Homeಮುಖಪುಟಉತ್ತರಾಖಂಡ | 17 ವರ್ಷದ ಬಾಲಕಿಯೊಂದಿಗೆ ಸಂಬಂಧ ಬೆಳೆಸಿದ್ದ 10ಕ್ಕೂ ಹೆಚ್ಚು ಯುವಕರಿಗೆ ಎಚ್‌ಐವಿ ಸೋಂಕು

ಉತ್ತರಾಖಂಡ | 17 ವರ್ಷದ ಬಾಲಕಿಯೊಂದಿಗೆ ಸಂಬಂಧ ಬೆಳೆಸಿದ್ದ 10ಕ್ಕೂ ಹೆಚ್ಚು ಯುವಕರಿಗೆ ಎಚ್‌ಐವಿ ಸೋಂಕು

- Advertisement -
- Advertisement -

ಹೆರಾಯಿನ್‌ಗೆ ವ್ಯಸನಿಯಾಗಿದ್ದ 17 ವರ್ಷದ ಬಾಲಕಿಯೊಂದಿಗೆ ದೈಹಿಕ ಸಂಬಂಧ ಬೆಳೆಸಿದ್ದ 10ಕ್ಕೂ ಹೆಚ್ಚು ಯುವಕರು ಎಚ್‌ಐವಿ / ಏಡ್ಸ್‌ಗೆ ತುತ್ತಾಗಿರುವ ಘಟನೆ ಉತ್ತರಾಖಂಡ ರಾಜ್ಯದ ನೈನಿತಾಲ್ ಜಿಲ್ಲೆಯ ರಾಮನಗರದಲ್ಲಿ ನಡೆದಿದೆ. ಘಟನೆಯು ಪ್ರದೇಶದಾದ್ಯಂತ ಆಘಾತವನ್ನು ಉಂಟುಮಾಡಿದೆ.

“ಇದು ಗೊಂದಲಕಾರಿ ಘಟನೆಯಾಗಿದ್ದು, ನಾವು ತಕ್ಷಣ ಕ್ರಮ ತೆಗೆದುಕೊಳ್ಳುತ್ತಿದ್ದೇವೆ. ಹುಡುಗಿಯ ಚಟವು ಈ ದುರದೃಷ್ಟಕರ ಪರಿಸ್ಥಿತಿಗೆ ಕಾರಣ. ನಾವು ಅವರಿಗೆ ಸಲಹೆ ಮತ್ತು ಬೆಂಬಲವನ್ನು ಒದಗಿಸಲು ಕೆಲಸ ಮಾಡುತ್ತಿದ್ದೇವೆ” ಎಂದು ಜಿಲ್ಲಾ ಆರೋಗ್ಯಾಧಿಕಾರಿ ಹೇಳಿದ್ದಾರೆ.. ಉತ್ತರಾಖಂಡ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಹೆರಾಯಿನ್ ಚಟಕ್ಕೆ ಒಳಗಾಗಿರುವ 17 ವರ್ಷದ ಬಾಲಕಿ ತನ್ನ ಚಟಕ್ಕೆ ಹಣ ಹೊಂದಿಸಲು ಯುವಕರೊಂದಿಗೆ ಶಾರೀರಿಕ ಸಂಬಂಧದಲ್ಲಿ ತೊಡಗಿದ್ದಳು ಎನ್ನಲಾಗಿದೆ. ಯುವಕರು ಅನಾರೋಗ್ಯಕ್ಕೆ ಒಳಗಾದಾಗ ಆಸ್ಪತ್ರೆಗೆ ದಾಖಲಾಗಿದ್ದು, ಈ ವೇಳೆ ನಡೆಸಿದ ಪರೀಕ್ಷೆಯ ವೇಳೆ ಯುವಕರಿಗೆ ಎಚ್‌ಐವಿ ಇರುವುದು ದೃಢವಾಗಿದೆ ಎಂದು ವರದಿ ಉಲ್ಲೇಖಿಸಿದೆ.

ನೈನಿತಾಲ್‌ನ ಮುಖ್ಯ ವೈದ್ಯಾಧಿಕಾರಿ ಡಾ.ಹರೀಶ್ ಚಂದ್ರ ಪಂತ್ ಮಾತನಾಡಿ, ಪ್ರದೇಶದಲ್ಲಿ ಎಚ್‌ಐವಿ ಪ್ರಕರಣಗಳಲ್ಲಿ ಹಠಾತ್ ಹೆಚ್ಚಳದ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ. “ಸಾಮಾನ್ಯವಾಗಿ, ವಾರ್ಷಿಕವಾಗಿ ಸುಮಾರು 20 HIV ಪಾಸಿಟಿವ್ ಪ್ರಕರಣಗಳು ಪತ್ತೆಯಾಗುತ್ತವೆ. ಆದಾಗ್ಯೂ, ಈ ವರ್ಷ ಕೇವಲ ಐದು ತಿಂಗಳೊಳಗೆ, 19 ಹೊಸ ಪ್ರಕರಣಗಳು ವರದಿಯಾಗಿವೆ.” ಎಂದು ಅವರು ಹೇಳಿದ್ದಾರೆ.

ಅಧಿಕಾರಿಗಳು ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ್ದು, ಸಮಸ್ಯೆಯನ್ನು ಪರಿಹರಿಸಲು ವಿವಿಧ ಪ್ರದೇಶಗಳಲ್ಲಿ ಕೌನ್ಸೆಲಿಂಗ್ ಸೇವೆಗಳನ್ನು ಪ್ರಾರಂಭಿಸಿದ್ದಾರೆ ಎಂದು ಅವರು ಒತ್ತಿ ಹೇಳಿದರು.

“ಎಚ್‌ಐವಿ ಪ್ರಕರಣಗಳಲ್ಲಿ ಈ ಹಠಾತ್ ಹೆಚ್ಚಳದಿಂದ, ಅದರಲ್ಲೂ ವಿಶೇಷವಾಗಿ ವಾರ್ಷಿಕವಾಗಿ ವರದಿಯಾಗುವ ಪ್ರಕರಣಗಳು ಈಗಲೆ ವರದಿಯಾಗಿದ್ದು ಆತಂಕಕಾರಿ” ಎಂದು ಡಾ. ಪಂತ್ ಹೇಳಿದ್ದಾರೆ. ಜಿಲ್ಲಾ ಆರೋಗ್ಯ ಇಲಾಖೆಯು ಈಗ ಪೀಡಿತ ಸಮುದಾಯಗಳಿಗೆ ಬೆಂಬಲ ಮತ್ತು ಶಿಕ್ಷಣವನ್ನು ಒದಗಿಸಲು ಕೆಲಸ ಮಾಡುತ್ತಿದೆ ಎಂದು ಅವರು ಹೇಳಿದ್ದಾರೆ.

“ಕಳೆದ 17 ತಿಂಗಳುಗಳಲ್ಲಿ, ರಾಮನಗರದಲ್ಲಿ 45 ವ್ಯಕ್ತಿಗಳು ಎಚ್‌ಐವಿ ಪಾಸಿಟಿವ್ ಆಗಿದ್ದಾರೆ ಎಂದು ವರದಿಯಾಗಿದೆ. ಇದು ಆರೋಗ್ಯ ಅಧಿಕಾರಿಗಳಲ್ಲಿ ಕಳವಳವನ್ನು ಉಂಟುಮಾಡಿದೆ” ಎಂದು ಆರೋಗ್ಯ ಇಲಾಖೆಯ ಹಿರಿಯ ಮೂಲಗಳು ಬಹಿರಂಗಪಡಿಸಿವೆ.

“ಯುವಕರು ಅನಾರೋಗ್ಯಕ್ಕೆ ಒಳಗಾಗಲು ಪ್ರಾರಂಭವಾದಾಗ ಆಸ್ಪತ್ರೆಗೆ ದಾಖಲಾಗಿದ್ದರು. ಈ ವೇಳೆ ನಡೆಸಿದ ಪರೀಕ್ಷೆಗಳು ಅವರು ಎಚ್ಐವಿ ಪಾಸಿಟಿವ್ ಆಗಿರುವುದು ದೃಢಪಡಿಸಿವೆ. ಇನ್ನೂ ಹೆಚ್ಚು ಆತಂಕದ ಸಂಗತಿಯೆಂದರೆ, ಈ ವ್ಯಕ್ತಿಗಳಲ್ಲಿ ಹಲವಾರು ವ್ಯಕ್ತಿಗಳು ಮದುವೆಯಾಗಿದ್ದು, ಅವರ ಸಂಗಾತಿಗಳು ಸಹ ಈ ಕಾಯಿಲೆಗೆ ತುತ್ತಾಗಿದ್ದಾರೆ” ಎಂದು ಮೂಲಗಳು ಹೇಳಿವೆ.

ಇದು ನಮ್ಮ ಸಮುದಾಯಕ್ಕೆ ಎಚ್ಚರಿಕೆಯ ಕರೆಗಂಟೆಯಾಗಿದೆ ಎಂದು ನೈನಿತಾಲ್‌ನ ಮುಖ್ಯ ವೈದ್ಯಾಧಿಕಾರಿ ಡಾ.ಹರೀಶ್ ಚಂದ್ರ ಪಂತ್ ಹೇಳಿದ್ದಾರೆ. “ನಾವು ಜಾಗೃತಿ ಮೂಡಿಸಲು, ಸಮಾಲೋಚನೆ ನೀಡಲು ಮತ್ತು ಈ ಸಾಂಕ್ರಮಿಕವನ್ನು ತಡೆಗಟ್ಟಲು ದಣಿವರಿಯಿಲ್ಲದೆ ಕೆಲಸ ಮಾಡುತ್ತಿದ್ದೇವೆ.” ಎಂದು ಅವರು ತಿಳಿಸಿದ್ದಾರೆ.

“ರಾಮನಗರ ಎಚ್‌ಐವಿ ಸಾಂಕ್ರಮಿಕ್ಕೆ ಸಂಬಂಧಿಸಿ ಅನೇಕ ಯುವಕರು ಅವರ ಸಾಮಾನ್ಯ ಲಿಂಕ್ ಅನ್ನು ಹಂಚಿಕೊಂಡಿದ್ದಾರೆ. ಅದರ ಮೂಲಕ ಅವರ ಅರಿವಿಗೆ ಬಾರದಂತೆ ರೋಗಕ್ಕೆ ತುತ್ತಾಗಿದ್ದಾರೆ. ಸಮಾಲೋಚನೆಯ ಅವಧಿಯಲ್ಲಿ, ಅವರೆಲ್ಲರೂ ಬಾಲಕಿಯೊಂದಿಗೆ ದೈಹಿಕ ಸಂಬಂಧಗಳನ್ನು ಹೊಂದಿರುವ ಬಗ್ಗೆ ನಾವು ಕಂಡುಕೊಂಡಿದ್ದೇವೆ. ಬಾಲಕಿಯು ಮಾದಕ ದ್ರವ್ಯದ ಚಟ ಹೊಂದಿದ್ದರು ಎಂದು ಇವರ್ಯಾರಿಗೂ ತಿಳಿದಿರಲಿಲ್ಲ” ಎಂದು ಆರೋಗ್ಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

“ಚಟದಿಂದ ಹೊರಬರಲಾರದ ಬಾಲಕಿಯು ತನ್ನ ಚಟಕ್ಕೆ ಹಣ ಹೊಂದಿಸಲು ಈ ಸಂಬಂಧಗಳಲ್ಲಿ ತೊಡಗಿಸಿಕೊಂಡಿದ್ದರು. ದುರದೃಷ್ಟವಶಾತ್, ಯುವಕರು ಸುಲಭವಾಗಿ ಇದಕ್ಕೆ ಬಲಿಯಾಗಿದ್ದಾರೆ” ಎಂದು ಅಧಿಕಾರಿ ತಿಳಿಸಿದ್ದಾರೆ.

ಇದನ್ನೂ ಓದಿ: ಶಕ್ತಿ ಯೋಜನೆ ಮರುಪರಿಶೀಲನೆ : ಡಿ.ಕೆ ಶಿವಕುಮಾರ್ ಸುಳಿವು

ಶಕ್ತಿ ಯೋಜನೆ ಮರುಪರಿಶೀಲನೆ : ಡಿ.ಕೆ ಶಿವಕುಮಾರ್ ಸುಳಿವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಳಿಘಾಟ್‌ನಲ್ಲಿ ‘ಮೀನಿನ ಪ್ರಸಾದ’ ಸ್ವೀಕರಿಸಿದ ಸುವೇಂದು ಅಧಿಕಾರಿ; ಬಾಗೇಶ್ವರ್ ಬಾಬಾ ‘ಮಾಂಸಾಹಾರ’ ವಿವಾದಕ್ಕೆ ಹೊಸ ತಿರುವು!

ದುರ್ಗಾ ಪೂಜೆ ಸಂದರ್ಭದಲ್ಲಿ ಮೀನು–ಮಾಂಸ ಸೇವನೆ ಕುರಿತು ಬಾಗೇಶ್ವರ್ ಧಾಮದ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿರುವ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ವಿವಾದಕ್ಕೆ ಕಾರಣವಾಗಿರುವ ನಡುವೆಯೇ, ಮುಖ್ಯಮಂತ್ರಿ ಸುವೇಂದು ಅಧಿಕಾರಿ ಕಾಳಿಘಾಟ್ʼನ ಕಾಳಿ ದೇವಸ್ಥಾನದಲ್ಲಿ...

ಎಸ್‌ಐಆರ್‌: ಹೈದರಾಬಾದ್, ಸಿಕಂದರಾಬಾದ್‌ನಲ್ಲಿ ಲಕ್ಷಾಂತರ ಮತದಾರರ ಹೆಸರು ಅಳಿಸುವಿಕೆ; 2029ರ ಚುನಾವಣೆಗೂ ಮುನ್ನ ಗಂಭೀರ ಆತಂಕ

ಹೈದರಾಬಾದ್: ತೆಲಂಗಾಣದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಭಾರೀ ಪ್ರಮಾಣದಲ್ಲಿ ಹೆಸರುಗಳನ್ನು ತೆಗೆದುಹಾಕಲಾಗಿರುವುದು ಮುಂದಿನ ಚುನಾವಣೆಯ ರಾಜಕೀಯ ಲೆಕ್ಕಾಚಾರಗಳ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯನ್ನು ಹುಟ್ಟುಹಾಕಿದೆ....

9/11 ದಾಳಿಗೆ 25 ವರ್ಷ: ‘ಭಯೋತ್ಪಾದನೆ ವಿರುದ್ಧದ ಯುದ್ಧ’ ಮತ್ತು ಕುಸಿದ ಪ್ರಜಾಪ್ರಭುತ್ವದ ಮೌಲ್ಯಗಳು

ನ್ಯೂಯಾರ್ಕ್‌ನ ಪ್ರತಿಷ್ಠಿತ ವರ್ಲ್ಡ್ ಟ್ರೇಡ್ ಸೆಂಟರ್ ಅವಳಿ ಗೋಪುರಗಳ ಮೇಲೆ ನಡೆದ ಭೀಕರ ಭಯೋತ್ಪಾದನಾ ದಾಳಿಗೆ ಇಂದಿಗೆ ಭರ್ತಿ 25 ವರ್ಷಗಳು ತುಂಬಿವೆ. ಈ ಕಾಲು ಶತಮಾನದ ಅವಧಿಯಲ್ಲಿ 'ಭಯೋತ್ಪಾದನೆ ವಿರುದ್ಧದ ಜಾಗತಿಕ...

‘ಈ ಪ್ರಕ್ರಿಯೆಯೇ ಶಿಕ್ಷೆಯಾಗಿದೆ’: ಉಮರ್ ಖಾಲಿದ್ ದೀರ್ಘ ಜೈಲುವಾಸದ ಬಗ್ಗೆ ಮಾಜಿ ನ್ಯಾಯಮೂರ್ತಿ ದೀಪಕ್ ಗುಪ್ತಾ ತೀವ್ರ ಟೀಕೆ

ನವದೆಹಲಿ: ಮಾನವ ಹಕ್ಕುಗಳ ಕಾರ್ಯಕರ್ತ, ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಅವರ ದೀರ್ಘಕಾಲದ ವಿಚಾರಣಾಪೂರ್ವ ಬಂಧನ, ಎಲ್ಗರ್ ಪರಿಷತ್ ಪ್ರಕರಣದ ಆರೋಪಿಗಳ ವರ್ಷಗಳ ಜೈಲುವಾಸ ಹಾಗೂ ವೈಯಕ್ತಿಕ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ನ್ಯಾಯಾಂಗದ...

‘ದೇಶವಿರೋಧಿ ಮನಸ್ಥಿತಿಯಲ್ಲ’: ಜಿ.ಎನ್. ಸಾಯಿಬಾಬಾ ಸ್ಮರಣೆ ಪ್ರಕರಣದಲ್ಲಿ ‘ಟಿಸ್’ ಮಾಜಿ ವಿದ್ಯಾರ್ಥಿಗೆ ಜಾಮೀನು!

ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ದಿವಂಗತ ಜಿ.ಎನ್. ಸಾಯಿಬಾಬಾ ಅವರ ಸ್ಮರಣಾರ್ಥ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (TISS) ಕ್ಯಾಂಪಸ್‌ನಲ್ಲಿ ನಡೆದ ಅನುಮತಿರಹಿತ ಕಾರ್ಯಕ್ರಮಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧಿತರಾಗಿದ್ದ ಮಾಜಿ ವಿದ್ಯಾರ್ಥಿ...

ಜನಾಕ್ರೋಶದ ನಡುವೆಯೇ ಎಸ್ಐಆರ್ ಸಮರ್ಥಿಸಿಕೊಂಡ ಮುಖ್ಯ ಚುನಾವಣಾ ಆಯುಕ್ತ: ‘ರಾಜಕೀಯ ದಾಳಿಗಳಿಂದ ಆಯೋಗ ವಿಚಲಿತವಾಗದು’ ಎಂದ ಜ್ಞಾನೇಶ್ ಕುಮಾರ್

ಅಹಮದಾಬಾದ್: ದೇಶದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ರಾಜಕೀಯ ಪಕ್ಷಗಳು, ನಾಗರಿಕ ಸಂಘಟನೆಗಳು ಹಾಗೂ ವಿವಿಧ ವಲಯಗಳಿಂದ ತೀವ್ರ ಟೀಕೆಗಳು ವ್ಯಕ್ತವಾಗುತ್ತಿರುವ ನಡುವೆಯೇ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಕರ್ನಾಟಕ ಎಸ್ಐಆರ್: ಹೆಸರಿನ ಸಣ್ಣ ವ್ಯತ್ಯಾಸಕ್ಕಾಗಿ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರಿಗೆ ನೋಟಿಸ್; ‘ಸುಳ್ಳು ಮಾಹಿತಿ ನೀಡಿದರೆ ಜೈಲು’ ಎಂಬ ಬೆದರಿಕೆ

ಮೈಸೂರು: ಸುಮಾರು ಮೂರೂವರೆ ದಶಕಗಳ ಕಾಲ ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಸೇವೆ ಸಲ್ಲಿಸಿ, ಸ್ವತಃ ಚುನಾವಣಾ ಪ್ರಕ್ರಿಯೆಯ ಜವಾಬ್ದಾರಿಯುತ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರೇ ಇದೀಗ ತಮ್ಮ...

SIR : ತಾಯಿಯೊಂದಿಗೆ ಮ್ಯಾಪಿಂಗ್ ಮಾಡಿದರೂ ಅಜ್ಜನ ವಯಸ್ಸಿನ ವ್ಯತ್ಯಾಸದ ನೆಪ ಹೇಳಿ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ದಿನಕ್ಕೊಂದು ವಿಲಕ್ಷಣ ಹಾಗೂ ಯಾಂತ್ರಿಕ ದೋಷಗಳನ್ನು ಹೊರಹಾಕುತ್ತಿದ್ದು, ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಲು ಬಯಸುವ ನೈಜ ಮತದಾರರನ್ನು ಆತಂಕಕ್ಕೆ ತಳ್ಳುತ್ತಿದೆ. ಬ್ಯಾಟರಾಯನಪುರ...

ಬ್ಯಾಂಕ್ ಮುಷ್ಕರ: ದೇಶಾದ್ಯಂತ ಶಾಖಾ ಸೇವೆಗಳಿಗೆ ಅಡಚಣೆ; ವಾರಾಂತ್ಯ, ಗಣೇಶ ಚತುರ್ಥಿಯಿಂದ ಹಲವು ದಿನ ಸೇವೆ ವ್ಯತ್ಯಯ 

ನವದೆಹಲಿ: ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಕರೆ ನೀಡಿರುವ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಸೆಪ್ಟೆಂಬರ್ 11ರಂದು (ಇಂದು) ನಡೆಯುತ್ತಿದ್ದು, ದೇಶದಾದ್ಯಂತ ಬ್ಯಾಂಕ್ ಗ್ರಾಹಕರ ಸಾಮಾನ್ಯ ಸೇವೆಗಳ ಮೇಲೆ ಪರಿಣಾಮ ಬೀರುವ...

ಹನೂರು ಶೂಟೌಟ್ ಪ್ರಕರಣ: ಮೂವರು ಅರಣ್ಯ ಸಿಬ್ಬಂದಿಗೆ ನಿರೀಕ್ಷಣಾ ಜಾಮೀನು.!

ಕಾವೇರಿ ವನ್ಯಜೀವಿ ಅಭಯಾರಣ್ಯದ ಹನೂರು ವ್ಯಾಪ್ತಿಯಲ್ಲಿ ಮೂವರು ಮೃತಪಟ್ಟಿದ್ದ ವಿವಾದಾತ್ಮಕ ಗುಂಡಿನ ದಾಳಿ ಪ್ರಕರಣಕ್ಕೆ ಇದೀಗ ಕಾನೂನು ತಿರುವು ಸಿಕ್ಕಿದೆ. ಪ್ರಕರಣದಲ್ಲಿ ಆರೋಪ ಎದುರಿಸುತ್ತಿರುವ ಮೂವರು ಅರಣ್ಯ ಸಿಬ್ಬಂದಿಗೆ ಕೊಳ್ಳೇಗಾಲದ ಮೊದಲ ಹೆಚ್ಚುವರಿ...