Homeಮುಖಪುಟದೇಶದಾದ್ಯಂತ ಉತ್ತಮ ಮುಂಗಾರು ಮಳೆಯಾದರೂ ಆಹಾರ ಧಾನ್ಯಗಳ ಬೆಲೆ ಏರಿಕೆ!

ದೇಶದಾದ್ಯಂತ ಉತ್ತಮ ಮುಂಗಾರು ಮಳೆಯಾದರೂ ಆಹಾರ ಧಾನ್ಯಗಳ ಬೆಲೆ ಏರಿಕೆ!

- Advertisement -
- Advertisement -

ಉತ್ತಮ ಮುಂಗಾರು ಹಾಗೂ ಖಾರಿಫ್ ಮತ್ತು ರಬಿ ಬೆಳೆಗಳ ಉತ್ತಮ ಇಳುವರಿಯ ಹೊರತಾಗಿಯು, ಆಹಾರ ಧಾನ್ಯಗಳು, ಖಾದ್ಯ ತೈಲ ಮತ್ತು ತರಕಾರಿಗಳ ಬೆಲೆಗಳು ಕಳೆದ ಎರಡು ತಿಂಗಳುಗಳಲ್ಲಿ ಭಾರಿ ಏರಿಕೆಯಾಗಿವೆ ಎಂದು ಸರ್ಕಾರ ಮತ್ತು ಮಾರುಕಟ್ಟೆಯ ಅಂಕಿಅಂಶಗಳು ತಿಳಿಸಿವೆ. ಹೆಚ್ಚಿನ ಆಹಾರ ಬೆಲೆಗಳಿಂದಾಗಿ ಭಾರತದ ಚಿಲ್ಲರೆ ಹಣದುಬ್ಬರವು ಸೆಪ್ಟೆಂಬರ್‌ನಲ್ಲಿ ಒಂಬತ್ತು ತಿಂಗಳ ಗರಿಷ್ಠ ಮಟ್ಟಕ್ಕೆ ಏರಿದೆ ಎಂದು ಸರ್ಕಾರದ ಅಂಕಿಅಂಶಗಳು ಹೇಳಿವೆ. ದೇಶದಾದ್ಯಂತ

ದೇಶದ ಪ್ರತಿ ಎರಡು ಕುಟುಂಬಗಳಲ್ಲಿ ಒಂದು ಕುಟುಂಬ ಖಾದ್ಯ ತೈಲ ಬೆಲೆಗಳ ಏರಿಕೆಯನ್ನು ನಿಭಾಯಿಸಲು ಕಷ್ಟ ಪಡುತ್ತಿದೆ ಎಂದು ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್ ಲೋಕಲ್ ಸರ್ಕಲ್ಸ್‌ನ ಸಮೀಕ್ಷೆಯು ಹೇಳಿದೆ. ಹಾಗಾಗಿ ಈ ಕುಟುಂಬಗಳು ತಮ್ಮ ಬಳಕೆಯನ್ನು ಕಡಿಮೆ ಮಾಡಲು ಮತ್ತು ಅಗ್ಗದ ಬ್ರಾಂಡ್‌ಗಳ ಖಾದ್ಯ ತೈಲವನ್ನು ಖರೀದಿಸುವಂಗಾಗಿದೆ ಎಂದು ಅದು ಹೇಳಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ದೇಶದಾದ್ಯಂತ ಹಬ್ಬಗಳು ಆಚರಣೆಯಾಗುತ್ತಿರುವ ಋತುವಿನ ವೇಳೆ ಹಣದುಬ್ಬರದ ಒತ್ತಡವು ಕುಟುಂಬಗಳ ಬಜೆಟ್ ಮೇಲೆ ಬೀರುತ್ತಿವೆ. ಹಬ್ಬದ ಋತುವಿನ ನಂತರ ಭಾರತವು ಮದುವೆಯ ಋತುವಿಗೆ ಹೊರಳುತ್ತಿದ್ದು, ಖಾದ್ಯ ತೈಲ ಮತ್ತು ಆಹಾರ ಧಾನ್ಯಗಳ ಬೆಲೆ ಹೆಚ್ಚಿರುವುದು ದೇಶದ ಕುಟುಂಬದ ಬಜೆಟ್‌ಗಳನ್ನು ತಗ್ಗಿಸುತ್ತದೆ ಎಂದು ವರದಿಯು ಹೇಳಿದೆ.

ಅದಾಗ್ಯೂ, ಸರ್ಕಾರವು ಹಣದುಬ್ಬರವನ್ನು ಕಡಿಮೆ ಮಾಡಲು ಪ್ರಯತ್ನಿಸುತ್ತಿದೆ ಎಂದು ವರದಿಯಾಗಿದೆ. ಹಣದುಬ್ಬರ ಕಡಿಮೆ ಮಾಡುವ ಉಪಕ್ರಮವಾಗಿ ಭಾರತ್ ಬ್ರ್ಯಾಂಡ್ ಅಡಿಯಲ್ಲಿ ಉತ್ಪನ್ನಗಳ ಸರಣಿಯನ್ನು ಪ್ರಾರಂಭಿಸಿದ್ದು, ಭಾರತ್ ಆಟಾ, ಅಕ್ಕಿ ಮತ್ತು ಬೇಳೆಯನ್ನು ಗ್ರಾಹಕರಿಗೆ ಅಗ್ಗದ ದರದಲ್ಲಿ ನೇರ ಮಾರಾಟಕ್ಕೆ ಮುಂದಾಗಿದೆ. ಇದಲ್ಲದೆ, ಬೆಲೆಯನ್ನು ತಗ್ಗಿಸಲು ದೇಶಾದ್ಯಂತ 100ಕ್ಕೂ ಹೆಚ್ಚು ಕೇಂದ್ರಗಳಿಗೆ ಈರುಳ್ಳಿ ಮತ್ತು ಟೊಮೆಟೊದಂತಹ ಅಗ್ಗದ ತರಕಾರಿಗಳನ್ನು ಸರಬರಾಜು ಮಾಡುತ್ತಿದೆ.

ಸರ್ಕಾರದ ಈ ಮಧ್ಯ ಪ್ರವೇಶ ಪ್ರಭಾವ ಬೀರಲು ಪ್ರಾರಂಭಿಸಿದ್ದು, ಬೆಲೆಗಳು ಸ್ವಲ್ಪಮಟ್ಟಿಗೆ ಇಳಿದಿವೆ ಎಂದು ಸರ್ಕಾರದ ವರದಿಗಳು ಉಲ್ಲೇಖಿಸಿವೆ. ಆದರೆ ಉತ್ತರ ಭಾರತದಾದ್ಯಂತ ಮುಂಬರುವ ಮದುವೆಯ ಋತುವಿನ ಕಾರಣಕ್ಕೆ ಆಹಾರ ಧಾನ್ಯಗಳ ಬೇಡಿಕೆ ಹೆಚ್ಚಾಗಲಿದೆ.

ಕೃಷಿ ನೀತಿಯ ಬಗ್ಗೆ ಸರ್ಕಾರದ ದೃಷ್ಟಿಕೋನವು ಅವ್ಯವಸ್ಥೆಯನ್ನು ಸೃಷ್ಟಿಸಿದೆ ಎಂದು ತಜ್ಞರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕೃಷಿ ಮಾರುಕಟ್ಟೆಯ “ಅಕಾಲಿಕ ಮತ್ತು ಅನಗತ್ಯ” ನಿಯಂತ್ರಣದ ಕಾರಣಕ್ಕೆ ಪೂರೈಕೆಯ ಮೇಲೆ ಪ್ರಭಾವ ಬೀರಿದೆ ಎಂದು ಆರೋಪಿಸಿದ್ದಾರೆ.

“ಕಳೆದ ಮೂರು ವರ್ಷಗಳಲ್ಲಿ, ಪೂರೈಕೆಯ ನಿರ್ಬಂಧಗಳನ್ನು ಸರಾಗಗೊಳಿಸುವ ಬದಲು ಸರ್ಕಾರವು ಬಿಕ್ಕಟ್ಟನ್ನು ನಿರ್ವಹಿಸಲು ಪ್ರಯತ್ನಿಸುತ್ತಿದೆ” ಎಂದು ಕೃಷಿ ಸರಕುಗಳ ತಜ್ಞ ಆರ್‌ಎಸ್ ರಾಣಾ ಹೇಳಿದ್ದಾರೆ.

“ಆಂತರಿಕವಾಗಿ ಬೆಲೆಗಳನ್ನು ಕಡಿಮೆ ಮಾಡಲು ಮೊದಲು ಅವರು ರಫ್ತುಗಳ ಮೇಲೆ ನಿಷೇಧವನ್ನು ಹಾಕಿದರು ಮತ್ತು ವಿವಿಧ ಪ್ರಮುಖ ತರಕಾರಿಗಳ ಮೇಲೆ ಸಂಗ್ರಹ ಮಿತಿಗಳನ್ನು ವಿಧಿಸಿದರು. ಆದರೆ ಇದು ರೈತರ ಹಿತಾಸಕ್ತಿಯನ್ನು ಪ್ರತಿಧ್ವನಿಸಲಿಲ್ಲ. ಇದರಿಂದಾಗಿ ಪೂರೈಕೆಯ ಮೇಲೆ ಪರಿಣಾಮ ಬೀರಿತು” ಎಂದು ಅವರು ಹೇಳಿದ್ದಾರೆ.

ಮಧ್ಯಪ್ರದೇಶ ಮೂಲದ ಸರಕು ತಜ್ಞ ಅಜಯ್ ಜೈನ್ ಮಾತನಾಡಿ, “ಮೆಕ್ಕೆಜೋಳ, ಅಕ್ಕಿ ಮತ್ತು ಕಬ್ಬಿನಂತಹ ಪ್ರಮುಖ ಬೆಳೆಗಳನ್ನು ಎಥೆನಾಲ್ ಉತ್ಪಾದನೆಗೆ ನೀಡಿರುವುದು ಬೆಲೆ ಏರಿಕೆಗೆ ಪ್ರಮುಖ ಕಾರಣವಾಗಿದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಮಹಾರಾಷ್ಟ್ರ | ಸೀಟು ಹಂಚಿಕೆ ಒಪ್ಪಂದಕ್ಕಿಂತ 2 ಹೆಚ್ಚುವರಿ ಅಭ್ಯರ್ಥಿಗಳನ್ನು ಘೋಷಿಸಿದ ಕಾಂಗ್ರೆಸ್!

ಮಹಾರಾಷ್ಟ್ರ | ಸೀಟು ಹಂಚಿಕೆ ಒಪ್ಪಂದಕ್ಕಿಂತ 2 ಹೆಚ್ಚುವರಿ ಅಭ್ಯರ್ಥಿಗಳನ್ನು ಘೋಷಿಸಿದ ಕಾಂಗ್ರೆಸ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...

‘ಕಾನೂನು ಪ್ರಕ್ರಿಯೆಯದುರುಪಯೋಗ’: ನ್ಯೂಸ್‌ಕ್ಲಿಕ್ ವಿರುದ್ಧದ ದೆಹಲಿ ಪೊಲೀಸ್, ಇಡಿ ಪ್ರಕರಣಗಳನ್ನು ರದ್ದುಗೊಳಿಸಿದ ಹೈಕೋರ್ಟ್

ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಯಮಗಳ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಸಂಸ್ಥೆ ಮತ್ತು ಅದರ ಮುಖ್ಯ ಸಂಪಾದಕ ಪ್ರಬೀರ್ ಪುರಕಾಯಸ್ಥ ವಿರುದ್ಧ ದೆಹಲಿ ಪೊಲೀಸರು ಹಾಗೂ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣಗಳನ್ನು ದೆಹಲಿ...

ಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

ಕಾಂಗ್ರೆಸ್ ಪಕ್ಷದೊಂದಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿಲೀನವಾಗಬಹುದು ಎಂಬ ವರದಿಗಳನ್ನು ಟಿಎಂಸಿ ಉನ್ನತ ಮೂಲಗಳು ಬುಧವಾರ (ಇಂದು) ಸಂಪೂರ್ಣವಾಗಿ ತಳ್ಳಿಹಾಕಿವೆ. "ನಮ್ಮ ಪಕ್ಷಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಮತ್ತು ವಿಲೀನಕ್ಕೆ...

ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ : ಬಿಜೆಪಿಯ ಸೀಟ್ ಚೋರಿ?

ರಾಜ್ಯಸಭಾ ಚುನಾವಣೆಗೆ ಮಧ್ಯಪ್ರದೇಶದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿರುವುದು ದೇಶದಲ್ಲಿ ದೊಡ್ಡ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಕಾಂಗ್ರೆಸ್ ಈ ವಿಚಾರವನ್ನು ಬಹಳ ಗಂಭೀರವಾಗಿ ಪರಿಗಣಿಸಿ ಬುಧವಾರ (ಜೂ. 10)...