Homeಮುಖಪುಟಮಹಿಳಾ ಗಿಗ್ ಕಾರ್ಮಿಕರಿಂದ ಕರಾಳ ದೀಪಾವಳಿ | ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ 'ಡಿಜಿಟಲ್ ಮುಷ್ಕರ'

ಮಹಿಳಾ ಗಿಗ್ ಕಾರ್ಮಿಕರಿಂದ ಕರಾಳ ದೀಪಾವಳಿ | ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ‘ಡಿಜಿಟಲ್ ಮುಷ್ಕರ’

- Advertisement -
- Advertisement -

ದೀಪಾವಳಿಯ ಸಂಭ್ರಮದ ನಡುವೆ ದೇಶದಾದ್ಯಂತ ಗುರುವಾರ (ಅ.31) ಸುಮಾರು 11 ನಗರಗಳಲ್ಲಿ ಮಹಿಳಾ ಗಿಗ್ ಕಾರ್ಮಿಕರು ‘ಡಿಜಿಟಲ್ ಪ್ರತಿಭಟನೆ’ ನಡೆಸುವ ಮೂಲಕ ‘ಕರಾಳ ದೀಪಾವಳಿ’ ಆಚರಣೆ ಮಾಡಿದ್ದಾರೆ ಎಂದು ವರದಿಯಾಗಿದೆ.

ಸ್ವತಂತ್ರ ಪತ್ರಕರ್ತೆ ಗ್ರೀಷ್ಮಾ ಕುತಾರ್ ಅವರು ಇನ್‌ಸ್ಟಾಗ್ರಾಂನಲ್ಲಿ ಹಾಕಿದ್ದ ಮಾಹಿತಿ ಆಧರಿಸಿ ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ಮಾಡಿರುವ ವರದಿಯ ಪ್ರಕಾರ, ಮಹಿಳಾ ಗಿಗ್ ಕಾರ್ಮಿಕರ ಒಕ್ಕೂಟ ‘ದಿ ಗಿಗ್ ಅಂಡ್ ಫ್ಲ್ಯಾಟ್‌ಫಾರ್ಮ್‌ ಸರ್ವಿಸ್ ವರ್ಕರ್ಸ್ ಯೂನಿಯನ್ (ಜಿಐಪಿಎಸ್‌ಡಬ್ಲ್ಯುಯು)’ ನೇತೃತ್ವದಲ್ಲಿ ಮೊಬೈಲ್‌ಗಳನ್ನು ಸ್ವಿಚ್ ಆಫ್ ಮಾಡುವ ಡಿಜಿಟಲ್ ಮುಷ್ಕರ ನಡೆಸಲಾಗಿದೆ.

ಈ ಮೂಲಕ ಸರ್ಕಾರಿ ರಜಾದಿನಗಳಲ್ಲಿಯೂ ಕೆಲಸ ಮಾಡುವಂತೆ ಒತ್ತಾಯಿಸುವುದು ಸೇರಿದಂತೆ ವಿವಿಧ ಫ್ಲ್ಯಾಟ್‌ಫಾರ್ಮ್ ಕಂಪನಿಗಳ ಶೋಷಣೆಯ ವಿರುದ್ದ ಮೊದಲ ಬಾರಿಗೆ ಧ್ವನಿಯೆತ್ತಲಾಗಿದೆ.

ಕಂಪನಿಗಳ ಶೋಷಣೆಯ ಖಂಡನೆ, ತಮ್ಮ ಹಕ್ಕುಗಳನ್ನು ದೊರಕಿಸಿಕೊಡುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸುವುದು ಮತ್ತು ದೇಶದಾದ್ಯಂತ ವಿವಿಧ ಗಿಗ್ ಕಾರ್ಮಿಕರನ್ನು ಒಗ್ಗೂಡಿಸುವುದು ಮುಷ್ಕರದ ಉದ್ಧೇಶ ಎಂದು ಜಿಐಪಿಎಸ್‌ಡಬ್ಲ್ಯುಯು ಹೇಳಿದೆ.

ರಜೆ ನೀಡದಿರುವುದು, ಸರ್ಕಾರಿ ರಜಾ ದಿನಗಳಲ್ಲಿಯೂ ಕೆಲಸ ಮಾಡಿಸುವುದು, ಹೆಚ್ಚು ದುಡಿಸಿಕೊಂಡು ಕಡಿಮೆ ವೇತನ ಕೊಡುವುದು, ಸರಿಯಾಗಿ ವೇತನ ನೀಡದಿರುವುದು, ಅಸಾಧ್ಯವಾದ ಗಡುವುಗಳನ್ನು (Deadlines)ಪೂರೈಸಲು ಒತ್ತಡ ಹೇರುವುದು, ಕೆಲಸದ ಸ್ಥಳದ ಕಿರುಕುಳ, ಮಹಿಳಾ ಕಾರ್ಮಿಕರ ಖಾಸಗಿ ಬದುಕಿಗೆ ಅವಕಾಶ ಕೊಡದಿರುವುದು ಸೇರಿದಂತೆ ಅನೇಕ ಶೋಷಣೆಗಳ ವಿರುದ್ದ ಡಿಜಿಟಲ್ ಮುಷ್ಕರ ನಡೆಸಲಾಗಿದೆ ಎಂದಿದೆ.

ಗಿಗ್ ಕಾರ್ಮಿಕರ ಹಿತಾಸಕ್ತಿಗಳನ್ನು ಕಾಪಾಡಲು ಕಾರ್ಮಿಕ ಕಾನೂನುಗಳಿಲ್ಲ. ಸರ್ಕಾರ ಕಾರ್ಮಿಕರಿಗೆ ಹಕ್ಕುಗಳ ದೊರಕಿಸಿ ಕೊಡುವ ಬದಲು ಕಾರ್ಪೋರೇಟ್ ಕಂಪನಿಗಳ ಹಿತಾಸಕ್ತಿ ಕಾಪಾಡುತ್ತಿವೆ ಎಂದು ಮುಷ್ಕರ ನಿರತ ಮಹಿಳಾ ಗಿಗ್ ಕಾರ್ಮಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮಹಿಳಾ ಕಾರ್ಮಿಕರಿಗೆ ಕೆಲಸಕ್ಕೆ ಸಂಬಂಧಿಸಿದ ಹಕ್ಕುಗಳನ್ನು ಮತ್ತು ಸೌಲಭ್ಯಗಳನ್ನು ನೀಡುವುದರ ಜೊತೆಗೆ, ಅವರಿಗೆ ಹೆರಿಗೆ, ಮುಟ್ಟು, ಮಕ್ಕಳ ಆರೈಕೆಗೆ ರಜೆ ನೀಡುವುದು. ಮಹಿಳಾ ಕಾರ್ಮಿಕರ ಕುಂದು ಕೊರೆತಗಳನ್ನು ಆಲಿಸಲು ಅಥವಾ ಹೇಳಿಕೊಳ್ಳಲು ಒಂದು ವೇದಿಕೆ ಒದಗಿಸುವುದು ಸೇರಿದಂತೆ ಇತರ ಬೇಡಿಕೆಗಳು ನಮ್ಮ ಮುಷ್ಕರದಲ್ಲಿ ಒಳಗೊಂಡಿವೆ ಎಂದು ಜಿಐಪಿಎಸ್‌ಡಬ್ಲ್ಯುಯುನ ಪ್ರಧಾನ ಕಾರ್ಯದರ್ಶಿ ಸೀಮಾ ಸಿಂಗ್ ಹೇಳಿರುವುದಾಗಿ ದಿ ನ್ಯೂ ಇಂಡಿಯನ್‌ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಗಿಗ್‌ ಕಾರ್ಮಿಕರಾಗಿ ಕೆಲಸ ಮಾಡುವ ಮಹಿಳೆಯರು ಗ್ರಾಹಕರ ಮನೆಯೊಳಗೆ ಹೋಗಿ ಸೇವೆ ಒದಗಿಸಬೇಕಾಗುತ್ತದೆ. ಈ ಸಂದರ್ಭಗಳಲ್ಲಿ ಅವರು ಲೈಂಗಿಕ ಕಿರುಕುಳ, ನಿಂದನೆ, ಹಲ್ಲೆ, ತುರ್ತು ಸಂದರ್ಭಗಳಲ್ಲಿ ಶೌಚಾಲಯದ ನಿರಾಕರಣೆ ಇತ್ಯಾದಿ ಸಮಸ್ಯೆಗಳನ್ನು ಎದುರಿಸುತ್ತಾರೆ. ಈ ವೇಳೆ ಅವರಿಂದ ಕೆಲಸ ಮಾಡಿಸಿಕೊಳ್ಳುತ್ತಿರುವ ಕಂಪನಿಗಳು ಯಾವುದೇ ಸಹಾಯಕ್ಕೆ ಬರುವುದಿಲ್ಲ ಎಂದು ಸೀಮಾ ಸಿಂಗ್ ವಿವರಿಸಿದ್ದಾರೆ.

ನಾವು ದುರ್ಬಲರು, ನಮ್ಮ ಕೈಯ್ಯಲ್ಲಿ ಏನೂ ಮಾಡಲು ಸಾಧ್ಯವಿಲ್ಲ. ನಮಗೆ ಕುಟುಂಬ ನಡೆಸಲು ಕೆಲಸ ಅನಿವಾರ್ಯ ಎಂದು ಅವರಿಗೆ (ಕಂಪನಿಗಳಿಗೆ) ಗೊತ್ತಿದೆ. ಇಂದು ನಾವು ಮೊದಲ ಮುಷ್ಕರ ನಡೆಸುತ್ತಿದ್ದೇವೆ. ಮುಂದೆ ದೊಡ್ಡ ಮಟ್ಟದ ಹೋರಾಟಗಳನ್ನು ನಡೆಸುವ ಉದ್ದೇಶವಿದೆ. ನಮ್ಮನ್ನು ದುಡಿಸಿಕೊಳ್ಳುವ ಪ್ಲಾಟ್‌ಫಾರ್ಮ್ ಕಂಪನಿಗಳು ನಮ್ಮನ್ನು ಸರಿಯಾಗಿ ನಡೆಸಿಕೊಳ್ಳುವಂತೆ ಮಾಡುವುದು ಸರ್ಕಾರದ ಜವಾಬ್ದಾರಿ ಎಂದು ಜಿಐಪಿಎಸ್‌ಡಬ್ಲ್ಯುಯುನ ಉಪಾಧ್ಯಕ್ಷೆ ಸೆಲ್ವಿ ಎಂ ಹೇಳಿದ್ದಾರೆ.

ಇದನ್ನೂ ಓದಿ : ಕೇಂದ್ರಾಡಳಿತ ಸಂಸ್ಥಾಪನಾ ದಿನ ಜಮ್ಮು ಕಾಶ್ಮೀರಕ್ಕೆ ‘ಕಪ್ಪು ದಿನ’ – ಪಿಡಿಪಿ ಅಧ್ಯಕ್ಷೆ ಮೆಹಬೂಬಾ ಮುಫ್ತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...