Homeಮುಖಪುಟಜೈಲಿನಿಂದಲೇ ಲಾರೆನ್ಸ್ ಬಿಷ್ಣೋಯಿ ಸಂದರ್ಶನ : 7 ಮಂದಿ ಪಂಜಾಬ್ ಪೊಲೀಸರ ಅಮಾನತು

ಜೈಲಿನಿಂದಲೇ ಲಾರೆನ್ಸ್ ಬಿಷ್ಣೋಯಿ ಸಂದರ್ಶನ : 7 ಮಂದಿ ಪಂಜಾಬ್ ಪೊಲೀಸರ ಅಮಾನತು

- Advertisement -
- Advertisement -

ಗ್ಯಾಂಗ್‌ಸ್ಟರ್‌ ಲಾರೆನ್ಸ್ ಬಿಷ್ಣೋಯಿ ಜೈಲಿನಲ್ಲಿರುವಾಗಲೇ ಸಂದರ್ಶನ ನಡೆಸಲು ಅವಕಾಶ ಮಾಡಿಕೊಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಪಂಜಾಬ್ ಪೊಲೀಸ್‌ನ ಏಳು ಸಿಬ್ಬಂದಿಯನ್ನು ಅಮಾನತುಗೊಳಿಸಿ ಸರ್ಕಾರ ಆದೇಶಿಸಿದೆ ಎಂದು ವರದಿಯಾಗಿದೆ.

ವಿಶೇಷ ಪೊಲೀಸ್ ಮಹಾನಿರ್ದೇಶಕ (ಮಾನವ ಹಕ್ಕುಗಳು) ನೇತೃತ್ವದ ವಿಶೇಷ ತನಿಖಾ ತಂಡ (ಎಸ್‌ಐಟಿ), ಬಿಷ್ಣೋಯ್ ಮೊಹಾಲಿಯ ಖರಾರ್‌ನಲ್ಲಿ ಪಂಜಾಬ್ ಪೊಲೀಸರ ವಶದಲ್ಲಿದ್ದಾಗ ಒಂದು ಸಂದರ್ಶನ ಮತ್ತು ರಾಜಸ್ಥಾನದ ಜೈಲಿನಲ್ಲಿ ಮತ್ತೊಂದು ಸಂದರ್ಶನ ನಡೆದಿದೆ ಎಂದು ಪಂಪತ್ತೆ ಹಚ್ಚಿದೆ.

ಎಸ್‌ಐಟಿ ತನಿಖೆ ಅನುಸರಿಸಿ ಎಸ್ಪಿ ಗುರ್ಷರ್ ಸಿಂಗ್ ಸಂಧು, ಡಿಎಸ್ಪಿ ಸಮ್ಮರ್ ವನೀತ್, ಸಬ್-ಇನ್‌ಸ್ಪೆಕ್ಟರ್ ರೀನಾ (ಸಿಐಎ ಖರಾರ್), ಸಬ್-ಇನ್‌ಸ್ಪೆಕ್ಟರ್ ಜಗತ್ಪಾಲ್ ಜಂಗು, ಸಬ್-ಇನ್‌ಸ್ಪೆಕ್ಟರ್‌ ಶಗನ್ಜಿತ್ ಸಿಂಗ್, ಸಹಾಯಕ ಸಬ್-ಇನ್‌ಸ್ಪೆಕ್ಟರ್ ಮುಖ್ತಿಯಾರ್ ಸಿಂಗ್ ಮತ್ತು ಹೆಡ್ ಕಾನ್‌ಸ್ಟೇಬಲ್ ಓಂ ಪ್ರಕಾಶ್ ಅವರನ್ನು ಅಮಾನತುಗೊಳಿಸಿ ಶುಕ್ರವಾರ (ಅ.25) ಪಂಜಾಬ್ ಗೃಹ ಕಾರ್ಯದರ್ಶಿ ಆದೇಶ ಹೊರಡಿಸಿದ್ದಾರೆ.

ಸೆಪ್ಟೆಂಬರ್ 3 ಮತ್ತು 4, 2022ರ ರಾತ್ರಿ ವಿಡಿಯೋ ಕಾನ್ಫರೆನ್ಸ್ ಮೂಲಕ ಲಾರೆನ್ಸ್‌ ಬಿಷ್ಣೋಯ್‌ನ ಸಂದರ್ಶನ ನಡೆಸಲಾಗಿದೆ ಎಂದು ಎಸ್‌ಐಟಿ ವರದಿ ಹೇಳಿದೆ.

ಕಳೆದ ಮಾರ್ಚ್‌ನಲ್ಲಿ ಖಾಸಗಿ ಸುದ್ದಿ ವಾಹಿನಿಯೊಂದು ಬಿಷ್ಣೋಯ್ ಜೊತೆಗಿನ ಎರಡು ಸಂದರ್ಶನಗಳನ್ನು ಪ್ರಸಾರ ಮಾಡಿತ್ತು. ಈ ಪೈಕಿ ಒಂದನ್ನು ಪಂಜಾಬ್‌ನ ಮೊಹಾಲಿಯ ಎಸ್‌ಎಎಸ್ ನಗರ ವ್ಯಾಪ್ತಿಯ ಖರಾರ್‌ನಲ್ಲಿರುವ ಅಪರಾಧ ತನಿಖಾ ಸಂಸ್ಥೆ (ಸಿಐಎ) ಸಿಬ್ಬಂದಿ ಆವರಣದಿಂದ ಹಾಗೂ ಮತ್ತೊಂದನ್ನು ರಾಜಸ್ಥಾನದ ಜೈಪುರದ ಕೇಂದ್ರ ಕಾರಾಗೃಹದಿಂದ ಮಾಡಿದ್ದ ವಿಡಿಯೋ ಕರೆಯಿಂದ ಚಿತ್ರೀಕರಿಸಲಾಗಿತ್ತು.

2022 ರಲ್ಲಿ ನಡೆದ ಪಂಜಾಬಿ ಗಾಯಕ ಸಿಧು ಮೂಸೆವಾಲಾ ಅವರ ಕೊಲೆ ಪ್ರಕರಣದಲ್ಲಿ ಲಾರೆನ್ಸ್ ಬಿಷ್ಣೋಯ್ ಜೈಲಿನಲ್ಲಿದ್ದಾನೆ. ಈತನ ತಂಡವೇ ಇತ್ತೀಚೆಗೆ ಮಹಾರಾಷ್ಟ್ರದ ಹಿರಿಯ ರಾಜಕಾರಣಿ ಬಾಬಾ ಸಿದ್ದೀಕ್ ಹತ್ಯೆ ಮಾಡಿದೆ ಎಂದು ಹೇಳಲಾಗುತ್ತಿದೆ. ಲಾರೆನ್ಸ್ ಬಿಷ್ಣೋಯಿ ಬಾಲಿವುಡ್ ನಟ ಸಲ್ಮಾನ್ ಖಾನ್‌ ಅವರನ್ನು ಕೊಲ್ಲುವುದಾಗಿ ನೇರ ಬೆದರಿಕೆ ಹಾಕಿದ್ದಾನೆ. ಈತ ಜೈಲಿನಲ್ಲಿ ಕುಳಿತೇ ತನ್ನ ತಂಡದ ಮೂಲಕ ಅಪರಾಧ ಕೃತ್ಯಗಳನ್ನು ನಡೆಸುತ್ತಿದ್ದಾನೆ.

ಪೊಲೀಸ್ ಅಧಿಕಾರಿಗಳ ಬೆಂಬಲವೂ ಲಾರೆನ್ಸ್ ಬಿಷ್ಣೋಯಿಗೆ ಇದೆ ಎಂದು ಹೇಳಲಾಗ್ತಿದೆ. ಇದೀಗ ಬಿಷ್ಣೋಯಿಗೆ ಸಹಕರಿಸಿದ ಆರೋಪದ ಮೇಲೆ ಪೊಲೀಸರು ಅಮಾನತಾಗಿರುವುದು ಈ ಆರೋಪವನ್ನು ಪುಷ್ಠೀಕರಿಸಿದೆ.

ಇದನ್ನೂ ಓದಿ : ಉತ್ತರಾಖಂಡ | ಹಿಂಸಾಚಾರಕ್ಕೆ ತಿರುಗಿದ ಮಸೀದಿ ವಿರೋಧಿ ಪ್ರತಿಭಟನೆ, ಮುಸ್ಲಿಮರ ಅಂಗಡಿಗಳು ಧ್ವಂಸ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...