Homeಮುಖಪುಟಸಮಾನತೆ-ಸಾಮಾಜಿಕ ನ್ಯಾಯದ ಪೆರಿಯಾರ್ ತತ್ವಗಳನ್ನು ಅಳವಡಿಸಿಕೊಳ್ಳುತ್ತೇವೆ: ನಟ ವಿಜಯ್

ಸಮಾನತೆ-ಸಾಮಾಜಿಕ ನ್ಯಾಯದ ಪೆರಿಯಾರ್ ತತ್ವಗಳನ್ನು ಅಳವಡಿಸಿಕೊಳ್ಳುತ್ತೇವೆ: ನಟ ವಿಜಯ್

- Advertisement -
- Advertisement -

“ಪೆರಿಯಾರ್ ನಮ್ಮ ಸೈದ್ಧಾಂತಿಕ ನಾಯಕ. ಆದರೆ ನಾವು ಅವರ ನಾಸ್ತಿಕ ನಿಲುವನ್ನು ಮಾತ್ರ ಅಳವಡಿಸಿಕೊಳ್ಳುವುದಿಲ್ಲ, ನಾವು ಅದನ್ನು ಒಪ್ಪುವುದಿಲ್ಲ ಎಂದು ಸಿ.ಎನ್. ಅಣ್ಣಾದೊರೈ ಹೇಳಿದರು. ‘ಒಂದ್ರೆ ಕುಲಂ, ಒರುವನೇ ತೇವನ್’ ಎಂಬುದು ನಮ್ಮ ನಿಲುವು. ನಾವು ಮಹಿಳಾ ಶಿಕ್ಷಣ, ಸಮಾನತೆ ಮತ್ತು ಸಾಮಾಜಿಕ ನ್ಯಾಯದ ಕುರಿತು ಪೆರಿಯಾರ್ ಅವರ ತತ್ವಗಳನ್ನು ಅಳವಡಿಸಿಕೊಳ್ಳುತ್ತೇವೆ” ಎಂದು ನಟ ವಿಜಯ್ ತಮ್ಮ ಮೊದಲ ರಾಜಕೀಯ ಭಾಷಣದಲ್ಲಿ ಹೇಳಿದರು.

ತಮಿಳಗ ವೆಟ್ರಿ ಕಳಗಂ (ಟಿವಿಕೆ) ನ ಮೊದಲ ರಾಜ್ಯ ಸಮ್ಮೇಳನದಲ್ಲಿ ಬೃಹತ್ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಪಕ್ಷದ ಅಧ್ಯಕ್ಷ ಮತ್ತು ಹಿರಿಯ ನಟ ವಿಜಯ್, ರಾಜಕೀಯಕ್ಕೆ ತಮ್ಮ ಪ್ರವೇಶವನ್ನು ಹಾವಿನೊಂದಿಗೆ ಆಡುವ ಮಗುವಿಗೆ ಹೋಲಿಸಿದರು.

“ರಾಜಕೀಯದಲ್ಲಿ ನಾವು ಮಕ್ಕಳು ಎಂದು ಜನರು ಹೇಳುತ್ತಾರೆ. ಆದರೆ ನಾವು ರಾಜಕೀಯದ ಹಾವಿನ ಜೊತೆ ಆತ್ಮವಿಶ್ವಾಸದಿಂದ ಆಟವಾಡುವ ಮಕ್ಕಳಾಗಿದ್ದೇವೆ. ಭಯವಿಲ್ಲದೆ ಗಂಭೀರತೆ ಮತ್ತು ನಗುವಿನೊಂದಿಗೆ ಅದನ್ನು ಎದುರಿಸಲು ಇಲ್ಲಿಗೆ ಬಂದಿದ್ದೇನೆ” ಎಂದರು.

ಈಗಿರುವ ರಾಜಕೀಯ ಭಾಷಣಗಳ ಶೈಲಿಯನ್ನು ಟೀಕಿಸಿದ ಅವರು, “ನೇರವಾಗಿ ವಿಷಯಕ್ಕೆ ಬರುವುದು ನಮ್ಮ ವಿಧಾನವಾಗಿರಬೇಕು. ಎಲ್ಲವೂ ಬದಲಾದಾಗ ರಾಜಕೀಯವೂ ಬದಲಾಗಬೇಕು. ವಿಜ್ಞಾನ ಮತ್ತು ತಂತ್ರಜ್ಞಾನ, ಅಭಿವೃದ್ಧಿ ಮಾತ್ರ ಬದಲಾಗಬೇಕೇ? ರಾಜಕೀಯ ಬದಲಾಗಬಾರದು ಮತ್ತು ಅಭಿವೃದ್ಧಿ ಬದಲಾವಣೆ ಹೊಂದಬಾರದಾ” ಎಂದು ಪ್ರಶ್ನಿಸಿದರು.

“ಇತರ ರಾಜಕಾರಣಿಗಳ ಬಗ್ಗೆ ಚರ್ಚಿಸಲು ಸಮಯ ವ್ಯರ್ಥ ಮಾಡಲು ನಾನು ಇಲ್ಲಿಗೆ ಬಂದಿಲ್ಲ. ಆದರೆ, ನಾನು ಅವರತ್ತ ಕಣ್ಣು ಮುಚ್ಚುವುದಿಲ್ಲ. ನಾನು ಗಂಟೆಗಟ್ಟಲೆ ಮಾತನಾಡುವುದಿಲ್ಲ, ಇತಿಹಾಸವನ್ನು ಮೆಲುಕು ಹಾಕುವುದಿಲ್ಲ ಅಥವಾ ಅಂಕಿಅಂಶಗಳನ್ನು ಇಡುವುದಿಲ್ಲ. ಅದನ್ನು ಚಿಕ್ಕದಾಗಿ ಮತ್ತು ಸಿಹಿಯಾಗಿ ಇಡುವುದು ಮುಖ್ಯ. ಸಮಸ್ಯೆ ಏನು ಮತ್ತು ಏನು ಬೇಕು ಎಂದು ನಾವು ಸರಳವಾಗಿ ವಿವರಿಸಿದರೆ ಸಾಕು” ಎಂದರು.

ತಮ್ಮ ಪಕ್ಷದ ರಾಜಕೀಯ ಉದ್ದೇಶವನ್ನು ಅನಾವರಣಗೊಳಿಸಿದ ವಿಜಯ್, “ಇದು ಸರಳವಾಗಿದೆ. ಎಲ್ಲರಿಗೂ ಎಲ್ಲವೂ. ವಾಸಿಸಲು ಮನೆ, ಹೊಟ್ಟೆಗೆ ಅನ್ನ, ಆದಾಯಕ್ಕೆ ಕೆಲಸ.. ಅಷ್ಟೇ ಸರಳ” ಎಂದು ಹೇಳಿದರು.

ನಮ್ಮ ಇನ್ನೊಬ್ಬ ಸೈದ್ಧಾಂತಿಕ ನಾಯಕ ಕೆ.ಕಾಮರಾಜ್. ಅದೇ ರೀತಿ ಬಿ.ಆರ್. ಅಂಬೇಡ್ಕರ್ ಅವರ ಹೆಸರು ಸಾಮಾಜಿಕ ಸಮಾನತೆಯ ವಿರುದ್ಧ ಇರುವವರಿಗೆ ದಿಗ್ಭ್ರಮೆಯನ್ನುಂಟು ಮಾಡುತ್ತದೆ, ಅವರು ನಮ್ಮ ಮಾರ್ಗದರ್ಶಿ ಶಕ್ತಿಯಾಗಿರುತ್ತಾರೆ.

ವೇಲು ನಾಚಿಯಾರ್ ಮತ್ತು ಸ್ವಾತಂತ್ರ್ಯ ಹೋರಾಟಗಾರ್ತಿ ಅಂಜಲೈ ಅಮ್ಮಾಳ್ ಅವರು ಪಕ್ಷದ ಮಾರ್ಗದರ್ಶಕ ಶಕ್ತಿಗಳಾಗಿರುತ್ತಾರೆ ಎಂದು ಹೇಳಿದ ವಿಜಯ್, ಟಿವಿಕೆ ಮಹಿಳಾ ನಾಯಕರನ್ನು ಐಕಾನ್‌ಗಳಾಗಿ ಸ್ವೀಕರಿಸುವ ಮೊದಲ ಪಕ್ಷವಾಗಿದೆ ಎಂದು ಹೇಳಿದರು.

“ರಾಜಕೀಯ ನಿಲುವು ತೆಗೆದುಕೊಳ್ಳುವುದು ಮುಖ್ಯ. ನಾವು ಒಂದು ನಿಲುವು ತೆಗೆದುಕೊಂಡರೆ, ಅದು ನಮ್ಮ ವಿರೋಧಿಗಳು ಯಾರು ಎಂದು ಸ್ವಯಂಚಾಲಿತವಾಗಿ ಗುರುತಿಸುತ್ತದೆ. ‘ಎಲ್ಲರೂ ಸಮಾನರಾಗಿ ಹುಟ್ಟುತ್ತಾರೆ’ ಎಂದು ನಾವು ಹೇಳಿದಾಗ, ನಮ್ಮ ನಿಜವಾದ ವಿರೋಧಿಗಳು ಯಾರು ಎಂದು ನಾವು ಗುರುತಿಸಿದ್ದೇವೆ. ನಾವು ವಿಭಜಕ ರಾಜಕೀಯದ ವಿರುದ್ಧ ಮಾತ್ರವಲ್ಲದೆ ಭ್ರಷ್ಟ ಶಕ್ತಿಗಳ ವಿರುದ್ಧವೂ ಹೋರಾಟ ನಡೆಸುತ್ತಿದ್ದೇವೆ” ಎಂದರು.

“ವಿಭಜಕ ಶಕ್ತಿಗಳನ್ನು ಗುರುತಿಸುವುದು ಸುಲಭ. ಆದರೆ, ಸಿದ್ಧಾಂತ ಮತ್ತು ತತ್ವಗಳ ಮುಖವಾಡದ ಹಿಂದೆ ಅಡಗಿರುವ ಭ್ರಷ್ಟ ಶಕ್ತಿಗಳನ್ನು ಗುರುತಿಸುವುದು ಕಷ್ಟ. ಇಲ್ಲಿ ಆಳುವವರೇ ಭ್ರಷ್ಟ ಶಕ್ತಿಗಳು” ಎಂದು ಡಿಎಂಕೆ ಪರೋಕ್ಷ ವಾಗ್ದಾಳಿ ನಡೆಸಿದರು.

ಮೀನು ಹಿಡಿದು ಆಗದವರಿಗೂ ಕೊಡೋಣ

“ಕೆಲವರು ಮೀನು ಕೊಡುವುದಕ್ಕಿಂತ ಮೀನು ಹಿಡಿಯುವುದನ್ನು ಕಲಿಸುವುದು ಉತ್ತಮ ಎಂದು ಹೇಳುತ್ತಾರೆ. ಅದರಲ್ಲಿ ನಮಗೆ ನಂಬಿಕೆ ಇಲ್ಲ. ಮೀನು ಹಿಡಿಯಬಲ್ಲವರು ಮೀನು ಹಿಡಿಯಲಿ. ಆಗದವರು ಮೀನು ಹಿಡಿದು ಅವರಿಗೂ ಕೊಡೋಣ. ಜನರಿಗೆ ಒಳ್ಳೆಯದನ್ನು ಮಾಡಿದರೆ ಏನೂ ತಪ್ಪಿಲ್ಲ. ಈ ಸಾಮೂಹಿಕ ಕೂಟ ಇಲ್ಲಿ ಹಣಕ್ಕಾಗಿ ಅಲ್ಲ, ಒಳ್ಳೆಯ ಉದ್ದೇಶಕ್ಕಾಗಿ. ಒಡೆದು ಆಳುವ ರಾಜಕಾರಣ ಮಾಡುವವರು ನಮ್ಮ ಸೈದ್ಧಾಂತಿಕ ಶತ್ರುಗಳು” ಎಂದು ಘೋಷಿಸಿದರು.

ಡಿಎಂಕೆ ವಿರುದ್ಧದ ಟೀಕೆಯನ್ನು ಮುಂದುವರಿಸಿದ ಅವರು, “ದ್ರಾವಿಡ ಮಾದರಿ ಸರ್ಕಾರದ ಹೆಸರಿನಲ್ಲಿ ಕುಟುಂಬವೊಂದು ಪೆರಿಯಾರ್ ಹೆಸರಿನಲ್ಲಿ ರಾಜ್ಯವನ್ನು ಶೋಷಿಸುತ್ತದೆ. ಜನವಿರೋಧಿ ಸರ್ಕಾರವನ್ನು ‘ದ್ರಾವಿಡ ಮಾದರಿ’ ಸರಕಾರ ಎಂದು ಬಿಂಬಿಸುತ್ತಿದ್ದೀರಿ. ಅವರು ನಮ್ಮ ರಾಜಕೀಯ ಶತ್ರುಗಳು” ಎಂದು ವಾಗ್ದಾಳು ನಡೆಸಿದರು.

ಬಿಜೆಪಿಯನ್ನು ‘ಫ್ಯಾಸಿಸ್ಟ್’ ಎಂದು ಡಿಎಂಕೆ ನಿರೂಪಿಸುವುದನ್ನು ಪ್ರಶ್ನಿಸಿದರು, “ಅವಂಗ ಫ್ಯಾಸಿಸಂ ನಾ ನೀಂಗ ಎನ್ನ ಪಾಯಸಮಾ?” ಎಂದು ವಾಕ್ಚಾತುರ್ಯದಿಂದ ಕೇಳಿದರು. “ನೀವು ಬಿಜೆಪಿಯನ್ನು ಫ್ಯಾಸಿಸ್ಟ್ ಎಂದು ಕರೆಯುವ ಮೂಲಕ ಟೀಕಿಸುತ್ತೀರಿ, ಆದರೆ ನೀವು ಉತ್ತಮವಾಗಿದ್ದೀರಾ?” ಎಂದರು.

“ನಾನು ನನ್ನ ವೃತ್ತಿಜೀವನವನ್ನು ಉತ್ತುಂಗದಲ್ಲಿರುವಾಗಲೇ ತ್ಯಜಿಸಿದ್ದೇನೆ ಮತ್ತು ನಿನ್ನನ್ನು ಮಾತ್ರ ನಂಬಿ ರಾಜಕೀಯಕ್ಕೆ ಬಂದಿದ್ದೇನೆ. ನಮ್ಮೊಂದಿಗೆ ಪ್ರಯಾಣಿಸಲು ಬಯಸಬಹುದು; ಅಂತಹ ರಾಜಕೀಯ ಪರಿಸ್ಥಿತಿ ಉದ್ಭವಿಸಬಹುದು. ಆದ್ದರಿಂದ, ನಾವು ಅವರನ್ನು ಅಪ್ಪಿಕೊಳ್ಳಬೇಕಲ್ಲವೇ” ಎಂದರು.

ಇದನ್ನೂ ಒದಿ;

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...