Homeಮುಖಪುಟ"ನನಗೇನು ಅರ್ಥವಾಗಿಲ್ಲ" : ಹಿಂದಿಯಲ್ಲಿ ಪತ್ರ ಬರೆದ ಕೇಂದ್ರ ಸಚಿವರಿಗೆ ತಮಿಳಿನಲ್ಲಿ ಪ್ರತ್ಯುತ್ತರ ಕಳುಹಿಸಿದ ಡಿಎಂಕೆ...

“ನನಗೇನು ಅರ್ಥವಾಗಿಲ್ಲ” : ಹಿಂದಿಯಲ್ಲಿ ಪತ್ರ ಬರೆದ ಕೇಂದ್ರ ಸಚಿವರಿಗೆ ತಮಿಳಿನಲ್ಲಿ ಪ್ರತ್ಯುತ್ತರ ಕಳುಹಿಸಿದ ಡಿಎಂಕೆ ಸಂಸದ

- Advertisement -
- Advertisement -

ಕೇಂದ್ರ ರೈಲ್ವೆ ಖಾತೆಯ ರಾಜ್ಯ ಸಚಿವ ರವನೀತ್ ಸಿಂಗ್ ಬಿಟ್ಟು ಅವರು ಹಿಂದಿಯಲ್ಲಿ ಬರೆದ ಪತ್ರಕ್ಕೆ ಡಿಎಂಕೆ ನಾಯಕ ಮತ್ತು ರಾಜ್ಯಸಭಾ ಸಂಸದ ಪುದುಕ್ಕೊಟ್ಟೈ ಎಂಎಂ ಅಬ್ದುಲ್ಲಾ ಅವರು ಶುಕ್ರವಾರ ತಮಿಳಿನಲ್ಲಿ ಉತ್ತರಿಸಿದ್ದು, “ನನಗೆ ಆ ಪತ್ರದಲ್ಲಿನ ಒಂದು ಪದವೂ ಅರ್ಥವಾಗಿಲ್ಲ” ಎಂದು ಹೇಳಿದ್ದಾರೆ.

ಸಚಿವ ಸಿಂಗ್ ಅವರು ಅಬ್ದುಲ್ಲಾ ಅವರಿಗೆ ಬರೆದ ಪತ್ರವು ಆಹಾರದ ಗುಣಮಟ್ಟ ಮತ್ತು ರೈಲುಗಳಲ್ಲಿನ ಶುಚಿತ್ವಕ್ಕೆ ಸಂಬಂಧಿಸಿದಂತೆ ಅಬ್ದುಲ್ಲಾ ಅವರು ಎತ್ತಿರುವ ಪ್ರಶ್ನೆಗಳಿಗೆ ಸಂಬಂಧಿಸಿತ್ತು.

ಎರಡೂ ಪತ್ರಗಳ ಪ್ರತಿಯನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿರುವ ಅಬ್ದುಲ್ಲಾ, “ಕೇಂದ್ರದ ರಾಜ್ಯ ಖಾತೆ ಸಚಿವರ ಕಚೇರಿಯ ಅಧಿಕಾರಿಗಳಿಗೆ ನಮಗೆ ಹಿಂದಿ ಬಳಸಲು ಸಾಧ್ಯವಿಲ್ಲ ಎಂದು ಹಲವಾರು ಬಾರಿ ಹೇಳಿದ್ದರೂ, ಅವರು ಇನ್ನೂ ಅದೇ ಭಾಷೆಯಲ್ಲಿ ಪತ್ರಗಳನ್ನು ಕಳುಹಿಸುತ್ತಿದ್ದಾರೆ” ಎಂದಿದ್ದಾರೆ.

“ರೈಲ್ವೆ ಖಾತೆ ರಾಜ್ಯ ಸಚಿವರ ಕಚೇರಿಯ ಪತ್ರವು ಯಾವಾಗಲೂ ಹಿಂದಿಯಲ್ಲಿರುತ್ತದೆ. ನಾನು ಅವರ ಕಚೇರಿಯಲ್ಲಿ ನಿಯೋಜಿಸಲಾದ ಅಧಿಕಾರಿಗಳಿಗೆ ಕರೆ ಮಾಡಿ ನನಗೆ ಹಿಂದಿ ಗೊತ್ತಿಲ್ಲ, ದಯವಿಟ್ಟು ಇಂಗ್ಲಿಷ್‌ನಲ್ಲಿ ಪತ್ರ ಕಳುಹಿಸಿ ಎಂದಿದ್ದಾನೆ. ಆದರೆ, ಮತ್ತೆ ಹಿಂದಿಯಲ್ಲಿ ಪತ್ರ ಕಳುಹಿಸಲಾಗಿದೆ. ಹಾಗಾಗಿ, ನಾನು ಅವರು ಅರ್ಥಮಾಡಿಕೊಳ್ಳುವ ರೀತಿಯಲ್ಲಿ ಉತ್ತರವನ್ನು ಕಳುಹಿಸಿದ್ದೇನೆ” ಎಂದು ಅಬ್ದುಲ್ಲಾ ತಿಳಿಸಿದ್ದಾರೆ.

ಇನ್ನು ಮುಂದೆ ಇಂಗ್ಲಿಷ್‌ನಲ್ಲಿ ಪತ್ರಗಳನ್ನು ಕಳುಹಿಸಿ ಎಂದು ಅಬ್ದುಲ್ಲಾ ಅವರು ಸಚಿವರಿಗೆ ಬರೆದ ಪತ್ರದಲ್ಲಿ ಹೇಳಿದ್ದಾರೆ.

ತಮಿಳುನಾಡಿ ಡಿಎಂಕೆ ಸರ್ಕಾರವು ಕೇಂದ್ರದ ವಿರುದ್ದ ಸದಾ ಹಿಂದಿ ಹೇರಿಕೆಯ ಆರೋಪ ಮಾಡುತ್ತಿರುತ್ತದೆ. ಇತ್ತೀಚೆಗೆ ಚೆನ್ನೈ ದೂರದರ್ಶನ ಕೇಂದ್ರದಲ್ಲಿ ಹಿಂದಿ ಮಾಸಾಚರಣೆಯ ಸಮಾರೋಪ ಸಮಾರಂಭ ನಡೆಸಿದ್ದಕ್ಕೆ ಸಿಎಂ ಎಂ.ಕೆ ಸ್ಟಾಲಿನ್ ಅವರು ರಾಜ್ಯಪಾಲರ ವಿರುದ್ದ ಕಿಡಿಕಾರಿದ್ದರು.

“ಸ್ಥಳೀಯ ಭಾಷೆಗಳಿಗೆ ಬದಲಾಗಿ ಹಿಂದಿಯನ್ನು ಇಂಗ್ಲಿಷ್‌ಗೆ ಪರ್ಯಾಯವಾಗಿ ಸ್ವೀಕರಿಸಬೇಕು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಹೇಳಿಕೆಗೆ ಈ ಹಿಂದೆ ಪ್ರತಿಕ್ರಿಯಿಸಿದ್ದ ಸ್ಟಾಲಿನ್ ಅವರು, “ಇದು ರಾಷ್ಟ್ರದ ಸಮಗ್ರತೆಯನ್ನು ಹಾಳು ಮಾಡುತ್ತದೆ” ಎಂದಿದ್ದರು.

ಇದನ್ನೂ ಓದಿ : ಉತ್ತರಾಖಂಡ | ಹಿಂಸಾಚಾರಕ್ಕೆ ತಿರುಗಿದ ಮಸೀದಿ ವಿರೋಧಿ ಪ್ರತಿಭಟನೆ, ಮುಸ್ಲಿಮರ ಅಂಗಡಿಗಳು ಧ್ವಂಸ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಟಿಎಂಸಿ ಬಂಡಾಯ ಸಂಸದರಿಗೆ ಸುಪ್ರೀಂ ಕೋರ್ಟ್ ಶಾಕ್: 20 ಎಂಪಿಗಳಿಗೆ ನೋಟಿಸ್ ಜಾರಿ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ತೊರೆದು, ಎನ್‌ಸಿಪಿಐ (NCPI) ಎಂಬ ಅಷ್ಟಾಗಿ ಜನಪ್ರಿಯವಲ್ಲದ ಪಕ್ಷದೊಂದಿಗೆ ವಿಲೀನಗೊಂಡು ಎನ್‌ಡಿಎ ಒಕ್ಕೂಟವನ್ನು ಸೇರಿಕೊಂಡಿರುವ 20 ಬಂಡಾಯ ಸಂಸದರಿಗೆ ಸುಪ್ರೀಂ ಕೋರ್ಟ್ ಮಂಗಳವಾರ ನೋಟಿಸ್ ಜಾರಿ ಮಾಡಿದೆ. ಟಿಎಂಸಿ ಪ್ರಧಾನ...

ಹನೂರ್ ‘ಶೂಟೌಟ್’: ದಾಖಲೆಗಳನ್ನು ಬಿಡುಗಡೆ ಮಾಡಿದ ಬಿಜೆಪಿ, ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ: ಸಿಬಿಐ ತನಿಖೆಗೆ ಆಗ್ರಹ 

ಚಾಮರಾಜನಗರ ಜಿಲ್ಲೆಯ ಹನೂರು ಅರಣ್ಯ ವ್ಯಾಪ್ತಿಯಲ್ಲಿ ನಡೆದ ಮೂವರ ಸಾವು ಮತ್ತು ಗುಂಡಿನ ಚಕಮಕಿ ಪ್ರಕರಣ ಇದೀಗ ರಾಜ್ಯ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸಿದೆ. ಆಗಸ್ಟ್ 15ರಂದು ಹನೂರಿನ ಮರಿಯಮಂಗಲ ಬಿಟ್ ಅರಣ್ಯ...

ಬಿಜೆಪಿ MLC ರವಿಕುಮಾರ್‌ ವಿರುದ್ಧ ಜಾಮೀನು ರಹಿತ ವಾರಂಟ್‌

ಕಲಬುರಗಿ ಜಿಲ್ಲಾಧಿಕಾರಿ ಫೌಜಿಯಾ ತರನ್ನಮ್ ವಿರುದ್ಧ ಅವಹೇಳನಕಾರಿ ಹಾಗೂ ಕೋಮು ಪ್ರಚೋದಕ ಹೇಳಿಕೆ ನೀಡಿದ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ, ವಿಚಾರಣೆಗೆ ಹಾಜರಾಗದ ಬಿಜೆಪಿ ವಿಧಾನ ಪರಿಷತ್ ಸದಸ್ಯ ಎನ್. ರವಿಕುಮಾರ್ ವಿರುದ್ಧ ಬೆಂಗಳೂರಿನ...

20 ಬಂಡಾಯ ಸಂಸದರ ಅನರ್ಹತೆಗೆ ಒತ್ತಾಯ: ಶೀಘ್ರ ನಿರ್ಧಾರ ಕೈಗೊಳ್ಳುವಂತೆ ಕೋರಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಟಿಎಂಸಿ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ

ತಮ್ಮ ಪಕ್ಷದಿಂದ ಪ್ರತ್ಯೇಕಗೊಂಡಿರುವ 20 ಬಂಡಾಯ ಸಂಸದರನ್ನು ಅನರ್ಹಗೊಳಿಸುವಂತೆ ಕೋರಿ ಸಲ್ಲಿಸಲಾದ ಅರ್ಜಿಗಳ ಕುರಿತು ಲೋಕಸಭೆಯ ಸ್ಪೀಕರ್ ಓಂ ಬಿರ್ಲಾ ಅವರು ಶೀಘ್ರ ನಿರ್ಧಾರ ಕೈಗೊಳ್ಳುವಂತೆ ನಿರ್ದೇಶನ ನೀಡಲು ಕೋರಿ ತೃಣಮೂಲ ಕಾಂಗ್ರೆಸ್...

ದೆಹಲಿ, ಬಿಹಾರದಲ್ಲಿ ನೀಟ್ ಪ್ರತಿಭಟನಾಕಾರರ ಮೇಲೆ ಪೆಲೆಟ್, ಅಶ್ರುವಾಯು, ವಿದ್ಯುತ್ ಶಾಕ್ ಲಾಠಿ ಪ್ರಹಾರ ನಡೆದಿರುವುದು ಸತ್ಯ: ಅಮ್ನೆಸ್ಟಿ ವರದಿಯಲ್ಲಿ ಕಳವಳಕಾರಿ ವಿಷಯಗಳು ಬಹಿರಂಗ

ದೆಹಲಿ ಮತ್ತು ಬಿಹಾರದಲ್ಲಿ ವಿದ್ಯಾರ್ಥಿಗಳು ಹಾಗೂ ಯುವಜನರ ನೇತೃತ್ವದಲ್ಲಿ ನಡೆದ ನೀಟ್ (NEET) ಪರೀಕ್ಷಾ ವಿವಾದಕ್ಕೆ ಸಂಬಂಧಿಸಿದ ಪ್ರತಿಭಟನೆಗಳ ಸಂದರ್ಭದಲ್ಲಿ ಭಾರತೀಯ ಪೊಲೀಸರು ಪ್ರತಿಭಟನಾಕಾರರ ವಿರುದ್ಧ ಕಾನೂನುಬಾಹಿರ ಮತ್ತು ಅತಿಯಾದ ಬಲಪ್ರಯೋಗ ಮಾಡಿದ್ದಾರೆ...

ರಾಜ್ಯ ಚುನಾವಣಾ ಆಯೋಗದಿಂದ ಎಸ್‌ಐಆರ್ ಕರಡು ಪಟ್ಟಿ ಪ್ರಕಟ; ದಾವಣಗೆರೆಯಲ್ಲಿ ಅತಿ ಕಡಿಮೆ- ಬೆಂಗಳೂರು ನಗರದಲ್ಲಿ 9.46 ಲಕ್ಷ ಜನರಿಗೆ ನೋಟಿಸ್‌!

ರಾಜ್ಯ ಚುನಾವಣಾ ಆಯೋಗವು ಇಂದು ಎಸ್‌ಐಆರ್ ಕರಡು ಪಟ್ಟಿ ಪ್ರಕಟಿಸಿದ್ದು, 'ಲಾಜಿಕಲ್ ಡಿಸ್ಕ್ರಿಪೆನ್ಸಿ' ಹೆಸರಿನಲ್ಲಿ ದಾವಣಗೆರೆ ಜಿಲ್ಲೆಯಲ್ಲಿ ಅತಿ ಕಡಿಮೆ, ಅಂದರೆ 7,088 ಜನರಿಗೆ ನೋಟಿಸ್‌ ನೀಡಲು ಸಿದ್ಧತೆ ನಡೆಸಲಾಗಿದೆ. ಬೆಂಗಳೂರು ನಗರದಲ್ಲಿ...

ಮಹಾರಾಷ್ಟ್ರದ ಅಮರಾವತಿಯಲ್ಲಿ ದಾರುಣ ದುರಂತ: ಸರ್ಕಾರಿ ಆಸ್ಪತ್ರೆಯ ವೆಂಟಿಲೇಟರ್ ಸ್ಫೋಟಗೊಂಡು ಮೂವರು ನವಜಾತ ಶಿಶುಗಳ ಸಾವು

ಅಮರಾವತಿ: ಮಹಾರಾಷ್ಟ್ರದ ಅಮರಾವತಿ ಜಿಲ್ಲಾ ಸರ್ಕಾರಿ ಮಹಿಳಾ ಆಸ್ಪತ್ರೆಯ ನವಜಾತ ಶಿಶುಗಳ ತೀವ್ರ ನಿಗಾ ಘಟಕದಲ್ಲಿ ಸೋಮವಾರ ಮುಂಜಾನೆ ಭೀಕರ ಅಗ್ನಿ ಅವಘಡ ಸಂಭವಿಸಿದ್ದು ವೆಂಟಿಲೇಟರ್‌ನಲ್ಲಿ ಉಂಟಾದ ಸ್ಫೋಟದಿಂದಾಗಿ ಬೆಂಕಿ ಮತ್ತು ದಟ್ಟ...

‘ಮೋದಿ ಅವರ ‘ದಿಮಾಗಿ ನಕ್ಸಲ್’ ಹೇಳಿಕೆಯು ಮುಂಬರುವ ಯುವ ಭಿನ್ನಾಭಿಪ್ರಾಯದ ಅಲೆಯನ್ನು ‘ರಾಷ್ಟ್ರವಿರೋಧಿ’ ಎಂದು ಬಿಂಬಿಸುವ ಪ್ರಯತ್ನವಾಗಿದೆ’: ಆನಂದ್ ತೇಲ್ತುಂಬ್ಡೆ

ಜೆನ್ ಝೀ ಅಲೆಯ ಹೊಸ ರೀತಿಯ ಪ್ರತಿಭಟನೆಗೆ ಬೆಚ್ಚಿಬಿದ್ದಿರುವ ಪ್ರಧಾನಿ ಮೋದಿಯವರ 'ದಿಮಾಗಿ ನಕ್ಸಲ್' ಹೇಳಿಕೆಯ ಮುಖವಾಡವನ್ನು 'ದಿ ವೈರ್' ಲೇಖನದಲ್ಲಿ ಪ್ರಸಿದ್ಧ ಚಿಂತಕ ಡಾ. ಆನಂದ್ ತೇಲ್ತುಂಬ್ಡೆ ಬಿಚ್ಚಿಟ್ಟಿದ್ದಾರೆ. ಆಡಳಿತದ ವಿಫಲ...

SIR : ಮೂರು ದೇಶಗಳಿಗೆ ಭಾರತದ ರಾಯಭಾರಿಯಾಗಿದ್ದ ನವದೀಪ್ ಸೂರಿಗೆ ಪೌರತ್ವ ಸಾಬೀತುಪಡಿಸುವ ಸವಾಲು!

ಪಂಜಾಬ್‌ನಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಲ್ಲಿ ಪೌರತ್ವ ಸಾಬೀತುಪಡಿಸುವ ವಿಧಾನದ ಕುರಿತು ಮಾಜಿ ರಾಜತಾಂತ್ರಿಕ ನವದೀಪ್ ಸೂರಿ ಅವರು ಭಾನುವಾರ (ಆ.23) ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ....

ಸೊಹ್ರಾಬುದ್ದೀನ್ ಶೇಖ್ ಎನ್‌ಕೌಂಟರ್ ಪ್ರಕರಣ : 22 ಆರೋಪಿಗಳ ಖುಲಾಸೆ ಪ್ರಶ್ನಿಸಿ ಸುಪ್ರೀಂ ಮೆಟ್ಟಿಲೇರಿದ ಸಹೋದರ

ಸೊಹ್ರಾಬುದ್ದೀನ್ ಶೇಖ್ ಮತ್ತು ಅವರ ಪತ್ನಿ ಕೌಸರ್ ಬಿ ಹಾಗೂ ಆಪ್ತ ತುಳಸಿರಾಮ್ ಪ್ರಜಾಪತಿ ಅವರ 2005ರ ನಕಲಿ ಎನ್‌ಕೌಂಟರ್ ಪ್ರಕರಣದಲ್ಲಿ ಗುಜರಾತ್, ರಾಜಸ್ಥಾನ ಮತ್ತು ಆಂಧ್ರಪ್ರದೇಶದ 21 ಪೊಲೀಸರು ಸೇರಿದಂತೆ ಒಟ್ಟು...