Homeಮುಖಪುಟವಿಮಾನಗಳಿಗೆ ಹುಸಿ ಬಾಂಬ್ ಬೆದರಿಕೆ ಹಾಕುತ್ತಿದ್ದ ವ್ಯಕ್ತಿಯನ್ನು ಗುರುತಿಸಿದ ಪೊಲೀಸರು : ವರದಿ

ವಿಮಾನಗಳಿಗೆ ಹುಸಿ ಬಾಂಬ್ ಬೆದರಿಕೆ ಹಾಕುತ್ತಿದ್ದ ವ್ಯಕ್ತಿಯನ್ನು ಗುರುತಿಸಿದ ಪೊಲೀಸರು : ವರದಿ

ಕಳೆದ 15 ದಿನಗಳಲ್ಲಿ ಸುಮಾರು 410 ವಿಮಾನಗಳಿಗೆ ಬಾಂಬ್ ಬೆದರಿಕೆ ಹಾಕಲಾಗಿದೆ

- Advertisement -
- Advertisement -

ಕಳೆದ ಕೆಲ ದಿನಗಳಿಂದ ವಿಮಾನಗಳಿಗೆ ಸತತವಾಗಿ ಹುಸಿ ಬಾಂಬ್ ಬೆದರಿಕೆ ಸಂದೇಶಗಳನ್ನು ಕಳುಹಿಸುತ್ತಿದ್ದ ವ್ಯಕ್ತಿಯನ್ನು ಮಹಾರಾಷ್ಟ್ರದ ನಾಗ್ಪುರ ಪೊಲೀಸರು ಪತ್ತೆ ಹಚ್ಚಿದ್ದಾರೆ ಎಂದು ವರದಿಯಾಗಿದೆ.

ಮಹಾರಾಷ್ಟ್ರದ ಗೊಂಡಿಯಾ ಮೂಲದ 35 ವರ್ಷದ ಜಗದೀಶ್ ಉಯ್ಕಿ ಎಂಬಾತ ನಕಲಿ ಬಾಂಬ್‌ ಬೆದರಿಕೆ ಸಂದೇಶಗಳನ್ನು ಕಳುಹಿಸುತ್ತಿರುವುದಾಗಿ ನಾಗ್ಪುರ ನಗರ ಪೊಲೀಸ್‌ನ ವಿಶೇಷ ವಿಭಾಗ ಗುರುತಿಸಿದೆ. ಈತ ಭಯೋತ್ಪಾದನೆ ಕುರಿತ ಪುಸ್ತಕದ ಲೇಖಕನಾಗಿದ್ದು, 2021ರಲ್ಲಿ ಪ್ರಕರಣವೊಂದರಲ್ಲಿ ಬಂಧಿಸಲಾಗಿತ್ತು ಎಂದು ಪೊಲೀಸರು ಹೇಳಿರುವುದಾಗಿ ದಿ ನ್ಯೂ ಇಂಡಿಯನ್‌ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಬೆದರಿಕೆ ಇ-ಮೇಲ್‌ಗಳನ್ನು ಕಳುಹಿಸುತ್ತಿರುವುದು ಪೊಲೀಸರಿಗೆ ಗೊತ್ತಾದ ಬಳಿಕ ಜಗದೀಶ್ ಉಯ್ಕಿ ತಲೆಮರೆಸಿಕೊಂಡಿದ್ದಾನೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಹೇಳಿರುವುದಾಗಿ ವರದಿ ಉಲ್ಲೇಖಿಸಿದೆ.

ಉಪ ಪೊಲೀಸ್ ಆಯುಕ್ತೆ (ಡಿಸಿಪಿ) ಶ್ವೇತಾ ಖೇಡ್ಕರ್ ನೇತೃತ್ವದ ತಂಡವು ತನಿಖೆ ನಡೆಸಿ ಜಗದೀಶ್ ಉಯ್ಕಿ ಇ-ಮೇಲ್ ಕಳುಹಿಸಿತ್ತಿರುವ ವಿಷಯವನ್ನು ಬಯಲಿಗೆಳೆದಿದೆ.

ಪ್ರಧಾನ ಮಂತ್ರಿಗಳ ಕಚೇರಿ (ಪಿಎಂಒ), ರೈಲ್ವೆ ಸಚಿವರು, ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಮತ್ತು ಉಪ ಮುಖ್ಯಮಂತ್ರಿಗಳ ಕಚೇರಿ, ವಿಮಾನಯಾನ ಕಚೇರಿಗಳು, ಪೊಲೀಸ್ ಮಹಾನಿರ್ದೇಶಕರು (ಡಿಜಿಪಿ) ಮತ್ತು ರೈಲ್ವೆ ರಕ್ಷಣಾ ಪಡೆ (ಆರ್‌ಪಿಎಫ್‌) ಸೇರಿದಂತೆ ವಿವಿಧ ಸರ್ಕಾರಿ ಸಂಸ್ಥೆಗಳಿಗೆ ಉಯ್ಕಿ ಬೆದರಿಕೆ ಇ-ಮೇಲ್‌ಗಳನ್ನು ಕಳುಹಿಸಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ತನಗೆ ಗೊತ್ತಿರುವ ಗೌಪ್ಯ ಟೆರರ್ ಕೋಡ್ ಬಗ್ಗೆ ಹೇಳಿಕೊಳ್ಳಲು ಅವಕಾಶ ನೀಡದಿದ್ದರೆ ಪ್ರತಿಭಟಿಸುವುದಾಗಿ ಸೋಮವಾರ ಉಯ್ಕಿಯಿಂದ ಇ-ಮೇಲ್ ಒಂದು ಬಂದ ಬಳಿಕ ಉಪಮುಖ್ಯಮಂತ್ರಿ ಹಾಗೂ ಗೃಹ ಸಚಿವ ದೇವೇಂದ್ರ ಫಡ್ನವಿಸ್ ಅವರ ಮನೆ ಬಳಿ ನಾಗ್ಪುರ ಪೊಲೀಸರು ಭದ್ರತೆ ಹೆಚ್ಚಿಸಿದ್ದರು.

ಭಯೋತ್ಪಾದಕ ಬೆದರಿಕೆಗಳ ಬಗ್ಗೆ ತನಗಿರುವ ವಿಷಯದ ಬಗ್ಗೆ ಚರ್ಚಿಸಲು ಪ್ರಧಾನಿ ನರೇಂದ್ರ ಮೋದಿಯನ್ನು ಭೇಟಿಯಾಗಲು ಅವಕಾಶ ಮಾಡಿಕೊಡುವಂತೆಯೂ ಜಗದೀಶ್ ಉಯ್ಕಿ ಬೇಡಿಕೆ ಇಟ್ಟಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಅಕ್ಟೋಬರ್ 21 ರಂದು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರಿಗೆ ಇ-ಮೇಲ್ ಕಳುಹಿಸಿದ್ದ ಉಯ್ಕಿ, ಅದನ್ನು ಡಿಜಿಪಿ ಮತ್ತು ಆರ್‌ಪಿಎಫ್‌ಗೆ ಫಾರ್ವರ್ಡ್‌ ಮಾಡಿದ್ದ. ಈ ಕಾರಣಕ್ಕೆ ರೈಲ್ವೆ ನಿಲ್ದಾಣಗಳಲ್ಲಿ ಭದ್ರತೆ ಹೆಚ್ಚಿಸಲಾಗಿತ್ತು. ಉಯ್ಕಿಯನ್ನು ಶೀಘ್ರದಲ್ಲೇ ಬಂಧಿಸಲು ವಿಶೇಷ ತಂಡ ರಚಿಸಲಾಗಿದೆ ಎಂದು ಪೊಲೀಸು ಹೇಳಿದ್ದಾರೆ.

ಅಕ್ಟೋಬರ್ 28 ರವರೆಗೆ 15 ದಿನಗಳಲ್ಲಿ, ಭಾರತೀಯ ಸಂಸ್ಥೆಗಳ 410 ಕ್ಕೂ ಹೆಚ್ಚು ದೇಶೀಯ ಮತ್ತು ಅಂತಾರಾಷ್ಟ್ರೀಯ ವಿಮಾನಗಳಿಗೆ ನಕಲಿ ಬಾಂಬ್ ಬೆದರಿಕೆಗಳು ಬಂದಿವೆ. ಹೆಚ್ಚಿನ ಬೆದರಿಕೆಗಳನ್ನು ಸಾಮಾಜಿಕ ಮಾಧ್ಯಮಗಳ ಮೂಲಕ ಹಾಕಲಾಗಿತ್ತು. ಸೋಮವಾರ 60ಕ್ಕೂ ಹೆಚ್ಚು ಭಾರತೀಯ ವಿಮಾನಯಾನ ಸಂಸ್ಥೆಗಳಿಗೆ ಬಾಂಬ್‌ ಬೆದರಿಕೆ ಬಂದಿತ್ತು.

ಇದನ್ನೂ ಓದಿ : ಪತ್ರಕರ್ತ ಮಹೇಶ್ ಲಾಂಗಾ ವಿರುದ್ಧ ಎಫ್‌ಐಆರ್ : ಮಾಧ್ಯಮ ಒಕ್ಕೂಟಗಳಿಂದ ಖಂಡನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: 43ಲಕ್ಷದಲ್ಲಿ ನೋಟಿಸ್ ತಲುಪಿರುವುದು 25ಲಕ್ಷ ಜನರಿಗೆ ಮಾತ್ರ, ಬಾಕಿ 18ಲಕ್ಷ ಜನರಿಗೆ ಇನ್ನು ನೋಟಿಸ್ಸೇ ತಲುಪಿಲ್ಲ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಆಡಳಿತಾತ್ಮಕ ಗೊಂದಲ ಹಾಗೂ ಯಾಂತ್ರಿಕ ಲೋಪಗಳ ಜಾಲದಲ್ಲಿ ಸಿಲುಕಿಬಿದ್ದಿದೆ. ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಬಿಡುಗಡೆ ಮಾಡಿರುವ ಇತ್ತೀಚಿನ ದತ್ತಾಂಶವೇ ಆಯೋಗದ...

ಕಾಳಿಘಾಟ್‌ನಲ್ಲಿ ‘ಮೀನಿನ ಪ್ರಸಾದ’ ಸ್ವೀಕರಿಸಿದ ಸುವೇಂದು ಅಧಿಕಾರಿ; ಬಾಗೇಶ್ವರ್ ಬಾಬಾ ‘ಮಾಂಸಾಹಾರ’ ವಿವಾದಕ್ಕೆ ಹೊಸ ತಿರುವು!

ದುರ್ಗಾ ಪೂಜೆ ಸಂದರ್ಭದಲ್ಲಿ ಮೀನು–ಮಾಂಸ ಸೇವನೆ ಕುರಿತು ಬಾಗೇಶ್ವರ್ ಧಾಮದ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿರುವ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ವಿವಾದಕ್ಕೆ ಕಾರಣವಾಗಿರುವ ನಡುವೆಯೇ, ಮುಖ್ಯಮಂತ್ರಿ ಸುವೇಂದು ಅಧಿಕಾರಿ ಕಾಳಿಘಾಟ್ʼನ ಕಾಳಿ ದೇವಸ್ಥಾನದಲ್ಲಿ...

ಎಸ್‌ಐಆರ್‌: ಹೈದರಾಬಾದ್, ಸಿಕಂದರಾಬಾದ್‌ನಲ್ಲಿ ಲಕ್ಷಾಂತರ ಮತದಾರರ ಹೆಸರು ಅಳಿಸುವಿಕೆ; 2029ರ ಚುನಾವಣೆಗೂ ಮುನ್ನ ಗಂಭೀರ ಆತಂಕ

ಹೈದರಾಬಾದ್: ತೆಲಂಗಾಣದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಭಾರೀ ಪ್ರಮಾಣದಲ್ಲಿ ಹೆಸರುಗಳನ್ನು ತೆಗೆದುಹಾಕಲಾಗಿರುವುದು ಮುಂದಿನ ಚುನಾವಣೆಯ ರಾಜಕೀಯ ಲೆಕ್ಕಾಚಾರಗಳ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯನ್ನು ಹುಟ್ಟುಹಾಕಿದೆ....

9/11 ದಾಳಿಗೆ 25 ವರ್ಷ: ‘ಭಯೋತ್ಪಾದನೆ ವಿರುದ್ಧದ ಯುದ್ಧ’ ಮತ್ತು ಕುಸಿದ ಪ್ರಜಾಪ್ರಭುತ್ವದ ಮೌಲ್ಯಗಳು

ನ್ಯೂಯಾರ್ಕ್‌ನ ಪ್ರತಿಷ್ಠಿತ ವರ್ಲ್ಡ್ ಟ್ರೇಡ್ ಸೆಂಟರ್ ಅವಳಿ ಗೋಪುರಗಳ ಮೇಲೆ ನಡೆದ ಭೀಕರ ಭಯೋತ್ಪಾದನಾ ದಾಳಿಗೆ ಇಂದಿಗೆ ಭರ್ತಿ 25 ವರ್ಷಗಳು ತುಂಬಿವೆ. ಈ ಕಾಲು ಶತಮಾನದ ಅವಧಿಯಲ್ಲಿ 'ಭಯೋತ್ಪಾದನೆ ವಿರುದ್ಧದ ಜಾಗತಿಕ...

‘ಈ ಪ್ರಕ್ರಿಯೆಯೇ ಶಿಕ್ಷೆಯಾಗಿದೆ’: ಉಮರ್ ಖಾಲಿದ್ ದೀರ್ಘ ಜೈಲುವಾಸದ ಬಗ್ಗೆ ಮಾಜಿ ನ್ಯಾಯಮೂರ್ತಿ ದೀಪಕ್ ಗುಪ್ತಾ ತೀವ್ರ ಟೀಕೆ

ನವದೆಹಲಿ: ಮಾನವ ಹಕ್ಕುಗಳ ಕಾರ್ಯಕರ್ತ, ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಅವರ ದೀರ್ಘಕಾಲದ ವಿಚಾರಣಾಪೂರ್ವ ಬಂಧನ, ಎಲ್ಗರ್ ಪರಿಷತ್ ಪ್ರಕರಣದ ಆರೋಪಿಗಳ ವರ್ಷಗಳ ಜೈಲುವಾಸ ಹಾಗೂ ವೈಯಕ್ತಿಕ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ನ್ಯಾಯಾಂಗದ...

‘ದೇಶವಿರೋಧಿ ಮನಸ್ಥಿತಿಯಲ್ಲ’: ಜಿ.ಎನ್. ಸಾಯಿಬಾಬಾ ಸ್ಮರಣೆ ಪ್ರಕರಣದಲ್ಲಿ ‘ಟಿಸ್’ ಮಾಜಿ ವಿದ್ಯಾರ್ಥಿಗೆ ಜಾಮೀನು!

ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ದಿವಂಗತ ಜಿ.ಎನ್. ಸಾಯಿಬಾಬಾ ಅವರ ಸ್ಮರಣಾರ್ಥ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (TISS) ಕ್ಯಾಂಪಸ್‌ನಲ್ಲಿ ನಡೆದ ಅನುಮತಿರಹಿತ ಕಾರ್ಯಕ್ರಮಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧಿತರಾಗಿದ್ದ ಮಾಜಿ ವಿದ್ಯಾರ್ಥಿ...

ಜನಾಕ್ರೋಶದ ನಡುವೆಯೇ ಎಸ್ಐಆರ್ ಸಮರ್ಥಿಸಿಕೊಂಡ ಮುಖ್ಯ ಚುನಾವಣಾ ಆಯುಕ್ತ: ‘ರಾಜಕೀಯ ದಾಳಿಗಳಿಂದ ಆಯೋಗ ವಿಚಲಿತವಾಗದು’ ಎಂದ ಜ್ಞಾನೇಶ್ ಕುಮಾರ್

ಅಹಮದಾಬಾದ್: ದೇಶದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ರಾಜಕೀಯ ಪಕ್ಷಗಳು, ನಾಗರಿಕ ಸಂಘಟನೆಗಳು ಹಾಗೂ ವಿವಿಧ ವಲಯಗಳಿಂದ ತೀವ್ರ ಟೀಕೆಗಳು ವ್ಯಕ್ತವಾಗುತ್ತಿರುವ ನಡುವೆಯೇ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಕರ್ನಾಟಕ ಎಸ್ಐಆರ್: ಹೆಸರಿನ ಸಣ್ಣ ವ್ಯತ್ಯಾಸಕ್ಕಾಗಿ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರಿಗೆ ನೋಟಿಸ್; ‘ಸುಳ್ಳು ಮಾಹಿತಿ ನೀಡಿದರೆ ಜೈಲು’ ಎಂಬ ಬೆದರಿಕೆ

ಮೈಸೂರು: ಸುಮಾರು ಮೂರೂವರೆ ದಶಕಗಳ ಕಾಲ ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಸೇವೆ ಸಲ್ಲಿಸಿ, ಸ್ವತಃ ಚುನಾವಣಾ ಪ್ರಕ್ರಿಯೆಯ ಜವಾಬ್ದಾರಿಯುತ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರೇ ಇದೀಗ ತಮ್ಮ...

SIR : ತಾಯಿಯೊಂದಿಗೆ ಮ್ಯಾಪಿಂಗ್ ಮಾಡಿದರೂ ಅಜ್ಜನ ವಯಸ್ಸಿನ ವ್ಯತ್ಯಾಸದ ನೆಪ ಹೇಳಿ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ದಿನಕ್ಕೊಂದು ವಿಲಕ್ಷಣ ಹಾಗೂ ಯಾಂತ್ರಿಕ ದೋಷಗಳನ್ನು ಹೊರಹಾಕುತ್ತಿದ್ದು, ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಲು ಬಯಸುವ ನೈಜ ಮತದಾರರನ್ನು ಆತಂಕಕ್ಕೆ ತಳ್ಳುತ್ತಿದೆ. ಬ್ಯಾಟರಾಯನಪುರ...

ಬ್ಯಾಂಕ್ ಮುಷ್ಕರ: ದೇಶಾದ್ಯಂತ ಶಾಖಾ ಸೇವೆಗಳಿಗೆ ಅಡಚಣೆ; ವಾರಾಂತ್ಯ, ಗಣೇಶ ಚತುರ್ಥಿಯಿಂದ ಹಲವು ದಿನ ಸೇವೆ ವ್ಯತ್ಯಯ 

ನವದೆಹಲಿ: ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಕರೆ ನೀಡಿರುವ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಸೆಪ್ಟೆಂಬರ್ 11ರಂದು (ಇಂದು) ನಡೆಯುತ್ತಿದ್ದು, ದೇಶದಾದ್ಯಂತ ಬ್ಯಾಂಕ್ ಗ್ರಾಹಕರ ಸಾಮಾನ್ಯ ಸೇವೆಗಳ ಮೇಲೆ ಪರಿಣಾಮ ಬೀರುವ...