Homeಮುಖಪುಟಸಮಾನತೆ-ಸಾಮಾಜಿಕ ನ್ಯಾಯದ ಪೆರಿಯಾರ್ ತತ್ವಗಳನ್ನು ಅಳವಡಿಸಿಕೊಳ್ಳುತ್ತೇವೆ: ನಟ ವಿಜಯ್

ಸಮಾನತೆ-ಸಾಮಾಜಿಕ ನ್ಯಾಯದ ಪೆರಿಯಾರ್ ತತ್ವಗಳನ್ನು ಅಳವಡಿಸಿಕೊಳ್ಳುತ್ತೇವೆ: ನಟ ವಿಜಯ್

- Advertisement -
- Advertisement -

“ಪೆರಿಯಾರ್ ನಮ್ಮ ಸೈದ್ಧಾಂತಿಕ ನಾಯಕ. ಆದರೆ ನಾವು ಅವರ ನಾಸ್ತಿಕ ನಿಲುವನ್ನು ಮಾತ್ರ ಅಳವಡಿಸಿಕೊಳ್ಳುವುದಿಲ್ಲ, ನಾವು ಅದನ್ನು ಒಪ್ಪುವುದಿಲ್ಲ ಎಂದು ಸಿ.ಎನ್. ಅಣ್ಣಾದೊರೈ ಹೇಳಿದರು. ‘ಒಂದ್ರೆ ಕುಲಂ, ಒರುವನೇ ತೇವನ್’ ಎಂಬುದು ನಮ್ಮ ನಿಲುವು. ನಾವು ಮಹಿಳಾ ಶಿಕ್ಷಣ, ಸಮಾನತೆ ಮತ್ತು ಸಾಮಾಜಿಕ ನ್ಯಾಯದ ಕುರಿತು ಪೆರಿಯಾರ್ ಅವರ ತತ್ವಗಳನ್ನು ಅಳವಡಿಸಿಕೊಳ್ಳುತ್ತೇವೆ” ಎಂದು ನಟ ವಿಜಯ್ ತಮ್ಮ ಮೊದಲ ರಾಜಕೀಯ ಭಾಷಣದಲ್ಲಿ ಹೇಳಿದರು.

ತಮಿಳಗ ವೆಟ್ರಿ ಕಳಗಂ (ಟಿವಿಕೆ) ನ ಮೊದಲ ರಾಜ್ಯ ಸಮ್ಮೇಳನದಲ್ಲಿ ಬೃಹತ್ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಪಕ್ಷದ ಅಧ್ಯಕ್ಷ ಮತ್ತು ಹಿರಿಯ ನಟ ವಿಜಯ್, ರಾಜಕೀಯಕ್ಕೆ ತಮ್ಮ ಪ್ರವೇಶವನ್ನು ಹಾವಿನೊಂದಿಗೆ ಆಡುವ ಮಗುವಿಗೆ ಹೋಲಿಸಿದರು.

“ರಾಜಕೀಯದಲ್ಲಿ ನಾವು ಮಕ್ಕಳು ಎಂದು ಜನರು ಹೇಳುತ್ತಾರೆ. ಆದರೆ ನಾವು ರಾಜಕೀಯದ ಹಾವಿನ ಜೊತೆ ಆತ್ಮವಿಶ್ವಾಸದಿಂದ ಆಟವಾಡುವ ಮಕ್ಕಳಾಗಿದ್ದೇವೆ. ಭಯವಿಲ್ಲದೆ ಗಂಭೀರತೆ ಮತ್ತು ನಗುವಿನೊಂದಿಗೆ ಅದನ್ನು ಎದುರಿಸಲು ಇಲ್ಲಿಗೆ ಬಂದಿದ್ದೇನೆ” ಎಂದರು.

ಈಗಿರುವ ರಾಜಕೀಯ ಭಾಷಣಗಳ ಶೈಲಿಯನ್ನು ಟೀಕಿಸಿದ ಅವರು, “ನೇರವಾಗಿ ವಿಷಯಕ್ಕೆ ಬರುವುದು ನಮ್ಮ ವಿಧಾನವಾಗಿರಬೇಕು. ಎಲ್ಲವೂ ಬದಲಾದಾಗ ರಾಜಕೀಯವೂ ಬದಲಾಗಬೇಕು. ವಿಜ್ಞಾನ ಮತ್ತು ತಂತ್ರಜ್ಞಾನ, ಅಭಿವೃದ್ಧಿ ಮಾತ್ರ ಬದಲಾಗಬೇಕೇ? ರಾಜಕೀಯ ಬದಲಾಗಬಾರದು ಮತ್ತು ಅಭಿವೃದ್ಧಿ ಬದಲಾವಣೆ ಹೊಂದಬಾರದಾ” ಎಂದು ಪ್ರಶ್ನಿಸಿದರು.

“ಇತರ ರಾಜಕಾರಣಿಗಳ ಬಗ್ಗೆ ಚರ್ಚಿಸಲು ಸಮಯ ವ್ಯರ್ಥ ಮಾಡಲು ನಾನು ಇಲ್ಲಿಗೆ ಬಂದಿಲ್ಲ. ಆದರೆ, ನಾನು ಅವರತ್ತ ಕಣ್ಣು ಮುಚ್ಚುವುದಿಲ್ಲ. ನಾನು ಗಂಟೆಗಟ್ಟಲೆ ಮಾತನಾಡುವುದಿಲ್ಲ, ಇತಿಹಾಸವನ್ನು ಮೆಲುಕು ಹಾಕುವುದಿಲ್ಲ ಅಥವಾ ಅಂಕಿಅಂಶಗಳನ್ನು ಇಡುವುದಿಲ್ಲ. ಅದನ್ನು ಚಿಕ್ಕದಾಗಿ ಮತ್ತು ಸಿಹಿಯಾಗಿ ಇಡುವುದು ಮುಖ್ಯ. ಸಮಸ್ಯೆ ಏನು ಮತ್ತು ಏನು ಬೇಕು ಎಂದು ನಾವು ಸರಳವಾಗಿ ವಿವರಿಸಿದರೆ ಸಾಕು” ಎಂದರು.

ತಮ್ಮ ಪಕ್ಷದ ರಾಜಕೀಯ ಉದ್ದೇಶವನ್ನು ಅನಾವರಣಗೊಳಿಸಿದ ವಿಜಯ್, “ಇದು ಸರಳವಾಗಿದೆ. ಎಲ್ಲರಿಗೂ ಎಲ್ಲವೂ. ವಾಸಿಸಲು ಮನೆ, ಹೊಟ್ಟೆಗೆ ಅನ್ನ, ಆದಾಯಕ್ಕೆ ಕೆಲಸ.. ಅಷ್ಟೇ ಸರಳ” ಎಂದು ಹೇಳಿದರು.

ನಮ್ಮ ಇನ್ನೊಬ್ಬ ಸೈದ್ಧಾಂತಿಕ ನಾಯಕ ಕೆ.ಕಾಮರಾಜ್. ಅದೇ ರೀತಿ ಬಿ.ಆರ್. ಅಂಬೇಡ್ಕರ್ ಅವರ ಹೆಸರು ಸಾಮಾಜಿಕ ಸಮಾನತೆಯ ವಿರುದ್ಧ ಇರುವವರಿಗೆ ದಿಗ್ಭ್ರಮೆಯನ್ನುಂಟು ಮಾಡುತ್ತದೆ, ಅವರು ನಮ್ಮ ಮಾರ್ಗದರ್ಶಿ ಶಕ್ತಿಯಾಗಿರುತ್ತಾರೆ.

ವೇಲು ನಾಚಿಯಾರ್ ಮತ್ತು ಸ್ವಾತಂತ್ರ್ಯ ಹೋರಾಟಗಾರ್ತಿ ಅಂಜಲೈ ಅಮ್ಮಾಳ್ ಅವರು ಪಕ್ಷದ ಮಾರ್ಗದರ್ಶಕ ಶಕ್ತಿಗಳಾಗಿರುತ್ತಾರೆ ಎಂದು ಹೇಳಿದ ವಿಜಯ್, ಟಿವಿಕೆ ಮಹಿಳಾ ನಾಯಕರನ್ನು ಐಕಾನ್‌ಗಳಾಗಿ ಸ್ವೀಕರಿಸುವ ಮೊದಲ ಪಕ್ಷವಾಗಿದೆ ಎಂದು ಹೇಳಿದರು.

“ರಾಜಕೀಯ ನಿಲುವು ತೆಗೆದುಕೊಳ್ಳುವುದು ಮುಖ್ಯ. ನಾವು ಒಂದು ನಿಲುವು ತೆಗೆದುಕೊಂಡರೆ, ಅದು ನಮ್ಮ ವಿರೋಧಿಗಳು ಯಾರು ಎಂದು ಸ್ವಯಂಚಾಲಿತವಾಗಿ ಗುರುತಿಸುತ್ತದೆ. ‘ಎಲ್ಲರೂ ಸಮಾನರಾಗಿ ಹುಟ್ಟುತ್ತಾರೆ’ ಎಂದು ನಾವು ಹೇಳಿದಾಗ, ನಮ್ಮ ನಿಜವಾದ ವಿರೋಧಿಗಳು ಯಾರು ಎಂದು ನಾವು ಗುರುತಿಸಿದ್ದೇವೆ. ನಾವು ವಿಭಜಕ ರಾಜಕೀಯದ ವಿರುದ್ಧ ಮಾತ್ರವಲ್ಲದೆ ಭ್ರಷ್ಟ ಶಕ್ತಿಗಳ ವಿರುದ್ಧವೂ ಹೋರಾಟ ನಡೆಸುತ್ತಿದ್ದೇವೆ” ಎಂದರು.

“ವಿಭಜಕ ಶಕ್ತಿಗಳನ್ನು ಗುರುತಿಸುವುದು ಸುಲಭ. ಆದರೆ, ಸಿದ್ಧಾಂತ ಮತ್ತು ತತ್ವಗಳ ಮುಖವಾಡದ ಹಿಂದೆ ಅಡಗಿರುವ ಭ್ರಷ್ಟ ಶಕ್ತಿಗಳನ್ನು ಗುರುತಿಸುವುದು ಕಷ್ಟ. ಇಲ್ಲಿ ಆಳುವವರೇ ಭ್ರಷ್ಟ ಶಕ್ತಿಗಳು” ಎಂದು ಡಿಎಂಕೆ ಪರೋಕ್ಷ ವಾಗ್ದಾಳಿ ನಡೆಸಿದರು.

ಮೀನು ಹಿಡಿದು ಆಗದವರಿಗೂ ಕೊಡೋಣ

“ಕೆಲವರು ಮೀನು ಕೊಡುವುದಕ್ಕಿಂತ ಮೀನು ಹಿಡಿಯುವುದನ್ನು ಕಲಿಸುವುದು ಉತ್ತಮ ಎಂದು ಹೇಳುತ್ತಾರೆ. ಅದರಲ್ಲಿ ನಮಗೆ ನಂಬಿಕೆ ಇಲ್ಲ. ಮೀನು ಹಿಡಿಯಬಲ್ಲವರು ಮೀನು ಹಿಡಿಯಲಿ. ಆಗದವರು ಮೀನು ಹಿಡಿದು ಅವರಿಗೂ ಕೊಡೋಣ. ಜನರಿಗೆ ಒಳ್ಳೆಯದನ್ನು ಮಾಡಿದರೆ ಏನೂ ತಪ್ಪಿಲ್ಲ. ಈ ಸಾಮೂಹಿಕ ಕೂಟ ಇಲ್ಲಿ ಹಣಕ್ಕಾಗಿ ಅಲ್ಲ, ಒಳ್ಳೆಯ ಉದ್ದೇಶಕ್ಕಾಗಿ. ಒಡೆದು ಆಳುವ ರಾಜಕಾರಣ ಮಾಡುವವರು ನಮ್ಮ ಸೈದ್ಧಾಂತಿಕ ಶತ್ರುಗಳು” ಎಂದು ಘೋಷಿಸಿದರು.

ಡಿಎಂಕೆ ವಿರುದ್ಧದ ಟೀಕೆಯನ್ನು ಮುಂದುವರಿಸಿದ ಅವರು, “ದ್ರಾವಿಡ ಮಾದರಿ ಸರ್ಕಾರದ ಹೆಸರಿನಲ್ಲಿ ಕುಟುಂಬವೊಂದು ಪೆರಿಯಾರ್ ಹೆಸರಿನಲ್ಲಿ ರಾಜ್ಯವನ್ನು ಶೋಷಿಸುತ್ತದೆ. ಜನವಿರೋಧಿ ಸರ್ಕಾರವನ್ನು ‘ದ್ರಾವಿಡ ಮಾದರಿ’ ಸರಕಾರ ಎಂದು ಬಿಂಬಿಸುತ್ತಿದ್ದೀರಿ. ಅವರು ನಮ್ಮ ರಾಜಕೀಯ ಶತ್ರುಗಳು” ಎಂದು ವಾಗ್ದಾಳು ನಡೆಸಿದರು.

ಬಿಜೆಪಿಯನ್ನು ‘ಫ್ಯಾಸಿಸ್ಟ್’ ಎಂದು ಡಿಎಂಕೆ ನಿರೂಪಿಸುವುದನ್ನು ಪ್ರಶ್ನಿಸಿದರು, “ಅವಂಗ ಫ್ಯಾಸಿಸಂ ನಾ ನೀಂಗ ಎನ್ನ ಪಾಯಸಮಾ?” ಎಂದು ವಾಕ್ಚಾತುರ್ಯದಿಂದ ಕೇಳಿದರು. “ನೀವು ಬಿಜೆಪಿಯನ್ನು ಫ್ಯಾಸಿಸ್ಟ್ ಎಂದು ಕರೆಯುವ ಮೂಲಕ ಟೀಕಿಸುತ್ತೀರಿ, ಆದರೆ ನೀವು ಉತ್ತಮವಾಗಿದ್ದೀರಾ?” ಎಂದರು.

“ನಾನು ನನ್ನ ವೃತ್ತಿಜೀವನವನ್ನು ಉತ್ತುಂಗದಲ್ಲಿರುವಾಗಲೇ ತ್ಯಜಿಸಿದ್ದೇನೆ ಮತ್ತು ನಿನ್ನನ್ನು ಮಾತ್ರ ನಂಬಿ ರಾಜಕೀಯಕ್ಕೆ ಬಂದಿದ್ದೇನೆ. ನಮ್ಮೊಂದಿಗೆ ಪ್ರಯಾಣಿಸಲು ಬಯಸಬಹುದು; ಅಂತಹ ರಾಜಕೀಯ ಪರಿಸ್ಥಿತಿ ಉದ್ಭವಿಸಬಹುದು. ಆದ್ದರಿಂದ, ನಾವು ಅವರನ್ನು ಅಪ್ಪಿಕೊಳ್ಳಬೇಕಲ್ಲವೇ” ಎಂದರು.

ಇದನ್ನೂ ಒದಿ;

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...

ಆಕಸ್ಮಿಕವಾಗಿ ಗಡಿ ದಾಟಿದ್ದ 7 ಭಾರತೀಯರನ್ನು ಹಸ್ತಾಂತರಿಸಿದ ಪಾಕಿಸ್ತಾನ

2023 ರ ಪ್ರವಾಹದ ಸಮಯದಲ್ಲಿ ಅಜಾಗರೂಕತೆಯಿಂದ ಗಡಿ ದಾಟಿದ ನಂತರ ಬಂಧಿಸಲ್ಪಟ್ಟ ಏಳು ಭಾರತೀಯ ನಾಗರಿಕರನ್ನು ಪಾಕಿಸ್ತಾನ ಶನಿವಾರ ಸ್ವದೇಶಕ್ಕೆ ವಾಪಸ್ ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನ ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ನಲ್ಲಿ...

ಮೀರತ್| ಅಪಹರಣ ಪ್ರಕರಣ ಹಿಂಪಡೆಯುವಂತೆ ಪೊಲೀಸರ ಒತ್ತಡ; ‘ಗೃಹಬಂಧನ’ದಲ್ಲಿ ದಲಿತ ಕುಟುಂಬ

ಜನವರಿ ತಿಂಗಳ ಆರಂಭದಲ್ಲಿ ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಕಪ್ಸಾದ್ ಗ್ರಾಮದಲ್ಲಿ ತಾಯಿಯ ಕೊಲೆಯ ನಂತರ ಅಪಹರಿಸಲ್ಪಟ್ಟ ದಲಿತ ಹುಡುಗಿಯ ಕುಟುಂಬ ಸದಸ್ಯರು ತಾವು ಗೃಹಬಂಧನದಲ್ಲಿದ್ದು, ಆರೋಪಿಗಳ ವಿರುದ್ಧ ಪ್ರಕರಣವನ್ನು ಮುಂದುವರಿಸದಂತೆ ಪೊಲೀಸರು...

ಉದ್ಯಮಿ ಸಿಜೆ ರಾಯ್ ಮರಣೋತ್ತರ ಪರೀಕ್ಷೆ; ಹೃದಯ-ಶ್ವಾಸಕೋಶದಲ್ಲಿ 6.35 ಎಂಎಂ ಗುಂಡಿನ ಗಾಯ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಅವರ ಆತ್ಮಹತ್ಯೆಯ ಮರಣೋತ್ತರ ಪರೀಕ್ಷೆಯ ವರದಿಗಯನ್ನು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅರವಿಂದ್ ಎಂಎನ್ ವಿವರಿಸಿದ್ದಾರೆ. 6.35 ಎಂಎಂ ಗುಂಡಿನ ದಾಳಿಯು ತಕ್ಷಣದ...