Homeಮುಖಪುಟಹಿಂದುಳಿದ ವರ್ಗಗಳ ಮೀಸಲಾತಿಗಾಗಿ 'ಸ್ವತಂತ್ರ ಆಯೋಗ' ರಚಿಸುವಂತೆ ತೆಲಂಗಾಣ ಸರ್ಕಾರಕ್ಕೆ ಸೂಚಿಸಿದ ಹೈಕೋರ್ಟ್

ಹಿಂದುಳಿದ ವರ್ಗಗಳ ಮೀಸಲಾತಿಗಾಗಿ ‘ಸ್ವತಂತ್ರ ಆಯೋಗ’ ರಚಿಸುವಂತೆ ತೆಲಂಗಾಣ ಸರ್ಕಾರಕ್ಕೆ ಸೂಚಿಸಿದ ಹೈಕೋರ್ಟ್

- Advertisement -
- Advertisement -

ಹಿಂದುಳಿದ ವರ್ಗಗಳಿಗೆ ಮೀಸಲಾತಿಯನ್ನು ನಿರ್ಧರಿಸಲು ‘ಸ್ವತಂತ್ರ ಆಯೋಗ’ವನ್ನು ರಚಿಸುವಂತೆ ರಾಜ್ಯ ಸರ್ಕಾರಕ್ಕೆ ತೆಲಂಗಾಣ ಹೈಕೋರ್ಟ್ ಬುಧವಾರ ನಿರ್ದೇಶನ ನೀಡಿದೆ. ರಾಜ್ಯ ಸರ್ಕಾರವು ಸರ್ಕಾರಿ ಮತ್ತು ಖಾಸಗಿ ವಲಯದಾದ್ಯಂತ ಸಾಮಾಜಿಕ ಆರ್ಥಿಕ ಮತ್ತು ರಾಜಕೀಯ ಪ್ರಾತಿನಿಧ್ಯವನ್ನು ನಿರ್ಣಯಿಸಲು ಹಿಂದುಳಿದ ವರ್ಗಗಳ ಕಲ್ಯಾಣ ಆಯೋಗಕ್ಕೆ ಇತ್ತೀಚೆಗೆ ನಿರ್ದೇಶನ ನೀಡಿತ್ತು. ಈ ಆಯೋಗವು ಮಂಗಳವಾರ ರಾಜ್ಯಾದ್ಯಂತ ಸಾರ್ವಜನಿಕ ವಿಚಾರಣೆಯನ್ನು ಪ್ರಾರಂಭಿಸಿತ್ತು. ಹಿಂದುಳಿದ ವರ್ಗಗಳ ಮೀಸಲಾತಿಗಾಗಿ

ರಾಜ್ಯ ಸರ್ಕಾರವು ಸೆಪ್ಟೆಂಬರ್ 2024 ರಲ್ಲಿ ಆಯೋಗವನ್ನು ರಚಿಸಿ, ಹಿರಿಯ ಕಾಂಗ್ರೆಸ್ ನಾಯಕ ಜಿ ನಿರಂಜನ್ ಅವರನ್ನು ಅಧ್ಯಕ್ಷರನ್ನಾಗಿ ನೇಮಿಸಿತ್ತು. ಹಿಂದುಳಿದ ವರ್ಗ ಸಮುದಾಯಗಳ ಜನಸಂಖ್ಯೆಯ ಶೇಕಡಾವಾರು ಲೆಕ್ಕಾಚಾರ ಮಾಡಿ ನಂತರ ಸ್ಥಳೀಯ ಸಂಸ್ಥೆಗಳಲ್ಲಿ ಹಿಂದುಳಿದ ವರ್ಗಗಳ ಸಮುದಾಯಗಳಿಗೆ ಮೀಸಲಾತಿಯನ್ನು ನಿರ್ಧರಿಸುವಂತೆ ರಾಜ್ಯ ಸರ್ಕಾರ ಆಯೋಗಕ್ಕೆ ಆದೇಶ ನೀಡಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ರಾಜ್ಯ ಸರ್ಕಾರದ ಈ ಆದೇಶದಂತೆ ಹಿಂದುಳಿದ ವರ್ಗಗಳ ಕಲ್ಯಾಣ ಆಯೋಗವು ಒಂದು ತಿಂಗಳ ಕಾಲ ಸಾಮಾಜಿಕ ಆರ್ಥಿಕ ಮತ್ತು ರಾಜಕೀಯ ಪ್ರಾತಿನಿಧ್ಯವನ್ನು ಮೌಲ್ಯಮಾಪನ ಮಾಡಿ, ಅದರ ವರದಿಯನ್ನು ಸಲ್ಲಿಸಬೇಕಾಗಿತ್ತು.

ಹಿಂದುಳಿದ ವರ್ಗಗಳ ಮುಖಂಡ ಹಾಗೂ ಮಾಜಿ ಸಂಸದ ಆರ್.ಕೃಷ್ಣಯ್ಯ ಅವರು ಸರ್ಕಾರದ ಈ ಆದೇಶವನ್ನು ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದರು. ಈ ಕಾರ್ಯವನ್ನು ಹಿಂದುಳಿದ ವರ್ಗಗಳ ಕಲ್ಯಾಣ ಆಯೋಗಕ್ಕೆ ವಹಿಸಿರುವುದು ಸುಪ್ರೀಂ ಕೋರ್ಟ್ ಆದೇಶದ ಉಲ್ಲಂಘನೆಯಾಗಿದೆ ಎಂದು ಅವರು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಹಿಂದುಳಿದ ವರ್ಗಗಳ ಮೀಸಲಾತಿಗಾಗಿ

ಮಹಾರಾಷ್ಟ್ರದಲ್ಲಿ ಇದೇ ರೀತಿಯ ಆದೇಶವನ್ನು ಬಾಂಬೆ ಹೈಕೋರ್ಟ್ ರದ್ದುಗೊಳಿಸಿದೆ ಎಂದು ನ್ಯಾಯಾಲಯಕ್ಕೆ ಹೇಳಿದ್ದಾರೆ. ಆಯೋಗವು ತನ್ನ ವರದಿಯನ್ನು ಸಲ್ಲಿಸಿದ ನಂತರ ತೆಲಂಗಾಣದಲ್ಲಿ ಇದೇ ರೀತಿಯ ಪರಿಸ್ಥಿತಿ ಉದ್ಭವಿಸಿದರೆ, ಸಮಯ ವ್ಯರ್ಥವಾಗುತ್ತದೆ ಎಂದು ಕೃಷ್ಣಯ್ಯ ಪರ ವಕೀಲರು ಹೈಕೋರ್ಟ್‌ನಲ್ಲಿ ಹೇಳಿದ್ದಾರೆ. ಹೀಗಾಗಿ ವಿಶೇಷ ಆಯೋಗ ರಚನೆ ಮಾಡುವಂತೆ ಸರ್ಕಾರಕ್ಕೆ ಆದೇಶ ನೀಡುವಂತೆ ಕೋರಿದ್ದಾರೆ.

ಪಂಚಾಯತ್ ರಾಜ್ ಚುನಾವಣೆಯಲ್ಲಿ ಹಿಂದುಳಿದ ವರ್ಗಗಳಿಗೆ ಶೇ.42 ಮೀಸಲಾತಿ ಜಾರಿಗೊಳಿಸುವುದಾಗಿ ಕಾಂಗ್ರೆಸ್ ಈ ಹಿಂದೆ ಭರವಸೆ ನೀಡಿತ್ತು. ಕೃಷ್ಣಯ್ಯ ಅವರು ಇತ್ತೀಚೆಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಚುನಾವಣಾ ಭರವಸೆಯನ್ನು ಜಾರಿಗೊಳಿಸುವಂತೆ ಪತ್ರ ಬರೆದಿದ್ದರು.

ಪತ್ರದಲ್ಲಿ ಅವರು ಕಾನೂನಾತ್ಮಕ ಸಮಸ್ಯೆಗಳು ಅಥವಾ 50% ಮೀಸಲಾತಿಯ ಮೇಲಿನ ಸುಪ್ರೀಂ ಕೋರ್ಟ್ ಮಿತಿಯನ್ನು ಉಲ್ಲೇಖಿಸಿ ಸರ್ಕಾರವು ಹಿಂದುಳಿದ ವರ್ಗಗಳಿಗೆ ಮೀಸಲಾತಿ ಹೆಚ್ಚಳದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಅವರು ಹೇಳಿದ್ದಾರೆ. ಕಾಂಗ್ರೆಸ್‌ ಪಕ್ಷದ ಭರವಸೆಯಾಗಿರುವ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಶೇ.42ರಷ್ಟು ಮೀಸಲಾತಿಯನ್ನು ವಿಧಾನಸಭೆಯಲ್ಲಿ ನಿರ್ಣಯ ಅಂಗೀಕರಿಸಿ ಜಾರಿಗೊಳಿಸಬಹುದು ಎಂದು ಅವರು ಹೇಳಿದ್ದರು.

ಇದನ್ನೂ ಓದಿ: ಬಾಬರಿ ಮಸೀದಿ ಒಡೆದು ಕಟ್ಟಿರುವ ರಾಮ ಮಂದಿರದ ಮೂರ್ತಿಯ ಶಿಲ್ಪಿಗೂ ರಾಜ್ಯೋತ್ಸವ ಪ್ರಶಸ್ತಿ!

ಬಾಬರಿ ಮಸೀದಿ ಒಡೆದು ಕಟ್ಟಿರುವ ರಾಮ ಮಂದಿರದ ಮೂರ್ತಿಯ ಶಿಲ್ಪಿಗೂ ರಾಜ್ಯೋತ್ಸವ ಪ್ರಶಸ್ತಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...