Homeಅಂತರಾಷ್ಟ್ರೀಯಕಾಶ್ಮೀರದ ಪ್ರಸ್ತುತ ಪರಿಸ್ಥಿತಿ ಬಗ್ಗೆ ಯೂರೋಪಿಯನ್ ಒಕ್ಕೂಟ ನಿಯೋಗ ಹೇಳಿದ್ದೇನು?

ಕಾಶ್ಮೀರದ ಪ್ರಸ್ತುತ ಪರಿಸ್ಥಿತಿ ಬಗ್ಗೆ ಯೂರೋಪಿಯನ್ ಒಕ್ಕೂಟ ನಿಯೋಗ ಹೇಳಿದ್ದೇನು?

- Advertisement -
- Advertisement -

‘ನಾವು ಕಣಿವೆಯಲ್ಲಿನ ವಸ್ತುಸ್ಥಿತಿ ಮತ್ತು ನೈಜ ಸಂಗತಿಗಳನ್ನು ತಿಳಿದುಕೊಳ್ಳಲು ಬಂದಿದ್ದೇವೆಯೇ ಹೊರತು, ಭಾರತದ ರಾಜಕೀಯದಲ್ಲಿ ಹಸ್ತಕ್ಷೇಪ ಮಾಡಲು ಅಲ್ಲ’ ಎಂದು ಯೂರೋಪಿಯನ್ ಒಕ್ಕೂಟ ನಿಯೋಗ ಸ್ಪಷ್ಟನೆ ನೀಡಿದೆ. 23 ಮಂದಿಯನ್ನೊಳಗೊಂಡ ನಿಯೋಗ ಕಾಶ್ಮೀರ ಭೇಟಿಗೆ ಬಂದಿದೆ. ಯೂರೋಪಿಯನ್ ಒಕ್ಕೂಟ ನಿಯೋಗಕ್ಕೆ ಅನುಮತಿ ನೀಡಿರುವ ಕ್ರಮಕ್ಕೆ ವಿಪಕ್ಷಗಳು ಕೆಂಡಕಾರುತ್ತಿವೆ. ಹೀಗಾಗಿ ಕಾಶ್ಮೀರ ಭೇಟಿಗೆ ಬಂದಿರುವ ನಿಯೋಗ ತಮ್ಮ ನಿಲುವು ಹಾಗೂ ತಮ್ಮ ಉದ್ದೇಶವನ್ನು ಸ್ಪಷ್ಟಪಡಿಸಿದೆ.

ಕಾಶ್ಮೀರದ ಕುಲ್ಗಾಂ ನಲ್ಲಿ 6ಮಂದಿ ಕಾರ್ಮಿಕರನ್ನು ಹತ್ಯೆಗೈದಿರುವ ಕ್ರಮವನ್ನು ನಿಯೋಗ ಖಂಡಿಸಿದೆ. ಅಲ್ಲದೇ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿ, ನಾವು ನಿಮ್ಮ ಸ್ನೇಹಿತರು. ಇಲ್ಲಿನ ಸತ್ಯಾಸತ್ಯತೆ ತಿಳಿದು ವರದಿ ನೀಡಲು ಬಂದಿದ್ದೇವೆ ಎಂದು ಹೇಳಿದೆ. ಸಾರ್ವಜನಿಕರನ್ನು ಭೇಟಿ ಮಾಡಿ, ಶಾಲೆ-ಕಾಲೇಜುಗಳು ಆರಂಭಗೊಳ್ಳುವುದು, ಭ್ರಷ್ಟಾಚಾರ ಸೇರಿದಂತೆ ಹಲವು ವಿಷಯಗಳ ಬಗ್ಗೆ ಸಭೆ ನಡೆಸುವುದಾಗಿ ತಿಳಿಸಿತು.

ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ನಿಯೋಗ, ಭಯೋತ್ಪಾದನೆ ಎನ್ನುವುದು ಫ್ರಾನ್ಸ್, ಯೂರೋಪ್ ನಲ್ಲೂ ಇದೆ. ಕಾಶ್ಮೀರ ಮತ್ತೊಂದು ಅಫ್ಘಾನಿಸ್ತಾನ ಆಗುವುದು ಬೇಡ. ಕಾಶ್ಮೀರದಲ್ಲಿ ನಡೆಯುತ್ತಿರುವ ಭಯೋತ್ಪಾದನೆ ಕೇವಲ ಭಾರತದ ಸಮಸ್ಯೆ ಅಲ್ಲ. ಇದು ಅಂತಾರಾಷ್ಟ್ರೀಯ ಸಮುದಾಯದ ಸಮಸ್ಯೆ. ಉಗ್ರರ ವಿರುದ್ಧ ಭಾರತ ತೆಗೆದುಕೊಳ್ಳುವ ಪರಿಹಾರ ಕ್ರಮಗಳಿಗೆ ನಿಯೋಗ ಬೆಂಬಲ ಸೂಚಿಸಲಿದೆ ಎಂದು ಹೇಳಿದರು. ಕಾಶ್ಮೀರದ ಸ್ಥಿತಿ ಉತ್ತಮವಾಗಿದೆ. ಮುಂದಿನ ಬಾರಿ ಇನ್ನಷ್ಟು ನಾಗರಿಕರನ್ನು ಭೇಟಿ ಮಾಡುತ್ತೇವೆ ಎಂದರು.

ಇನ್ನು ಕಾಶ್ಮೀರಕ್ಕೆ ಭೇಟಿ ನೀಡಿರುವ ಯೂರೋಪಿಯನ್ ಒಕ್ಕೂಟ ನಿಯೋಗದ ಕಾರ್ಯಕ್ರಮಗಳು ಲೈವ್ ಅಲ್ಲ. ರೆಕಾರ್ಡ್ ಮಾಡಿರುವ ಕಾರ್ಯಕ್ರಮವನ್ನು ಬಿತ್ತರಿಸಲಾಗುತ್ತಿದೆ. ಕೆಲ ಮಾಧ್ಯಮಗಳಿಗೆ ಮಾತ್ರ ವರದಿಗೆ ಅವಕಾಶ ನೀಡಲಾಗಿದೆ. ಸ್ಥಳೀಯ ಕಾಶ್ಮೀರ ಮಾಧ್ಯಮದವರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಿಲ್ಲ. ವರದಿಗೆ ಅವಕಾಶ ನೀಡಿಲ್ಲ ಎಂದು ಖ್ಯಾತ ಪತ್ರಕರ್ತೆ ನಿಧಿ ರಾಜದನ್ ಟ್ವೀಟ್ ಮಾಡಿದ್ದಾರೆ.

ಆಗಸ್ಟ್ 5ರಂದು 370 ಆರ್ಟಿಕಲ್ ರದ್ದಾದ ಬಳಿಕ ಇದೇ ಮೊದಲ ಬಾರಿಗೆ ಅಂತಾರಾಷ್ಟ್ರೀಯ ನಿಯೋಗವೊಂದು ಕಾಶ್ಮೀರಕ್ಕೆ ಭೇಟಿ ನೀಡಿದೆ. ಕಾಶ್ಮೀರ ಕೇಂದ್ರಾಡಳಿತ ಪ್ರದೇಶವಾದ ನಂತರ ಹಲವು ಸಮಸ್ಯೆಗಳನ್ನು ಎದುರಿಸುತ್ತಿದೆ. ಶಾಲೆ, ಕಾಲೇಜು, ವ್ಯಾಪಾರ-ವಹಿವಾಟು, ಇಂಟರ್ನೆಟ್ ಬಂದ್ ಮಾಡಲಾಗಿತ್ತು. ಮತ್ತು ಹಲವು ಸೂಕ್ಷ್ಮ ಪ್ರದೇಶಗಳಲ್ಲಿ ನಿರ್ಬಂಧ ಹೇರಲಾಗಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...

ಕರ್ನಾಟಕದಲ್ಲಿ 2 ಗಂಟೆಗಳ ಬೃಹತ್ ಕಾರ್ಯಾಚರಣೆ: 800 ಬಾಲಕಾರ್ಮಿಕರ ರಕ್ಷಣೆ; ಬೆಂಗಳೂರಿನಲ್ಲೇ 503 ಮಕ್ಕಳು

ಬಾಲಕಾರ್ಮಿಕ ಪದ್ಧತಿಯ ವಿರುದ್ಧ ಕರ್ನಾಟಕ ಪೊಲೀಸರು ಹಾಗೂ ಕಾರ್ಮಿಕ ಇಲಾಖೆ ಶನಿವಾರ ರಾಜ್ಯಾದ್ಯಂತ ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ 800 ಮಕ್ಕಳನ್ನು ರಕ್ಷಿಸಲಾಗಿದೆ. ರಾಜ್ಯದ 962 ಪೊಲೀಸ್ ಠಾಣೆಗಳು ಹಾಗೂ ಘಟಕಗಳ ವ್ಯಾಪ್ತಿಯಲ್ಲಿ 16,951...

‘ದಿ ಹಿಂದೂ’, ‘ದೈನಿಕ್ ಭಾಸ್ಕರ್’ ಗಳಲ್ಲಿ ಅತ್ಯಾಚಾರ ಅಪರಾಧಿ ಗುರ್ಮೀತ್ ರಾಮ್ ರಹೀಮ್ ಸಮರ್ಥಿಸುವ ಜಾಹೀರಾತು: ಓದುಗರಲ್ಲಿ ಕ್ಷಮೆಯಾಚಿಸಿದ ‘ದಿ ಹಿಂದೂ’

ನವದೆಹಲಿ: ಇಬ್ಬರು ಮಹಿಳಾ ಶಿಷ್ಯೆಯರ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಶಿಕ್ಷೆಗೊಳಗಾಗಿರುವ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಸಿಂಗ್ ಅವರನ್ನು ಸಮರ್ಥಿಸುವ ರೀತಿಯಲ್ಲಿ ಪೂರ್ಣ ಪುಟದ ಮುಖಪುಟ ಜಾಹೀರಾತು...

ದ್ವಿ-ರಾಷ್ಟ್ರ ಪರಿಹಾರ : ಬ್ರಿಕ್ಸ್ ನಿಲುವು ಸ್ವಾಗತಿಸಿದ ಪ್ಯಾಲೆಸ್ತೀನ್

ಪ್ಯಾಲೆಸ್ತೀನ್-ಇಸ್ರೇಲ್ ವಿವಾದಕ್ಕೆ ದ್ವಿ-ರಾಷ್ಟ್ರ ಪರಿಹಾರವನ್ನು ಕಂಡುಕೊಳ್ಳುವಂತೆ ಕರೆ ನೀಡಿರುವ ಬ್ರಿಕ್ಸ್ (BRICS) ಜಂಟಿ ಘೋಷಣೆಯನ್ನು ಪ್ಯಾಲೆಸ್ತೀನ್ ವಿದೇಶಾಂಗ ಮತ್ತು ವಲಸಿಗರ ಸಚಿವಾಲಯವು ಮುಕ್ತಕಂಠದಿಂದ ಸ್ವಾಗತಿಸಿದೆ. ಬ್ರಿಕ್ಸ್‌ ಶೃಂಗಸಭೆ, ಜೆರುಸಲೆಮ್ ಸೇರಿದಂತೆ ಪ್ಯಾಲೆಸ್ತೀನಿಯರನ್ನು ಅವರದೇ ಭೂಮಿಯಿಂದ...

ತೆಲಂಗಾಣ| ಅಂತರ್ಜಾತಿ ವಿವಾಹಕ್ಕೆ ಯುವತಿ ಕುಟುಂಬದ ವಿರೋಧ; ದಲಿತ ಯುವಕನ ಮನೆ ಧ್ವಂಸ

ಹೈದರಾಬಾದ್ ಸಮೀಪದ ಗದ್ವಾಲ್ ಜಿಲ್ಲೆಯ ರೆಪಲ್ಲೆ ಗ್ರಾಮದಲ್ಲಿ ಅಂತರ್ಜಾತಿ ವಿವಾಹದ ಹಿನ್ನೆಲೆಯಲ್ಲಿ ದಲಿತ ಯುವಕನ ಮನೆಯನ್ನು ಧ್ವಂಸಗೊಳಿಸಿರುವ ಘಟನೆಗೆ ಸಂಬಂಧಿಸಿದಂತೆ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ದಲಿತ ಬಹುಜನ ಫ್ರಂಟ್, ಹ್ಯೂಮನ್...

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...