Homeಮುಖಪುಟಸಿಖ್ ಪ್ರತ್ಯೇಕತಾವಾದಿಗಳ ವಿರುದ್ಧದ ಸಂಚಿನಲ್ಲಿ ಅಮಿತ್ ಶಾ ಕೈವಾಡ : ಕೆನಡಾ ಆರೋಪ

ಸಿಖ್ ಪ್ರತ್ಯೇಕತಾವಾದಿಗಳ ವಿರುದ್ಧದ ಸಂಚಿನಲ್ಲಿ ಅಮಿತ್ ಶಾ ಕೈವಾಡ : ಕೆನಡಾ ಆರೋಪ

- Advertisement -
- Advertisement -

ಕೆನಡಾದಲ್ಲಿ ಸಿಖ್ ಪ್ರತ್ಯೇಕತಾವಾದಿಗಳನ್ನು ಗುರಿಯಾಗಿಸಿ ಸಂಚು ರೂಪಿಸುವಲ್ಲಿ ಗೃಹ ಸಚಿವ ಅಮಿತ್ ಅವರ ಕೈವಾಡ ಇದೆ ಎಂದು ಕೆನಡಾ ಸರ್ಕಾರ ನೇರವಾಗಿ ಆರೋಪಿಸಿದೆ.

ಕೆನಡಾ ನೆಲದಲ್ಲಿನ ಸಿಖ್ ಪ್ರತ್ಯೇಕತಾವಾದಿಗಳ ವಿರುದ್ದದ ಹಿಂಸಾಚಾರದ ಸಂಚಿನಲ್ಲಿ ಭಾರತದ ಗೃಹ ಸಚಿವ ಅಮಿತ್ ಶಾ ಭಾಗಿಯಾಗಿರುವುದನ್ನು ತಾನೇ ಖಚಿತಪಡಿಸಿ ವಾಷಿಂಗ್ಟನ್ ಪೋಸ್ಟ್‌ಗೆ ಹೇಳಿಕೆ ನೀಡಿದ್ದಾಗಿ ಕೆನಡಾದ ಉಪ ವಿದೇಶಾಂಗ ಸಚಿವ ಡೇವಿಡ್ ಮಾರಿಸನ್ ಹೇಳಿದ್ದಾರೆ.

ಸಾರ್ವಜನಿಕ ಸುರಕ್ಷತೆ ಮತ್ತು ರಾಷ್ಟ್ರೀಯ ಭದ್ರತೆ ಕುರಿತ ಕೆನಡಾದ ಸಂಸದೀಯ ಸಮಿತಿಯ ವಿಚಾರಣೆ ವೇಳೆ ಡೇವಿಡ್ ಮಾರಿಸನ್ ಹೀಗೆ ಹೇಳಿರುವುದಾಗಿ ವರದಿಯಾಗಿದೆ. ಭಾರತದ ಏಜೆಂಟರು ಕೆನಡಾದಲ್ಲಿ ಹಿಂಸೆಗೆ ಕುಮ್ಮಕ್ಕು ನೀಡುತ್ತಿದ್ಧಾರೆ ಎಂದು ರಾಯಲ್ ಕೆನಡಿಯನ್ ಮೌಂಟೆಡ್ ಪೊಲೀಸರು ಅಕ್ಟೋಬರ್ 14ರಂದು ಆರೋಪಿಸಿದ್ದರು.

ಭಾರತ ಸರ್ಕಾರದ ಸಂಶೋಧನೆ ಮತ್ತು ವಿಶ್ಲೇಷಣೆ ವಿಭಾಗ (RAW) ಅಧಿಕಾರಿಯೊಬ್ಬರು ಮತ್ತು ಹಿರಿಯ ಸಚಿವರು ಕೆನಡಾದಲ್ಲಿ ಗುಪ್ತವಾಗಿ ಮಾಹಿತಿ ಸಂಗ್ರಹಣೆಯಲ್ಲಿ ತೊಡಗಿದ್ದಾರೆ. ಅಲ್ಲಿ ಸಿಖ್ ಪ್ರತ್ಯೇಖತಾವಾದಿಗಳನ್ನು ಗುರಿಯಾಗಿಸುತ್ತಿದ್ದಾರೆ ಎಂಬುವುದಕ್ಕೆ ಕೆನಡಾದ ಭದ್ರತಾ ಏಜೆನ್ಸಿಗಳು ಪುರಾವೆಗಳನ್ನು ಸಂಗ್ರಹಿಸಿವೆ ಎಂದು ವಾಷಿಂಗ್ಟನ್ ಪೋಸ್ಟ್ ವಾರದ ಹಿಂದೆ ಮೊದಲ ವರದಿ ಮಾಡಿತ್ತು.

ಮೊದಲ ವರದಿಯಲ್ಲಿ ವಾಷಿಂಗ್ಟನ್ ಪೋಸ್ಟ್ ಅಮಿತ್ ಶಾ ಹೆಸರನ್ನು ಉಲ್ಲೇಖಿಸಿರಲಿಲ್ಲ. ಭಾರತದ ಹಿರಿಯ ಸಚಿವರು ಮತ್ತು RAWದ ಹಿರಿಯ ಅಧಿಕಾರಿಗಳು ಭಾಗಿಯಾಗಿರುವ ಬಗ್ಗೆ ಮಾತ್ರ ಹೇಳಿತ್ತು. ನಂತರ ಪರಿಷ್ಕರಿಸಿದ ವರದಿಯಲ್ಲಿ ಅಮಿತ್ ಶಾ ಹೆಸರನ್ನು ನೇರವಾಗಿ ಉಲ್ಲೇಖಿಸಿತ್ತು. ಈ ಮಾಹಿತಿಯನ್ನು ವಾಷಿಂಗ್ಟನ್ ಪೋಸ್ಟ್‌ಗೆ ಹೇಳಿದ್ದು ನಾನೇ ಎಂದು ಡೇವಿಡ್ ಮಾರಿಸನ್ ತಿಳಿಸಿದ್ದಾರೆ.

“ಪತ್ರಿಕೆಯವರು ಕರೆ ಮಾಡಿ ಸಿಖ್‌ ಪ್ರತ್ಯೇಕತಾವಾದಿಗಳ ವಿರುದ್ಧದ ಸಂಚಿನ ಹಿಂದೆ ಇರುವುದು ಅವರೇ (ಅಮಿತ್‌ ಶಾ)? ಎಂದು ಕೇಳಿದ್ದರು. ಅದಕ್ಕೆ ನಾನು ‘ಹೌದು’ ಎಂದು ಉತ್ತರಿಸಿರುವುದಾಗಿ ಸಂಸದೀಯ ಸಮಿತಿಗೆ ಡೇವಿಡ್ ಮಾರಿಸನ್ ಹೇಳಿದ್ದಾರೆ.

ಭಾರತೀಯ ಗೃಹ ವ್ಯವಹಾರಗಳ ಸಚಿವ ಕೆನಡಾ ನೆಲದಲ್ಲಿನ ಅಪರಾಧಗಳಲ್ಲಿ ಭಾಗಿಯಾಗಿದ್ದಾರೆಂದು ಹೇಳಲಾದ ಮಾಹಿತಿಯನ್ನು ಕೆನಡಾದಲ್ಲಿ ಬಿಡುಗಡೆ ಮಾಡಲಾಗಿಲ್ಲ. ಆದರೂ, ಅದು ವಾಷಿಂಗ್ಟನ್ ಪೋಸ್ಟ್‌ನಲ್ಲಿ ಮಾತ್ರ ಹೇಗೆ ಬಹಿರಂಗಗೊಂಡಿತು ಎಂದು ಕೇಳಲಾಯಿತು. ಆ ಪ್ರಶ್ನೆಗೆ ಉತ್ತರಿಸಿದ ಮಾರಿಸನ್, ತಾನೇ ಹೇಳಿಕೆ ನೀಡಿದ್ದಾಗಿ ಸ್ಪಷ್ಟಪಡಿಸಿದ್ದಾರೆ.

ಭಾರತ ಸರ್ಕಾರದ ಏಜೆಂಟರ ಮೂಲಕ ಕೆನಡಾದಲ್ಲಿ ಚುನಾವಣಾ ಹಸ್ತಕ್ಷೇಪ ಮತ್ತು ಕ್ರಿಮಿನಲ್ ಚಟುವಟಿಕೆಗಳು ನಡೆದಿರುವ ಬಗ್ಗೆಯೂ ಸಮಿತಿ ಸದಸ್ಯರು ಪ್ರಶ್ನೆಗಳನ್ನು ಕೇಳಿದರು. ಸಿಖ್ ಸಮುದಾಯದ ವೋಟ್ ಬ್ಯಾಂಕ್‌ ಭದ್ರಪಡಿಸಿಕೊಳ್ಳುವ ಟ್ರುಡೊ ಅವರ ರಾಜಕೀಯ ಅಜೆಂಡಾ ಇದಾಗಿದೆ ಎಂದು ಈಗಾಗಲೇ ಪ್ರತಿಪಾದಿಸಿರುವ ಭಾರತ, ಟ್ರುಡೋ ದೊಡ್ಡ ತಪ್ಪು ಮಾಡುತ್ತಿದ್ದಾರೆ ಎಂದು ಹೇಳಿದೆ.

ಇದನ್ನೂ ಓದಿ : ಗಾಜಾದಲ್ಲಿ ಮುಂದುವರಿದ ಇಸ್ರೇಲ್ ಮಾರಣಹೋಮ; ವಸತಿ ಕಟ್ಟಡದ ಮೇಲೆ ದಾಳಿಗೆ 100 ಕ್ಕೂ ಹೆಚ್ಚು ಮಂದಿ ಬಲಿ, ಸತ್ತವರಲ್ಲಿ ಮಕ್ಕಳೆ ಹೆಚ್ಚು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ನಿಯೋಗದಿಂದ ಕರ್ನಾಟಕ ರಾಜ್ಯಪಾಲರ ಭೇಟಿ: ‘ದ್ವೇಷ ಭಾಷಣ ತಡೆ’ ಮಸೂದೆಗೆ ಒಪ್ಪಿಗೆ ನೀಡದಂತೆ ಮನವಿ

ಬೆಂಗಳೂರು: ದ್ವೇಷ ಭಾಷಣ ಮಸೂದೆಯನ್ನು"ವಾಕ್ ಸ್ವಾತಂತ್ರ್ಯದ ಮೇಲಿನ ನೇರ ದಾಳಿ" ಮತ್ತು "ರಾಜಕೀಯ ಸೇಡಿನ ಸಾಧನ" ಎಂದು ಕರೆದಿರುವ ಬಿಜೆಪಿ ನಾಯಕರ ನಿಯೋಗವು ಸೋಮವಾರ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರನ್ನು ಭೇಟಿ...

ಟೆಕ್ಕಿ ಶರ್ಮಿಳಾ ಕೊಲೆ ಪ್ರಕರಣ : ಪಿಯು ವಿದ್ಯಾರ್ಥಿಯನ್ನು ಬಂಧಿಸಿದ ಪೊಲೀಸರು

ಬೆಂಗಳೂರಿನ ರಾಮಮೂರ್ತಿ ನಗರದ ಸುಬ್ರಹ್ಮಣ್ಯ ಬಡಾವಣೆಯಲ್ಲಿ 2026ರ ಜನವರಿ 3ರಂದು ರಾತ್ರಿ ನಡೆದ ಮಂಗಳೂರು ಮೂಲದ ಸಾಫ್ಟ್‌ವೇರ್ ಇಂಜಿನಿಯರ್ ಶರ್ಮಿಳಾ ಕುಶಾಲಪ್ಪ (34) ಅವರ ಕೊಲೆ ಪ್ರಕರಣವನ್ನು ಪೊಲೀಸರು ಬೇಧಿಸಿದ್ದಾರೆ. ಆರಂಭದಲ್ಲಿ, ಫ್ಲ್ಯಾಟ್‌ಗೆ ಬೆಂಕಿ...

ಎಸ್‌ಎಸ್‌ಎಲ್‌ಸಿ ಪ್ರಶ್ನೆ ಪತ್ರಿಕೆ ಸೋರಿಕೆ: ಸಾಮಾಜಿಕ ಮಾಧ್ಯಮದಲ್ಲಿ 200-500 ರೂ.ಗೆ ಮಾರಾಟ: ಆರು ಶಿಕ್ಷಕರು, ಇಬ್ಬರು ಅಪ್ರಾಪ್ತ ವಿದ್ಯಾರ್ಥಿಗಳ ಬಂಧನ

ಬೆಂಗಳೂರು: ಎಸ್‌ಎಸ್‌ಎಲ್‌ಸಿ ಪೂರ್ವಸಿದ್ಧತಾ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ತನಿಖೆಯ ಸಂದರ್ಭದಲ್ಲಿ ಆಘಾತಕಾರಿ ಮಾಹಿತಿಗಳು ಹೊರಬಿದ್ದಿವೆ. ವಿದ್ಯಾರ್ಥಿಗಳು ಪ್ರಶ್ನೆಪತ್ರಿಕೆಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಬಹಿರಂಗವಾಗಿ ಜಾಹೀರಾತು ಮಾಡಿ ಖಾಸಗಿ ಸಂದೇಶಗಳ ಮೂಲಕ 200 ರಿಂದ...

ಕರೂರ್ ಕಾಲ್ತುಳಿತ : ಸಿಬಿಐ ಮುಂದೆ ವಿಚಾರಣೆಗೆ ಹಾಜರಾದ ನಟ ವಿಜಯ್

ಕರೂರ್ ಕಾಲ್ತುಳಿತ ಘಟನೆಗೆ ಸಂಬಂಧಪಟ್ಟಂತೆ ನಟ ಹಾಗೂ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಮುಖ್ಯಸ್ಥ ವಿಜಯ್ ಸೋಮವಾರ (ಜ.12) ದೆಹಲಿಯ ಕೇಂದ್ರ ತನಿಖಾ ದಳ (ಸಿಬಿಐ) ಕಚೇರಿಗೆ ವಿಚಾರಣೆಗೆ ಹಾಜರಾಗಿದ್ದಾರೆ. ಚಾರ್ಟರ್ಡ್ ವಿಮಾನದಲ್ಲಿ...

ಜೂನ್‌ ಅಂತ್ಯದೊಳಗೆ ಜಿಬಿಎ ವ್ಯಾಪ್ತಿಯ ಪಾಲಿಕೆಗಳಿಗೆ ಚುನಾವಣೆ : ಗಡುವು ವಿಧಿಸಿದ ಸುಪ್ರೀಂ ಕೋರ್ಟ್

ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಐದು ನಗರ ಪಾಲಿಕೆಗಳಿಗೆ ಜೂನ್ ಅಂತ್ಯದೊಳಗೆ ಚುನಾವಣೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೋಮವಾರ (ಜ.12) ನಿರ್ದೇಶನ ನೀಡಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಸುಪ್ರೀಂ ಕೋರ್ಟ್ ನಲ್ಲಿ ಮಮತಾ ವಿರುದ್ಧ ಎಫ್‌ಐಆರ್ ದಾಖಲಿಸಲು ನಿರ್ದೇಶನ ಕೋರಿ ಅರ್ಜಿ ಸಲ್ಲಿಸಿದ ಇಡಿ

ನವದೆಹಲಿ: ಐ-ಪಿಎಸಿ ವಿರುದ್ಧದ ಬಹು-ರಾಜ್ಯ ಹಣ ವರ್ಗಾವಣೆ ಪ್ರಕರಣದಲ್ಲಿ ತನಿಖೆಗೆ ಅಡ್ಡಿಪಡಿಸಿದ, ಸಾಕ್ಷ್ಯಗಳನ್ನು ತಿರುಚಿದ ಮತ್ತು ನಾಶಪಡಿಸಿದ ಆರೋಪದ ಮೇಲೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಡಿಜಿಪಿ ಮತ್ತು ಕೋಲ್ಕತ್ತಾ ಪೊಲೀಸ್...

ಭಾರತಕ್ಕಿಂತ ಯಾವುದೇ ಪಾಲುದಾರ ದೇಶ ಮುಖ್ಯವಲ್ಲ, ವ್ಯಾಪಾರ ಮಾತುಕತೆ ಪುನರಾರಂಭ: ಅಮೆರಿಕ ರಾಯಭಾರಿ ಸೆರ್ಗಿಯೊ ಗೋರ್

"ವಾಷಿಂಗ್ಟನ್‌ಗೆ ಭಾರತಕ್ಕಿಂತ ಅಗತ್ಯವಾದ ದೇಶ ಇನ್ನೊಂದಿಲ್ಲ ಮತ್ತು ಎರಡೂ ಕಡೆಯವರು ವ್ಯಾಪಾರ ಒಪ್ಪಂದವನ್ನು ದೃಢೀಕರಿಸುವಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ" ಎಂದು ಅಮೆರಿಕದ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್ ಸೋಮವಾರ ಹೇಳಿದ್ದಾರೆ. ಅಮೆರಿಕ ರಾಯಭಾರ ಕಚೇರಿಯ ನೌಕರರು...

ಬಿಷಪ್ ಫ್ರಾಂಕೊ ಮುಲಕ್ಕಲ್ ಅತ್ಯಾಚಾರ ಪ್ರಕರಣ : ಒಂಬತ್ತು ವರ್ಷಗಳ ಬಳಿಕ ಮೌನ ಮುರಿದ ಸಂತ್ರಸ್ತೆ, ಕಾನೂನು ಹೋರಾಟ ಮುಂದುವರಿಸುವುದಾಗಿ ಹೇಳಿಕೆ

ಬಿಷಪ್ ಫ್ರಾಂಕೊ ಮುಲಕ್ಕಲ್ ವಿರುದ್ದದ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಕ್ರೈಸ್ತ ಸನ್ಯಾಸಿನಿ ಒಂಬತ್ತು ವರ್ಷಗಳ ನಂತರ ಮೊದಲ ಬಾರಿಗೆ ಸಾರ್ವಜನಿಕವಾಗಿ ಮಾತನಾಡಿದ್ದು, ಫ್ರಾಂಕೊ ಮುಲಕ್ಕಲ್ ಅವರನ್ನು ನ್ಯಾಯಾಲಯ ಖುಲಾಸೆಗೊಳಿಸಿದ್ದಕ್ಕೆ ನಾನು ದಂಗಾಗಿದ್ದೇನೆ. ನ್ಯಾಯಕ್ಕಾಗಿ...

‘ವೆನೆಜುವೆಲಾದ ಹಂಗಾಮಿ ಅಧ್ಯಕ್ಷ’ ಎಂದು ಘೋಷಿಸಿಕೊಂಡ ಡೊನಾಲ್ಡ್ ಟ್ರಂಪ್ 

ಸೋಮವಾರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ರುತ್ ಸೋಶಿಯಲ್‌ನಲ್ಲಿ ತಮ್ಮದೇ ಆದ ವಿಕಿಪೀಡಿಯಾ ಪುಟದ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ, ಅದರಲ್ಲಿ "ವೆನೆಜುವೆಲಾದ ಹಂಗಾಮಿ ಅಧ್ಯಕ್ಷ" ಎಂಬ ಹುದ್ದೆಯನ್ನು ಹೊಂದಿರುವ ಅವರ ಚಿತ್ರವಿದೆ. ಪೋಸ್ಟ್‌ನಲ್ಲಿ ಟ್ರಂಪ್...

ಪೊಲೀಸ್ ತುರ್ತು ವಾಹನದ ಚಾಲಕ ಸೇರಿ ಐವರಿಂದ ಯುವತಿ ಮೇಲೆ ಅತ್ಯಾಚಾರ!

ಪೊಲೀಸ್ ತುರ್ತು ಸೇವೆ (112) ವಾಹನದ ಚಾಲಕ ಸೇರಿದಂತೆ ಐವರು ಪುರುಷರು 19 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್‌ಗಢದ ಕೋರ್ಬಾ ಜಿಲ್ಲೆಯ ಬಂಕಿಮೊಂಗ್ರ ಪ್ರದೇಶದಲ್ಲಿ ನಡೆದಿದೆ. ಜನವರಿ...