ಸರ್ಕಾರಿ ಗೋಮಾಳ ಜಾಗಕ್ಕಾಗಿ ದಲಿತ ಹಾಗೂ ಸವರ್ಣಿಯ ಕುಟುಂಬಗಳ ಮಧ್ಯೆ ನಡೆದ ಗಲಾಟೆ ಬಳಿಕ, ನಿನ್ನೆ ತಡರಾತ್ರಿ ದಲಿತ ಕುಟುಂಬದ ಗುಡಿಸಲುಗಳಿಗೆ ಬೆಂಕಿ ಇಟ್ಟಿರುವ ಘಟನೆ ಬೆಳಗಾವಿ ಜಿಲ್ಲೆಯ ರಾಯಭಾಗ ತಾಲೂಕಿನ ಮುಗಳಖೋಡ ಗ್ರಾಮದಲ್ಲಿ ನಡೆದಿದೆ ಎಂದು ‘ಕನ್ನಡ ಪ್ಲಾನೆಟ್’ ವರದಿ ಮಾಡಿದೆ.
ಗ್ರಾಮದ ಪ್ರಬಲ ಜಾತಿಯ ಜನರು ದಲಿತ ಕುಟುಂಬದ ಗುಡಿಸಲುಗಳಿಗೆ ಬೆಂಕಿ ಇಟ್ಟಿದ್ದಾರೆ ಎಂದು ಆರೋಪಿಸಲಾಗಿದೆ. ಬೆಂಕಿಯ ಕೆನ್ನಾಲಗೆಗೆ ಗುಡಿಸಲುಗಳು ಸುಟ್ಟು ಕರಕಲಾಗಿವೆ.
ವೈಷಮ್ಯಕ್ಕೆ ಕಾರಣವೇನು?
ಗ್ರಾಮದಲ್ಲಿನ ಗೋಮಾಳ ಜಾಗಕ್ಕಾಗಿ ಎರಡು ಕುಟುಂಬಗಳ ಮಧ್ಯೆ ಹಿಂದಿನಿಂದ ಇದ್ದ ವೈಶಮ್ಯವೆ ಜಗಳಕ್ಕೆ ಕಾರಣ ಎಂದು ತಿಳಿದುಂದಿದೆ. ಗೋಮಾಳ ಜಾಗದಲ್ಲಿ ಶೆಡ್ ಹಾಕಿಕೊಂಡಿದ್ದ ಮಹಾದೇವ ಮಾದರ್ ಕುಟುಂಬ ಸುಮಾರು 12 ಗುಂಟೆ ಗೋಮಾಳ ಜಾಗದಲ್ಲಿ ಗುಡಿಸಲುಗಳನ್ನು ನಿರ್ಮಾಣ ಮಾಡಿದ್ದರು.
ಈ ಗುಡಿಸಲುಗಳಿಗೆ ಊರಿನ ಮಹಾವೀರ ಕುರಾಡೆ ಕುಟುಂಬದವರು ಬೆಂಕಿ ಇಟ್ಟಿದ್ದಾರೆ ಎಂದು ಆರೋಪಿಸಲಾಗಿದೆ. ಬಹಳ ದಿನಗಳಿಂದಲೂ ಎರಡೂ ಕುಟುಂಬಗಳ ಮಧ್ಯೆ ಗಲಾಟೆ ನಡೆಯುತ್ತಿತ್ತು. ತಡರಾತ್ರಿ ಬೆಂಕಿ ಇಟ್ಟಿರುವ ವಿಡಿಯೋ ವೈರಲ್ ಆಗಿದೆ. ಸ್ಥಳಕ್ಕೆ ಭೇಟಿ ನೀಡಿ ಪರಿಸ್ಥಿತಿಯನ್ನ ಪೊಲೀಸರು ತಿಳಿಗೊಳಿಸಿದ್ದಾರೆ. ಹಾರೂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ .
ಇದನ್ನೂ ಓದಿ; ಮುಡಾ ಪ್ರಕರಣ: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶೋಧ ಆರಂಭಿಸಿದ ಇಡಿ


