Homeಫ್ಯಾಕ್ಟ್‌ಚೆಕ್FACT CHECK : ಅಪಘಾತದ ವಿಡಿಯೋಗೆ ಕೋಮು ಬಣ್ಣ ಬಳಿದ ಬಲಪಂಥೀಯರು

FACT CHECK : ಅಪಘಾತದ ವಿಡಿಯೋಗೆ ಕೋಮು ಬಣ್ಣ ಬಳಿದ ಬಲಪಂಥೀಯರು

- Advertisement -
- Advertisement -

ಸಾಮಾಜಿಕ ಜಾಲತಾಣಗಳಲ್ಲಿ ಅಪಘಾತವೊಂದರ ವಿಡಿಯೋ ಹರಿದಾಡುತ್ತಿದ್ದು, ಮನೆ ಮುಂದೆ ರಂಗೋಲಿ ಹಾಕುತ್ತಿದ್ದ ಇಬ್ಬರು ಹುಡುಗಿಯರ ಮೇಲೆ ನಿಯಂತ್ರಣ ತಪ್ಪಿದ ಕಾರೊಂದು ಏಕಾಏಕಿ ನುಗ್ಗಿರುವುದನ್ನು ಅದರಲ್ಲಿ ನೋಡಬಹುದು.

ಈ ವಿಡಿಯೋ ಹಂಚಿಕೊಂಡಿರುವ ಅನೇಕ ಫೇಸ್‌ಬುಕ್, ಎಕ್ಸ್‌ ಬಳಕೆದಾರು, “ಹಿಂದೂ ಹೆಣ್ಣು ಮಕ್ಕಳನ್ನು ಕೊಲ್ಲುವ ಯೋಜನೆಯ ಭಾಗವಾಗಿ ಈ ಅಪಘಾತ ನಡೆಸಲಾಗಿದೆ ಎಂದು ಬರೆದುಕೊಂಡಿದ್ದಾರೆ.

ಹಿಂದೂ ಯುವ ರಾಷ್ಟ್ರ ಸೇನೆ‘ ಎಂಬ ಫೇಸ್‌ಬುಕ್ ಪೇಜ್‌ನಲ್ಲಿ ನೆವೆಂಬರ್ 1,2024ರಂದು ವಿಡಿಯೋ ಹಂಚಿಕೊಂಡು “ಇದೆಲ್ಲ ಈ ಜಿಹಾದಿಗಳ ಪ್ಲಾನ್. ಹಿಂದೂಗಳು ಮತ್ತು ಹಿಂದೂಗಳ ಸಹೋದರಿಯರು ಮತ್ತು ಹಿಂದೂಗಳ ಹೆಣ್ಣು ಮಕ್ಕಳನ್ನು ಕೊಲ್ಲಲಾಗುತ್ತಿದೆ. ಇದು ಅಪಘಾತ ಎಂದು ಹಿಂದೂಗಳು ಭಾವಿಸುತ್ತಿದ್ದಾರೆ. ಈ ವೀಡಿಯೋ ಎಲ್ಲಿಂದ ಬಂದಿದೆಯೋ ಗೊತ್ತಿಲ್ಲ, ಆದರೆ ಹೆಣ್ಣಿನ ಮೇಲೆ ವಾಹನಗಳನ್ನು ಓಡಿಸುವ ಉದ್ದೇಶವೂ ಅದೇ, ಈ ಮುಸ್ಲಿಂ ಯುವಕರು ಸಂಪೂರ್ಣ ಸಿದ್ದತೆ ಮಾಡಿಕೊಂಡಿದ್ದಾರೆ. ಹಿಂದೂಗಳು ಶಾಂತಿಯುತವಾಗಿ ಮೇಣದ ಬತ್ತಿಗಳನ್ನು ಬೆಳಗಿಸುವುದು ಬಿಟ್ಟು ಬೇರೇನೂ ಮಾಡಲ್ಲ ಅಂತ ಅವರಿಗೂ ಗೊತ್ತು” ಎಂದು ಬರೆದುಕೊಳ್ಳಲಾಗಿತ್ತು.

ಅರುಣ್ ಕುಮಾರ್‘ ಎಂಬ ಮತ್ತೋರ್ವ ಎಕ್ಸ್‌ ಬಳಕೆದಾರ ನವೆಂಬರ್ 1,2024ರಂದು ವಿಡಿಯೋ ಹಂಚಿಕೊಂಡು “ಜಿಹಾದಿಗಳ ಪಿತೂರಿ ಅರಿಯದೆ ನಾವು ಮೋಸ ಹೋಗುತ್ತಿದ್ದೇವೆ. ಹಿಂದೂ ಹೆಣ್ಣುಮಕ್ಕಳನ್ನು ಆ್ಯಕ್ಸಿಡೆಂಟ್ ಮೂಲಕ ಕೊಲ್ಲಲಾಗುತ್ತಿದೆ, ಇದು ಅಪಘಾತ ಎಂದು ಹಿಂದೂಗಳು ಭಾವಿಸುತ್ತಿದ್ದಾರೆ. ಎಚ್ಚೆತ್ತು ಕೊಳ್ಳಿ ಹಿಂದೂ ಬಾಂಧವರೆ” ಎಂದು ಬರೆದುಕೊಂಡಿದ್ದರು.

ಇನ್ನೂ ಕೆಲ ಸಾಮಾಜಿಕ ಜಾಲತಾಣ ಬಳಕೆದಾರರು ವಿಡಿಯೋ ಹಂಚಿಕೊಂಡು ಇದೇ ರೀತಿ ಬರೆದುಕೊಂಡಿದ್ದರು.

ಫ್ಯಾಕ್ಟ್‌ಚೆಕ್ : ವೈರಲ್ ವಿಡಿಯೋ ಕುರಿತು ಸತ್ಯಾಸತ್ಯತೆ ತಿಳಿಯಲು ನಾವು ಅದರ ಸ್ಕ್ರೀನ್ ಶಾಟ್ ಅನ್ನು ಗೂಗಲ್ ರಿವರ್ಸ್ ಇಮೇಜ್‌ನಲ್ಲಿ ಹಾಕಿ ಸರ್ಚ್ ಮಾಡಿದ್ದೇವೆ. ಈ ವೇಳೆ ವಿಡಿಯೋಗೆ ಸಂಬಂಧಿಸಿದ ಅನೇಕ ಮಾಧ್ಯಮ ವರದಿಗಳು ನಮಗೆ ಲಭ್ಯವಾಗಿದೆ.

ವರದಿಗಳ ಪ್ರಕಾರ, ಘಟನೆಯ ಹಿಂದೆ ಯಾವುದೇ ಕೋಮು ಆಯಾಮ ಇಲ್ಲ. ಅದೊಂದು ಸಾಮಾನ್ಯ ಅಪಘಾತವಾಗಿದ್ದು, ಅಪಘಾತವೆಸಗಿದ ಆರೋಪದ ಮೇಲೆ ಬಂಧಿತ ವ್ಯಕ್ತಿ ಕೂಡ ಹಿಂದೂ ಎಂದು ಗೊತ್ತಾಗಿದೆ.

ಘಟನೆಯ ಕುರಿತು ಎಬಿಪಿ ನ್ಯೂಸ್ಎನ್‌ಬಿಟಿ ಮತ್ತು ಟಿವಿ-9 ಭಾರತವರ್ಷ ಅಕ್ಟೋಬರ್ 29, 2024 ರಂದು ಪ್ರಕಟಿಸಿದ ವರದಿಗಳನ್ನು ನಾವು ಪರಿಶೀಲಿಸಿದ್ದೇವೆ. ಈ ಎಲ್ಲಾ ವರದಿಗಳು ಆರೋಪಿ ಕಾರು ಚಾಲಕನ ಹೆಸರನ್ನು ತುಷಾರ್ ಅಗರ್ವಾಲ್ ಎಂದು ಉಲ್ಲೇಖಿಸಿದೆ.

‘ಇಂದೋರ್‌ನ ಜೈಭವಾನಿ ನಗರದಲ್ಲಿ ಇಬ್ಬರು ಹುಡುಗಿಯರು ನವ್ಯಾ ಪ್ರಜಾಪತ್ ಮತ್ತು ಪ್ರಿಯಾಂಶು ತಮ್ಮ ಮನೆಯ ಹೊರಗೆ ರಂಗೋಲಿ ಹಾಕುತ್ತಿದ್ದರು. ಈ ವೇಳೆ ತುಷಾರ್ ಅಗರ್ವಾಲ್ ಅತಿ ವೇಗವಾಗಿ ಬಂದು  ಬಾಲಕಿಯರ ಮೇಲೆ ಕಾರು ಹತ್ತಿಸಿದ್ದಾನೆ. ಕಾರಿನ ಸಂಖ್ಯೆ MP 09 ZW 7287 ಆಗಿದ್ದು, ಅದನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಕಾರು ಚಾಲಕ ತುಷಾರ್ ಅಗರ್ವಾಲ್, ಹುಕುಮಚಂದ್ ಕಾಲೋನಿ ನಿವಾಸಿಯಾಗಿದ್ದಾನೆ. ಈತ ಘಟನೆ ಬಳಿಕ ಸ್ಥಳದಿಂದ ಪರಾರಿಯಾಗಿದ್ದ. ಬಳಿಕ ಪೊಲೀಸರು ಪತ್ತೆ ಹಚ್ಚಿ ಬಂಧಿಸಿದ್ದಾರೆ” ಎಂದು ವರದಿಗಳು ವಿವರಿಸಿದೆ.

ಎಎನ್‌ಐ ಸುದ್ದಿ ಸಂಸ್ಥೆ ಅಕ್ಟೋಬರ್ 29,2024ರಂದು ತನ್ನ ಎಕ್ಸ್ ಖಾತೆಯಲ್ಲಿ ಈ ಘಟನೆಯ ಕುರಿತು ಇಂದೋರ್ ವಲಯ-1 ಡಿಸಿಪಿ ವಿನೋದ್ ಕುಮಾರ್ ಮೀನಾ ಅವರು ನೀಡಿದ್ದ ಹೇಳಿಕೆಯನ್ನು ಹಂಚಿಕೊಂಡಿತ್ತು. ಇದರಲ್ಲೂ ಅವರು ಆರೋಪಿಯನ್ನು ತುಷಾರ್ ಅಗರ್ವಾಲ್ ಎಂದು ಹೇಳಿದ್ದರು.

ಒಟ್ಟಿನಲ್ಲಿ, ಹುಡುಗಿಯರ ಮೇಲೆ ಕಾರು ಹತ್ತಿದ ಅಪಘಾತದ ವಿಡಿಯೋ ಹಿಂದೆ ಯಾವುದೇ ಕೋಮು ಆಯಾಮ ಇಲ್ಲ. ಅಪಘಾತ ಹಿಂದೂ ಹೆಣ್ಣುಮಕ್ಕಳನ್ನು ಕೊಲ್ಲುವ ಯೋಜನೆಯ ಭಾಗ ಎಂಬುವುದು ಸುಳ್ಳು.

ಇದನ್ನೂ ಓದಿ : FACT CHECK : ಪ್ರಿಯಾಂಕಾ ಗಾಂಧಿ ನಾಮಪತ್ರ ಸಲ್ಲಿಕೆ ವೇಳೆ ಮಲ್ಲಿಕಾರ್ಜುನ ಖರ್ಗೆ ಅವರನ್ನು ಹೊರಗಡೆ ನಿಲ್ಲಿಸಿ ಅವಮಾನಿಸಲಾಗಿದೆಯಾ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರೂರ್ ಕಾಲ್ತುಳಿತ : ಸಿಬಿಐ ಮುಂದೆ ವಿಚಾರಣೆಗೆ ಹಾಜರಾದ ನಟ ವಿಜಯ್

ಕರೂರ್ ಕಾಲ್ತುಳಿತ ಘಟನೆಗೆ ಸಂಬಂಧಪಟ್ಟಂತೆ ನಟ ಹಾಗೂ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಮುಖ್ಯಸ್ಥ ವಿಜಯ್ ಸೋಮವಾರ (ಜ.12) ದೆಹಲಿಯ ಕೇಂದ್ರ ತನಿಖಾ ದಳ (ಸಿಬಿಐ) ಕಚೇರಿಗೆ ವಿಚಾರಣೆಗೆ ಹಾಜರಾಗಿದ್ದಾರೆ. ಚಾರ್ಟರ್ಡ್ ವಿಮಾನದಲ್ಲಿ...

ಜೂನ್‌ ಅಂತ್ಯದೊಳಗೆ ಜಿಬಿಎ ವ್ಯಾಪ್ತಿಯ ಪಾಲಿಕೆಗಳಿಗೆ ಚುನಾವಣೆ : ಗಡುವು ವಿಧಿಸಿದ ಸುಪ್ರೀಂ ಕೋರ್ಟ್

ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಐದು ನಗರ ಪಾಲಿಕೆಗಳಿಗೆ ಜೂನ್ ಅಂತ್ಯದೊಳಗೆ ಚುನಾವಣೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೋಮವಾರ (ಜ.12) ನಿರ್ದೇಶನ ನೀಡಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಸುಪ್ರೀಂ ಕೋರ್ಟ್ ನಲ್ಲಿ ಮಮತಾ ವಿರುದ್ಧ ಎಫ್‌ಐಆರ್ ದಾಖಲಿಸಲು ನಿರ್ದೇಶನ ಕೋರಿ ಅರ್ಜಿ ಸಲ್ಲಿಸಿದ ಇಡಿ

ನವದೆಹಲಿ: ಐ-ಪಿಎಸಿ ವಿರುದ್ಧದ ಬಹು-ರಾಜ್ಯ ಹಣ ವರ್ಗಾವಣೆ ಪ್ರಕರಣದಲ್ಲಿ ತನಿಖೆಗೆ ಅಡ್ಡಿಪಡಿಸಿದ, ಸಾಕ್ಷ್ಯಗಳನ್ನು ತಿರುಚಿದ ಮತ್ತು ನಾಶಪಡಿಸಿದ ಆರೋಪದ ಮೇಲೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಡಿಜಿಪಿ ಮತ್ತು ಕೋಲ್ಕತ್ತಾ ಪೊಲೀಸ್...

ಭಾರತಕ್ಕಿಂತ ಯಾವುದೇ ಪಾಲುದಾರ ದೇಶ ಮುಖ್ಯವಲ್ಲ, ವ್ಯಾಪಾರ ಮಾತುಕತೆ ಪುನರಾರಂಭ: ಅಮೆರಿಕ ರಾಯಭಾರಿ ಸೆರ್ಗಿಯೊ ಗೋರ್

"ವಾಷಿಂಗ್ಟನ್‌ಗೆ ಭಾರತಕ್ಕಿಂತ ಅಗತ್ಯವಾದ ದೇಶ ಇನ್ನೊಂದಿಲ್ಲ ಮತ್ತು ಎರಡೂ ಕಡೆಯವರು ವ್ಯಾಪಾರ ಒಪ್ಪಂದವನ್ನು ದೃಢೀಕರಿಸುವಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ" ಎಂದು ಅಮೆರಿಕದ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್ ಸೋಮವಾರ ಹೇಳಿದ್ದಾರೆ. ಅಮೆರಿಕ ರಾಯಭಾರ ಕಚೇರಿಯ ನೌಕರರು...

ಬಿಷಪ್ ಫ್ರಾಂಕೊ ಮುಲಕ್ಕಲ್ ಅತ್ಯಾಚಾರ ಪ್ರಕರಣ : ಒಂಬತ್ತು ವರ್ಷಗಳ ಬಳಿಕ ಮೌನ ಮುರಿದ ಸಂತ್ರಸ್ತೆ, ಕಾನೂನು ಹೋರಾಟ ಮುಂದುವರಿಸುವುದಾಗಿ ಹೇಳಿಕೆ

ಬಿಷಪ್ ಫ್ರಾಂಕೊ ಮುಲಕ್ಕಲ್ ವಿರುದ್ದದ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಕ್ರೈಸ್ತ ಸನ್ಯಾಸಿನಿ ಒಂಬತ್ತು ವರ್ಷಗಳ ನಂತರ ಮೊದಲ ಬಾರಿಗೆ ಸಾರ್ವಜನಿಕವಾಗಿ ಮಾತನಾಡಿದ್ದು, ಫ್ರಾಂಕೊ ಮುಲಕ್ಕಲ್ ಅವರನ್ನು ನ್ಯಾಯಾಲಯ ಖುಲಾಸೆಗೊಳಿಸಿದ್ದಕ್ಕೆ ನಾನು ದಂಗಾಗಿದ್ದೇನೆ. ನ್ಯಾಯಕ್ಕಾಗಿ...

‘ವೆನೆಜುವೆಲಾದ ಹಂಗಾಮಿ ಅಧ್ಯಕ್ಷ’ ಎಂದು ಘೋಷಿಸಿಕೊಂಡ ಡೊನಾಲ್ಡ್ ಟ್ರಂಪ್ 

ಸೋಮವಾರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ರುತ್ ಸೋಶಿಯಲ್‌ನಲ್ಲಿ ತಮ್ಮದೇ ಆದ ವಿಕಿಪೀಡಿಯಾ ಪುಟದ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ, ಅದರಲ್ಲಿ "ವೆನೆಜುವೆಲಾದ ಹಂಗಾಮಿ ಅಧ್ಯಕ್ಷ" ಎಂಬ ಹುದ್ದೆಯನ್ನು ಹೊಂದಿರುವ ಅವರ ಚಿತ್ರವಿದೆ. ಪೋಸ್ಟ್‌ನಲ್ಲಿ ಟ್ರಂಪ್...

ಪೊಲೀಸ್ ತುರ್ತು ವಾಹನದ ಚಾಲಕ ಸೇರಿ ಐವರಿಂದ ಯುವತಿ ಮೇಲೆ ಅತ್ಯಾಚಾರ!

ಪೊಲೀಸ್ ತುರ್ತು ಸೇವೆ (112) ವಾಹನದ ಚಾಲಕ ಸೇರಿದಂತೆ ಐವರು ಪುರುಷರು 19 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್‌ಗಢದ ಕೋರ್ಬಾ ಜಿಲ್ಲೆಯ ಬಂಕಿಮೊಂಗ್ರ ಪ್ರದೇಶದಲ್ಲಿ ನಡೆದಿದೆ. ಜನವರಿ...

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...