Homeಮುಖಪುಟಉಚಿತ ಬಸ್‌ ಪಾಸ್‌ - ದಿಲ್ಲಿ ಮಹಿಳೆಯರು ದಿಲ್‌ ಖುಷ್‌.. : ಮುಂದಿನ ಕೊಡುಗೆ ವಿದ್ಯಾರ್ಥಿಗಳು...

ಉಚಿತ ಬಸ್‌ ಪಾಸ್‌ – ದಿಲ್ಲಿ ಮಹಿಳೆಯರು ದಿಲ್‌ ಖುಷ್‌.. : ಮುಂದಿನ ಕೊಡುಗೆ ವಿದ್ಯಾರ್ಥಿಗಳು ಮತ್ತು ಹಿರಿಯ ನಾಗರಿಕರಿಗೆ…

ಉಚಿತ ಬಸ್ ಪ್ರಯಾಣವು ಮಹಿಳೆಯರಿಗೆ ಸ್ವಾತಂತ್ರ್ಯವನ್ನು ಮತ್ತು ಅವರ ಕನಸುಗಳನ್ನು ಈಡೇರಿಸುವ ಅವಕಾಶವನ್ನು ನೀಡುತ್ತದೆ...

- Advertisement -
- Advertisement -

ನಿನ್ನೆ ತಾನೇ ದಿಲ್ಲಿ ಮಹಿಳೆಯರಿಗೆ ಉಚಿತ ಬಸ್‌ ಪಾಸ್‌ ನೀಡುವ ಮೂಲಕ ಲಕ್ಷಾಂತರ ಜನರ ಮನಗೆದ್ದ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ವಿದ್ಯಾರ್ಥಿಗಳು ಮತ್ತು ಹಿರಿಯ ನಾಗರಿಕರಿಗೂ ಉಚಿತ ಬಸ್‌ ಪಾಸ್‌ ನೀಡಲು ಚಿಂತನೆ ನಡೆಸಿದ್ದಾರೆ.

ಉಚಿತ ಬಸ್‌ ಪ್ರಯಾಣ ಯೋಜನೆ ಜಾರಿಯಾದ 8 ಗಂಟೆಗಳಲ್ಲಿ 2.2 ಲಕ್ಷ ಮಹಿಳೆಯರು ಈ ಯೋಜನೆಯ ಪ್ರಯೋಜನೆ ಪಡೆದಿದ್ದಾರೆ. ಅವರಲ್ಲಿ ಕೆಲವರು ತಮ್ಮದೇ ಮಾತುಗಳನ್ನು ಯೋಜನೆಯ್ನು ಶ್ಲಾಘಿಸಿದ್ದಾರೆ. ಕೆಲವೊಂದು ಇಲ್ಲಿವೆ.

ದೆಹಲಿಯ ಬಸ್ಸುಗಳಲ್ಲಿ ಮಹಿಳೆಯರಿಗೆ ಪ್ರಯಾಣ ಮತ್ರ ಉಚಿತವಲ್ಲ, ಅವರ ಸುರಕ್ಷತೆಯೂ ಖಾತ್ರಿ ಇದೆ. ಹೇಗೆಂದರೆ ಪ್ರಯಾಣಿಕರ ಸುರಕ್ಷತೆ ಖಚಿತಪಡಿಸಿಕೊಳ್ಳಲು ಪ್ರತಿ ಬಸ್‌ಗಳಲ್ಲಿಯೂ ಸಹ ಮಾರ್ಷಲ್‌ಗಳನ್ನು ನಿಯೋಜಿಸಲಾಗಿದೆ ಎಂದು ದೆಹಲಿಯ ಶ್ವೇತ ಗೋಸ್ವಾಮಿಯವರು ಹರ್ಷ ವ್ಯಕ್ತಪಡಿಸಿದ್ದರೆ.

ಎಎಪಿ ದೆಹಲಿಯ ಉಚಿತ ಬಸ್ ಪ್ರಯಾಣದಿಂದ ಜೀವನದ ಮೇಲೆ ಹೇಗೆ ಪರಿಣಾಮ ಬೀರುತ್ತವೆ ಎಂದರೆ “24 ವರ್ಷ ವಯಸ್ಸಿನ ವಿನಿತಾ ರಿಸೆಪ್ಷನಿಸ್ಟ್ ಆಗಿ ಕೆಲಸ ಮಾಡುತ್ತಾ ತಿಂಗಳಿಗೆ 12 ಸಾವಿರ ರೂ ಸಂಪಾದಿಸುತ್ತಾಳೆ. ಆದರೆ ಅದರಲ್ಲಿ ಎರಡೂವರೆ ಸಾವಿರ ರೂಗಳನ್ನು ಪ್ರಯಾಣಕ್ಕಾಗಿ ಖರ್ಚು ಮಾಡುತ್ತಿದ್ದಳು. ಈಗ ಆ ಹಣ ಉಳಿದಿದ್ದು ಅವಳು ಖುಷಿಯಾಗಿದ್ದಾಳೆ” ಎಂದು  ಸುಕೃತಿ ದ್ವಿವೇದಿ ಎಂಬುವವರು ಟ್ವೀಟ್‌ ಮಾಡಿದ್ದಾರೆ.

ಮಹಿಳೆಯರಿಂದ ನೇರ ಪ್ರತಿಕ್ರಿಯೆ ಪಡೆಯಲು ನಾನು ಇದೀಗ ಕೆಲವು ಬಸ್‌ಗಳನ್ನು ಹತ್ತಿದ್ದೇನೆ. ವಿದ್ಯಾರ್ಥಿಗಳು, ದುಡಿಯುವ ಮಹಿಳೆಯರು, ಶಾಪಿಂಗ್‌ಗೆ ಹೋಗುವ ಮಹಿಳೆಯರು ಮಾತ್ರವಲ್ಲದೆ, ನಿಯಮಿತವಾಗಿ ಆಸ್ಪತ್ರೆಗೆ ಭೇಟಿ ನೀಡಬೇಕಾದ ಕೆಲವರನ್ನು ನಾನು ಭೇಟಿಯಾದೆ. ಅವರು ಸಹ ಸಂತೋಷವಾಗಿದ್ದಾರೆ ಎಂದು ಅರವಿಂದ್‌ ಕೇಜ್ರಿವಾಲ್‌ ಟ್ವೀಟ್‌ ಮಾಡಿದ್ದಾರೆ.

ಒಟ್ಟು ವರ್ಕ್‌ ಪೋರ್ಸ್‌‌ನಲ್ಲಿ ದಿಲ್ಲಿಯ ಮಹಿಳೆಯರ ಪಾಲು ತೀರಾ ಕಡಿಮೆಯಿದೆ. ಇದಕ್ಕೆ ಸುರಕ್ಷತೆ ಇಲ್ಲದಿರುವುದು ಸಹ ಕಾರಣವಾಗಿದೆ. ಹಾಗಾಗಿ ಮಹಿಳೆಯರಿಗೆ ದೆಹಲಿಯ ಬಸ್‌ ಮತ್ತು ಮೆಟ್ರೊಗಳಲ್ಲಿ ಉಚಿತ ಪ್ರಯಾಣದ ಜೊತೆಗೆ ಸಿಸಿಕ್ಯಾಮರ, ಮಾರ್ಷಲ್‌ಗಳನ್ನಿಟ್ಟು ಸುರಕ್ಷತೆಯನ್ನು ಖಾತ್ರಿಪಡಿಸುತ್ತಿದ್ದೇವೆ. ಮುಂದಿನ ದಿನಗಳಲ್ಲಿ ಹೆಚ್ಚು ಮಹಿಳೆಯರು ಕೆಲಸಕ್ಕೆ ಮುಂದಾಗುತ್ತಾರೆ ಎಂಬ ವಿಶ್ವಾಸವಿದೆ ಎಂದು ಕೇಜ್ರಿವಾಲ್‌ ನುಡಿದಿದ್ದಾರೆ.

ಈ ಯೋಜನೆಗೆ ಮಹಿಳೆಯರು ತೋರಿದ ಪ್ರತಿಕ್ರಿಯೆಯ ಮುಂದುವರಿಕೆಯಾಗಿ ಹಿರಿಯ ನಾಗರಿಕರು ಮತ್ತು ಎಲ್ಲಾ ವಿದ್ಯಾರ್ಥಿಗಳಿಗೂ ಉಚಿತ ಪ್ರಯಾಣಕ್ಕೆ ಅನುವು ಮಾಡಿಕೊಡಲು ಚರ್ಚೆ ನಡೆಸುತ್ತೇವೆ ಎಂದಿದ್ದಾರೆ.

ತೀವ್ರ ಅಸಮಾನತೆ ಇರುವ ದೇಶದಲ್ಲಿ, ಮಹಿಳೆಯರು ಇನ್ನೂ ಪ್ರತಿ ಸಣ್ಣ ಖರ್ಚಿಗೆ ತಮ್ಮ ತಂದೆ, ಗಂಡ ಮತ್ತು ಪುತ್ರರಿಂದ ಹಣವನ್ನು ತೆಗೆದುಕೊಳ್ಳಬೇಕಾದರೆ, ಉಚಿತ ಬಸ್ ಪ್ರಯಾಣವು ಮಹಿಳೆಯರಿಗೆ ಸ್ವಾತಂತ್ರ್ಯವನ್ನು ನೀಡುತ್ತದೆ ಮತ್ತು ಅವರ ಕನಸುಗಳನ್ನು ಈಡೇರಿಸುವ ಅವಕಾಶವನ್ನು ನೀಡುತ್ತದೆ ಎಂದು ಆಪ್‌ ನಾಯಕಿ ಅತಿಶಿ ಅಭಿಪ್ರಾಯಪಟ್ಟಿದ್ದಾರೆ.

ದೆಹಲಿಯ ಮಹಿಳೆಯರು ಉಚಿತ ಬಸ್ ಪ್ರಯಾಣವನ್ನು ಆತ್ಮೀಯವಾಗಿ ಸ್ವಾಗತಿಸಿದ್ದಾರೆ. ಇಂದು ಒಟ್ಟು ಟಿಕೆಟ್ ಪಡೆದ ಪ್ರಯಾಣಿಕರಲ್ಲಿ 33% ಉಚಿತ ‘ಪಿಂಕ್ ಪಾಸ್’ ಪಡೆದ ಮಹಿಳೆಯರಾಗಿದ್ದಾರೆ. 1 ನೇ ದಿನದಿಂದಲೇ ಸುಗಮ ಅನುಷ್ಠಾನವನ್ನು ಖಚಿತಪಡಿಸಿದ ಡಿಟಿಸಿ ಮತ್ತು ಕ್ಲಸ್ಟರ್ ಬಸ್ ಸಿಬ್ಬಂದಿಯವರ ಶ್ರಮಕ್ಕೆ ಧನ್ಯವಾದಗಳು ಎಂದು ದೆಹಲಿಯ ಸಾರಿಗೆ ಮಂತ್ರಿ ಕೈಲಾಶ್‌ ಗೆಹ್ಲೋಟ್‌ ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....