Homeಮುಖಪುಟದೇಶದಾದ್ಯಂತ ಉತ್ತಮ ಮುಂಗಾರು ಮಳೆಯಾದರೂ ಆಹಾರ ಧಾನ್ಯಗಳ ಬೆಲೆ ಏರಿಕೆ!

ದೇಶದಾದ್ಯಂತ ಉತ್ತಮ ಮುಂಗಾರು ಮಳೆಯಾದರೂ ಆಹಾರ ಧಾನ್ಯಗಳ ಬೆಲೆ ಏರಿಕೆ!

- Advertisement -
- Advertisement -

ಉತ್ತಮ ಮುಂಗಾರು ಹಾಗೂ ಖಾರಿಫ್ ಮತ್ತು ರಬಿ ಬೆಳೆಗಳ ಉತ್ತಮ ಇಳುವರಿಯ ಹೊರತಾಗಿಯು, ಆಹಾರ ಧಾನ್ಯಗಳು, ಖಾದ್ಯ ತೈಲ ಮತ್ತು ತರಕಾರಿಗಳ ಬೆಲೆಗಳು ಕಳೆದ ಎರಡು ತಿಂಗಳುಗಳಲ್ಲಿ ಭಾರಿ ಏರಿಕೆಯಾಗಿವೆ ಎಂದು ಸರ್ಕಾರ ಮತ್ತು ಮಾರುಕಟ್ಟೆಯ ಅಂಕಿಅಂಶಗಳು ತಿಳಿಸಿವೆ. ಹೆಚ್ಚಿನ ಆಹಾರ ಬೆಲೆಗಳಿಂದಾಗಿ ಭಾರತದ ಚಿಲ್ಲರೆ ಹಣದುಬ್ಬರವು ಸೆಪ್ಟೆಂಬರ್‌ನಲ್ಲಿ ಒಂಬತ್ತು ತಿಂಗಳ ಗರಿಷ್ಠ ಮಟ್ಟಕ್ಕೆ ಏರಿದೆ ಎಂದು ಸರ್ಕಾರದ ಅಂಕಿಅಂಶಗಳು ಹೇಳಿವೆ. ದೇಶದಾದ್ಯಂತ

ದೇಶದ ಪ್ರತಿ ಎರಡು ಕುಟುಂಬಗಳಲ್ಲಿ ಒಂದು ಕುಟುಂಬ ಖಾದ್ಯ ತೈಲ ಬೆಲೆಗಳ ಏರಿಕೆಯನ್ನು ನಿಭಾಯಿಸಲು ಕಷ್ಟ ಪಡುತ್ತಿದೆ ಎಂದು ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್ ಲೋಕಲ್ ಸರ್ಕಲ್ಸ್‌ನ ಸಮೀಕ್ಷೆಯು ಹೇಳಿದೆ. ಹಾಗಾಗಿ ಈ ಕುಟುಂಬಗಳು ತಮ್ಮ ಬಳಕೆಯನ್ನು ಕಡಿಮೆ ಮಾಡಲು ಮತ್ತು ಅಗ್ಗದ ಬ್ರಾಂಡ್‌ಗಳ ಖಾದ್ಯ ತೈಲವನ್ನು ಖರೀದಿಸುವಂಗಾಗಿದೆ ಎಂದು ಅದು ಹೇಳಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ದೇಶದಾದ್ಯಂತ ಹಬ್ಬಗಳು ಆಚರಣೆಯಾಗುತ್ತಿರುವ ಋತುವಿನ ವೇಳೆ ಹಣದುಬ್ಬರದ ಒತ್ತಡವು ಕುಟುಂಬಗಳ ಬಜೆಟ್ ಮೇಲೆ ಬೀರುತ್ತಿವೆ. ಹಬ್ಬದ ಋತುವಿನ ನಂತರ ಭಾರತವು ಮದುವೆಯ ಋತುವಿಗೆ ಹೊರಳುತ್ತಿದ್ದು, ಖಾದ್ಯ ತೈಲ ಮತ್ತು ಆಹಾರ ಧಾನ್ಯಗಳ ಬೆಲೆ ಹೆಚ್ಚಿರುವುದು ದೇಶದ ಕುಟುಂಬದ ಬಜೆಟ್‌ಗಳನ್ನು ತಗ್ಗಿಸುತ್ತದೆ ಎಂದು ವರದಿಯು ಹೇಳಿದೆ.

ಅದಾಗ್ಯೂ, ಸರ್ಕಾರವು ಹಣದುಬ್ಬರವನ್ನು ಕಡಿಮೆ ಮಾಡಲು ಪ್ರಯತ್ನಿಸುತ್ತಿದೆ ಎಂದು ವರದಿಯಾಗಿದೆ. ಹಣದುಬ್ಬರ ಕಡಿಮೆ ಮಾಡುವ ಉಪಕ್ರಮವಾಗಿ ಭಾರತ್ ಬ್ರ್ಯಾಂಡ್ ಅಡಿಯಲ್ಲಿ ಉತ್ಪನ್ನಗಳ ಸರಣಿಯನ್ನು ಪ್ರಾರಂಭಿಸಿದ್ದು, ಭಾರತ್ ಆಟಾ, ಅಕ್ಕಿ ಮತ್ತು ಬೇಳೆಯನ್ನು ಗ್ರಾಹಕರಿಗೆ ಅಗ್ಗದ ದರದಲ್ಲಿ ನೇರ ಮಾರಾಟಕ್ಕೆ ಮುಂದಾಗಿದೆ. ಇದಲ್ಲದೆ, ಬೆಲೆಯನ್ನು ತಗ್ಗಿಸಲು ದೇಶಾದ್ಯಂತ 100ಕ್ಕೂ ಹೆಚ್ಚು ಕೇಂದ್ರಗಳಿಗೆ ಈರುಳ್ಳಿ ಮತ್ತು ಟೊಮೆಟೊದಂತಹ ಅಗ್ಗದ ತರಕಾರಿಗಳನ್ನು ಸರಬರಾಜು ಮಾಡುತ್ತಿದೆ.

ಸರ್ಕಾರದ ಈ ಮಧ್ಯ ಪ್ರವೇಶ ಪ್ರಭಾವ ಬೀರಲು ಪ್ರಾರಂಭಿಸಿದ್ದು, ಬೆಲೆಗಳು ಸ್ವಲ್ಪಮಟ್ಟಿಗೆ ಇಳಿದಿವೆ ಎಂದು ಸರ್ಕಾರದ ವರದಿಗಳು ಉಲ್ಲೇಖಿಸಿವೆ. ಆದರೆ ಉತ್ತರ ಭಾರತದಾದ್ಯಂತ ಮುಂಬರುವ ಮದುವೆಯ ಋತುವಿನ ಕಾರಣಕ್ಕೆ ಆಹಾರ ಧಾನ್ಯಗಳ ಬೇಡಿಕೆ ಹೆಚ್ಚಾಗಲಿದೆ.

ಕೃಷಿ ನೀತಿಯ ಬಗ್ಗೆ ಸರ್ಕಾರದ ದೃಷ್ಟಿಕೋನವು ಅವ್ಯವಸ್ಥೆಯನ್ನು ಸೃಷ್ಟಿಸಿದೆ ಎಂದು ತಜ್ಞರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕೃಷಿ ಮಾರುಕಟ್ಟೆಯ “ಅಕಾಲಿಕ ಮತ್ತು ಅನಗತ್ಯ” ನಿಯಂತ್ರಣದ ಕಾರಣಕ್ಕೆ ಪೂರೈಕೆಯ ಮೇಲೆ ಪ್ರಭಾವ ಬೀರಿದೆ ಎಂದು ಆರೋಪಿಸಿದ್ದಾರೆ.

“ಕಳೆದ ಮೂರು ವರ್ಷಗಳಲ್ಲಿ, ಪೂರೈಕೆಯ ನಿರ್ಬಂಧಗಳನ್ನು ಸರಾಗಗೊಳಿಸುವ ಬದಲು ಸರ್ಕಾರವು ಬಿಕ್ಕಟ್ಟನ್ನು ನಿರ್ವಹಿಸಲು ಪ್ರಯತ್ನಿಸುತ್ತಿದೆ” ಎಂದು ಕೃಷಿ ಸರಕುಗಳ ತಜ್ಞ ಆರ್‌ಎಸ್ ರಾಣಾ ಹೇಳಿದ್ದಾರೆ.

“ಆಂತರಿಕವಾಗಿ ಬೆಲೆಗಳನ್ನು ಕಡಿಮೆ ಮಾಡಲು ಮೊದಲು ಅವರು ರಫ್ತುಗಳ ಮೇಲೆ ನಿಷೇಧವನ್ನು ಹಾಕಿದರು ಮತ್ತು ವಿವಿಧ ಪ್ರಮುಖ ತರಕಾರಿಗಳ ಮೇಲೆ ಸಂಗ್ರಹ ಮಿತಿಗಳನ್ನು ವಿಧಿಸಿದರು. ಆದರೆ ಇದು ರೈತರ ಹಿತಾಸಕ್ತಿಯನ್ನು ಪ್ರತಿಧ್ವನಿಸಲಿಲ್ಲ. ಇದರಿಂದಾಗಿ ಪೂರೈಕೆಯ ಮೇಲೆ ಪರಿಣಾಮ ಬೀರಿತು” ಎಂದು ಅವರು ಹೇಳಿದ್ದಾರೆ.

ಮಧ್ಯಪ್ರದೇಶ ಮೂಲದ ಸರಕು ತಜ್ಞ ಅಜಯ್ ಜೈನ್ ಮಾತನಾಡಿ, “ಮೆಕ್ಕೆಜೋಳ, ಅಕ್ಕಿ ಮತ್ತು ಕಬ್ಬಿನಂತಹ ಪ್ರಮುಖ ಬೆಳೆಗಳನ್ನು ಎಥೆನಾಲ್ ಉತ್ಪಾದನೆಗೆ ನೀಡಿರುವುದು ಬೆಲೆ ಏರಿಕೆಗೆ ಪ್ರಮುಖ ಕಾರಣವಾಗಿದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಮಹಾರಾಷ್ಟ್ರ | ಸೀಟು ಹಂಚಿಕೆ ಒಪ್ಪಂದಕ್ಕಿಂತ 2 ಹೆಚ್ಚುವರಿ ಅಭ್ಯರ್ಥಿಗಳನ್ನು ಘೋಷಿಸಿದ ಕಾಂಗ್ರೆಸ್!

ಮಹಾರಾಷ್ಟ್ರ | ಸೀಟು ಹಂಚಿಕೆ ಒಪ್ಪಂದಕ್ಕಿಂತ 2 ಹೆಚ್ಚುವರಿ ಅಭ್ಯರ್ಥಿಗಳನ್ನು ಘೋಷಿಸಿದ ಕಾಂಗ್ರೆಸ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...