Homeಮುಖಪುಟಸಮಾನತೆ-ಸಾಮಾಜಿಕ ನ್ಯಾಯಕ್ಕೆ ಒತ್ತು, ಜಾತಿಗಣತಿ ಭರವಸೆ : ಸಂಚಲನ ಸೃಷ್ಟಿಸಿದ ಹೊಸ ಪಕ್ಷ ಟಿವಿಕೆ

ಸಮಾನತೆ-ಸಾಮಾಜಿಕ ನ್ಯಾಯಕ್ಕೆ ಒತ್ತು, ಜಾತಿಗಣತಿ ಭರವಸೆ : ಸಂಚಲನ ಸೃಷ್ಟಿಸಿದ ಹೊಸ ಪಕ್ಷ ಟಿವಿಕೆ

ರಾಜ್ಯಪಾಲರ ಹುದ್ದೆ ರದ್ದು, ಜನಸಂಖ್ಯೆಗೆ ಅನುಗುಣ ಪ್ರಾತಿನಿಧ್ಯ, ದ್ವಿಭಾಷಾ ನೀತಿ ಅಳವಡಿಕೆ ಭರವಸೆ ಕೊಟ್ಟ ನಟ ವಿಜಯ್

- Advertisement -
- Advertisement -

ತಮಿಳುನಾಡು ವಿಧಾನಸಭೆಗೆ 2026ರಲ್ಲಿ ನಡೆಯಲಿರುವ ಚುನಾವಣೆಯ ಮೇಲೆ ಕಣ್ಣಿಟ್ಟಿರುವ ನಟ ಹಾಗೂ ರಾಜಕಾರಣಿ ವಿಜಯ್ ಅವರ ಹೊಸ ಪಕ್ಷ ತಮಿಳಗ ವೆಟ್ರಿ ಕಳಗಂ (ಟಿವಿಕೆ)ನ ಮೊದಲ ರಾಜ್ಯ ಸಮ್ಮೇಳನ ಅಕ್ಟೋಬರ್ 27 ಭಾನುವಾರ ವಿಲ್ಲುಪುರಂ ಜಿಲ್ಲೆಯ ವಿಕ್ರವಂಡಿಯಲ್ಲಿ ನಡೆದಿದೆ.

ಮೊದಲ ಸಮ್ಮೇಳನದಲ್ಲೇ ಸುಮಾರು 3 ಲಕ್ಷದಷ್ಟು ಜನರನ್ನು ಸೇರಿಸುವ ಮೂಲಕ ವಿಜಯ್ ದೇಶದ ಗಮನ ಸೆಳೆದಿದ್ದಾರೆ. ಚೊಚ್ಚಲ ಸಮ್ಮೇಳನದಲ್ಲಿ ವಿಜಯ್ ತಮಿಳು ಜನತೆಗೆ ನೀಡಿರುವ ಪ್ರಮುಖ ಭರವಸೆಗಳು ಕೂಡ ಚರ್ಚೆಯ ವಿಷಯವಾಗಿ ಮಾರ್ಪಟ್ಟಿದೆ.

ಜನಸಂಖ್ಯೆಗೆ ಅನುಗುಣ ಪ್ರಾತಿನಿಧ್ಯ, ರಾಜ್ಯಪಾಲರ ಹುದ್ದೆಯನ್ನು ರದ್ದುಪಡಿಸುವುದು, ಜಾತಿ ಗಣತಿ ನಡೆಸುವುದು, ದ್ವಿಭಾಷಾ ನೀತಿಯನ್ನು ಅಳವಡಿಸಿಕೊಳ್ಳುವುದು ಮತ್ತು ಕಾಮರಾಜರ ಮಾದರಿ ಶಾಲೆಗಳನ್ನು ಸ್ಥಾಪಿಸುವ ಭರವಸೆಗಳನ್ನು ವಿಜಯ್ ನೀಡಿದ್ದಾರೆ.

ಟಿವಿಕೆ ಪಕ್ಷದ ಸಿದ್ಧಾಂತವು ಜಾತ್ಯತೀತ ಸಾಮಾಜಿಕ ನ್ಯಾಯಕ್ಕೆ ಒತ್ತು ನೀಡಲಿದ್ದು, ಭಾರತೀಯ ಜನತಾ ಪಕ್ಷ (ಬಿಜೆಪಿ) ಅದರ ಸೈದ್ಧಾಂತಿಕ ಶತ್ರು ಮತ್ತು ಆಡಳಿತಾರೂಢ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ರಾಜಕೀಯ ಶತ್ರು ಎಂದು ವಿಜಯ್ ಘೋಷಿಸಿದ್ದಾರೆ.

ಕೇಂದ್ರ ಸರ್ಕಾರವನ್ನು ವಿರೋಧಿಸುವ ಪಕ್ಷಗಳು ಆಡಳಿತ ನಡೆಸುತ್ತಿರುವ ರಾಜ್ಯಗಳಲ್ಲಿ ರಾಜ್ಯಪಾಲರ ಕ್ರಮಗಳು ಸಂವಿಧಾನಕ್ಕೆ ವಿರುದ್ಧವಾಗಿರುವುದರಿಂದ, ರಾಜ್ಯಪಾಲರ ಹುದ್ದೆಯನ್ನೇ ರದ್ದುಪಡಿಸಲು ಪಕ್ಷ ಪ್ರತಿಜ್ಞೆ ಮಾಡಿದೆ ಎಂದು ಟಿವಿಕೆ ಕಾರ್ಯಾಧ್ಯಕ್ಷೆ ಕ್ಯಾಥರೀನ್ ಪಾಂಡಿಯನ್ ಸಮ್ಮೇಳನದಲ್ಲಿ ಹೇಳಿದ್ದಾರೆ. ತಮಿಳು ಆಡಳಿತದ ಪ್ರಾಥಮಿಕ ಭಾಷೆಯಾಗಿರುವ ದ್ವಿಭಾಷಾ ನೀತಿಗೆ [ತಮಿಳು ಮತ್ತು ಇಂಗ್ಲಿಷ್] ಬದ್ಧವಾಗಿರಲು ಪಕ್ಷವು ಭರವಸೆ ನೀಡಿದೆ. ಜಾತಿ ಮತ್ತು ವರ್ಗ ಭೇದವನ್ನು ಹೋಗಲಾಡಿಸಲು ಮಧ್ಯಾಹ್ನದ ಊಟ ಮತ್ತು ಉಚಿತ ಸಮವಸ್ತ್ರವನ್ನು ನೀಡುವ ಕಾಮರಾಜರ ಮಾದರಿ ಶಾಲೆಗಳ ನಿರ್ಮಾಣಕ್ಕೆ ಒತ್ತು ನೀಡಲು ಪಕ್ಷವು ವಾಗ್ದಾನ ಮಾಡಿದೆ.

ಪಕ್ಷದ ಹೆಚ್ಚಿನ ಭರವಸೆಗಳು ಕಲ್ಯಾಣ ಪರ ಮತ್ತು ದ್ರಾವಿಡ ರಾಜಕೀಯಕ್ಕೆ ಅನುಗುಣವಾಗಿದ್ದರೂ, ಮೀಸಲಾತಿಯ ಬಗ್ಗೆ ತನ್ನ ನಿಲುವನ್ನು ಸ್ಪಷ್ಟೀಕರಿಸಿಲ್ಲ. ಸಮಾವೇಶದಲ್ಲಿ ಮಾತನಾಡಿದ ವಿಜಯ್, ರಾಜಕೀಯ ಮತ್ತು ಆರ್ಥಿಕ ಸಮಾನತೆ ಪಡೆಯಲು ಜನ ಸಂಖ್ಯೆಗೆ ಅನುಗುಣ ಪ್ರಾತಿನಿಧ್ಯ ಜಾರಿಯಾಗಬೇಕು. ಅದಕ್ಕಾಗಿ ಜಾತಿ ಗಣತಿ ನಡೆಸಬೇಕೆಂಬ ಬಹುದಿನಗಳಿಂದ ಬಾಕಿ ಉಳಿದಿರುವ ಮನವಿಯನ್ನು ಪೂರೈಸಬೇಕು. ಈ ಮೂಲಕ ಎಲ್ಲರಿಗೂ ಸಮಾನತೆಯನ್ನು ಸಾಧಿಸಲು ಸಾಧ್ಯ ಎಂದಿದ್ದಾರೆ.

ಪಕ್ಷವು ಶಿಕ್ಷಣ ಮತ್ತು ಆರೋಗ್ಯದ ಗುಣಮಟ್ಟವನ್ನು ಸುಧಾರಿಸುವ ಮತ್ತು ಜಾತಿ, ಧರ್ಮ, ಲಿಂಗ ಆಧಾರಿತ ತಾರತಮ್ಯ ಮಾಡದೆ ಎಲ್ಲರಿಗೂ ಶಿಕ್ಷಣ, ಆರೋಗ್ಯ ಒದಗಿಸುವ ಭರವಸೆ ನೀಡಿದೆ. ಇದಲ್ಲದೆ, ಮರಳು ಗಣಿಗಾರಿಕೆ, ಅಂತರ್ಜಲ ಮತ್ತು ಖನಿಜ ಸಂಪನ್ಮೂಲಗಳ ಅಕ್ರಮ ಬಳಕೆ ಕೊನೆಗೊಳಿಸಲು ಹೊಸ ನೀತಿಗಳನ್ನು ಅಳವಡಿಸಿಕೊಳ್ಳುವುದು, ಕೃಷಿ ಭೂಮಿ ಮತ್ತು ಜವುಗು ಪ್ರದೇಶಗಳ ಅತಿಕ್ರಮಣಗಳನ್ನು ತೆಗೆದು ಹಾಕುವುದು ಸೇರಿದಂತೆ ಹಲವು ಭರವೆಸಗಳನ್ನು ನೀಡಿದೆ.

ಮಹಿಳೆಯರಿಗೆ ಮೂರನೇ ಒಂದು ಭಾಗದಷ್ಟು ವಿಧಾನಸಭಾ ಸ್ಥಾನಗಳನ್ನು ಮೀಸಲಿಡುವುದಾಗಿ ಪಕ್ಷವು ವಾಗ್ದಾನ ಮಾಡಿದೆ. ನಿಧಾನವಾಗಿ, ಮೀಸಲಾತಿಯು 50% ವರೆಗೆ ಏರಿಸಲಾಗುವುದು ಎಂದು ಕ್ಯಾಥರೀನ್ ಘೋಷಿಸಿದ್ದಾರೆ. ಸರ್ಕಾರ ಮತ್ತು ಜನರ ನಡುವಿನ ಸಂಪರ್ಕ ಸುಲಭವಾಗಿಸಲು ಪಕ್ಷವು ಮಧುರೈನಲ್ಲಿ ರಾಜ್ಯ ಸೆಕ್ರೆಟ್ರೀಯೇಟ್ ಶಾಖೆಯನ್ನು ಸ್ಥಾಪಿಸಲಿದೆ ಎಂದು ಹೇಳಿದ್ದಾರೆ.

ಸಮಾವೇಶದಲ್ಲಿ ವಿಜಯ್ ಅವರು ಟಿವಿಕೆ 2026ರ ವಿಧಾನಸಭಾ ಚುನಾವಣೆಯಲ್ಲಿ ಏಕೈಕ ಬಹುಮತದ ಪಕ್ಷವಾಗಿ ಹೊರಹೊಮ್ಮುವ ವಿಶ್ವಾಸವನ್ನು ವ್ಯಕ್ತಪಡಿಸಿದ್ದು, ಪಕ್ಷವು ಇತರ ಪಕ್ಷಗಳೊಂದಿಗೆ ಮೈತ್ರಿಗೂ ಮುಕ್ತವಾಗಿದೆ ಎಂದಿದ್ದಾರೆ.

ಇದನ್ನೂ ಓದಿ : ಸಮಾನತೆ-ಸಾಮಾಜಿಕ ನ್ಯಾಯದ ಪೆರಿಯಾರ್ ತತ್ವಗಳನ್ನು ಅಳವಡಿಸಿಕೊಳ್ಳುತ್ತೇವೆ: ನಟ ವಿಜಯ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...

ಆಕಸ್ಮಿಕವಾಗಿ ಗಡಿ ದಾಟಿದ್ದ 7 ಭಾರತೀಯರನ್ನು ಹಸ್ತಾಂತರಿಸಿದ ಪಾಕಿಸ್ತಾನ

2023 ರ ಪ್ರವಾಹದ ಸಮಯದಲ್ಲಿ ಅಜಾಗರೂಕತೆಯಿಂದ ಗಡಿ ದಾಟಿದ ನಂತರ ಬಂಧಿಸಲ್ಪಟ್ಟ ಏಳು ಭಾರತೀಯ ನಾಗರಿಕರನ್ನು ಪಾಕಿಸ್ತಾನ ಶನಿವಾರ ಸ್ವದೇಶಕ್ಕೆ ವಾಪಸ್ ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನ ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ನಲ್ಲಿ...

ಮೀರತ್| ಅಪಹರಣ ಪ್ರಕರಣ ಹಿಂಪಡೆಯುವಂತೆ ಪೊಲೀಸರ ಒತ್ತಡ; ‘ಗೃಹಬಂಧನ’ದಲ್ಲಿ ದಲಿತ ಕುಟುಂಬ

ಜನವರಿ ತಿಂಗಳ ಆರಂಭದಲ್ಲಿ ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಕಪ್ಸಾದ್ ಗ್ರಾಮದಲ್ಲಿ ತಾಯಿಯ ಕೊಲೆಯ ನಂತರ ಅಪಹರಿಸಲ್ಪಟ್ಟ ದಲಿತ ಹುಡುಗಿಯ ಕುಟುಂಬ ಸದಸ್ಯರು ತಾವು ಗೃಹಬಂಧನದಲ್ಲಿದ್ದು, ಆರೋಪಿಗಳ ವಿರುದ್ಧ ಪ್ರಕರಣವನ್ನು ಮುಂದುವರಿಸದಂತೆ ಪೊಲೀಸರು...

ಉದ್ಯಮಿ ಸಿಜೆ ರಾಯ್ ಮರಣೋತ್ತರ ಪರೀಕ್ಷೆ; ಹೃದಯ-ಶ್ವಾಸಕೋಶದಲ್ಲಿ 6.35 ಎಂಎಂ ಗುಂಡಿನ ಗಾಯ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಅವರ ಆತ್ಮಹತ್ಯೆಯ ಮರಣೋತ್ತರ ಪರೀಕ್ಷೆಯ ವರದಿಗಯನ್ನು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅರವಿಂದ್ ಎಂಎನ್ ವಿವರಿಸಿದ್ದಾರೆ. 6.35 ಎಂಎಂ ಗುಂಡಿನ ದಾಳಿಯು ತಕ್ಷಣದ...

ಮುಂಬೈ| ನಿರ್ದೇಶಕ ರೋಹಿತ್ ಶೆಟ್ಟಿ ಮನೆಯ ಹೊರಗೆ 4 ಸುತ್ತು ಗುಂಡು ಹಾರಿಸಿದ ಅಪರಿಚಿತರು

ಶನಿವಾರ ತಡರಾತ್ರಿ, ಬಾಲಿವುಡ್ ನಿರ್ದೇಶಕ ರೋಹಿತ್ ಶೆಟ್ಟಿ ಅವರ ಮುಂಬೈನ ಜುಹು ನಿವಾಸದ ಹೊರಗೆ ನಾಲ್ಕು ಸುತ್ತು ಗುಂಡು ಹಾರಿಸಲಾಗಿದ್ದು, ಘಟನೆಯಲ್ಲಿ ಯಾವುದೇ ಗಾಯಗಳಾಗಿಲ್ಲ ಎಂದು ವರದಿಯಾಗಿದೆ. ಚಿತ್ರ ನಿರ್ಮಾಪಕ-ನಿರ್ದೇಶಕರ ಕಟ್ಟಡದ ಬಳಿ ಅಪರಿಚಿತ...

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...