HomeUncategorizedಆರ್‌ಎಸ್‌ಎಸ್‌, ಸಂಘ ಪರಿವಾರವನ್ನು ದ್ವೇಷ ಹರಡುವ ಗುಂಪುಗಳ ಪಟ್ಟಿಗೆ ಸೇರಿಸಿ : ದಕ್ಷಿಣ ಏಷ್ಯಾ ಸಮುದಾಯಗಳಿಂದ...

ಆರ್‌ಎಸ್‌ಎಸ್‌, ಸಂಘ ಪರಿವಾರವನ್ನು ದ್ವೇಷ ಹರಡುವ ಗುಂಪುಗಳ ಪಟ್ಟಿಗೆ ಸೇರಿಸಿ : ದಕ್ಷಿಣ ಏಷ್ಯಾ ಸಮುದಾಯಗಳಿಂದ ಕೆನಡಾ ಪ್ರಧಾನಿಗೆ ಬಹಿರಂಗ ಪತ್ರ

- Advertisement -
- Advertisement -

ಕೆನಡಾದಲ್ಲಿರುವ ದಕ್ಷಿಣ ಏಷ್ಯಾದ 25 ಸಮುದಾಯಗಳ ಸದಸ್ಯರು ದೇಶದ ಪ್ರಧಾನಿ ಜಸ್ಟಿನ್ ಟ್ರುಡೊ ಅವರಿಗೆ ಬಹಿರಂಗ ಪತ್ರ ಬರೆದಿದ್ದು, ಕೆನಡಾದಲ್ಲಿರುವ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಮತ್ತು ಅದರ ಅಂಗ ಸಂಸ್ಥೆಗಳನ್ನು ದ್ವೇಷದ ಗುಂಪುಗಳು ಅಥವಾ ತೀವ್ರ ಬಲಪಂಥೀಯ ಉಗ್ರಗಾಮಿ ಸಂಘಟನೆಗಳ ಪಟ್ಟಿಗೆ ಸೇರಿಸುವಂತೆ ಸರ್ಕಾರವನ್ನು ಒತ್ತಾಯಿಸಿದ್ದಾರೆ ಎಂದು ವರದಿಯಾಗಿದೆ.

ಖಲಿಸ್ತಾನ್ ಪ್ರತ್ಯೇಖವಾದಿ ನಾಯಕ ಹರ್ದೀಪ್ ಸಿಂಗ್ ನಿಜ್ಜರ್ ಅನ್ನು 2023ರಲ್ಲಿ ಹತ್ಯೆಗೈದ ವಿಚಾರ ಭಾರತ-ಕೆನಡಾ ನಡುವೆ ರಾಜತಾಂತ್ರಿಕ ಬಿಕ್ಕಟ್ಟು ಸೃಷ್ಟಿಸಿರುವ ನಡುವೆ ಆರ್‌ಎಸ್ಎಸ್‌ ವಿರೋಧಿ ಕೂಗು ಕೇಳಿ ಬಂದಿರುವುದು ಮಹತ್ವ ಪಡೆದುಕೊಂಡಿದೆ.

ಕೆನಡಾದಲ್ಲಿ ಸಿಖ್ ವಿರೋಧಿ ಹಿಂಸಾಚಾರದ ಹಿಂದೆ ಆರ್‌ಎಸ್‌ಎಸ್ ಮತ್ತು ಸಂಘ ಪರಿವಾರದ ಪಾತ್ರವಿದೆ ಎಂದು ಕೆನಡಾದ ಮುಸ್ಲಿಮರ ರಾಷ್ಟ್ರೀಯ ಮಂಡಳಿಯು ಪ್ರಕಟಿಸಿದ 2023ರ ವರದಿಯನ್ನು ದಕ್ಷಿಣ ಏಷ್ಯಾದ ಸಮುದಾಯಗಳ ಸದಸ್ಯರ ಹೇಳಿಕೆ ಉಲ್ಲೇಖಿಸಿದೆ.

ಕೆನಡಾದಲ್ಲಿ ಸಂಘಪರಿವಾರ ಮತ್ತು ಆರ್‌ಎಸ್‌ಎಸ್‌ ಸಂಬಂಧಿತ ಗುಂಪುಗಳು ಹಿಂದೂ ಪ್ರಾಬಲ್ಯದ ಕೃತ್ಯಗಳ ಹಿಂದೆ ಇದೆ ಎಂದು 2023ರ ವರದಿ ಹೇಳಿತ್ತು.

“ಬಿಜೆಪಿಯು ಆರ್‌ಎಸ್‌ಎಸ್‌ನ ರಾಜಕೀಯ ಅಂಗವಾಗಿದೆ. ಇದು ಯುರೋಪಿಯನ್ ಫ್ಯಾಸಿಸಂನಿಂದ ಪ್ರೇರಿತವಾದ “ಹಿಂದುತ್ವ” ಅಥವಾ ಹಿಂದೂ ರಾಷ್ಟ್ರೀಯತೆಯನ್ನು ಉತ್ತೇಜಿಸುವ ಅರೆಸೈನಿಕ ಸಂಘಟನೆಯಾಗಿದೆ” ಎಂದು ದಕ್ಷಿಣ ಏಷ್ಯಾದ ಸಮುದಾಯಗಳ ಸದಸ್ಯರ ಹೇಳಿಕೆ ತಿಳಿಸಿದೆ.

“ಆರ್‌ಎಸ್‌ಎಸ್‌ನ ಸಂಸ್ಥಾಪಕರು ಸ್ಪಷ್ಟವಾಗಿ ಫ್ಯಾಸಿಸ್ಟ್ ಸಿದ್ಧಾಂತವನ್ನು ಪ್ರತಿಪಾದಿಸಿದ್ದಾರೆ. ಭಾರತದಲ್ಲಿ ಬಿಜೆಪಿಯ ಹತ್ತು ವರ್ಷಗಳ ಆಡಳಿತದಲ್ಲಿ ನಾವು ಇದರ ಜ್ವಲಂತ ಉದಾಹರಣೆಗಳನ್ನು ನೋಡಿದ್ದೇವೆ. 200 ಮಿಲಿಯನ್ ಮುಸ್ಲಿಂ ಜನಸಂಖ್ಯೆ ಹೊಂದಿರುವ ದೇಶವನ್ನು ಹಿಂದೂ ಜನಾಂಗೀಯ-ರಾಷ್ಟ್ರೀಯ ರಾಜ್ಯವನ್ನಾಗಿ ಮಾಡುವ ಗುರಿಯತ್ತ ಭಾರತದ ಸರ್ಕಾರ ಕೊಂಡೊಯ್ಯುತ್ತಿದೆ ಮತ್ತು ಇತರ ಅಲ್ಪಸಂಖ್ಯಾತ ಜನಸಂಖ್ಯೆಗಳಾದ ಸಿಖ್, ದಲಿತ, ಆದಿವಾಸಿ (ಸ್ಥಳೀಯ ಜನರು) ಹಾಗೂ ಕ್ರಿಶ್ಚಿಯನ್ನರನ್ನು ಎರಡನೇ ದರ್ಜೆಯ ಪ್ರಜೆಗಳಾಗಿ ಮಾಡಲಾಗಿದೆ” ಎಂದು ಹೇಳಿಕೆಯಲ್ಲಿ ಸೇರಿಸಲಾಗಿದೆ.

ಹಿಂದೂಸ್ ಫಾರ್ ಹ್ಯೂಮನ್ ರೈಟ್ಸ್‌, ಕೆನಡಿಯನ್ ಕೌನ್ಸಿಲ್ ಆಫ್ ಇಂಡಿಯನ್ ಮುಸ್ಲಿಮ್ಸ್ (ಸಿಸಿಐಎಂ) ಕೆನಡಿಯನ್ ಕೌನ್ಸಿಲ್ ಆಫ್ ಮುಸ್ಲಿಂ ವುಮೆನ್, ಮಾಂಟ್ರಿಯಲ್, ಕೆನಡಿಯನ್ ಫೋರಮ್ ಫಾರ್ ಹ್ಯೂಮನ್ ರೈಟ್ಸ್ ಅಂಡ್ ಡೆಮಾಕ್ರಸಿ ಇನ್ ಇಂಡಿಯಾ, ಕೆನಡಿಯನ್ಸ್ ಅಗೇನ್ಸ್ಟ್ ಒಪ್ರೆಶನ್ ಅಂಡ್ ಪರ್ಸಿಕ್ಯೂಶನ್ (ಸಿಎಒಪಿ), ಕೆನಡಿಯನ್ಸ್ ಫಾರ್ ಇಂಡಿಯನ್ ಡೆಮಾಕ್ರಸಿ (ಸಿಐಡಿ) ಮತ್ತು ಪ್ಯಾಲೆಸ್ತೀನಿಯನ್ ಅಂಡ್ ಜ್ಯೂವಿಶ್ ಯೂನಿಟಿ (ಪಿಎಜೆಯು) ಸೇರಿದಂತೆ ವಿವಿಧ ಸಂಘಟನೆಗಳ ಸದಸ್ಯರು ಈ ಪತ್ರಕ್ಕೆ ಸಹಿ ಹಾಕಿದ್ದಾರೆ.

“ಹಿಂದೂ ರಾಷ್ಟ್ರೀಯತಾವಾದಿ ಸರ್ಕಾರದ ಅಡಿಯಲ್ಲಿ, ಭಾರತದಲ್ಲಿ ಆಗಾಗ ಅಲ್ಪಸಂಖ್ಯಾತರ ವಿರುದ್ಧದ ದೌರ್ಜನ್ಯಗಳನ್ನು ನಿರ್ಭಯದಿಂದ ಮತ್ತು ಸಹಭಾಗಿತ್ವದಿಂದ ನಡೆಸಲಾಗಿದೆ. ಇತ್ತೀಚಿನ ವರದಿಗಳಲ್ಲಿನ ಪುರಾವೆಗಳು ಈ ಉಗ್ರಗಾಮಿ ಗುಂಪುಗಳ ಜಾಲವು ಸಿಖ್ಖರು, ಕೆನಡಾ ಮತ್ತು ಯುಎಸ್‌ನಲ್ಲಿರುವ ಇತರ ವಲಸೆ ಭಾರತೀಯ ಅಲ್ಪಸಂಖ್ಯಾತ ಸಮುದಾಯಗಳು ಮತ್ತು ಕಾರ್ಯಕರ್ತರನ್ನು ಗುರಿಯಾಗಿಸಿಕೊಂಡಿದೆ ಎಂದು ಖಚಿತಪಡಿಸುತ್ತದೆ. ಕೆನಡಾ ಮತ್ತು ವಿಶ್ವದಾದ್ಯಂತ ಹಿಂದೂ ರಾಷ್ಟ್ರೀಯತಾವಾದಿಗಳು ಮತ್ತು ಅವರ ಅಂಗ ಸಂಸ್ಥೆಗಳ ವ್ಯಾಪಕವಾದ ಜಾಲ ಹಬ್ಬಿದೆ. ಈಗ ಕೆನಡಾದಲ್ಲಿ ಈ ಜಾಲವು ಗೊಂದಲದ ಮಾದರಿಯ ಬಲಾತ್ಕಾರ, ಸಂಘಟಿತ ಅಪರಾಧ ಮತ್ತು ಮಾರಣಾಂತಿಕ ಹಿಂಸಾಚಾರದಲ್ಲಿ ತೊಡಗಿಸಿಕೊಂಡಿದೆ” ಎಂದು ಬಹಿರಂಗ ಪತ್ರದಲ್ಲಿ ಹೇಳಲಾಗಿದೆ.

ಕೆನಡಾ ಸರ್ಕಾರವು ದಕ್ಷಿಣ ಏಷ್ಯನ್ನರು ಮತ್ತು ಇತರ ಅಲ್ಪಸಂಖ್ಯಾತ ಸಮುದಾಯಗಳಿಗೆ ರಕ್ಷಣೆ ಒದಗಿಸಲು ಆರ್‌ಎಸ್‌ಎಸ್ ಮತ್ತು ಅದರ ಅಂಗ ಸಂಸ್ಥೆಗಳ ಮಾನವ ಹಕ್ಕುಗಳ ಉಲ್ಲಂಘನೆ ಮತ್ತು ಪ್ರಭಾವವನ್ನು ತನಿಖೆ ಮಾಡಬೇಕು. ಕೆನಡಾದಲ್ಲಿ ಆರ್‌ಎಸ್‌ಎಸ್ ಮತ್ತು ಅದರ ಅಂಗ ಸಂಸ್ಥೆಗಳನ್ನು ದ್ವೇಷದ ಗುಂಪುಗಳು ಅಥವಾ ತೀವ್ರ ಬಲಪಂಥೀಯ ಉಗ್ರಗಾಮಿ ಗುಂಪುಗಳಾಗಿ ಪಟ್ಟಿ ಮಾಡುವಂತೆ ಬಹಿರಂಗ ಪತ್ರವು ಒತ್ತಾಯಿಸಿದೆ.

ಸೌಜನ್ಯ : thewire.in

ಇದನ್ನೂ ಓದಿ : ಮುಂದುವರಿದ ಇಸ್ರೇಲ್ ಆಕ್ರಮಣ | ಗಾಝಾದಲ್ಲಿ 84 ಸಾವು, ಲೆಬನಾನ್‌ನಲ್ಲೂ ಹಲವರ ಹತ್ಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಿಲಯನ್ಸ್ ಇಂಡಸ್ಟ್ರೀಸ್‌ಗೆ ರೂ. 56.44 ಕೋಟಿ ಸಿಜಿಎಸ್‌ಟಿ ದಂಡ

ಮುಖೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಇಂಡಸ್ಟ್ರೀಸ್, ಅಹಮದಾಬಾದ್‌ನ ಸಿಜಿಎಸ್‌ಟಿ ಜಂಟಿ ಆಯುಕ್ತರಿಂದ 56.44 ಕೋಟಿ ರೂ. ದಂಡದ ಆದೇಶವನ್ನು ಸ್ವೀಕರಿಸಿದೆ ಎಂದು ಶುಕ್ರವಾರ ತಿಳಿಸಿದೆ. ನವೆಂಬರ್ 25 ರಂದು ಹೊರಡಿಸಲಾದ ಆದೇಶದಲ್ಲಿ, ಕಂಪನಿಯ ಇನ್‌ಪುಟ್...

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...