Homeಮುಖಪುಟಭಾರತದಲ್ಲಿ ಮಕ್ಕಳ ಕುಬ್ಜತೆ ಹೆಚ್ಚಳಕ್ಕೆ ಜಾತಿ ತಾರತಮ್ಯ ಕಾರಣ : ಅಧ್ಯಯನ ವರದಿ

ಭಾರತದಲ್ಲಿ ಮಕ್ಕಳ ಕುಬ್ಜತೆ ಹೆಚ್ಚಳಕ್ಕೆ ಜಾತಿ ತಾರತಮ್ಯ ಕಾರಣ : ಅಧ್ಯಯನ ವರದಿ

- Advertisement -
- Advertisement -

ಭಾರತವು ಅರ್ಥಿಕವಾಗಿ ಸದೃಢವಾಗುತ್ತಿರುವ ಹೊರತಾಗಿಯೂ ದೇಶದಲ್ಲಿ ಪ್ರಾಯಕ್ಕೆ ಸರಿಯಾದ ದೇಹದ ಬೆಳವಣಿಗೆಯಿರದ (ಕುಬ್ಜ) ಮಕ್ಕಳ ಸಂಖ್ಯೆಯು ಸಬ್-ಸಹರನ್ ಆಫ್ರಿಕಾದ ರಾಷ್ಟ್ರಗಳ ಮಕ್ಕಳಿಗಿಂತ ಹೆಚ್ಚಿದೆ. ಭಾರತದಲ್ಲಿ ಜಾತಿ ತಾರತಮ್ಯ ಅಧಿಕವಾಗಿರುವುದೇ ಇದಕ್ಕೆ ಕಾರಣವೆಂದು ‘ಜರ್ನಲ್ ಆಫ್ ಇಕನಾಮಿಕ್ಸ್, ರೇಸ್ ಆ್ಯಂಡ್ ಪಾಲಿಸಿ‘ ನಿಯತಕಾಲಿಕೆ ಅಕ್ಟೋಬರ್ 26ರಂದು ಪ್ರಕಟಿಸಿದ ಅಧ್ಯಯನ ವರದಿಯಯಲ್ಲಿ ತಿಳಿಸಿದೆ.

ಅರ್ಥಶಾಸ್ತ್ರಜ್ಞರಾದ ಅಶ್ವಿನಿ ದೇಶಪಾಂಡೆ ಮತ್ತು ರಾಜೇಶ್ ರಾಮಚಂದ್ರನ್ ಅವರು ರಚಿಸಿರುವ ಅಧ್ಯಯನ ವರದಿಯಲ್ಲಿ, ಪರಿಶಿಷ್ಟ ಜಾತಿಗಳು ಮತ್ತು ಪರಿಶಿಷ್ಟ ಪಂಗಡಗಳಂತಹ ಐತಿಹಾಸಿಕವಾಗಿ ಕಡೆಗಣಿಸಲ್ಪಟ್ಟಿರುವ ಸಮುದಾಯಗಳ ಮಕ್ಕಳು ಕುಳ್ಳಗಿರುವ ಸಾಧ್ಯತೆಯು, ಪ್ರಬಲ ಜಾತಿಯ ಮಕ್ಕಳಿಗಿಂತ ಶೇ.50ರಷ್ಟು ಅಧಿಕವೆಂದು  ಹೇಳಲಾಗಿದೆ.

ಪ್ರಬಲ ಪಂಗಡಗಳ ಶೇ.27ರಷ್ಟು ಮಕ್ಕಳಲ್ಲಿ ಕುಬ್ಜತೆಯುು ಕಂಡು ಬಂದಿದೆ. ಸಬ್‌-ಸಹರನ್ ಆಫ್ರಿಕಾದಲ್ಲಿ ಶೇ.34ರಷ್ಟು ಮಕ್ಕಳು ವಯಸ್ಸಿಗಿಂತ ಕಡಿಮೆ ಎತ್ತರವನ್ನು ಹೊಂದಿದ್ದರೆ, ಭಾರತದಲ್ಲಿ ಅಂತಹ ಮಕ್ಕಳ ಸಂಖ್ಯೆ ಒಟ್ಟಾರೆ ಶೇ.36 ಆಗಿದೆ. ದೀರ್ಘಕಾಲದ ಅಥವಾ ಪುನರಾವರ್ತಿತ ಅಪೌಷ್ಟಿಕತೆಯು ಮಕ್ಕಳ ಕುಬ್ಜತನಕ್ಕೆ ಕಾರಣವೆಂದು ವರದಿಯು ವಿವರಿಸಿದೆ.

ಸಬ್-ಸಹರನ್ ಆಫ್ರಿಕಾದ ಮಕ್ಕಳು ಭಾರತದಲ್ಲಿರುವುದಕ್ಕಿಂತ ‘ಕೆಟ್ಟ ರೋಗ ಪರಿಸರ ಮತ್ತು ಕಡಿಮೆ ಕ್ಯಾಲೋರಿ ಸಮಸ್ಯೆ’ಯನ್ನು ಎದುರಿಸುತ್ತಿದ್ದಾರೆ ಎಂದು ವರದಿ ತಿಳಿಸಿದೆ.

ಭಾರತದ ಮಕ್ಕಳಲ್ಲಿ ಹೆಚ್ಚಿನ ಕುಬ್ಜತೆ ಕಂಡು ಬರುತ್ತಿರುವುದನ್ನು ‘ಇಂಡಿಯನ್ ಎನಿಗ್ಮಾ’ಎಂದು ಕರೆದಿರುವ ವರದಿಯು, ಕೇವಲ ಪ್ರಬಲ ವರ್ಗದ ಮಕ್ಕಳನ್ನು ಆಫ್ರಿಕಾದೊಂದಿಗೆ ಹೋಲಿಸಿದರೆ ಭಾರತದ ಸ್ಥಿತಿಯು ಚೆನ್ನಾಗಿದೆ ಎಂದಿದೆ.

ವರದಿಯಲ್ಲಿ ಬಹಿರಂಗಗೊಂಡಿರುವ ವಿಚಾರ ಆಶ್ಚರ್ಯಪಡುವಂತಲ್ಲ. ಸಾಮಾನ್ಯವಾಗಿ ಭಾರತದಲ್ಲಿ ಪ್ರಬಲ ವರ್ಗದ ಮಕ್ಕಳು ಉತ್ತಮ ಆಹಾರ ಪಡೆಯುತ್ತಿದ್ದಾರೆ. ರೋಗಗಳಿಂದ ರಕ್ಷಣೆ ಪಡೆಯುತ್ತಿದ್ದಾರೆ. ಸಾಮಾಜಿಕ ಮತ್ತು ಆರ್ಥಿಕವಾಗಿ ಹಿಂದುಳಿದಿರುವ ವರ್ಗದ ಮತ್ತು ಬುಡಕಟ್ಟು ವರ್ಗದ ಮಕ್ಕಳು ಪೌಷ್ಟಿಕ ಆಹಾರ ಮತ್ತು ರೋಗದ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ ಎಂದು ವರದಿ ಹೇಳಿದೆ.

ದೇಶಪಾಂಡೆ ಮತ್ತು ರಾಮಚಂದ್ರನ್ ಅವರ ಅಧ್ಯಯನ ವರದಿಯನ್ನು ಭಾರತದ ಐದು ವರ್ಷದೊಳಗಿನ 2 ಲಕ್ಷ ಮಕ್ಕಳನ್ನು ಒಳಗೊಂಡ ರಾಷ್ಟ್ರವ್ಯಾಪಿ ಗೃಹ ಸಮೀಕ್ಷೆಯ ಆಧಾರದ ಮೇಲೆ ರಚಿಸಲಾಗಿದೆ. ಇದು 2019 ರಿಂದ 2021ರವರೆಗಿನ ಭಾರತದ ರಾಷ್ಟ್ರೀಯ ಆರೋಗ್ಯ ಮತ್ತು ಜನಸಂಖ್ಯಾ ಸಮೀಕ್ಷೆಗಳ ಮೇಲಿನ ಸಂಶೋಧನೆಗಳನ್ನು ಆಧರಿಸಿದೆ. ಅಲ್ಲದೆ, ಸಬ್‌-ಸಹರನ್ ಆಫ್ರಿಕಾ ದೇಶಗಳ 2015ರ ನಂತರದ ದತ್ತಾಂಶಗಳನ್ನು ಇದಕ್ಕಾಗಿ ವಿಶ್ಲೇಷಿಸಲಾಗಿದೆ.

ಭಾರತದಲ್ಲಿ ವಯಸ್ಸಿಗೆ ಅನುಗುಣವಾದ ಎತ್ತರವನ್ನು ಹೊಂದಿರದ ಮಕ್ಕಳ ಸಂಖ್ಯೆ 2022ರಲ್ಲಿ 31.7 ಶೇಖಡ ಆಗಿದ್ದರೆ, ಸಬ್‌-ಸಹರನ್ ಆಫ್ರಿಕಾದ ರಾಷ್ಟ್ರಗಳಲ್ಲಿ ಅಂತಹ ಮಕ್ಕಳ ಸಂಖ್ಯೆ 31.3 ಶೇ. ಆಗಿದೆ ಎಂದು ವಿಶ್ವಸಂಸ್ಥೆಯ ಮಕ್ಕಳ ನಿಧಿ (ಯುನಿಸೆಫ್), ವಿಶ್ವ ಆರೋಗ್ಯ ಸಂಸ್ಥೆ ಹಾಗೂ ವಿಶ್ವಬ್ಯಾಂಕ್ ಪ್ರಕಟಿಸಿದ ಮಕ್ಕಳ ಪೌಷ್ಟಿಕತೆ ಕುರಿತ ಜಂಟಿ ಅಂದಾಜು ವರದಿ ತಿಳಿಸಿದೆ.

ಅಧ್ಯಯನ ವರದಿ ಪ್ರಕಟಿಸಿರುವ ಅರ್ಥಶಾಸ್ತ್ರಜ್ಞರಾದ ಅಶ್ವಿನಿ ದೇಶಪಾಂಡೆ ಹರಿಯಾಣದ ಅಶೋಕ ವಿಶ್ವವಿದ್ಯಾನಿಲಯದ ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥರಾಗಿದ್ದರೆ, ರಾಮಚಂದ್ರನ್ ಅವರು ಮೊನಾಶ್ ವಿಶ್ವವಿದ್ಯಾಲಯ ಮಲೇಷ್ಯಾದಲ್ಲಿ ಹಿರಿಯ ಉಪನ್ಯಾಸಕರಾಗಿದ್ದಾರೆ.

ಭಾರತದಲ್ಲಿ ಮಕ್ಕಳಲ್ಲಿ ಹೆಚ್ಚಾಗುತ್ತಿರುವ ಕುಬ್ಜತೆಯನ್ನು ಪರಿಹರಿಸಲು ಏನಾದರು ನೀತಿ ರೂಪಿಸುವುದಾದರೆ, ಅದರಲ್ಲಿ ಜಾತಿಯನ್ನು ಮುಖ್ಯವಾಗಿ ಪರಿಗಣಿಸಬೇಕು ಎಂದು ಅಧ್ಯಯನ ವರದಿ ಅವರು ಸಲಹೆ ನೀಡಿದ್ದಾರೆ.

ಇದನ್ನೂ ಓದಿ : ‘ಜೈ ಶ್ರೀ ರಾಮ್’ ಘೋಷಣೆ ಕೂಗಿಲ್ಲ ಎಂಬ ಕಾರಣಕ್ಕೆ ಊಟ ನಿರಾಕರಿಸಿದ ಎನ್‌ಜಿಒ ಸಿಬ್ಬಂದಿ; ವಿಡಿಯೊ ವೈರಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...