Homeದಲಿತ್ ಫೈಲ್ಸ್ದಲಿತ ಬಾಲಕನಿಗೆ ಥಳಿಸಿ, ಮೂತ್ರ ಕುಡಿಸಿದ ಪೊಲೀಸರು : ಆರೋಪ

ದಲಿತ ಬಾಲಕನಿಗೆ ಥಳಿಸಿ, ಮೂತ್ರ ಕುಡಿಸಿದ ಪೊಲೀಸರು : ಆರೋಪ

- Advertisement -
- Advertisement -

ರಾಜಸ್ಥಾನದ ಸಿಕಾರ್ ಜಿಲ್ಲೆಯಲ್ಲಿ 13 ವರ್ಷದ ದಲಿತ ಬಾಲಕನನ್ನು ಬಂಧಿಸಿದ ಪೊಲೀಸರು, ಥಳಿಸಿ ಬಲವಂತವಾಗಿ ಮೂತ್ರ ಕುಡಿಸಿರುವ ಆರೋಪ ಕೇಳಿ ಬಂದಿದೆ.

ಈ ಘಟನೆಯು ಬಾಲಕನ ಕುಟುಂಬ ಮತ್ತು ದಲಿತ ಸಮುದಾಯದ ಆಕ್ರೋಶಕ್ಕೆ ಕಾರಣವಾಗಿದ್ದು,
ಸಿಕಾರ್‌ನಲ್ಲಿರುವ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ಕಚೇರಿಯ ಹೊರಗೆ ಪ್ರತಿಭಟನೆ ನಡೆಸಿ ಪೊಲೀಸರ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯಿಸಿದ್ದಾರೆ ಎಂದು en.themooknayak.com ವರದಿ ಮಾಡಿದೆ.

ಸ್ಥಳೀಯ ನಿವಾಸಿ ಹಾಗೂ ಸಂತ್ರಸ್ತ ಬಾಲಕನ ಸಂಬಂಧಿ ಬಲ್ಬೀರ್ ಭಾರತೀಯ ಅವರ ಪ್ರಕಾರ, ಅಕ್ಟೋಬರ್ 21ರ ರಾತ್ರಿ ಕಳ್ಳತನದ ಆರೋಪದ ಮೇಲೆ ಬಾಲಕನನ್ನು ಖಂಡೇಲಾ ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದರು. ಬಳಿಕ ಪೊಲೀಸ್‌ ಠಾಣೆಯ ಸೆಲ್‌ನಲ್ಲಿ ಬಂಧಿಸಿಟ್ಟಿದ್ದರು. ಅಲ್ಲಿ ಪೊಲೀಸರು ಬಾಲಕನನ್ನು ತೀವ್ರ ದೈಹಿಕ ಹಿಂಸೆಗೆ ಒಳಪಡಿಸಿದ್ದಾರೆ. ಆತನಿಗೆ ಥಳಿಸಿದ್ದಲ್ಲದೆ, ಮೂತ್ರ ಕುಡಿಸಿ ದೌರ್ಜನ್ಯವೆಸಗಿದ್ದಾರೆ.

ಬಾಲಕನನ್ನು ಮನೆಗೆ ಕರೆತರಲು ಪ್ರಯತ್ನಿಸಿದಾಗ, ಖಂಡೇಲಾ ಠಾಣಾಧಿಕಾರಿ ಮಂಗೀಲಾಲ್ ಮತ್ತು ಎಎಸ್‌ಐ ಪುರನ್‌ಮಲ್ ಅವರು ಬಿಡುಗಡೆ ಮಾಡಲು 50,000 ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.

ಬಾಲಕನ 70 ವರ್ಷದ ಅಜ್ಜ ತನ್ನ ಮೊಮ್ಮಗನ ಬಿಡುಗಡೆಗಾಗಿ ಮನವಿ ಮಾಡಲು ಠಾಣೆಗೆ ತೆರಳಿದ್ದಾಗ ಪೊಲೀಸ್ ಸಿಬ್ಬಂದಿ ಬಾಲಕನಿಗೆ ಥಳಿಸುವುದನ್ನು ನೋಡಿದ್ದಾರೆ. ಈ ವೇಳೆ ಮಧ್ಯಪ್ರವೇಶಿಸಿದ ಅವರು, ಮೊಮ್ಮಗನ ಮೇಲೆ ಏಕೆ ಹಲ್ಲೆ ಮಾಡುತ್ತಿದ್ದೀರಿ ಎಂದು ಪ್ರಶ್ನಿಸಿದಾಗ, ಪೊಲೀಸರು ವೃದ್ದನ ಮೇಲೂ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ಅಲ್ಲದೆ, ಅವರನ್ನು ಬಲವಂತವಾಗಿ ಠಾಣೆಯಿಂದ ಹೊರದಬ್ಬಿದ್ದಾರೆ. ಈ ವೇಳೆ ವೃದ್ದನ ಹೆಬ್ಬೆರಳು ಮುರಿದಿದೆ ಎಂದು ವರದಿ ವಿವರಿಸಿದೆ.

ನ್ಯಾಯ ಮತ್ತು ತಕ್ಷಣ ಕ್ರಮಕ್ಕೆ ಒತ್ತಾಯಿಸಿದ ಕುಟುಂಬ

ಬಾಲಕನ ಕುಟುಂಬ ದಲಿತ ಸಮುದಾಯದ ಜನರೊಂದಿಗೆ ಎಸ್‌ಪಿ ಕಚೇರಿಯ ಬಳಿ ಪ್ರತಿಭಟನೆ ನಡೆಸಿ ತಮಗೆ ನ್ಯಾಯ ಕೊಡಿಸುವಂತೆ ಮತ್ತು ತಪ್ಪಿತಸ್ಥ ಪೊಲೀಸರ ವಿರುದ್ದ ಕ್ರಮಕ್ಕೆ ಒತ್ತಾಯಿಸಿದೆ. ಠಾಣಾಧಿಕಾರಿ ಮಂಗೀಲಾಲ್, ಎಎಸ್‌ಐ ಪುರನ್‌ಮಲ್ ಮತ್ತು ಇತರ ಇಬ್ಬರು ಪೊಲೀಸರ ವಿರುದ್ಧ ಮಕ್ಕಳ ಲೈಂಗಿಕ ಅಪರಾಧಗಳ ರಕ್ಷಣೆ (ಪೋಕ್ಸೊ) ಕಾಯ್ದೆಯಡಿ ಪ್ರಕರಣ ದಾಖಲಿಸುವಂತೆ ಒತ್ತಾಯಿಸಿ ಅಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ.

ಪೊಲೀಸರು ಬಾಲಕನಿಗೆ ಲೈಂಗಿಕ ಕಿರುಕುಳವೂ ನೀಡಿದ್ದಾರೆ ಎಂದು ಬಾಲಕನ ಕುಟುಂಬ ಆರೋಪಿಸಿದೆ. ಹಾಗಾಗಿ, ಪೋಕ್ಸೋ ಪ್ರಕರಣ ದಾಖಲಿಸಲು ಆಗ್ರಹಿಸಿದೆ. ಪೊಲೀಸ್ ದೌರ್ಜನ್ಯದಿಂದ ಬಾಲಕ ತೀವ್ರ ಆಘಾತಕ್ಕೊಳಗಾಗಿದ್ದಾನೆ. ಆತ ಭಯಗೊಂಡಿದ್ದು, ನೋವಿನಿಂದ ನರಳುತ್ತಿದ್ದಾನೆ. ಪೊಲೀಸರ ಹಲ್ಲೆಯಿಂದ ಆತನ ಕಾಲುಗಳು ಊದಿಕೊಂಡಿವೆ ಎಂದು ಕುಟುಂಬ ಹೇಳಿಕೊಂಡಿದೆ.

ಕುಟುಂಬಸ್ಥರು ಆರಂಭದಲ್ಲಿ ಅಕ್ಟೋಬರ್ 22ರಂದು ಎಸ್ಪಿಗೆ ಲಿಖಿತ ದೂರು ನೀಡಿದ್ದಾರೆ. ಪೊಲೀಸರನ್ನು ಅಮಾನತಗೊಳಿಸಬೇಕು. ಅವರ ವಿರುದ್ದ ಕ್ರಿಮಿನಲ್ ಪ್ರಕರಣ ದಾಖಲಿಸಬೇಕು ಎಂದು ಒತ್ತಾಯಿಸಿದ್ದಾರೆ ಎಂದು en.themooknayak.com ತಿಳಿಸಿದೆ.

ಪೊಲೀಸರ ವಿರುದ್ದ ಆರೋಪಗಳಿಗೆ ಪ್ರತಿಕ್ರಿಯಿಸಿದ ಸಿಕಾರ್ ಪೊಲೀಸ್ ವರಿಷ್ಠಾಧಿಕಾರಿ ಭುವನ್ ಭೂಷಣ್ ಯಾದವ್, “ಪ್ರಕರಣದ ಕುರಿತು ಮಾಹಿತಿ ಪಡೆಯಲು ಕುಟುಂಬವನ್ನು ಪ್ರತಿನಿಧಿಸುವ ನಿಯೋಗವನ್ನು ಸೋಮವಾರ ಭೇಟಿ ಮಾಡಿದ್ದೇನೆ ಎಂದು ಹೇಳಿದ್ದಾರೆ. ನಾನು ದೌರ್ಜನ್ಯಕ್ಕೊಳಗಾದ ಬಾಲಕನೊಂದಿಗೆ ವೈಯಕ್ತಿಕವಾಗಿ ಮಾತನಾದ್ದೇನೆ. ಸೂಕ್ತ ತನಿಖೆಯ ಭರವಸೆಯನ್ನು ಕುಟುಂಬಕ್ಕೆ ನೀಡಿದ್ದೇನೆ. ಪ್ರಕರಣವನ್ನು ರಿಂಗಸ್‌ನ ಸರ್ಕಲ್ ಆಫೀಸರ್ (ಸಿಒ) ಅವರಿಗೆ ವಹಿಸಲಾಗಿದ್ದು, 7 ದಿನಗಳಲ್ಲಿ ವಿವರವಾದ ತನಿಖೆ ನಡೆಸಿ ಸಮಗ್ರ ವರದಿಯನ್ನು ಸಲ್ಲಿಸುವಂತೆ ಸೂಚಿಸಲಾಗಿದೆ” ಎಂದು ತಿಳಿಸಿದ್ದಾರೆ.

ಎಸ್ಪಿ ನೀಡಿರುವ ಉತ್ತರಕ್ಕೆ ಸಮಾಧಾನಗೊಳ್ಳದ ಬಾಲಕನ ಕುಟುಂಬ, ಬಾಲಕನ ಮೇಲಿನ ದೌರ್ಜನ್ಯ ಮಕ್ಕಳ ಹಕ್ಕುಗಳ ಗಂಭೀರ ಉಲ್ಲಂಘನೆಯಾಗಿದೆ ಎಂದು ಹೇಳಿದ್ದು, ಪೊಲೀಸರನ್ನು ವಜಾಗೊಳಿಸಬೇಕ. ಅವರ ವಿರುದ್ದ ಕ್ರಿಮಿನಲ್ ಪ್ರಕರಣ ಹೂಡಬೇಕು ಎಂದು ಪಟ್ಟು ಹಿಡಿದಿದೆ

ಇದನ್ನೂ ಓದಿ : ಮಹಾರಾಷ್ಟ್ರ ವಿಧಾನಸಭೆ ಚುನಾವಣೆ | 8 ಸಾವಿರ ಅಭ್ಯರ್ಥಿಗಳಿಂದ 10 ಸಾವಿರಕ್ಕೂ ಅಧಿಕ ನಾಮಪತ್ರಗಳು ಸಲ್ಲಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...

ತೆಲಂಗಾಣ| ಕೆಸಿಆರ್‌ ಮನೆ ಮುಂದೆ ದಲಿತ ಮುಖಂಡರಿಂದ ಪ್ರತಿಭಟನೆ; ಬಿಆರ್‌ಎಸ್‌ ಕಾರ್ಯಕರ್ತರಿಂದ ನೀರು-ಅರಿಶಿನ ಬಳಸಿ ರಸ್ತೆ ಶುದ್ಧೀಕರಣ

ತೆಲಂಗಾಣದ ಸಿದ್ಧಾಪೇಟೆ ಜಿಲ್ಲೆಯ ಎರ್ರವಳ್ಳಿಯಲ್ಲಿರುವ ಬಿಆರ್‌ಎಸ್ ಅಧ್ಯಕ್ಷ ಕೆ. ಚಂದ್ರಶೇಖರ ರಾವ್ (ಕೆಸಿಆರ್) ಅವರ ಫಾರ್ಮ್ ಹೌಸ್ ಬಳಿ ದಲಿತ ಮುಖಂಡರು ಮತ್ತು ಕಾಂಗ್ರೆಸ್ ನಡೆಸಿದ ಪ್ರತಿಭಟನೆಯ ನಂತರ, ಬಿಆರ್‌ಎಸ್ ನಾಯಕರು ನಡೆಸಿದ...