Homeಮುಖಪುಟಉತ್ತರಾಖಂಡ | ಹಿಂಸಾಚಾರಕ್ಕೆ ತಿರುಗಿದ ಮಸೀದಿ ವಿರೋಧಿ ಪ್ರತಿಭಟನೆ, ಮುಸ್ಲಿಮರ ಅಂಗಡಿಗಳು ಧ್ವಂಸ

ಉತ್ತರಾಖಂಡ | ಹಿಂಸಾಚಾರಕ್ಕೆ ತಿರುಗಿದ ಮಸೀದಿ ವಿರೋಧಿ ಪ್ರತಿಭಟನೆ, ಮುಸ್ಲಿಮರ ಅಂಗಡಿಗಳು ಧ್ವಂಸ

- Advertisement -
- Advertisement -

ಉತ್ತರಾಖಂಡದ ಉತ್ತರಕಾಶಿ ಪಟ್ಟಣದಲ್ಲಿ ಗುರುವಾರ ಹಿಂದುತ್ವ ಗುಂಪುಗಳ ನೇತೃತ್ವದಲ್ಲಿ ಕಾಶಿ ವಿಶ್ವನಾಥ ದೇವಸ್ಥಾನದ ಬಳಿ 55 ವರ್ಷ ಹಳೆಯ ಮಸೀದಿಯನ್ನು ಕೆಡವಲು ಒತ್ತಾಯಿಸಿ ನಡೆಸಿದ್ದ ರ್ಯಾಲಿಯಲ್ಲಿ ಹಿಂಸಾತ್ಮಕ ಘರ್ಷಣೆಗಳು ಸಂಭವಿಸಿವೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ. ಘರ್ಷಣೆಯಲ್ಲಿ ಮುಸ್ಲಿಂ ಒಡೆತನದ ಅಂಗಡಿಗಳನ್ನು ಧ್ವಂಸಗೊಳಿಸಲಾಯಿತು ಮತ್ತು ನಾಲ್ವರು ಪೊಲೀಸ್ ಅಧಿಕಾರಿಗಳು ಗಾಯಗೊಂಡಿದ್ದಾರೆ ಎಂದು ಪತ್ರಿಕೆ ವರದಿ ಮಾಡಿದೆ.

ಸಂಯುಕ್ತ ಸನಾತನ ಧರ್ಮ ರಕ್ಷಕ ಸಂಘದ ಅಡಿಯಲ್ಲಿ ಆಯೋಜಿಸಲಾದ ಪ್ರತಿಭಟನೆಯಲ್ಲಿ ಭಜರಂಗದಳ, ವಿಶ್ವ ಹಿಂದೂ ಪರಿಷತ್ ಮತ್ತು ಇತರ ಹಿಂದುತ್ವ ಗುಂಪುಗಳು ಮಸೀದಿಯನ್ನು “ಕಾನೂನುಬಾಹಿರವಾಗಿ ನಿರ್ಮಿಸಲಾಗಿದೆ” ಎಂದು ಪ್ರತಿಪಾದಿಸಿದ್ದರು. ಆದಾಗ್ಯೂ, ಜಿಲ್ಲಾಡಳಿತವು ಇತ್ತೀಚೆಗೆ ಮಸೀದಿಯ ಕಾನೂನುಬದ್ಧತೆಯನ್ನು ದೃಢಪಡಿಸಿದ್ದು, 1969 ರಲ್ಲಿ ಅದರ ನೋಂದಣಿ ಮಾಡಲಾಗಿದೆ ಎಂದು ಅದು ಹೇಳಿದೆ. ಪ್ರತಿಭಟನಾಕಾರರನ್ನು ಚದುರಿಸಲು ಪೊಲೀಸರು ಲಾಠಿ ಪ್ರಹಾರ ನಡೆಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಪೊಲೀಸ್ ಬ್ಯಾರಿಕೇಡ್‌ಗಳನ್ನು ಸಮೀಪಿಸುತ್ತಿದ್ದಂತೆ ಗುಂಪು ಕ್ಷೋಭೆಗೊಂಡಿತು ಎಂದು ಪೊಲೀಸ್ ವರಿಷ್ಠಾಧಿಕಾರಿ ಅಮಿತ್ ಶ್ರೀವಾಸ್ತವ ಹೇಳಿದ್ದಾರೆ. ಪ್ರತಿಭಟನಾಕಾರರು ಪ್ರತಿಭಟನಾ ಮೆರವಣಿಗೆಯ ಗೊತ್ತುಪಡಿಸಿದ ಮಾರ್ಗದ ಬದಲಿಗೆ ಮಸೀದಿಯ ಕಡೆಗೆ ತಿರುಗಿಸಲು ಪ್ರಯತ್ನಿಸಿದರು, ಹಾಗಾಗಿ ಅಧಿಕಾರಿಗಳು ಮಧ್ಯಪ್ರವೇಶಿಸಿದ್ದಾರೆ ಎಂದು ಅವರು ಹೇಳಿದ್ದಾರೆ.

“ಮಸೀದಿ ಕಡೆಗೆ ತೆರಳದಂತೆ ಅವರನ್ನು ನಿರ್ಬಂಧಿಸಿದಾಗ, ಪ್ರತಿಭಟನಾಕಾರರು ಪೊಲೀಸರ ಮೇಲೆ ಕಲ್ಲುಗಳನ್ನು ಎಸೆಯಲು ಪ್ರಾರಂಭಿಸಿದರು. ಇದರಿಂದ ನಾಲ್ವರು ಅಧಿಕಾರಿಗಳು ಗಾಯಗೊಂಡರು” ಎಂದು ಶ್ರೀವಾಸ್ತವ ಹೇಳಿದ್ದಾರೆ. ಹಿಂಸಾಚಾರದಲ್ಲಿ ಭಾಗಿಯಾಗಿರುವವರನ್ನು ಗುರುತಿಸಲು ಪೊಲೀಸರು ಭದ್ರತಾ ಕ್ಯಾಮೆರಾ ದೃಶ್ಯಗಳನ್ನು ಪರಿಶೀಲಿಸುತ್ತಿದ್ದಾರೆ ಎಂದು ಅವರು ಹೇಳಿದ್ದಾರೆ.

ದೇವಭೂಮಿ ರಕ್ಷಾ ಅಭಿಯಾನದ ಮುಖ್ಯಸ್ಥ ದರ್ಶನ್ ಭಾರತಿ ಸೇರಿದಂತೆ ಸುಮಾರು 30 ಪ್ರತಿಭಟನಾಕಾರರು ಗಾಯಗೊಂಡಿದ್ದಾರೆ ಎಂದು ದಿ ಹಿಂದೂ ವರದಿ ಮಾಡಿದೆ. ಮಸೀದಿಯ ವಿರುದ್ಧ ತಿಂಗಳುಗಟ್ಟಲೆ ಸಂಘಟಿತ ಪ್ರತಿಭಟನೆಗಳನ್ನು ನಡೆಸಲಾಗುತ್ತಿದೆ. ಇದೀಗ ಪ್ರತಿಭಟನೆ ಉಲ್ಬಣಗೊಂಡಿವೆ. ಬಿಜೆಪಿ ಪರ ಕಾರ್ಯಕರ್ತರು ಧರಣಿಗಳನ್ನು ನಡೆಸಿದ್ದು, ಮಸೀದಿಯನ್ನು ಕೆಡವಲು ಒತ್ತಾಯಿಸಿ ಜಿಲ್ಲೆಯ ಅಧಿಕಾರಿಗಳಿಗೆ ಪದೇ ಪದೇ ಮನವಿ ಸಲ್ಲಿಸಿದ್ದಾರೆ.

ಸೆಪ್ಟೆಂಬರ್ ಆರಂಭದಲ್ಲಿ ಮಸೀದಿಯು ವಿವಾದಿತ ಭೂಮಿಯನ್ನು ಆಕ್ರಮಿಸಿಕೊಂಡಿದೆ ಎಂದು ಆರೋಪಿಸಿ ಪ್ರತಿಭಟನಾಕಾರರು ಸಣ್ಣ ರ್ಯಾಲಿಯನ್ನು ನಡೆಸಿದ್ದರು. ಜಿಲ್ಲಾಡಳಿತವು ಇತ್ತೀಚೆಗೆ ಮಸೀದಿಯ ನ್ಯಾಯಸಮ್ಮತತೆಯನ್ನು ಎತ್ತಿ ಹಿಡಿದಿದ್ದರೂ, ಬಿಜೆಪಿ ಪರ ಗುಂಪುಗಳು ಅದನ್ನು ತಳ್ಳಿಹಾಕಿವೆ.

“ಈ ಮಸೀದಿಯು ಕಾನೂನುಬಾಹಿರವಾಗಿದೆ ಎಂಬುವುದನ್ನು ಸಮರ್ಥಿಸಲು ನಮ್ಮ ಬಳಿ ದಾಖಲೆಗಳಿವೆ. ನಾವು ಅವುಗಳನ್ನು ಸಾರ್ವಜನಿಕವಾಗಿ ಪ್ರಸ್ತುತಪಡಿಸುತ್ತೇವೆ” ಎಂದು ಸಂಯುಕ್ತ ಸನಾತನ ಧರ್ಮ ರಕ್ಷಕ ಸಂಘ ಹೇಳಿಕೆಯಲ್ಲಿ ತಿಳಿಸಿದೆ. ಗುರುವಾರ, ಉತ್ತರಕಾಶಿ ಪಟ್ಟಣದ ಮುಖ್ಯ ಮಾರುಕಟ್ಟೆಯಲ್ಲಿ ರ್ಯಾಲಿ ನಡೆಸಲಾಗಿದ್ದು, ಅದರಲ್ಲಿ ಭಾಗವಹಿಸಿದವರು ಮುಸ್ಲಿಂ ವಿರೋಧಿ ಘೋಷಣೆಗಳನ್ನು ಕೂಗಿದ್ದಾರೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.

ಡೆಹ್ರಾಡೂನ್ ಮೂಲದ ಮುಸ್ಲಿಂ ಸೇವಾ ಸಂಘಟನೆಯ ಅಧ್ಯಕ್ಷ ನಯೀಮ್ ಖುರೇಷಿ ಹಿಂಸಾಚಾರವನ್ನು ಖಂಡಿಸಿದ್ದು, ಆಡಳಿತದ ಪ್ರತಿಕ್ರಿಯೆಯನ್ನು ಟೀಕಿಸಿದ್ದಾರೆ. “ಈ ರ್ಯಾಲಿ ಕಾನೂನು ಮತ್ತು ಸುವ್ಯವಸ್ಥೆಯ ಸಂಪೂರ್ಣ ನಿರ್ಲಕ್ಷ್ಯವನ್ನು ತೋರಿಸುತ್ತದೆ…ಹಿಂಸಾಚಾರವು ಉದ್ವಿಗ್ನತೆಯನ್ನು ಸೃಷ್ಟಿಸುವ ಮತ್ತು ಹಿಂದೂ ರಾಷ್ಟ್ರಕ್ಕಾಗಿ ಮಾಡುವ ಕಾರ್ಯಸೂಚಿಯ ಭಾಗವಾಗಿದೆ” ಎಂದು ಅವರು ಹೇಳಿದ್ದಾರೆ. ರಾಜ್ಯದ ಧಾರ್ಮಿಕ ಅಲ್ಪಸಂಖ್ಯಾತರ ರಕ್ಷಣೆಯನ್ನು ಖಚಿತಪಡಿಸಿಕೊಳ್ಳಲು ಸರ್ಕಾರ ತುರ್ತು ಕ್ರಮ ಕೈಗೊಳ್ಳಬೇಕು ಎಂದು ಅವರು ಕರೆ ನೀಡಿದ್ದಾರೆ.

ಉತ್ತರಕಾಶಿ ಜಿಲ್ಲಾ ಮ್ಯಾಜಿಸ್ಟ್ರೇಟ್ ಮೆಹರ್ಬನ್ ಸಿಂಗ್ ಬಿಶ್ತ್, ಈ ತಿಂಗಳ ಆರಂಭದಲ್ಲಿ ಪತ್ರಿಕಾಗೋಷ್ಠಿ ನಡೆಸಿ, ಮಸೀದಿಯು ಎಲ್ಲಾ ಅಗತ್ಯ ದಾಖಲೆಗಳನ್ನು ಹೊಂದಿದೆ ಮತ್ತು ವಕ್ಫ್ ಮಂಡಳಿಯಿಂದ ನೋಂದಾಯಿಸಲ್ಪಟ್ಟಿದೆ ಎಂದು ಹೇಳಿದ್ದರು.

“ಕೆಲವು ಬಲಪಂಥೀಯ ಸಂಘಟನೆಗಳು ಇದು ಅಕ್ರಮ ಮಸೀದಿ ಎಂದು ಹೇಳಿಕೊಂಡು ಜಿಲ್ಲಾಡಳಿತಕ್ಕೆ ಮನವಿ ನೀಡಿವೆ. ನಮ್ಮ ದಾಖಲೆಗಳ ಪ್ರಕಾರ, ಇದು ನೋಂದಾಯಿತ ಭೂಮಿಯಲ್ಲಿ ನಿರ್ಮಿಸಲ್ಪಟ್ಟಿದೆ ಮತ್ತು ಇದು ಅಕ್ರಮವಲ್ಲ. ನಾಲ್ಕು ಜನರ ಹೆಸರಿನಲ್ಲಿ ನೋಂದಣಿಯಾಗಿದೆ. ಜಿಲ್ಲಾಡಳಿತ ಕೂಡಾ ಇದನ್ನೆ ಹೇಳಿದೆ” ಎಂದು ಪೊಲೀಸ್ ವರಿಷ್ಠಾಧಿಕಾರಿ ಅಮಿತ್ ಶ್ರೀವಾಸ್ತವ ಹೇಳಿದ್ದಾರೆ.

ಇದನ್ನೂ ಓದಿ: ಪುಣೆ ಪೋರ್ಷೆ ಅಪಘಾತ ಪ್ರಕರಣ: ಸಾಸೂನ್ ಆಸ್ಪತ್ರೆ ಸಿಬ್ಬಂದಿಗಳ ವಿಚಾರಣೆಗೆ ಮಹಾರಾಷ್ಟ್ರ ಸರ್ಕಾರ ಅನುಮೋದನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...

‘ಕಾನೂನು ಪ್ರಕ್ರಿಯೆಯದುರುಪಯೋಗ’: ನ್ಯೂಸ್‌ಕ್ಲಿಕ್ ವಿರುದ್ಧದ ದೆಹಲಿ ಪೊಲೀಸ್, ಇಡಿ ಪ್ರಕರಣಗಳನ್ನು ರದ್ದುಗೊಳಿಸಿದ ಹೈಕೋರ್ಟ್

ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಯಮಗಳ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಸಂಸ್ಥೆ ಮತ್ತು ಅದರ ಮುಖ್ಯ ಸಂಪಾದಕ ಪ್ರಬೀರ್ ಪುರಕಾಯಸ್ಥ ವಿರುದ್ಧ ದೆಹಲಿ ಪೊಲೀಸರು ಹಾಗೂ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣಗಳನ್ನು ದೆಹಲಿ...

ಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

ಕಾಂಗ್ರೆಸ್ ಪಕ್ಷದೊಂದಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿಲೀನವಾಗಬಹುದು ಎಂಬ ವರದಿಗಳನ್ನು ಟಿಎಂಸಿ ಉನ್ನತ ಮೂಲಗಳು ಬುಧವಾರ (ಇಂದು) ಸಂಪೂರ್ಣವಾಗಿ ತಳ್ಳಿಹಾಕಿವೆ. "ನಮ್ಮ ಪಕ್ಷಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಮತ್ತು ವಿಲೀನಕ್ಕೆ...

ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ : ಬಿಜೆಪಿಯ ಸೀಟ್ ಚೋರಿ?

ರಾಜ್ಯಸಭಾ ಚುನಾವಣೆಗೆ ಮಧ್ಯಪ್ರದೇಶದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿರುವುದು ದೇಶದಲ್ಲಿ ದೊಡ್ಡ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಕಾಂಗ್ರೆಸ್ ಈ ವಿಚಾರವನ್ನು ಬಹಳ ಗಂಭೀರವಾಗಿ ಪರಿಗಣಿಸಿ ಬುಧವಾರ (ಜೂ. 10)...