HomeಮುಖಪುಟExplained : ಏನಿದು 'ಡಿಜಿಟಲ್ ಅರೆಸ್ಟ್' ವಂಚನೆ?

Explained : ಏನಿದು ‘ಡಿಜಿಟಲ್ ಅರೆಸ್ಟ್’ ವಂಚನೆ?

ಕಳೆದ ಜನವರಿಯಿಂದ ಏಪ್ರಿಲ್ ನಡುವೆ ಡಿಜಿಟಲ್ ಅರೆಸ್ಟ್‌ ವಂಚನೆಯ ಮೂಲಕ ₹120 ಕೋಟಿ ಕಳೆದುಕೊಂಡಿರುವ ಭಾರತೀಯರು

- Advertisement -
- Advertisement -

‘ಡಿಜಿಟಲ್ ಬಂಧನ ಅಥವಾ ಡಿಜಿಟಲ್ ಅರೆಸ್ಟ್‌’ ಕೆಲ ದಿನಗಳಿಂದ ಭಾರೀ ಚರ್ಚೆಯಲ್ಲಿರುವ ವಿಷಯ. ಕಳೆದ ಭಾನುವಾರ (ಅ.27) 115ನೇ ಸಂಚಿಕೆಯ ‘ಮನ್‌ ಕಿ ಬಾತ್’ (ಮನದ ಮಾತು) ಕಾರ್ಯಕ್ರಮದಲ್ಲಿ ಮಾತನಾಡುವಾಗ ಈ ವಿಚಾರವನ್ನು ಉಲ್ಲೇಖಿಸಿದ್ದ ಪ್ರಧಾನಿ ನರೇಂದ್ರ ಮೋದಿ, ಡಿಜಿಟಲ್ ಅರೆಸ್ಟ್ ಬಗ್ಗೆ ಎಚ್ಚರವಾಗಿರುವಂತೆ ದೇಶದ ಜನರಿಗೆ ಸಲಹೆ ನೀಡಿದ್ದರು.

ಬರೋಬ್ಬರಿ 140 ಕೋಟಿಗೂ ಅಧಿಕ ಜನಸಂಖ್ಯೆಯೊಂದಿಗೆ ಮೊದಲ ಸ್ಥಾನದಲ್ಲಿರುವ ಭಾರತದಲ್ಲಿ, ಡಿಜಿಟಲ್ ಸಾಧನಗಳ ಬಳಕೆ ದುಪ್ಪಟ್ಟಿದೆ. ಡಿಜಿಟಲ್ ಸಾಧನಗಳ ಬಳಕೆ ಹೆಚ್ಚಾದಂತೆ ಡಿಜಿಟಲ್ ಅಪರಾಧಗಳ ಅಥವಾ ಸೈಬರ್ ಅಪರಾಧಗಳ ಸಂಖ್ಯೆಯೂ ಹೆಚ್ಚಾಗುತ್ತಿದೆ. ಹೊಸ ಹೊಸ ಸೈಬರ್ ಅಪರಾಧಗಳು ನಡೆಯುತ್ತಿವೆ. ಅವುಗಳನ್ನು ಪತ್ತೆಹಚ್ಚಿ ಜನರಿಗೆ ಪರಿಹಾರ ಕೊಡುವುದು ಕಾನೂನು ಪಾಲಕರಿಗೂ ಸವಾಲಾಗಿದೆ.

ಇತ್ತೀಚಿನ ದಿನಗಳಲ್ಲಿ ಸರ್ಕಾರದ ವಿವಿಧ ಸಂಸ್ಥೆಗಳ ಅಧಿಕಾರಿಗಳಂತೆ ಸೋಗು ಹಾಕಿ ಆಡಿಯೋ, ವಿಡಿಯೋ ಮೂಲಕ ಭಯ ಹುಟ್ಟಿಸಿ ಹಣ ಕಸಿಯುವ ಹೊಸ ಡಿಜಿಟಲ್ ವಂಚನೆ ಹೆಚ್ಚಾಗುತ್ತಿದೆ. ಈ ಬಗ್ಗೆ ಮನ್‌ ಕಿ ಬಾತ್‌ನಲ್ಲಿ ಪ್ರಸ್ತಾಪಿಸಿದ್ದ ಪ್ರಧಾನಿ, ಕಾನೂನಿನಲ್ಲಿ ಡಿಜಿಟಲ್ ಬಂಧನದಂತಹ ವ್ಯವಸ್ಥೆ ಇಲ್ಲ. ಆ ಹೆಸರಿನಲ್ಲಿ ಯಾರಾದರು ನಿಮ್ಮನ್ನು ಸಂಪರ್ಕಿಸಿದರೆ, ಅದು ಖಂಡಿತವಾಗಿಯೂ ವಂಚನೆಯಾಗಿರುತ್ತದೆ ಎಂದಿದ್ದಾರೆ.

ಏನಿದು ಡಿಜಿಟಲ್ ಅರೆಸ್ಟ್‌?

ಸೈಬರ್ ವಂಚಕರು ಸಿಬಿಐ,ಇಡಿ, ನಾರ್ಕೋಟಿಕ್ಸ್ ಬ್ಯೂರೋ ಅಥವಾ ಕಸ್ಟಮ್ಸ್‌ ಅಧಿಕಾರಿಗಳಂತಹ ಕಾನೂನು ಜಾರಿ ಸಂಸ್ಥೆಗಳ ಅಧಿಕಾರಿಗಳಂತೆ ನಟಿಸಿ ವಾಟ್ಸಾಪ್, ಸ್ಕೈಪ್‌ನಂತಹ ಪ್ಲಾಟ್‌ಫಾರ್ಮ್‌ಗಳ ಮೂಲಕ ಆಡಿಯೋ-ವಿಡಿಯೋ ಬಳಸಿಕೊಂಡು ಜನರನ್ನು ಸಂಪರ್ಕಿಸಿ ಅವರಿಂದ ಹಣ ಸುಲಿಗೆ ಮಾಡುವ ಪ್ರಕ್ರಿಯೇ ಡಿಜಿಟಲ್ ಅರೆಸ್ಟ್‌. ಇಲ್ಲಿ ವಂಚಕರು ನಿಷೇಧಿಗಳ ವಸ್ತುಗಳ ಸಾಗಾಟ, ಮಾದಕ ವಸ್ತುಗಳ ವ್ಯವಹಾರ, ಹಣ ಅಕ್ರಮ ವರ್ಗಾವಣೆಯಂತಹ ಸುಳ್ಳು ಆರೋಪಗಳನ್ನು ಜನರ ಮೇಲೆ ಹೊರಿಸಿ, ಅವರನ್ನು ಬೆದರಿಸಿ ಹಣ ಪಡೆಯುತ್ತಾರೆ. ಇದಕ್ಕಾಗಿ ಮುಖ್ಯವಾಗಿ ಆಧಾರ್ ಕಾರ್ಡ್‌ನಲ್ಲಿರುವ ವೈಯಕ್ತಿಕ ಮಾಹಿತಿಗಳನ್ನು ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ.

ಡಿಜಿಟಲ್ ಅರೆಸ್ಟ್‌ ಮೂಲಕ ಹಣ ಸುಲಿಗೆ ಮಾಡುವ ವಂಚಕರು, ಸರ್ಕಾರಿ ಅಧಿಕಾರಿಗಳಂತೆ ಜನರನ್ನು ನಂಬಿಸಲು ಸಮವಸ್ತ್ರ, ಕಚೇರಿ ವ್ಯವಸ್ಥೆಗಳನ್ನು ಮಾಡಿಕೊಂಡಿರುತ್ತಾರೆ. ಇಲ್ಲದಿದ್ದರೆ ಡೀಪ್‌ಫೇಕ್‌ನಂತಹ ಪರಿಕರಗಳನ್ನು ಬಳಸಿಕೊಂಡು ವಿಡಿಯೋ ಕರೆಗಳನ್ನು ಮಾಡುತ್ತಾರೆ. ಒಂದು ಸಲ ಬಲಿಪಶು ವಂಚಕರ ಜೊತೆ ಮಾತನಾಡಿದರೆ, ಅವರು ಮನೆ ಬಿಟ್ಟು ಹೋಗದಂತೆ, ಸ್ನೇಹಿತರು ಮತ್ತು ಕುಟುಂಬಸ್ಥರಿಂದ ಪ್ರತ್ಯೇಕವಾಗಿರುವಂತೆ ವಂಚಕರು ನೋಡಿಕೊಂಡಿರುತ್ತಾರೆ. ಒಂದು ರೀತಿಯಲ್ಲಿ “ನಾನು ಏನೋ ತಪ್ಪು ಮಾಡಿದ್ದೇನೆ, ಬಂಧನದಲ್ಲಿದ್ದೇನೆ” ಎಂಬ ಭಾವನೆಯನ್ನು ಬಲಿಪಶುಗಳ ಮನಸ್ಸಿನಲ್ಲಿ ಮೂಡಿಸುತ್ತಾರೆ.

ಸುಳ್ಳು ತನಿಖೆ, ಜೈಲು ಇತ್ಯಾದಿ ವಿಚಾರಗಳನ್ನು ವಿಡಿಯೋ, ಆಡಿಯೋ ಕರೆಗಳ ಮೂಲಕವೇ ಮಾಡುವ ವಂಚಕರು, ಬಲಿಪಶು ಇರುವ ಜಾಗದ ಮೇಲೆ ನಿಗಾ ಇಟ್ಟು ಅವರಲ್ಲಿ ಭಯ ಮೂಡಿಸುತ್ತಾರೆ. ನಾನು ವಂಚನೆಗೆ ಒಳಗಾಗಿದ್ದೇನೆ ಎಂದು ತಿಳಿಯದ ಅಮಾಯಕ ಜನರು ವಂಚಕರು ಹೇಳಿದಂತೆ ಕೇಳಲು ಶುರು ಮಾಡುತ್ತಾರೆ. ತಾನು ಅನುಭವಿಸುತ್ತಿರುವ ಸಮಸ್ಯೆಯನ್ನು ಯಾರೊಂದಿಗೂ ಹಂಚಿಕೊಳ್ಳುವುದಿಲ್ಲ. ಇದರ ಲಾಭ ಪಡೆಯುವ ವಂಚಕರು ಹಣ ಸುಲಿಗೆ ಮಾಡುತ್ತಾರೆ.

ವಂಚಕರು ತಮ್ಮನ್ನು ನಂಬುವಂತೆ ಮಾಡಲು ನಕಲಿ ಬಂಧನ ವಾರೆಂಟ್, ನ್ಯಾಯಾಲಯದ ಆದೇಶ ಪ್ರತಿಗಳನ್ನು ತೋರಿಸುತ್ತಾರೆ. ಅದನ್ನು ಬಲಿಪಶುವಿನ ಮೊಬೈಲ್‌ಗೆ ಕಳುಹಿಸಿಕೊಡುತ್ತಾರೆ. ಕೆಲವೊಮ್ಮೆ ವಿಡಿಯೋ ಕಾನ್ಫರೆನ್ಸ್ ಮೂಲಕ ನಕಲಿ ನ್ಯಾಯಾಲಯದ ಕಲಾಪಗಳನ್ನು ನಡೆಸುತ್ತಾರೆ.

ನ್ಯಾಷನಲ್ ಸೈಬರ್ ಕ್ರೈಮ್ ರಿಪೋರ್ಟಿಂಗ್ ಪೋರ್ಟಲ್ ಪ್ರಕಾರ, ಭಾರತದಲ್ಲಿ 2024ರಲ್ಲಿ ಡಿಜಿಟಲ್ ಬಂಧನ ಪ್ರಕರಣಗಳಲ್ಲಿ ಭಾರೀ ಏರಿಕೆ ಕಂಡಿದೆ. ಮೊದಲ ತ್ರೈಮಾಸಿಕವೊಂದರಲ್ಲೇ ಭಾರತೀಯರು ಡಿಜಿಟಲ್ ವಂಚನೆಗಳಿಂದ 120.3 ಕೋಟಿ ರೂಪಾಯಿಗಳನ್ನು ಕಳೆದುಕೊಂಡಿದ್ದಾರೆ. ಈ ಪೈಕಿ ಹೆಚ್ಚಿನವು ಡಿಜಿಟಲ್ ಬಂಧನ ಪ್ರಕರಣಗಳಾಗಿವೆ.

ಇತ್ತೀಚಿನ ಒಂದು ಘಟನೆಯಲ್ಲಿ, ವರ್ಧಮಾನ್ ಗ್ರೂಪ್ ಅಧ್ಯಕ್ಷ ಎಸ್‌ಪಿ ಓಸ್ವಾಲ್ ಅವರನ್ನು ಎರಡು ದಿನಗಳ ಕಾಲ ಸ್ಕೈಪ್ ಕಣ್ಗಾವಲಿನಲ್ಲಿ ಇರಿಸಿದ್ದ ವಂಚಕರು “ಡಿಜಿಟಲ್‌ನಲ್ಲಿ ಅರೆಸ್ಟ್‌” ಎಂದು ಹೆದರಿಸಿ ಅವರಿಂದ ಬರೋಬ್ಬರಿ 7 ಕೋಟಿ ರೂಪಾಯಿಗಳನ್ನು ಸುಲಿಗೆ ಮಾಡಿದ್ದರು. ಈ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್‌ನ ನಕಲಿ ಕಲಾಪ ಸೃಷ್ಟಿಸಿದ್ದ ವಂಚಕರು, ಮುಖ್ಯನ್ಯಾಮೂರ್ತಿ ಡಿವೈ ಚಂದ್ರಚೂಡ್ ಅವರ ಹೆಸರಿನಲ್ಲಿ ಆದೇಶಗಳನ್ನೂ ನೀಡಿದ್ದರು.

ಅದೇ ರೀತಿ, ಹೈದರಾಬಾದ್‌ನ ಟೆಕ್ಕಿಯೊಬ್ಬರು ಅಕ್ಟೋಬರ್ 27ರಂದು 30 ಗಂಟೆಗಳ ಕಾಲ ಅಗ್ನಿಪರೀಕ್ಷೆಯನ್ನು ಎದರಿಸಿದ್ದರು. ಈ ಸಮಯದಲ್ಲಿ ಸೈಬರ್ ಅಪರಾಧಿಗಳು ಅವರ ಆಧಾರ್‌ ಕಾರ್ಡ್‌ಗೆ ಹಣ ಅಕ್ರಮ ವರ್ಗಾವಣೆಯ ಸುಳ್ಳು ಆರೋಪದ ಸಂಬಂಧ ಕಲ್ಪಿಸಿ ಲಾಡ್ಜ್‌ನಲ್ಲಿ ಉಳಿಯುವಂತೆ ಒತ್ತಾಯಿಸಿದ್ದರು. ಕೊನೆಗೂ ವಂಚಕರ ಕೈಯಿಂದ ತಪ್ಪಿಸಿಕೊಂಡಿದ್ದ ಟೆಕ್ಕಿ ಸೈಬರ್ ಕ್ರೈಮ್ ಅಧಿಕಾರಿಗಳ ಸಹಾಯ ಕೋರಿದ್ದರು.

ಡಿಜಿಟಲ್ ಬಂಧನ ಪ್ರಕರಣಗಳಲ್ಲಿ ವಂಚಕರು ಜನರನ್ನು ಮಾನಸಿಕವಾಗಿ ಭಯಪಡಿಸುವ ಮತ್ತು ತುರ್ತು, ಗಂಭೀರ ಪರಿಸ್ಥಿಗಳನ್ನು ಸೃಷ್ಟಿಸುತ್ತಾರೆ. ಬಲಿಪಶುಗಳಿಗೆ ಅನುಸರಿಸುವುದು ಬಿಟ್ಟರೆ ಬೇರೆ ದಾರಿಯಿಲ್ಲ ಎಂಬಂತೆ ಅನಿಸಬೇಕು ಆ ರೀತಿ ಮಾಡುತ್ತಾರೆ. ಹಾಗಾಗಿ, ಜನರು ಒಂದು ಕ್ಷಣ ನಿಂತು, ಯೋಚಿಸಿ ನಂತರ ಮುಂದಿನ ಹೆಜ್ಜೆಯಿಡಬೇಕು. ಆಗ ಮಾತ್ರ ಡಿಜಿಟಲ್ ಭದ್ರತೆ ಸಾಧ್ಯ ಎಂದು ಪ್ರಧಾನಿ ಮೋದಿ ಮನ್‌ ಕಿ ಬಾತ್‌ನಲ್ಲಿ ಹೇಳಿದ್ದಾರೆ.

“ನಿಮಗೆ ಅಪರಿಚಿತ ಕರೆ ಬಂದ ತಕ್ಷಣ ನಿಂತು ಯೋಚಿಸಿ, ಗಾಬರಿಯಾಗಬೇಡಿ, ಶಾಂತವಾಗಿರಿ, ಯಾವುದೇ ಆತುರದ ಕ್ರಮಗಳನ್ನು ತೆಗೆದುಕೊಳ್ಳಬೇಡಿ. ನಿಮ್ಮ ವೈಯಕ್ತಿಕ ಮಾಹಿತಿಯನ್ನು ಯಾರೊಂದಿಗೂ ಹಂಚಿಕೊಳ್ಳಬೇಡಿ. ಸಾಧ್ಯವಾದರೆ ಬಂದಿರುವ ಕರೆಯ ಸ್ಕ್ರೀನ್‌ಶಾಟ್ ತೆಗೆದುಕೊಳ್ಳಿ. ಯಾವುದೇ ಸರ್ಕಾರಿ ಸಂಸ್ಥೆಯು ನಿಮಗೆ ಡಿಜಿಟಲ್ ಅರೆಸ್ಟ್‌ ಎಂದು ಬೆದರಿಕೆ ಹಾಕುವುದಿಲ್ಲ. ಏನಾದರು ಸರ್ಕಾರಿ ಅಧಿಕಾರಿಗಳ ಹೆಸರಿನಲ್ಲಿ ಕರೆ ಬಂದರೆ ಏನೋ ಮೋಸ ನಡೆಯುತ್ತಿದೆ ಎಂದು ತಿಳಿಯಿರಿ” ಎಂದು ಪ್ರಧಾನಿ ಸಲಹೆ ನೀಡಿದ್ದಾರೆ.

ನಿಮಗೆ ಏನಾದರು ಅನುಮಾನಾಸ್ಪದ ಕರೆಗಳು ಬಂದರೆ, ರಾಷ್ಟ್ರೀಯ ಸೈಬರ್ ಸಹಾಯವಾಣಿ 1930, ಅಥವಾ cybercrime.gov.in ಗೆ ಮಾಹಿತಿ ನೀಡಿ. ಆ ಬಗ್ಗೆ ನಿಮ್ಮ ಕುಟುಂಬ ಮತ್ತು ಪೊಲೀಸರ ಗಮನಕ್ಕೆ ತನ್ನಿ. ಸಾಕ್ಷ್ಯಗಳನ್ನು ಸಂಗ್ರಹಿಸಲು ಮರೆಯದಿರಿ ಎಂದಿದ್ದಾರೆ.

ಇದನ್ನೂ ಓದಿ : ಓಲಾ ಕಂಪನಿ ಸೇರುವಂತೆ ಭವಿಶ್ ಅಗರ್ವಾಲ್ ಕೊಟ್ಟ ಆಫರ್ ಒಪ್ಪಿಕೊಂಡ ಕುನಾಲ್ ಕಮ್ರಾ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಗಳ ವಿಚ್ಛೇದನ: ಸಿಹಿ ಹಂಚಿ, ಮೆರವಣಿಗೆಯಲ್ಲಿ ಆಕೆಯನ್ನು ಮನೆಗೆ ಕರೆತಂದ ನೀವೃತ್ತ ನ್ಯಾಯಾದೀಶ ಮತ್ತು ಕುಟುಂಬ

ಮೀರತ್: ಕೌಟುಂಬಿಕ ನ್ಯಾಯಾಲಯದಲ್ಲಿ ಮಗಳ ವಿಚ್ಛೇದನ ಅಂತಿಮವಾದ ನಂತರ ಆಕೆಯನ್ನು ಡೋಲು, ನೃತ್ಯಗಳ ಮೆರವಣಿಗೆಯಲ್ಲಿ ಸಂಭ್ರಮದಿಂದ ತಂದೆ ಮನೆಗೆ ಕರೆತಂದ ಘಟನೆ ಮೀರನ್ ನಲ್ಲಿ ನಡೆದಿದೆ.  ಪೋಷಕರ ಬೆಂಬಲದ ಅಪರೂಪದ ಮತ್ತು ಹೃದಯಸ್ಪರ್ಶಿ ಪ್ರದರ್ಶನದಲ್ಲಿ,...

“ನೀನು ನಿಜವಾಗಿಯೂ ಅಂಬೇಡ್ಕರ್ ಮಗಳಾ ಎಂದು ತಿಳಿಯಲು ನಾವು ನಿನ್ನ ಡಿಎನ್‌ಎ ಟೆಸ್ಟ್ ಮಾಡುತ್ತೇವೆ” ದೆಹಲಿ ಸಭೆಯಲ್ಲಿ ದಲಿತ ಟ್ರಾನ್ಸ್ ಹೋರಾಟಗಾರ್ತಿ ಗ್ರೇಸ್ ಬಾನುಗೆ ಜಾತಿ ನಿಂದನೆ ಆರೋಪ

ಕೇಂದ್ರ ಸರ್ಕಾರದ ವಿವಾದಾತ್ಮಕ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಕಾಯ್ದೆ, 2026ರ ವಿರುದ್ಧ ಕಳೆದ ಕೆಲ ವಾರಗಳಿಂದ ಇಡೀ ಟ್ರಾನ್ಸ್‌ಜೆಂಡರ್ ಮತ್ತು ಪ್ರಗತಿಪರ ಸಮುದಾಯ ಪ್ರತಿಭಟನೆ ನಡೆಸುತ್ತಿದೆ. ಈ ನಡುವೆ ಶುಕ್ರವಾರ...

‘ಮೋದಿ ಕ್ರಿಶ್ಚಿಯನ್ ಸಂಸ್ಥೆಗಳಲ್ಲಿ ಭಯ ಹುಟ್ಟಿಸಲು ಪ್ರಯತ್ನಿಸುತ್ತಿದ್ದಾರೆ’: ಎಫ್‌ಸಿಆರ್‌ಎ ತಿದ್ದುಪಡಿ ಕುರಿತು ಮಲ್ಲಿಕಾರ್ಜುನ ಖರ್ಗೆ

ಇಡುಕ್ಕಿ (ಕೇರಳ): ಸಾರ್ವಜನಿಕ ಮತ್ತು ಸಾಮಾಜಿಕ ಕಲ್ಯಾಣ ಕ್ಷೇತ್ರದಲ್ಲಿ ಕೆಲಸ ಮಾಡುವ ಕ್ರಿಶ್ಚಿಯನ್ ಸಂಸ್ಥೆಗಳು, ಎನ್‌ಜಿಒಗಳು ಮತ್ತು ನಾಗರಿಕ ಸಮಾಜದ ಮೇಲೆ ದಾಳಿ ಮಾಡಲು ಪ್ರಧಾನಿ ನರೇಂದ್ರ ಮೋದಿ ಎಫ್‌ಸಿಆರ್‌ಎ (ವಿದೇಶಿ ದೇಣಿಗೆ...

ವೈದ್ಯಕೀಯ, ತಾಂತ್ರಿಕ ಶಿಕ್ಷಣದಲ್ಲಿ ಎಸ್‌ಸಿ/ಎಸ್‌ಟಿ ಮೀಸಲಾತಿ ಹೆಚ್ಚಿಸಿದ ಒಡಿಶಾ ಸರ್ಕಾರ, ಒಬಿಸಿ ವಿದ್ಯಾರ್ಥಿಗಳಿಗೆ ಹೊಸ ಕೋಟಾ

ಮಹತ್ವದ ನಿರ್ಧಾರ ಕೈಗೊಂಡಿರುವ ಒಡಿಶಾ ಸರ್ಕಾರ, ವೈದ್ಯಕೀಯ, ಇಂಜಿನಿಯರಿಂಗ್ ಮತ್ತು ಇತರ ತಾಂತ್ರಿಕ ಹಾಗೂ ವೃತ್ತಿಪರ ಶಿಕ್ಷಣ ಕೋರ್ಸ್‌ಗಳಲ್ಲಿ ಪರಿಶಿಷ್ಟ ಪಂಗಡ (ಎಸ್‌ಟಿ), ಪರಿಶಿಷ್ಟ ಜಾತಿ (ಎಸ್‌ಸಿ) ಅಭ್ಯರ್ಥಿಗಳಿಗೆ ಮೀಸಲಾತಿಯನ್ನು ಗಣನೀಯವಾಗಿ ಹೆಚ್ಚಿಸಿದೆ....

ಶಾಲಾ ವಾರ್ಷಿಕೋತ್ಸವದಲ್ಲಿ ಲವಲವಿಕೆಯಿಂದ ಭಾಗವಹಿಸಿದ್ದ 6 ಮಕ್ಕಳು, ತಡರಾತ್ರಿ ಹೊತ್ತಿಗೆ ಶವವಾದರು : ಮಹಾರಾಷ್ಟ್ರದಲ್ಲೊಂದು ಹೃದಯ ವಿದ್ರಾವಕ ಘಟನೆ

ಶಾಲಾ ವಾರ್ಷಿಕೋತ್ಸವದಲ್ಲಿ ಬಹಳ ಉತ್ಸಾಹದಿಂದ ಭಾಗವಹಿಸಿದ್ದ ಆರು ಮಂದಿ ಮಕ್ಕಳು, ತಡ ರಾತ್ರಿ ಹೊತ್ತಿಗೆ ಶವವಾದ ಹೃದಯ ವಿದ್ರಾವಕ ಘಟನೆಯೊಂದು ಮಹಾರಾಷ್ಟ್ರದ ದಿಂಡೋರಿಯಲ್ಲಿ ಶುಕ್ರವಾರ (ಏ.3) ನಡೆದಿದೆ. ನಾಸಿಕ್‌ ನಗರದಿಂದ 20 ಕಿಲೋ...

ಕೇರಳ: ಕೊಲ್ಲಂನಲ್ಲಿ ಟಿವಿ ಚಾನೆಲ್ ಕಚೇರಿ ಮೇಲೆ ಸ್ಫೋಟಕ ವಸ್ತು ಎಸೆತ

ಕೊಲ್ಲಂ: ಇಲ್ಲಿನ ಟಿವಿ ಚಾನೆಲ್ ಒಂದರ ಕಚೇರಿಯ ಮೇಲೆ ಭಾನುವಾರ ಬೆಳಿಗ್ಗೆ ಸ್ಫೋಟಕ ವಸ್ತು ಎಸೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಆ ಪ್ರದೇಶ ಮತ್ತು ಚಾನೆಲ್ ಕಚೇರಿಯ ಸಿಸಿಟಿವಿ ದೃಶ್ಯಗಳಲ್ಲಿ ಇಬ್ಬರು...

ಹತ್ಯೆಯಾದ ಇರಾನ್ ಕಮಾಂಡರ್ ಖಾಸಿಮ್ ಸುಲೈಮಾನಿ ಅವರ ಸೊಸೆ, ಮೊಮ್ಮಗಳನ್ನು ಬಂಧಿಸಿದ ಅಮೆರಿಕ

ನವದೆಹಲಿ: ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಶುಕ್ರವಾರ ತಮ್ಮ ಶಾಶ್ವತ ನಿವಾಸಿ ಸ್ಥಾನಮಾನವನ್ನು ರದ್ದುಗೊಳಿಸಿದ ನಂತರ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ನ ದಿವಂಗತ ನಾಯಕ ಖಾಸಿಮ್ ಸೊಲೈಮಾನಿ ಅವರ...

ಇರಾನ್ ಮೇಲೆ ಬೃಹತ್ ದಾಳಿ: ಹಲವು ಉನ್ನತ ನಾಯಕರನ್ನು ಕೊಲ್ಲಲಾಗಿದೆ ಎಂದು ವಿಡಿಯೋ ಹಂಚಿಕೊಂಡ ಟ್ರಂಪ್

ಟೆಹ್ರಾನ್ ಮೇಲೆ ನಡೆದ ದಾಳಿಯ ವೀಡಿಯೊವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಂಚಿಕೊಂಡಿದ್ದು, ಹಲವಾರು ಇರಾನ್ ಮಿಲಿಟರಿ ನಾಯಕರ ಸಾವಿಗೆ ಅದು ಕಾರಣ ಎಂದು ಹೇಳಿಕೊಂಡಿದ್ದಾರೆ. "ಟೆಹ್ರಾನ್‌ನಲ್ಲಿ ನಡೆದ ಈ ಬೃಹತ್ ದಾಳಿಯೊಂದಿಗೆ, ಇರಾನ್‌ನ...

ಅಸ್ಸಾಂ ಚುನಾವಣೆ : ನುಸುಳುಕೋರರಿಂದ ಯುವ ಕಲ್ಯಾಣಕ್ಕೆ ವರಸೆ ಬದಲಿಸಿದ ಬಿಜೆಪಿ

ಅಸ್ಸಾಂ ವಿಧಾನಸಭಾ ಚುನಾವಣೆಗೆ ನಾಲ್ಕು ದಿನಗಳು ಬಾಕಿ ಇರುವಾಗ ಬಿಜೆಪಿ ತನ್ನ ಪ್ರಚಾರದ ವರಸೆಯನ್ನು ಬದಲಿಸಿಕೊಂಡಿದೆ. ನುಸುಳುಕೋರರನ್ನು ಹೊರಹಾಕುತ್ತೇವೆ, ಅಕ್ರಮ ವಲಸೆಗೆ ಕಡಿವಾಣ ಹಾಕುತ್ತೇವೆಂದು ಅಬ್ಬರಿಸುತ್ತಿದ್ದ ಬಿಜೆಪಿಗರು, ಈಗ ನುಸುಳಕೋರರ ವಿಷಯವನ್ನು ಬದಿಗೊತ್ತಿದ್ದಾರೆ....

ಕುಡಿದ ಮತ್ತಿನಲ್ಲಿ ಕಾರು ಚಾಲನೆ: ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ 19ವರ್ಷದ ಯುವಕ ಸಾವು 

ಬೆಂಗಳೂರು: ಕುಡಿದ ಮತ್ತಿನಲ್ಲಿ ಹದಿಹರೆಯದ ಯುವಕನೊಬ್ಬ ಚಲಾಯಿಸುತ್ತಿದ್ದ ಕಾರು, 19 ವರ್ಷದ ಯುವಕನ ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಆತ ಸಾವನ್ನಪ್ಪಿದ್ದಾನೆ. ಮಲ್ಲೇಶಪಾಳ್ಯದ ಮಾರುತಿನಗರದ 10 ನೇ ಮುಖ್ಯ ರಸ್ತೆಯಲ್ಲಿ ಶುಕ್ರವಾರ ತಡರಾತ್ರಿ...