HomeUncategorizedಸಿನಿಮಾ ರಂಗ - ಹಾಸ್ಯ, ವಿಮರ್ಷೆ, ಆಶಯ

ಸಿನಿಮಾ ರಂಗ – ಹಾಸ್ಯ, ವಿಮರ್ಷೆ, ಆಶಯ

- Advertisement -
- Advertisement -

ಫಿಟ್‍ನೆಸ್ ಫಜೀತಿಗಳು

ಸಿನಿಮಾಕ್ಕಾಗಿ ತಮ್ಮ ದೇಹವನ್ನೇ ಏರುಪೇರು ಮಾಡಿಕೊಳ್ಳುವ ಈಗಿನ ಹೀರೋಗಳ ಕಾಯಿಲೆ ಯಾರ್ಯಾರಿಗೋ ಹಬ್ಬಿ, ಏನೇನೋ ರಾದ್ಧಾಂತ ಮಾಡುತ್ತಿದೆ. ಸಿನಿಮಾದ ಪಾತ್ರಕ್ಕಾಗಿ ದಪ್ಪ-ಸಣ್ಣ ಆಗುವುದು, ದಾಡಿ ಬೆಳೆಸುವುದು, ಹುಚ್ಚಾಪಟ್ಟೆ ಹೇರ್‍ಸ್ಟೈಲ್ ಮಾಡಿಕೊಳ್ಳೋದು ಮಾಮೂಲಿ. ಪಾತ್ರವೊಂದು ನಿಜವಾಗಿಯೂ ಅಂತಹ ಮಾರ್ಪಾಟನ್ನು ಬಯಸಿದರೆ ತಪ್ಪೇನು ಇಲ್ಲ. ಆದರೆ ಸ್ನಾಯುಗಳನ್ನು ತೋರಿಸೋದೆ ಟ್ರೆಂಡ್ ಆಗಿದೆ ಅನ್ನೋ ಕಾರಣಕ್ಕೆ, ಅಗತ್ಯವಿಲ್ಲದಿದ್ದರು ನಾಯಕರುಗಳು `ಮೈ’ಮಾಟ ತೋರಿಸುವ ದೃಶ್ಯಗಳನ್ನು ತುರುಕಿ ಸಿನಿಮಾವನ್ನೇ ಹಾಳು ಮಾಡುವ ಖಯಾಲಿ ಈಚೀಚೆಗೆ ಹೆಚ್ಚಾಗಿದೆ. ಜಿಮ್‍ಗಳಲ್ಲಿ ಕಸರತ್ತು ಮಾಡಿಕೊಂಡಿದ್ದ ಹೀರೋಗಳು ಈಗ ಫಿಟ್ನೆಸ್ ಹೆಸರಲ್ಲಿ ಒಬ್ಬರಿಗೊಬ್ಬರ ಕಾಲೆಳೆದುಕೊಂಡು ಅಭಿಮಾನಿಗಳಿಗೆ ಪುಕ್ಕಟೆ ಮನರಂಜನೆ ಕೊಡಲು ಶುರು ಮಾಡಿದ್ದಾರೆ. ಮೊನ್ನೆ ಸುದೀಪ್ ಇಂತದ್ದೇ ಹುಚ್ಚಾಟ ಮಾಡಿಕೊಂಡು ಯಶ್ ಮತ್ತು ಉಪೇಂದ್ರರಿಗೆ ಫಿಟ್ನೆಸ್ ಸವಾಲು ಹಾಕಲು ಹೋಗಿ, ಅವರಿಂದ ಡಿಫೆರೆಂಟ್ ಆಗಿಯೇ ಉತ್ತರ ಪಡೆದು ಮುಖಕ್ಕೆ ಟವೆಲ್ ಮುಚ್ಕೊಳೋ ಕೆಲಸ ಮಾಡಿಕೊಂಡರು.
ಈಗ ಈ ಚಾಲೆಂಜ್ ದಹಲಿಯ ಸಂಸತ್‍ವರೆಗೂ ತಲುಪಿದೆ. ವಿಶ್ವಗುರು ಆಗಲು ಹೊರಟಿರುವ ನಮ್ಮ ದೇಶದ ಪ್ರಧಾನ ಸೇವಕ ನರೇಂದ್ರ ಮೋದಿಯವರು ಭಾರತ ತಂಡದ ಕ್ರಿಕೆಟ್ ಆಟಗಾರ ವಿರಾಟ್ ಕೊಹ್ಲಿಗೆ ವರ್ಕ್‍ಔಟ್ ಚಾಲೆಂಜ್ ಹಾಕಿ ವಿಚಿತ್ರ ಟ್ರೆಂಡೊಂದನ್ನು ಹುಟ್ಟುಹಾಕಿದ್ದಾರೆ. ದೇಶಸೇವೆ ಮಾಡುವ ಬದಲು ದೇಹಸೇವೆ ಮಾಡಿಕೊಳ್ಳಲು ಮುಂದಾಗಿರುವ ಅವರು ಇದೀಗ ಇರಲಾರದೆ ಇರುವೆ ಬಿಟ್ಟುಕೊಂಡವರಂತೆ ರಾಷ್ಟ್ರದ ಜನರೆದುರು ಕಾಮಿಡಿ ಪೀಸ್ ಆಗ್ಬಿಟ್ಟಿದ್ದಾರೆ. ಹುಲ್ಲು, ನೀರು, ಕಾಂಕ್ರಿಟ್ ಮೇಲೆ ನಡೆಯುತ್ತಾ ಕಲ್ಲು ಬಂಡೆಯ ಮೇಲೆ ಯೋಗ ವ್ಯಾಯಾಮ ಮಾಡುತ್ತಿದ್ದ ಮೋದಿಯನ್ನು ಚುಡಾಯಿಸಲು ಮೋದಿಯನ್ನೇ ಅನುಸರಿಸಿ ಕೆಲವರು ಕಾಮಿಡಿ ವಿಡಿಯೊ ಮಾಡಿದರೆ, ಕೆಲವರು ಫೋಟೋಶಾಪ್ ಮಾಡಿ ಅವರನ್ನು ಹೀನಾಮಾನ ಅಣಕಿಸುತ್ತಿದ್ದಾರೆ. ಪ್ರಧಾನ ಸೇವಕರಿಗೆ ಇದೆಲ್ಲಾ ಬೇಕಿತ್ತಾ ಅನ್ನೋದೆ ಮಿಲಿಯನ್ ಡಾಲರ್ ಪ್ರಶ್ನೆ.

****

ದರ್ಶನ್ ಪ್ರಪಂಚ ಮತ್ತಷ್ಟು ಹಿಗ್ಗಲಿ

ಸಿನಿಮಾ ಅಂದ್ರೆ ಬೆಳ್ಳೆತೆರೆಗೆ ಸೀಮಿತವಾದ ಕ್ಷೇತ್ರವಲ್ಲ. ಅದು ಬದುಕಿನ ಪ್ರತಿಫಲನ, ಪೀಳಿಗೆಗಳ ಪಾಠ. ಅದೆಷ್ಟೊ ಜನರ ಬದುಕನ್ನೆ ಬದಲಿಸಿದ ಹಲವಾರು ಸಿನಿಮಾಗಳು ನಿದರ್ಶನ ನಮ್ಮ ಕಣ್ಮುಂದಿದೆ. ರಾಜ್‍ಕುಮಾರ್ ತಮ್ಮ ನಟನೆಯ ಹೊರತಾಗಿಯೂ ಜನರಿಗೆ ಹತ್ತಿರವಾದದ್ದು ಅವರ ಕಾಳಜಿ, ಕಳಕಳಿ, ಮುಗ್ಧತೆಯಿಂದ. ಅವುಗಳಿಂದ ಪ್ರಭಾವಿತರಾದ ಅಪಾರ ಅಭಿಮಾನಿ ಸಮೂಹವಿದೆ. ನಟ ತನ್ನ ಪಾತ್ರಗಳನ್ನೂ ಮೀರಿ ಬೆಳೆಯುವ ಸಾಧ್ಯತೆಯನ್ನು ರಾಜ್, ವಿಷ್ಣು, ಶಂಕರ್‍ನಾಗ್‍ರಂತಹ ದಿಗ್ಗಜರು ತೋರಿಸಿಕೊಟ್ಟು ಹೋಗಿದ್ದಾರೆ. ಆದರೆ ಈಗಿನ ನಟರಲ್ಲಿ ಅಂತದ್ದನ್ನು ಕಾಣೋದೆ ಅಪರೂಪವಾಗಿದೆ. ಇವತ್ತಿನ ದಿನಗಳಲ್ಲಿ ಯಶೋಗಾಥೆ, ಪ್ರಕಾಶ್‍ರಾಜ್ ಫೌಂಡೇಷನ್‍ನಂತಹ ಜನರಿಗೆ ಉಪಕಾರಿಯಾಗುವಂತಹ, ಜನಪರವಾಗಿ ಮಾತನಾಡುವ, ಜನರ ಹೋರಾಟಗಳಲ್ಲಿ ಭಾಗಿಯಾಗುವ ಹಲವು ಸ್ಯಾಂಡಲ್‍ವುಡ್‍ನ ಹೀರೋಗಳ ಮಧ್ಯೆ ತನ್ನ ಸ್ನೇಹಿತರ ಬಳಗಕ್ಕೆ ಒಂದಲ್ಲ ಒಂದು ರೀತಿಯಲ್ಲಿ ನೆರವು ನೀಡುತ್ತಾ ಬಂದಿರುವ ದರ್ಶನ್, ಸಿನಿಮಾಗಳಲ್ಲಿ ಅವಕಾಶ ಸಿಗದೆ ಜೀವನಕ್ಕಾಗಿ ಟ್ಯಾಕ್ಸಿ ಡ್ರೈವಿಂಗ್ ಮಾಡುತ್ತಿದ್ದ ಹಿರಿಯ ನಟ ಅಶ್ವಥ್ ಅವರ ಮಗ ಶಂಕರ್ ಅಶ್ವಥ್‍ಗೆ ಪಿ.ಕುಮಾರ್ ಆಕ್ಷನ್ ಕಟ್ ಹೇಳುತ್ತಿರುವ ತನ್ನ ಯಜಮಾನ ಸಿನಿಮಾದಲ್ಲಿ ಅವಕಾಶ ಕಲ್ಪಿಸಿಕೊಟ್ಟಿದ್ದಾರೆ. ತನಗೆ ಅವಕಾಶ ಕಲ್ಪಿಸಿಕೊಟ್ಟ ದರ್ಶನ್‍ರನ್ನ ಶಂಕರ್ ಚಿತ್ರರಂಗದ ದಿಗ್ವಿಜಯರಾದ ರಾಜ್, ವಿಷ್ಣುರ ಸಾಲಿಗೆ ಸೇರಿಸಿ ಹೊಗಳಿದ್ದಾರೆ. ನಟರಾದವರಿಗೆ ನಿಜಕ್ಕೂ ತಮ್ಮ ಸುತ್ತಲಿನ ಪ್ರಪಂಚದ ಬಗ್ಗೆ ಇಂತಹ ಕಾಳಜಿ ಇರಬೇಕು. ಆದರೆ ಆ ಸುತ್ತಲಿನ ಪ್ರಪಂಚ ಕೇವಲ ತಮ್ಮ ಬಂಧು, ಸ್ನೇಹಿತರು, ಪಾಲುದಾರರಿಗೆ ಮಾತ್ರ ಸೀಮಿತವಾದರೆ ಅದರಿಂದ ಹೆಚ್ಚೇನು ಲಾಭವಿಲ್ಲ. ದರ್ಶನ್‍ರ ಈ ಕಾಳಜಿಯ ಪ್ರಪಂಚ ಮತ್ತಷ್ಟು ಹಿಗ್ಗುವಂತಾದಾಗ ಅವರು ನಿಜಕ್ಕೂ ಮಹನೀಯರ ಸಾಲಿನಲ್ಲಿ ನಿಲ್ಲಲು ಅರ್ಹರೆನಿಸುತ್ತಾರೆ. ಹಾಗಾಗಲಿ ಎಂಬುದೇ ನಮ್ಮ ಹಾರೈಕೆ.

****

ತೆಲುಗಿನ NTR ಜೀವನ ‘ಚಿತ್ರ’ದಲ್ಲಿ ಕನ್ನಡದ ರಾಜ್ ಪಾತ್ರ

ಟಾಲಿಹುಡ್‍ನ ಸೂಪರ್ ಸ್ಟಾರ್ ನಟ ಎನ್.ಟಿ.ರಾಮದೇವ್‍ರವರ ಬಯೋಪಿಕ್ ಸಿನಿಮಾ ಈಗಾಗಲೇ ಸೆಟ್ಟೇರಿದ್ದು, ಚಿತ್ರೀಕರಣ ಕೂಡ ಆರಂಭವಾಗಿದೆ. ಈ ಚಿತ್ರ ಎನ್‍ಟಿಆರ್ ಅವರ ಖಾಸಗೀ ಜೀವನದ ಹಲವು ವಿಷಯಗಳನ್ನು ಒಳಗೊಂಡಿದೆ. ಅವರ ಬಾಲ್ಯ, ಸಿನಿಮಾ ರಾಜಕೀಯ ಮತ್ತು ಜೀವನದಲ್ಲಾದ ವಿವಾದಗಳನ್ನು ಒಳಗೊಂಡಿದೆ. ಎನ್‍ಟಿಆರ್ ಬಯೋಪಿಕ್ ಚಿತ್ರದಲ್ಲಿ ಎನ್‍ಟಿಆರ್ ಬಣ್ಣದ ಜೀವನದಲ್ಲಿ ಪ್ರಭಾವ ಬೀರಿದ ಚಿತ್ರರಂಗದ ಸ್ಟಾರ್‍ಗಳ ಪಾತ್ರಗಳನ್ನು ಸಹ ತೋರಿಸಲಾಗಿದ್ದು. ಕನ್ನಡದ ಸ್ಯಾಂಡಲ್‍ಹುಡ್‍ನ ದಿಗ್ಗಜ ಡಾ.ರಾಜ್‍ಕುಮಾರ್ ಅವರ ಪಾತ್ರವೂ ಬರಲಿದೆ. ಕನ್ನಡ ಚಿತ್ರರಂಗವನ್ನು ದಾಟಿ ಹೊರಹೋಗದ ರಾಜಣ್ಣ ಎನ್‍ಟಿಆರ್ ಬದುಕಿನಲ್ಲಿ ಬೀರಿದ ಪಾತ್ರವೇನು, ಚಿತ್ರದಲ್ಲಿ ರಾಜ್ ಅವರ ಪಾತ್ರಕ್ಕೆ ಬಣ್ಣ ಹಚ್ಚುವವರಾರು? ಎಂಬ ಪ್ರಶ್ನೆ ಕನ್ನಡಿಗರಲ್ಲಿ ಕಾಡತ್ತಿದೆ. ಆದರೆ ಈ ಸಿನಿಮಾಕ್ಕೆ ಆಕ್ಷನ್ ಕಟ್ ಹೇಳುತ್ತಿರುವ ನಿರ್ದೇಶಕ ತೇಜ್ ಮಹಿತಿ ಬಿಟ್ಟುಕೊಟ್ಟಿಲ್ಲ.

****

`ಕಲಿ’ಗೆ ಅದೇನು ಕೇಡುಗಾಲ ಬಂತು

ಗಿಮಿಕ್ ನಿರ್ದೇಶಕ ಪ್ರೇಮ್‍ರವರ ಡ್ರೀಮ್ ಪ್ರಾಜೆಕ್ಟ್ ಎಂದೇ ಸುದ್ದಿಯಾಗಿದ್ದ ಸುದೀಪ್ ಹಾಗೂ ಶಿವರಾಜ್ ಕುಮಾರ್ ಅಭಿನಯಿಸಲಿದ್ದ ‘ಕಲಿ’ ಚಿತ್ರ ಮುಹೂರ್ತ ಮುಗಿಸಿ ಸುಮ್ಮನಾಗಿಬಿಟ್ಟಿದೆ. ಮುಹೂರ್ತ ಮುಗಿದು ಎರಡು ವರ್ಷವಾದರೂ ಚಿತ್ರ ಸೆಟ್ಟೇರಿದಿದ್ದರಿಂದ ಕಲಿ ಚಿತ್ರದ ಅಬ್ಬರದ ಕನಸು ಕಂಡಿದ್ದ ಸುದೀಪ್ ಅಭಿಮಾನಿಗಳು ಚಿತ್ರ ಸೆಟ್ಟೇರುವುದೋ , ಇಲ್ಲವೋ ಎಂಬ ಪ್ರಶ್ನೆ ಕಾಡುತ್ತಲೇ ಇತ್ತು. ಇಷ್ಟಾದರೂ ಚಿತ್ರ ಬಗ್ಗೆ ಸುದೀಪ್ ಆಗಲೀ, ಪ್ರೇಮ್ ಆಗಲಿ ತುಟಿ ಬಿಚ್ಚಿರಲಿಲ್ಲ. ನಿರ್ಮಾಪಕ ಮನೋಹರ್ ಮಾತ್ರ ಚಿತ್ರ ನಿಂತು ಹೋಗಿಲ್ಲ ಡಿಲೇ ಆಗಿದೆ ಅಷ್ಡೇ ಎಂದಿದ್ದರು.
ಆದರೆ ಸುದೀಪ್ ಈಗ ಚಿತ್ರ ಸೆಟ್ಟೇರುವುದಿಲ್ಲ, ಸಿನಿಮಾ ಡ್ರಾಪ್ ಆಗಿದೆ ಎಂದಿದ್ದಾರೆ. ಸುವರ್ಣ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ನಂ.1 ಯಾರಿ ವಿತ್ ಶಿವಣ್ಣ, ಕಾರ್ಯಕ್ರಮಕ್ಕೆ ಭಾಗವಹಿಸಿದ್ದ ಸುದೀಪ್ ಸತ್ಯ ಬಿಚ್ಚಿಟ್ಟಿದ್ದಾರೆ. ಮಹಾಭಾರತ ಯಾವುದೋ ಭಾಗವನ್ನು ಆಯ್ದುಕೊಂಡು ಸ್ಕ್ರಿಪ್ಟ್ ರೆಡಿಯಾಗಿತ್ತು, ಅದನ್ನು ಸುದೀಪ್ ಮೆಚ್ಚಿಕೊಂಡಿದ್ದರು. ಆದರೆ ಮುಹೂರ್ತದ ನಂತರ ಈ ಸ್ಕ್ರಿಪ್ಟ್ ಸರಿಯಿಲ್ಲ, ಯಾವುದೊ ಒಂದು ಪಾಸಿಟಿವ್ ಆಗಿಲ್ಲ ಎನ್ನಿಸುತ್ತಿತ್ತು ಹಾಗೂ ಮಹಾಭಾರತದ ಆ ಭಾಗವನ್ನು ಮುಟ್ಟಬೇಡಿ ಅದು ಸರಿಯಿಲ್ಲ, ಆ ಸ್ಕ್ರಿಪ್ಟ್ ಪಾಸಿಟಿವ್ ಆದುದ್ದಲ್ಲ ಎಂದು ತುಂಬಾ ಜನ ಹೇಳಿದ್ದರು, ಹಾಗಾಗಿ ಈ ಸ್ಕ್ರಿಪ್ಟ್ ಬೇಡ ಬೇರೆಯದು ಮಾಡೋಣ ಎಂದು ಪ್ರೇಮ್ ಅವರನ್ನು ಒಪ್ಪಿಸಿದ್ದೇನೆ ಎಂದಿದ್ದಾರೆ.

– ಸೋಮಶೇಖರ್ ಚಲ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...