Homeಮುಖಪುಟಮುಂಬೈನ ಬಾಂದ್ರಾ ಟರ್ಮಿನಸ್ ನಿಲ್ದಾಣದಲ್ಲಿ ಕಾಲ್ತುಳಿತ; ಒಂಬತ್ತು ಮಂದಿಗೆ ಗಾಯ, ಇಬ್ಬರ ಸ್ಥಿತಿ ಚಿಂತಾಜನಕ

ಮುಂಬೈನ ಬಾಂದ್ರಾ ಟರ್ಮಿನಸ್ ನಿಲ್ದಾಣದಲ್ಲಿ ಕಾಲ್ತುಳಿತ; ಒಂಬತ್ತು ಮಂದಿಗೆ ಗಾಯ, ಇಬ್ಬರ ಸ್ಥಿತಿ ಚಿಂತಾಜನಕ

- Advertisement -
- Advertisement -

ಮುಂಬೈನ ಬಾಂದ್ರಾ ಟರ್ಮಿನಸ್ ನಿಲ್ದಾಣದಲ್ಲಿ ಕಾಲ್ತುಳಿತ ಸಂಭವಿಸಿದ ನಂತರ ಕನಿಷ್ಠ ಒಂಬತ್ತು ಜನರು ಗಾಯಗೊಂಡಿದ್ದು, ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ. ಮಾಹಿತಿಯ ಪ್ರಕಾರ, ಭಾನುವಾರ ಮುಂಜಾನೆ ಮುಂಬೈನಿಂದ ಗೋರಖ್‌ಪುರಕ್ಕೆ ಹೋಗುತ್ತಿದ್ದ ರೈಲು ಪ್ಲಾಟ್‌ಫಾರ್ಮ್ ತಲುಪಿದಾಗ ಈ ಘಟನೆ ಸಂಭವಿಸಿದೆ. ಆದರೆ, ಪ್ರಯಾಣಿಕರು ರೈಲು ಹತ್ತಲು ಆತುರಪಡುತ್ತಿದ್ದಂತೆ ಕಾಲ್ತುಳಿತ ಉಂಟಾಗಿ ಸುಮಾರು ಒಂಬತ್ತು ಮಂದಿ ಗಾಯಗೊಂಡಿದ್ದಾರೆ.

ಗಾಯಗೊಂಡ ಎಲ್ಲ ಪ್ರಯಾಣಿಕರನ್ನು ಚಿಕಿತ್ಸೆಗಾಗಿ ಮುಂಬೈನ ಭಾಭಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಇಂದ್ರಜಿತ್ ಸಹಾನಿ ಮತ್ತು ನೂರ್ ಮೊಹಮ್ಮದ್ ಶೇಖ್ ಎಂದು ಗುರುತಿಸಲಾದ ಇಬ್ಬರು ಪ್ರಯಾಣಿಕರ ಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗಿದೆ.

ನಾಗರಿಕ ಅಧಿಕಾರಿಗಳ ಪ್ರಕಾರ, ಭಾನುವಾರದಂದು ಘಟನೆ ವರದಿಯಾಗಿದೆ, ಹಬ್ಬದ ಋತುವಿನಲ್ಲಿ ಹೆಚ್ಚಿನ ಸಂಖ್ಯೆಯ ಪ್ರಯಾಣಿಕರು ಬಾಂದ್ರಾ-ಗೋರಖ್‌ಪುರ ಅಂತ್ಯೋದಯ ಎಕ್ಸ್‌ಪ್ರೆಸ್‌ನಲ್ಲಿ ಪ್ರಯಾಣಿಣಿಸಲು ಜನರಲ್ ಕೋಚ್‌ಗಳಿಗೆ ಹತ್ತಲು ಪ್ಲಾಟ್‌ಫಾರ್ಮ್ ನಂ. 1 ಕ್ಕೆ ಧಾವಿಸಿದ್ದರು.

ಪ್ರಯಾಣಿಕರು ಅಂತ್ಯೋದಯ ಎಕ್ಸ್‌ಪ್ರೆಸ್ ಅನ್ನು ಹತ್ತಲು ಪ್ರಯತ್ನಿಸಿದಾಗ (ಎಲ್ಲಾ 22 ಸಾಮಾನ್ಯ ದರ್ಜೆಯ ಬೋಗಿಗಳನ್ನು ಹೊಂದಿರುವ) ಒಳಗಿನಿಂದ ಕೋಚ್‌ಗಳ ಬಾಗಿಲುಗಳನ್ನು ಲಾಕ್ ಮಾಡಿದಾಗ ಪರಿಸ್ಥಿತಿ ಹದಗೆಟ್ಟಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ರೈಲಿನಲ್ಲಿ ಆಸನವನ್ನು ಹಿಡಿಯುವ ಪ್ರಯತ್ನದಲ್ಲಿ, ಕೆಲವರು ಪ್ಲಾಟ್‌ಫಾರ್ಮ್‌ನಲ್ಲಿ ಇನ್ನೂ ನಿಲ್ಲದಿರುವಾಗ ರೈಲು ಹತ್ತಲು ಪ್ರಯತ್ನಿಸಿದರು. ಇದರಿಂದ ಎರಡು ಬೋಗಿಗಳ ನಡುವಿನ ಜಾಗದಲ್ಲಿ ಜನರು ಪ್ಲಾಟ್‌ಫಾರ್ಮ್ ಮೇಲೆ ಬೀಳಲು ಕಾರಣವಾಯಿತು ಎಂದು ಮೂಲಗಳು ತಿಳಿಸಿವೆ.

“ಸಾಮಾನ್ಯವಾಗಿ, ಪ್ಲಾಟ್‌ಫಾರ್ಮ್‌ನಲ್ಲಿ ರೈಲು ನಿಂತ ನಂತರ ಕೋಚ್‌ಗಳ ಬಾಗಿಲು ತೆರೆಯಲಾಗುತ್ತದೆ ಮತ್ತು ಪ್ರಯಾಣಿಕರು ನಂತರ ಸರದಿಯಲ್ಲಿ ಹತ್ತುತ್ತಾರೆ” ಎಂದು ಡಬ್ಲ್ಯುಆರ್ ಮೂಲಗಳು ತಿಳಿಸಿವೆ.

ಘಟನೆಯ ನಂತರ, ರೈಲ್ವೆ ರಕ್ಷಣಾ ಪಡೆ (ಆರ್‌ಪಿಎಫ್) ಸಿಬ್ಬಂದಿ ಮತ್ತು ಸ್ಥಳೀಯ ಜನರು ತಕ್ಷಣ ಸ್ಥಳಕ್ಕೆ ಧಾವಿಸಿ ಗಾಯಾಳುಗಳನ್ನು ಭಾಭಾ ಆಸ್ಪತ್ರೆಗೆ ವರ್ಗಾಯಿಸಿದರು. ಅಲ್ಲಿ ಅವರು ಪ್ರಸ್ತುತ ವೈದ್ಯಕೀಯ ಮೇಲ್ವಿಚಾರಣೆಯಲ್ಲಿದ್ದಾರೆ.

ಘಟನೆಯ ಕುರಿತು ಮಾತನಾಡಿದ ಥಾಣೆ ಸೆಂಟ್ರಲ್ ರೈಲ್ವೆ ಡೆಪ್ಯುಟಿ ಕಮಿಷನರ್ ಮನೋಜ್ ನಾನಾ ಪಾಟೀಲ್, ಪೊಲೀಸರು ಸತ್ಯಾಸತ್ಯತೆಗಾಗಿ ವಿಚಾರಣೆ ನಡೆಸುತ್ತಿದ್ದಾರೆ. “ಇದು ಪ್ರತಿ ಭಾನುವಾರ ಓಡುವ ಸಾಪ್ತಾಹಿಕ ರೈಲು. ರೈಲು ಕಾಯ್ದಿರಿಸಲಾಗಿಲ್ಲ.. ಸಾಮಾನ್ಯ ಸಾರ್ವಜನಿಕರು ಈ ರೈಲಿನ ಟಿಕೆಟ್ ಸುಲಭವಾಗಿ ಖರೀದಿಸಬಹುದು. ಆದ್ದರಿಂದ, ಈ ರೈಲಿಗೆ ಸಾಮಾನ್ಯವಾಗಿ ವಿಪರೀತ ರಶ್ ಇರುತ್ತದೆ.. ನಮ್ಮ ತಂಡವು ಇಲ್ಲಿ ಹಾಜರಿದ್ದರು, ಆದರೆ ಜನರು ಹಠಾತ್ತನೆ ಆಸನಗಳಿಗಾಗಿ ಧಾವಿಸಿದರು.. ಘಟನೆಯಲ್ಲಿ ಯಾರೂ ಗಂಭೀರವಾಗಿ ಗಾಯಗೊಂಡಿಲ್ಲ.. ನಾವು ವಿಚಾರಣೆ ನಡೆಸುತ್ತಿದ್ದೇವೆ” ಎಂದು ಅಧಿಕಾರಿ ಹೇಳಿದರು.

ಇದನ್ನೂ ಓದಿ; ದೆಹಲಿ: ಪಾಲಿಕಾ ಬಜಾರ್‌ನಲ್ಲಿ ಅನುಮಾನಾಸ್ಪದ ಚೈನೀಸ್ ಜಾಮರ್‌ಗಳು ಪತ್ತೆ, ತನಿಖೆ ಕೈಗೆತ್ತಿಕೊಂಡ ಪೊಲೀಸರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...