪುರಾತತ್ವ ಸರ್ವೇಕ್ಷಣೆಯ ವರದಿಯು ಈ ಸ್ಥಳದಲ್ಲಿ ಅಸ್ತಿತ್ವದಲ್ಲಿದ್ದ ಹಿಂದೂ ದೇವಾಲಯವನ್ನು 17 ನೇ ಶತಮಾನದಲ್ಲಿ ನಾಶಪಡಿಸಲಾಯಿತು ಎಂದು ಹೇಳಿತ್ತು.

2022ರ ಮೇ ತಿಂಗಳಲ್ಲಿ ಮಸೀದಿ ಆವರಣದಲ್ಲಿ ಇದ್ದ ಅಂಡಾಕಾರದ ವಸ್ತುವು ಶಿವಲಿಂಗವಾಗಿದೆ ಎಂದು ಹಿಂದೂ ಅರ್ಜಿದಾರರು ಪ್ರತಿಪಾದಿಸಿ ಪ್ರಕರಣ ದಾಖಲಿಸಿದ್ದರು. ಈ ವಸ್ತು ಶಿವಲಿಂಗವಾಗಿದೆ ಎಂದು ಅವರು ಪ್ರತಿಪಾದಿಸಿದ್ದರು. ಆದರೆ ಮಸೀದಿಯ ಉಸ್ತುವಾರಿ ಸಮಿತಿ ಈ ವಸ್ತು ಮಸೀದಿಗೆ ಆಗಮಿಸುವವರು ವುಜು ನಿರ್ವಹಿಸುವ ನೀರಿನ ತೊಟ್ಟಿಯಲ್ಲಿರುವ ನಿಷ್ಕ್ರಿಯವಾದ ಕಾರಂಜಿ ಎಂದು ಹೇಳಿತ್ತು.

ರಸ್ತೋಗಿ ಅವರ ಮನವಿಯ ಭಾಗವಾಗಿ, ಶುಕ್ರವಾರದ ತ್ವರಿತ ನ್ಯಾಯಾಲಯವು ಪುರಾತತ್ತ್ವ ಶಾಸ್ತ್ರದ ಸಂಸ್ಥೆಯು ವುಜು ನಿರ್ವಸುವ ನೀರಿನ ತೊಟ್ಟಿಯಲ್ಲಿ ಇರುವ ಕಾರಂಜಿಯ “ವಯಸ್ಸು, ಗಾತ್ರ, ಸ್ಮಾರಕ ಮತ್ತು ಪುರಾತತ್ವ ವಿನ್ಯಾಸ ಅಥವಾ ಶೈಲಿಯನ್ನು… ಮತ್ತು ಅದರ ನಿರ್ಮಾಣಕ್ಕೆ ಯಾವ ವಸ್ತುಗಳನ್ನು ಬಳಸಲಾಗಿದೆ ಎಂಬುದನ್ನು ನಿರ್ಧರಿಸಲು ತನಿಖೆ ನಡೆಸುವಂತೆ ಕೇಳಿದ್ದ ಕೋರಿಕೆಯನ್ನು ಪರಿಗಣಿಸಿದೆ.

ಆದಾಗ್ಯೂ, ಈ ಸ್ಥಳದಲ್ಲಿ ಯಾವುದೇ ಉತ್ಖನನವನ್ನು ತಡೆಯುವ ಅಲಹಾಬಾದ್ ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟ್‌ನ ಹಿಂದಿನ ಆದೇಶಗಳನ್ನು ನ್ಯಾಯಾಲಯ ಉಲ್ಲೇಖಿಸಿ, “ಸುಪ್ರೀಂ ಕೋರ್ಟ್ ಮತ್ತು ಅಲಹಾಬಾದ್ ಹೈಕೋರ್ಟ್ ಸಹ ಆಕ್ರಮಣಶೀಲವಲ್ಲದ ವಿಧಾನವನ್ನು ಬಳಸಿಕೊಂಡು ಸಮೀಕ್ಷೆ ನಡೆಸುವಂತೆ ಆದೇಶಿಸಿದೆ. ತನಿಖೆ ನಡೆಸುವಾಗ ಉತ್ಖನನ ತಂತ್ರವನ್ನು ಬಳಸಬೇಡಿ ಮತ್ತು ಯಾವುದೇ ಆಸ್ತಿಯನ್ನು ನಾಶಪಡಿಸಬೇಡಿ” ಎಂದು ಸಿವಿಲ್ ನ್ಯಾಯಾಧೀಶ ಯುಗಲ್ ಶರ್ಮಾ ಹೇಳಿದ್ದಾರೆ.

ಈ ಪ್ರಕರಣದಲ್ಲಿ ಆರ್ಕಿಯಾಲಾಜಿಕಲ್ ಸರ್ವೆ ಆಫ್ ಇಂಡಿಯಾದ ವರದಿಯನ್ನು ಇನ್ನೂ ಕಾನೂನುಬದ್ಧವಾಗಿ ಪರಿಶೀಲಿಸಬೇಕಾಗಿದೆ. ಸುಪ್ರೀಂ ಕೋರ್ಟ್‌ನ ಆದೇಶದ ಕಾರಣಕ್ಕೆ ಮಸೀದಿಯ ವುಜೂ ನಿರ್ವಹಿಸುವ ನೀರಿನ ತೊಟ್ಟಿಯಲ್ಲಿರುವ ಕಾರಂಜಿಯನ್ನು ರಕ್ಷಿಸಲಾಗಿದೆ ಎಂದು ಶರ್ಮಾ ಸೂಚಿಸಿದ್ದಾರೆ.

ಮಸೀದಿ ಸಂಕೀರ್ಣದ ಮುಚ್ಚಿದ ನೆಲಮಾಳಿಗೆಯಲ್ಲಿ ಹಿಂದೂಗಳಿಗೆ ಪ್ರಾರ್ಥನೆ ಸಲ್ಲಿಸಲು ಅವಕಾಶ ನೀಡುವ ವಾರಣಾಸಿ ಜಿಲ್ಲಾ ನ್ಯಾಯಾಲಯದ ಆದೇಶಕ್ಕೆ ತಡೆ ನೀಡಲು ಮೇ ತಿಂಗಳಲ್ಲಿ ಸುಪ್ರೀಂ ಕೋರ್ಟ್ ನಿರಾಕರಿಸಿತ್ತು. ಹಿಂದೂಗಳು ದಕ್ಷಿಣದಿಂದ ಮಸೀದಿ ಸಂಕೀರ್ಣವನ್ನು ಪ್ರವೇಶಿಸಬೇಕು ಮತ್ತು ನೆಲಮಾಳಿಗೆಯಲ್ಲಿ ಪ್ರಾರ್ಥನೆ ಸಲ್ಲಿಸಬೇಕು ಮತ್ತು ಮುಸ್ಲಿಮರು ಉತ್ತರ ಭಾಗದಲ್ಲಿ ಪ್ರಾರ್ಥಿಸಬೇಕು ಎಂದು ನಿರ್ದೇಶಿಸಿದೆ. ಪ್ರಕರಣದ ತೀರ್ಪು ಬರುವವರೆಗೆ ಈ ವ್ಯವಸ್ಥೆ ಮುಂದುವರಿಯುವ ನಿರೀಕ್ಷೆಯಿದೆ.

ಇದನ್ನೂ ಓದಿ: ಅಮಿತ್ ಶಾ ವಿದೇಶ ಪ್ರಯಾಣದ ಸೂಕ್ಷ್ಮ ಮಾಹಿತಿಗೆ $1 ಮಿಲಿಯನ್ ಬಹುಮಾನ – ನಿಷೇಧಿತ ‘ಸಿಖ್ಸ್ ಫಾರ್ ಜಸ್ಟಿಸ್’ ಸಂಘಟನೆ ಘೋಷಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...

‘ಕಾನೂನು ಪ್ರಕ್ರಿಯೆಯದುರುಪಯೋಗ’: ನ್ಯೂಸ್‌ಕ್ಲಿಕ್ ವಿರುದ್ಧದ ದೆಹಲಿ ಪೊಲೀಸ್, ಇಡಿ ಪ್ರಕರಣಗಳನ್ನು ರದ್ದುಗೊಳಿಸಿದ ಹೈಕೋರ್ಟ್

ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಯಮಗಳ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಸಂಸ್ಥೆ ಮತ್ತು ಅದರ ಮುಖ್ಯ ಸಂಪಾದಕ ಪ್ರಬೀರ್ ಪುರಕಾಯಸ್ಥ ವಿರುದ್ಧ ದೆಹಲಿ ಪೊಲೀಸರು ಹಾಗೂ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣಗಳನ್ನು ದೆಹಲಿ...

ಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

ಕಾಂಗ್ರೆಸ್ ಪಕ್ಷದೊಂದಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿಲೀನವಾಗಬಹುದು ಎಂಬ ವರದಿಗಳನ್ನು ಟಿಎಂಸಿ ಉನ್ನತ ಮೂಲಗಳು ಬುಧವಾರ (ಇಂದು) ಸಂಪೂರ್ಣವಾಗಿ ತಳ್ಳಿಹಾಕಿವೆ. "ನಮ್ಮ ಪಕ್ಷಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಮತ್ತು ವಿಲೀನಕ್ಕೆ...

ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ : ಬಿಜೆಪಿಯ ಸೀಟ್ ಚೋರಿ?

ರಾಜ್ಯಸಭಾ ಚುನಾವಣೆಗೆ ಮಧ್ಯಪ್ರದೇಶದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿರುವುದು ದೇಶದಲ್ಲಿ ದೊಡ್ಡ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಕಾಂಗ್ರೆಸ್ ಈ ವಿಚಾರವನ್ನು ಬಹಳ ಗಂಭೀರವಾಗಿ ಪರಿಗಣಿಸಿ ಬುಧವಾರ (ಜೂ. 10)...