Homeಮುಖಪುಟಮದುವೆಗೆ ಒತ್ತಡ | ಗರ್ಭಿಣಿ ಯುವತಿಯನ್ನು ಕೊಂದು ಹೂತು ಹಾಕಿದ ಪ್ರಿಯಕರ

ಮದುವೆಗೆ ಒತ್ತಡ | ಗರ್ಭಿಣಿ ಯುವತಿಯನ್ನು ಕೊಂದು ಹೂತು ಹಾಕಿದ ಪ್ರಿಯಕರ

- Advertisement -
- Advertisement -

ಗರ್ಭಿಣಿ ಪ್ರೇಯಸಿ ಗರ್ಭಪಾತಕ್ಕೆ ಒಪ್ಪದ ಕಾರಣಕ್ಕೆ ಆಕೆಯ ಪ್ರೇಮಿ ಮತ್ತು ಅವನ ಇಬ್ಬರು ಸಹಾಯಕರು ಕೊಲೆ ಮಾಡಿ ಹೂತು ಹಾಕಿರುವ ಘಟನೆ ದೆಹಲಿಯಲ್ಲಿ ನಡೆದಿದೆ. ಹದಿಹರೆಯದ ಯುವತಿಯು ತಾನು ಗರ್ಭಿಣಿಯಾಗಿದ್ದು, ಹಾಗಾಗಿ ತನ್ನನ್ನು ಮದುವೆಯಾಗಬೇಕು ಎಂದು ಬಯಸಿದ್ದಕ್ಕೆ ದುರ್ಷರ್ಮಿ ಈ ಕೃತ್ಯ ಎಸಗಿದ್ದಾನೆ ಎಂದು ವರದಿಯಾಗಿದೆ. ಮದುವೆಗೆ ಒತ್ತಡ

ಕೊಲೆಯಾದ ಯುವತಿಯನ್ನು 19 ವರ್ಷದ ಸೋನಿಯಾ ಎಂದು ಗುರುತಿಸಲಾಗಿದ್ದು ಪಶ್ಚಿಮ ದೆಹಲಿಯ ನಂಗ್ಲೋಯ್ ನಿವಾಸಿಯಾಗಿದ್ದರು. ಸಾಮಾಜಿಕ ಮಾಧ್ಯಮದಲ್ಲಿ ಸಕ್ರಿಯರಾಗಿದ್ದ ಅವರು, ಸುಮಾರು 6,000 ಕ್ಕೂ ಹೆಚ್ಚು ಫಾಲೋವರ್‌ಗಳನ್ನು ಹೊಂದಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಯುವತಿಯು ಸಾಮಾಜಿಕ ಮಾಧ್ಯಮದಲ್ಲಿ ತನ್ನ ಮತ್ತು ತನ್ನ ಪ್ರೇಮಿ ಸಂಜು ಅಲಿಯಾಸ್ ಸಲೀಮ್‌ನ ಅನೇಕ ಫೋಟೋಗಳು ಮತ್ತು ವೀಡಿಯೊಗಳನ್ನು ಪೋಸ್ಟ್ ಮಾಡಿದ್ದರು. ಆರೋಪಿ ಸಂಜು ಕೂಡಾ ಆಕೆಯ ಬಗ್ಗೆ ಇನ್‌ಸ್ಟಾಗ್ರಾಂನಲ್ಲಿಯೂ ಪೋಸ್ಟ್ ಮಾಡಿದ್ದ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಸೋನಿಯಾ ಅವರ ಕುಟುಂಬ ಸದಸ್ಯರಿಗೆ ಯುವತಿಯು ಹೊಸ ಸ್ನೇಹಿತನ ಜೊತೆಗೆ ಸ್ನೇಹ ಬೆಳೆಸಿರುವುದು ತಿಳಿದಿತ್ತಾದರೂ, ಅವರು ಯಾರೊಂದಿಗೆ ಮಾತನಾಡುತ್ತಿದ್ದಾರೆ ಎಂದು ತಿಳಿದಿರಲಿಲ್ಲ. ಮದುವೆಗೆ ಒತ್ತಡ

ಸೋನಿಯಾ ಏಳು ತಿಂಗಳ ಗರ್ಭಿಣಿಯಾಗಿದ್ದು, ಸಂಜುಗೆ ತನ್ನನ್ನು ಮದುವೆಯಾಗಲು ಒತ್ತಾಯಿಸುತ್ತಿದ್ದರು ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಆದರೆ ಆರೋಪಿ ಸಂಜು ಮದುವೆ ಸಿದ್ದರಿಲ್ಲದ ಕಾರಣ, ಮಗುವನ್ನು ಗರ್ಭಪಾತ ಮಾಡಬೇಕೆಂದು ಬಯಸಿದ್ದನು. ಈ ವಿಷಯವಾಗಿ ಪ್ರೇಮಿಗಳಿಬ್ಬರು ಆಗಾಗ್ಗೆ ಜಗಳವಾಡುತ್ತಿದ್ದರು ಎಂದು ವರದಿಯಾಗಿದೆ.

ಅದಾಗ್ಯೂ, ಸೋಮವಾರ ಯುವತಿಯು ಸಂಜು ಅವರ ಮನೆಗೆ ಕೆಲವು ವಸ್ತುಗಳನ್ನು ತೆಗೆದುಕೊಂಡು ಭೇಟಿಯಾಗಲು ಹೋಗಿದ್ದರು. ಈ ವೇಳೆ ಸಂಜು ಮತ್ತು ಆತನ ಇಬ್ಬರು ಸಹಾಯಕರು ಸೋನಿಯಾ ಅವರನ್ನು ಹರಿಯಾಣದ ರೋಹ್ಟಕ್‌ಗೆ ಕರೆದೊಯ್ದಿದ್ದಾರೆ.

ಅಲ್ಲಿ ಅವರು ಯುವತಿಯನ್ನು ಕೊಂದು, ಶವವನ್ನು ನಾಲ್ಕು ಅಡಿಯ ಗುಂಡಿ ತೋಡಿ ಹೂಳಿದ್ದಾರೆ. ದೆಹಲಿ ಪೊಲೀಸರು ಅಕ್ಟೋಬರ್ 23 ರಂದು ದೂರು ಸ್ವೀಕರಿಸಿದ್ದು, ಆರೋಪಿಯನ್ನು ಬಂಧಿಸಿದ್ದಾರೆ. ವಿಚಾರಣೆ ವೇಳೆ ಆತ ತಪ್ಪೊಪ್ಪಿಕೊಂಡಿದ್ದಾನೆ.

ಆರೋಪಿಯು ಕೊಲೆಗೆ ಪೂರ್ವಯೋಜಿತವಾಗಿ ತನ್ನ ಸ್ನೇಹಿತರಾದ ರಿತಿಕ್ ಮತ್ತು ಪಂಕಜ್ ಅವರನ್ನು ಅಪರಾಧದಲ್ಲಿ ತೊಡಗಿಸಿಕೊಂಡಿದ್ದಾಗಿ ಒಪ್ಪಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಅವರು ಕೃತ್ಯಕ್ಕಾಗಿ ಕರ್ವಾ ಚೌತ್ ದಿನವನ್ನು ಆಯ್ಕೆ ಮಾಡಿದ್ದು, ಸಂದರ್ಭಕ್ಕಾಗಿ ಕಾರನ್ನು ಬಾಡಿಗೆಗೆ ಪಡೆದಿದ್ದರು.

ಆ ರಾತ್ರಿ, ಸೋನಿಯಾ ತನ್ನ ಸಾಮಾನುಗಳೊಂದಿಗೆ ಮನೆಯಿಂದ ಹೊರಟು ನಂಗ್ಲೋಯ್ ಪ್ರದೇಶದಲ್ಲಿ ಆರೋಪಿಯನ್ನು ಭೇಟಿಯಾಗಿದ್ದರು. ನಂತರ ಅವನು ಯುವತಿಯನ್ನು ನೇರವಾಗಿ ರೋಹ್ಟಕ್‌ಗೆ ಕರೆದೊಯ್ದನು, ಅಲ್ಲಿ ಕತ್ತು ಹಿಸುಕಿ ಸಾಯಿಸಿದ್ದಾರೆ. ನಂತರ ಆ ರಾತ್ರಿ ದೆಹಲಿಗೆ ಹಿಂದಿರುಗುವಾಗ ರೋಹ್ಟಕ್‌ನ ಕಾಡುಗಳಲ್ಲಿ ಯುವತಿಯ ದೇಹವನ್ನು ಹೂತುಹಾಕಿದ್ದಾನೆ.

ಘಟನೆಯಲ್ಲಿ ಸಂಜು ಮತ್ತು ಆತನ ಒಬ್ಬ ಸಹಾಯಕನನ್ನು ಬಂಧಿಸಲಾಗಿದ್ದು, ಮತ್ತೊಬ್ಬ ಪರಾರಿಯಾಗಿದ್ದಾನೆ. ಆತನನ್ನು ಪತ್ತೆ ಹಚ್ಚುವ ಪ್ರಯತ್ನ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: ಅದಾನಿ ಜೊತೆಗಿನ 736 ಮಿಲಿಯನ್ ಡಾಲರ್ ವಿದ್ಯುತ್ ಒಪ್ಪಂದ ರದ್ದುಗೊಳಿಸಿದ ಕೀನ್ಯಾ ಕೋರ್ಟ್ : ವರದಿ

ಅದಾನಿ ಜೊತೆಗಿನ 736 ಮಿಲಿಯನ್ ಡಾಲರ್ ವಿದ್ಯುತ್ ಒಪ್ಪಂದ ರದ್ದುಗೊಳಿಸಿದ ಕೀನ್ಯಾ ಕೋರ್ಟ್ : ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...