Homeಮುಖಪುಟನಾಸಿರ್ ಮದನಿ ಕುರಿತು ಟೀಕೆ : ಸಿಪಿಐ(ಎಂ) ನಾಯಕ ಜಯರಾಜನ್ ಪುಸ್ತಕದ ವಿರುದ್ದ ಸಿಡಿದೆದ್ದ ಪಿಡಿಪಿ...

ನಾಸಿರ್ ಮದನಿ ಕುರಿತು ಟೀಕೆ : ಸಿಪಿಐ(ಎಂ) ನಾಯಕ ಜಯರಾಜನ್ ಪುಸ್ತಕದ ವಿರುದ್ದ ಸಿಡಿದೆದ್ದ ಪಿಡಿಪಿ ಕಾರ್ಯಕರ್ತರು

- Advertisement -
- Advertisement -

ಅಕ್ಟೋಬರ್ 26,2024ರಂದು ಕೋಝೀಕ್ಕೋಡ್‌ನಲ್ಲಿ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಬಿಡುಗಡೆ ಮಾಡಿರುವ ಸಿಪಿಐ(ಎಂ) ನಾಯಕ ಪಿ ಜಯರಾಜನ್ ಅವರ ಪುಸ್ತಕ, ‘ಕೇರಳಂ: ಮುಸ್ಲಿಂ ರಾಷ್ಟ್ರಿಯಂ, ರಾಷ್ಟ್ರೀಯ ಇಸ್ಲಾಂ’ ಎಂಬ ಪುಸ್ತಕ ವಿವಾದದ ಕಿಡಿ ಹೊತ್ತಿಸಿದೆ.

ವಿಶೇಷವಾಗಿ ಪುಸ್ತಕದ ವಿರುದ್ದ ನಾಸಿರ್ ಮದನಿ ಅವರ ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ (ಪಿಡಿಪಿ) ಸಿಡಿದೆದ್ದಿದೆ. ವರದಿಗಳ ಪ್ರಕಾರ, ಪುಸ್ತಕವು ಅಬ್ದುಲ್ ನಾಸಿರ್ ಮದನಿ ಅವರನ್ನು ವಿಮರ್ಶೆ ಮಾಡಿದ್ದು, ಮದನಿ ಕೇರಳದ ಮುಸ್ಲಿಂ ಯುವಕರನ್ನು ಮೂಲಭೂತವಾದದ ಕಡೆಗೆ ಪ್ರಭಾವಿಸಿದ ವ್ಯಕ್ತಿ ಎಂದು ವಿವರಿಸಿದೆ.

ಮದನಿಯ ಭಾಷಣಗಳು ಉಗ್ರವಾದಿ ಚಿಂತನೆಗಳನ್ನು ಬೆಳೆಸುವಲ್ಲಿ ಪ್ರಮುಖವಾಗಿದೆ ಎಂದು ಪುಸ್ತಕವು ಆರೋಪಿಸಿದೆ. ಆದರೂ, ಅವರು ಕೊಯಮತ್ತೂರು ಸ್ಫೋಟ ಪ್ರಕರಣದಲ್ಲಿ ಬಂಧನ ಮತ್ತು ನಂತರದ ಜೈಲುವಾಸದ ಬಳಿಕ ವಿಭಿನ್ನ ವಿಧಾನವನ್ನು ಅಳವಡಿಸಿಕೊಂಡರು ಎಂದಿದೆ.

ಜಯರಾಜನ್ ವಿರುದ್ದ ಪಿಡಿಪಿ ಕಾರ್ಯಕರ್ತರು ಕೋಝಿಕ್ಕೋಡ್‌ನಲ್ಲಿ ಪ್ರತಿಭಟನೆ ನಡೆಸಿದ್ದು, ಪುಸ್ತಕದ ಪ್ರತಿಗಳನ್ನು ಸುಟ್ಟು ಹಾಕಿದ್ದಾರೆ. ಪಿಡಿಪಿ ನಾಯಕರು ಪುಸ್ತಕದಲ್ಲಿನ ಆರೋಪಗಳನ್ನು ತಳ್ಳಿ ಹಾಕಿದ್ದು, “ಮದನಿ ಯಾರನ್ನೂ ಮೂಲಭೂತವಾದಿಗಳನ್ನಾಗಿಸಿಲ್ಲ ಎಂದು ಸ್ವತಃ ಸಿಪಿಐ(ಎಂ) ಈ ಹಿಂದೆ ಸಮರ್ಥಿಸಿಕೊಂಡಿದೆ. ಪಿಣರಾಯಿ ವಿಜಯನ್ ಸೇರಿದಂತೆ ಸಿಪಿಐ(ಎಂ) ನಾಯಕರು ಅವರೊಂದಿಗೆ ವೇದಿಕೆ ಹಂಚಿಕೊಂಡಿದ್ದಾರೆ. 2021ರ ವಿಧಾನಸಭಾ ಚುನಾವಣೆಯಲ್ಲಿ ಮತ್ತು 2024 ರ ಸಾರ್ವತ್ರಿಕ ಚುನಾವಣೆಗಳಲ್ಲಿ ಪಿಡಿಪಿ ಎಡ ಪ್ರಜಾಸತ್ತಾತ್ಮಕ ರಂಗವನ್ನು (ಎಲ್‌ಡಿಎಫ್) ಬೆಂಬಲಿಸಿದೆ” ಎಂದಿದ್ದಾರೆ.

ಜಯರಾಜನ್ ಅವರನ್ನು ಸಮರ್ಥಿಸಿಕೊಂಡಿರುವ ಸಿಎಂ ಪಿಣರಾಯಿ ವಿಜಯನ್, ಲೇಖಕರ ಅಭಿಪ್ರಾಯಗಳನ್ನು ಪಕ್ಷದ ನಿಲುವಿನಿಂದ ಸ್ವತಂತ್ರವಾಗಿ ನೋಡಬೇಕು ಎಂದು ಒತ್ತಿ ಹೇಳಿದ್ದಾರೆ. “ಲೇಖಕನಿಗೆ ತನ್ನದೇ ಆದ ದೃಷ್ಟಿಕೋನವಿದೆ, ಅದು ಚಳವಳಿಯ ರಾಜಕೀಯ ಸಿದ್ಧಾಂತದಿಂದ ಭಿನ್ನವಾಗಿರಬಹುದು. ಪುಸ್ತಕ ಬಿಡುಗಡೆ ಮಾಡಲು ವೈಯಕ್ತಿಕ ಅಭಿಪ್ರಾಯಗಳನ್ನು ಒಪ್ಪಿಕೊಳ್ಳುವ ಅಗತ್ಯವಿಲ್ಲ. ಅಭಿಪ್ರಾಯವು ವ್ಯಕ್ತಿಯ ದೃಷ್ಟಿಕೋನವಾಗಿದೆ ಮತ್ತು ಅದನ್ನು ಹಾಗೆ ನೋಡಬೇಕು” ಎಂದಿದ್ದಾರೆ.

ಇದೇ ವೇಳೆ ಮುಸ್ಲಿಂ ಲೀಗ್ (ಐಯುಎಂಎಲ್‌) ಮತ್ತು ಜಮಾಅತೇ ಇಸ್ಲಾಮಿ ಬಗ್ಗೆ ಮಾತನಾಡಿದ ಪಿಣರಾಯಿ ವಿಜಯನ್, “ಲೀಗ್ ಮತ್ತು ಜಮಾಅತೇ ಇಸ್ಲಾಮಿಯನ್ನು ಒಂದೇ ಲೆನ್ಸ್ ಮೂಲಕ ನೋಡಲು ಸಾಧ್ಯವಿಲ್ಲ. ಜಮಾತ್‌ನ ಗುರಿ ಇಸ್ಲಾಮಿಕ್ ರಾಜ್ಯವಾಗಿದೆ, ಆದರೆ ಲೀಗ್ ಭಾರತದ ಹೊರಗೆ ಮೈತ್ರಿಗಳಿಲ್ಲದ ಸುಧಾರಣಾವಾದಿ ಚಳುವಳಿಯಾಗಿದೆ. ಜಮಾತ್ ವಿದೇಶದಲ್ಲಿ ಉಗ್ರಗಾಮಿ ಗುಂಪುಗಳೊಂದಿಗೆ ಸಂಪರ್ಕವನ್ನು ಹೊಂದಿದೆ ಮತ್ತು ಲೀಗ್‌ಗಿಂತ ಭಿನ್ನವಾಗಿ ಇಸ್ಲಾಮಿಕ್ ಸಾರ್ವತ್ರಿಕತೆಯ ಗುರಿಯನ್ನು ಹೊಂದಿದೆ. ಆರ್‌ಎಸ್‌ಎಸ್ ಮತ್ತು ಜಮಾತ್ ಒಂದೇ ಗರಿಗಳ ಪಕ್ಷಿಗಳು. ಲೀಗ್ ತನ್ನ ಕಮ್ಯುನಿಸ್ಟ್ ವಿರೋಧಿ ಕಾರ್ಯಸೂಚಿಯಲ್ಲಿ ಮಾತ್ರ ಈ ಕೋಮು ಗುಂಪುಗಳೊಂದಿಗೆ ಸಹಕರಿಸುತ್ತದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ : ಸಮಾನತೆ-ಸಾಮಾಜಿಕ ನ್ಯಾಯಕ್ಕೆ ಒತ್ತು, ಜಾತಿಗಣತಿ ಭರವಸೆ : ಸಂಚಲನ ಸೃಷ್ಟಿಸಿದ ಹೊಸ ಪಕ್ಷ ಟಿವಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...