Homeಕರ್ನಾಟಕಬೆಂಗಳೂರು | ಸ್ಕೈ ಡೆಕ್ ಕುರಿತು ಸಾರ್ವಜನಿಕ ಪ್ರತಿಕ್ರಿಯೆ ಆಹ್ವಾನಿಸಿದ ಬಿಬಿಎಂಪಿ

ಬೆಂಗಳೂರು | ಸ್ಕೈ ಡೆಕ್ ಕುರಿತು ಸಾರ್ವಜನಿಕ ಪ್ರತಿಕ್ರಿಯೆ ಆಹ್ವಾನಿಸಿದ ಬಿಬಿಎಂಪಿ

- Advertisement -
- Advertisement -

ಬೆಂಗಳೂರಿನ ಹೆಮ್ಮಿಗೆಪುರದಲ್ಲಿ ನಿರ್ಮಿಸಲು ಉದ್ದೇಶಿಲಾಗಿರುವ 250-ಮೀಟರ್ ಸ್ಕೈ ಡೆಕ್ ಕುರಿತು ಪ್ರತಿಕ್ರಿಯೆ ನೀಡುವಂತೆ ಬಿಬಿಎಂಪಿ ಸಾರ್ವಜನಿಕರಿಗೆ ಕೇಳಿದೆ. ಸ್ಕೈ ಡೆಕ್ ನಿರ್ಮಾಣಕ್ಕೆ ಅನುಕೂಲಕರವಾಗುವ ಹಲವು ಪ್ರದೇಶಗಳಲ್ಲಿ ಹೆಮ್ಮಿಗೆಪುರ ಕೂಡಾ ಒಂದಾಗಿದೆ. ಬರೋಬ್ಬರಿ 500 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗುವ ಉದ್ದೇಶಿತ ಸ್ಕೈ ಡೆಕ್ ಯೋಜನೆ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಮಹತ್ವಾಕಾಂಕ್ಷೆಯಲ್ಲೊಂದಾಗಿದೆ. ಬೆಂಗಳೂರು

ನಗರದ ವಿಶಿಷ್ಟ ವಿಹಂಗಮ ನೋಟವನ್ನು ನೀಡಲು ಸ್ಕೈ ಡೆಕ್ ನಿರ್ಮಾಣಕ್ಕೆ ಉದ್ದೇಶಿಸಲಾಗಿದೆ. ಇದು ಉದ್ಯೋಗಾವಕಾಶಗಳನ್ನು ಸೃಷ್ಟಿಸುವ ಜೊತೆಗೆ ಆರ್ಥಿಕ ಬೆಳವಣಿಗೆಯನ್ನು ಉತ್ತೇಜಿಸುತ್ತದೆ ಎಂದು ಸರ್ಕಾರ ವಾದಿಸುತ್ತದೆ. ಇದು ಫುಡ್ ಕೋರ್ಟ್‌ಗಳು ಮತ್ತು ಇತರ ಸೌಕರ್ಯಗಳ ಜೊತೆಗೆ ಆಟದ ಮೈದಾನಗಳನ್ನು ಸಹ ಹೊಂದಿರುತ್ತದೆ. ಬೆಂಗಳೂರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಬೆನ್ನಿಗಾನಹಳ್ಳಿಯಲ್ಲಿ ಎನ್‌ಜಿಇಎಫ್, ಯಶವಂತಪುರದಲ್ಲಿ ಕರ್ನಾಟಕ ಸೋಪ್ಸ್ ಮತ್ತು ಡಿಟರ್ಜೆಂಟ್ಸ್ ಲಿಮಿಟೆಡ್, ವೈಟ್‌ಫೀಲ್ಡ್‌ನಲ್ಲಿರುವ ಕರ್ನಾಟಕ ಟ್ರೇಡ್ ಪ್ರಮೋಷನ್ ಆರ್ಗನೈಸೇಶನ್ ಮತ್ತು ಜಕ್ಕೂರುನಲ್ಲಿರುವ ಜಿಕೆವಿಕೆ ಸೇರಿದಂತೆ ಯೋಜನೆಗಾಗಿ ಹಲವು ಸಂಭಾವ್ಯ ಸ್ಥಳಗಳನ್ನು ಬಿಬಿಎಂಪಿ ಗುರುತಿಸಿದೆ.

ಆದಾಗ್ಯೂ, ಯೋಜನೆಗೆ ಉದ್ದೇಶಿಸಿರುವ ಹಲವಾರು ಪ್ರದೇಶಗಳು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ, ಯಲಹಂಕ ರಕ್ಷಣಾ ವಿಮಾನ ನಿಲ್ದಾಣ ಮತ್ತು HAL ರಕ್ಷಣಾ ವಿಮಾನ ನಿಲ್ದಾಣದಂತಹ ಸೂಕ್ಷ್ಮ ವಲಯಗಳ ಬಳಿ ಬರುತ್ತವೆ. ಈ ಪ್ರದೇಶಗಳಲ್ಲಿ ಕಲರ್ ಕೋಡೆಡ್ ಝೋನಿಂಗ್ ಮ್ಯಾಪ್ (CCZM) ನಿರ್ಬಂಧವಿದ್ದು, ಇದು ಎತ್ತರದ ಕಟ್ಟಡಗಳ ನಿರ್ಮಾಣಗಳಿಗೆ ನಿಷೇಧವಿದೆ.

ಹಾಗಾಗಿ ಬೆಂಗಳೂರಿನ ಪಶ್ಚಿಮ ಮತ್ತು ನೈಋತ್ಯ ಭಾಗಗಳಿಗೆ ಸ್ಕೈ ಡೆಕ್‌ಗೆ ಕಾರ್ಯಸಾಧ್ಯವಾದ ಪ್ರದೇಶಗಳು ಮಿತಿಯಲ್ಲಿವೆ. ಇದಕ್ಕೆ ಪ್ರತಿಯಾಗಿ, ಬಿಬಿಎಂಪಿಯು ನೈಸ್ ಕ್ಲೋವರ್ ಲೀಫ್ ಬಳಿಯ ಹೆಮ್ಮಿಗೆಪುರ, ಬೆಂಗಳೂರು ವಿಶ್ವವಿದ್ಯಾಲಯದ ಜ್ಞಾನಭಾರತಿ ಕ್ಯಾಂಪಸ್ ಮತ್ತು ನೈಸ್ ರಸ್ತೆ ಬಳಿಯ ಕೊಮ್ಮಘಟ್ಟದಂತಹ ಪರ್ಯಾಯ ಸ್ಥಳಗಳನ್ನು ಪರಿಗಣಿಸುತ್ತಿದೆ.

ನೈಸ್ ರಸ್ತೆಯು ತುಮಕೂರು, ಕನಕಪುರ, ಮೈಸೂರು ಮತ್ತು ಹೊಸೂರಿನಂತಹ ಪ್ರಮುಖ ಮಾರ್ಗಗಳಿಗೆ ಸಂಪರ್ಕ ಕಲ್ಪಿಸುವುದರಿಂದ ಹೆಮ್ಮಿಗೆಪುರದ ಬಗ್ಗೆ ಬಿಬಿಎಂಪಿ ವಿಶೇಷ ಒಲವು ತೋರಿದೆ. ಇಲ್ಲಿ ನಿರ್ಮಾಣದ ಸಮಯದಲ್ಲಿ ಟ್ರಾಫಿಕ್ ಅಡೆತಡೆಗಳು ಕೂಡಾ ಕಡಿಮೆ ಆಗಿರುತ್ತದೆ. ಅಲ್ಲದೆ, ತುರಹಳ್ಳಿ ಅರಣ್ಯಕ್ಕೆ ಈ ಪ್ರದೇಶ ಹತ್ತಿರ ಇರುವುದರಿಂದ, ಪ್ರವಾಸಿಗರಿಗೆ ಸ್ಕೈ ಡೆಕ್‌ನಿಂದ ರಮಣೀಯ ನೈಸರ್ಗಿಕ ನೋಟಗಳು ಕೂಡಾ ಒದಗುತ್ತದೆ.

ಸ್ಕೈ ಡೆಕ್ ನಿರ್ಮಾಣಕ್ಕೆ ಉದ್ದೇಶಿತ ಸ್ಥಳದ ಕುರಿತು ತಮ್ಮ ಪ್ರತಿಕ್ರಿಯೆಯನ್ನು ಸಲ್ಲಿಸಲು ಬಿಬಿಎಂಪಿ ನಿವಾಸಿಗಳು, ನಾಗರಿಕೆ ಗುಂಪುಗಳು ಮತ್ತು ಇತರ ಮಧ್ಯಸ್ಥಗಾರರನ್ನು ಬಿಬಿಎಂಪಿ ಆಹ್ವಾನಿಸಿದೆ. ವಿಶೇಷವಾಗಿ ಹೆಮ್ಮಿಗೆಪುರವು ಸೂಕ್ತವಾದ ಸ್ಥಳವಾಗಿದೆಯೇ ಅಥವಾ ನಗರದ ಪಶ್ಚಿಮ ಅಥವಾ ನೈಋತ್ಯದಲ್ಲಿ ಇತರ ಆದ್ಯತೆಯ ಸ್ಥಳಗಳಿದ್ದರೆ ಅಭಿಪ್ರಾಯ ತಿಳಿಸುವಂತೆ ಅದು ಕೇಳಿದೆ.

ಪ್ರತಿಕ್ರಿಯೆಯನ್ನು [email protected] ಗೆ ಇಮೇಲ್ ಮೂಲಕ ಸಲ್ಲಿಸಬಹುದು ಅಥವಾ ಬೆಂಗಳೂರಿನ N R ಸ್ಕ್ವೇರ್‌ನಲ್ಲಿರುವ BBMP ಕೇಂದ್ರ ಕಚೇರಿಗೆ ವೈಯಕ್ತಿಕವಾಗಿ ತಲುಪಿಸಬಹುದು. ಮುಂದಿನ ಏಳು ದಿನಗಳವರೆಗೆ ಪ್ರತಿಕ್ರಿಯೆ ವಿಂಡೋ ತೆರೆದಿರುತ್ತದೆ ಎಂದು ಬಿಬಿಎಂಪಿ ತಿಳಿಸಿದೆ.

ಸೆಪ್ಟೆಂಬರ್‌ನಲ್ಲಿ, ಶಿವಕುಮಾರ್ ಅವರು ಅಮೆರಿಕಾಕ್ಕೆ ವೈಯಕ್ತಿಕ ಭೇಟಿ ನೀಡಿದ್ದ ಸಂದರ್ಭದಲ್ಲಿ ನ್ಯೂಯಾರ್ಕ್‌ನ ಸ್ಕೈ ಡೆಕ್‌ಗೆ ಭೇಟಿ ನೀಡಿದ್ದರು. ಈ ವೇಳೆ ಅವರು ಸ್ಕೈಡೆಕ್ ‘ದಿ ಎಡ್ಜ್’ ಮತ್ತು ಅದರ ವಾಸ್ತುಶಿಲ್ಪ, ವಿನ್ಯಾಸ ಮತ್ತು ಇತರ ಅಂಶಗಳನ್ನು ಪರಿಶೀಲಿಸಿ, ಬೆಂಗಳೂರಿನಲ್ಲಿ ಕೂಡಾ ಇದೇ ರೀತಿಯ ನಿರ್ಮಾಣವನ್ನು ತರುವ ಬಗ್ಗೆ ಸುಳಿವು ನೀಡಿದ್ದರು.

ಇದನ್ನೂ ಓದಿ: ವಕ್ಫ್ ಸ್ವತ್ತುಗಳನ್ನು ರಾಷ್ಟ್ರೀಕರಣಗೊಳಿಸಲು ಪ್ರಧಾನಿಗೆ ಪತ್ರ ಬರೆದ ಶಾಸಕ ಯತ್ನಾಳ್‌

ವಕ್ಫ್ ಸ್ವತ್ತುಗಳನ್ನು ರಾಷ್ಟ್ರೀಕರಣಗೊಳಿಸಲು ಪ್ರಧಾನಿಗೆ ಪತ್ರ ಬರೆದ ಶಾಸಕ ಯತ್ನಾಳ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...