HomeUncategorizedಆರ್‌ಎಸ್‌ಎಸ್‌, ಸಂಘ ಪರಿವಾರವನ್ನು ದ್ವೇಷ ಹರಡುವ ಗುಂಪುಗಳ ಪಟ್ಟಿಗೆ ಸೇರಿಸಿ : ದಕ್ಷಿಣ ಏಷ್ಯಾ ಸಮುದಾಯಗಳಿಂದ...

ಆರ್‌ಎಸ್‌ಎಸ್‌, ಸಂಘ ಪರಿವಾರವನ್ನು ದ್ವೇಷ ಹರಡುವ ಗುಂಪುಗಳ ಪಟ್ಟಿಗೆ ಸೇರಿಸಿ : ದಕ್ಷಿಣ ಏಷ್ಯಾ ಸಮುದಾಯಗಳಿಂದ ಕೆನಡಾ ಪ್ರಧಾನಿಗೆ ಬಹಿರಂಗ ಪತ್ರ

- Advertisement -
- Advertisement -

ಕೆನಡಾದಲ್ಲಿರುವ ದಕ್ಷಿಣ ಏಷ್ಯಾದ 25 ಸಮುದಾಯಗಳ ಸದಸ್ಯರು ದೇಶದ ಪ್ರಧಾನಿ ಜಸ್ಟಿನ್ ಟ್ರುಡೊ ಅವರಿಗೆ ಬಹಿರಂಗ ಪತ್ರ ಬರೆದಿದ್ದು, ಕೆನಡಾದಲ್ಲಿರುವ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಮತ್ತು ಅದರ ಅಂಗ ಸಂಸ್ಥೆಗಳನ್ನು ದ್ವೇಷದ ಗುಂಪುಗಳು ಅಥವಾ ತೀವ್ರ ಬಲಪಂಥೀಯ ಉಗ್ರಗಾಮಿ ಸಂಘಟನೆಗಳ ಪಟ್ಟಿಗೆ ಸೇರಿಸುವಂತೆ ಸರ್ಕಾರವನ್ನು ಒತ್ತಾಯಿಸಿದ್ದಾರೆ ಎಂದು ವರದಿಯಾಗಿದೆ.

ಖಲಿಸ್ತಾನ್ ಪ್ರತ್ಯೇಖವಾದಿ ನಾಯಕ ಹರ್ದೀಪ್ ಸಿಂಗ್ ನಿಜ್ಜರ್ ಅನ್ನು 2023ರಲ್ಲಿ ಹತ್ಯೆಗೈದ ವಿಚಾರ ಭಾರತ-ಕೆನಡಾ ನಡುವೆ ರಾಜತಾಂತ್ರಿಕ ಬಿಕ್ಕಟ್ಟು ಸೃಷ್ಟಿಸಿರುವ ನಡುವೆ ಆರ್‌ಎಸ್ಎಸ್‌ ವಿರೋಧಿ ಕೂಗು ಕೇಳಿ ಬಂದಿರುವುದು ಮಹತ್ವ ಪಡೆದುಕೊಂಡಿದೆ.

ಕೆನಡಾದಲ್ಲಿ ಸಿಖ್ ವಿರೋಧಿ ಹಿಂಸಾಚಾರದ ಹಿಂದೆ ಆರ್‌ಎಸ್‌ಎಸ್ ಮತ್ತು ಸಂಘ ಪರಿವಾರದ ಪಾತ್ರವಿದೆ ಎಂದು ಕೆನಡಾದ ಮುಸ್ಲಿಮರ ರಾಷ್ಟ್ರೀಯ ಮಂಡಳಿಯು ಪ್ರಕಟಿಸಿದ 2023ರ ವರದಿಯನ್ನು ದಕ್ಷಿಣ ಏಷ್ಯಾದ ಸಮುದಾಯಗಳ ಸದಸ್ಯರ ಹೇಳಿಕೆ ಉಲ್ಲೇಖಿಸಿದೆ.

ಕೆನಡಾದಲ್ಲಿ ಸಂಘಪರಿವಾರ ಮತ್ತು ಆರ್‌ಎಸ್‌ಎಸ್‌ ಸಂಬಂಧಿತ ಗುಂಪುಗಳು ಹಿಂದೂ ಪ್ರಾಬಲ್ಯದ ಕೃತ್ಯಗಳ ಹಿಂದೆ ಇದೆ ಎಂದು 2023ರ ವರದಿ ಹೇಳಿತ್ತು.

“ಬಿಜೆಪಿಯು ಆರ್‌ಎಸ್‌ಎಸ್‌ನ ರಾಜಕೀಯ ಅಂಗವಾಗಿದೆ. ಇದು ಯುರೋಪಿಯನ್ ಫ್ಯಾಸಿಸಂನಿಂದ ಪ್ರೇರಿತವಾದ “ಹಿಂದುತ್ವ” ಅಥವಾ ಹಿಂದೂ ರಾಷ್ಟ್ರೀಯತೆಯನ್ನು ಉತ್ತೇಜಿಸುವ ಅರೆಸೈನಿಕ ಸಂಘಟನೆಯಾಗಿದೆ” ಎಂದು ದಕ್ಷಿಣ ಏಷ್ಯಾದ ಸಮುದಾಯಗಳ ಸದಸ್ಯರ ಹೇಳಿಕೆ ತಿಳಿಸಿದೆ.

“ಆರ್‌ಎಸ್‌ಎಸ್‌ನ ಸಂಸ್ಥಾಪಕರು ಸ್ಪಷ್ಟವಾಗಿ ಫ್ಯಾಸಿಸ್ಟ್ ಸಿದ್ಧಾಂತವನ್ನು ಪ್ರತಿಪಾದಿಸಿದ್ದಾರೆ. ಭಾರತದಲ್ಲಿ ಬಿಜೆಪಿಯ ಹತ್ತು ವರ್ಷಗಳ ಆಡಳಿತದಲ್ಲಿ ನಾವು ಇದರ ಜ್ವಲಂತ ಉದಾಹರಣೆಗಳನ್ನು ನೋಡಿದ್ದೇವೆ. 200 ಮಿಲಿಯನ್ ಮುಸ್ಲಿಂ ಜನಸಂಖ್ಯೆ ಹೊಂದಿರುವ ದೇಶವನ್ನು ಹಿಂದೂ ಜನಾಂಗೀಯ-ರಾಷ್ಟ್ರೀಯ ರಾಜ್ಯವನ್ನಾಗಿ ಮಾಡುವ ಗುರಿಯತ್ತ ಭಾರತದ ಸರ್ಕಾರ ಕೊಂಡೊಯ್ಯುತ್ತಿದೆ ಮತ್ತು ಇತರ ಅಲ್ಪಸಂಖ್ಯಾತ ಜನಸಂಖ್ಯೆಗಳಾದ ಸಿಖ್, ದಲಿತ, ಆದಿವಾಸಿ (ಸ್ಥಳೀಯ ಜನರು) ಹಾಗೂ ಕ್ರಿಶ್ಚಿಯನ್ನರನ್ನು ಎರಡನೇ ದರ್ಜೆಯ ಪ್ರಜೆಗಳಾಗಿ ಮಾಡಲಾಗಿದೆ” ಎಂದು ಹೇಳಿಕೆಯಲ್ಲಿ ಸೇರಿಸಲಾಗಿದೆ.

ಹಿಂದೂಸ್ ಫಾರ್ ಹ್ಯೂಮನ್ ರೈಟ್ಸ್‌, ಕೆನಡಿಯನ್ ಕೌನ್ಸಿಲ್ ಆಫ್ ಇಂಡಿಯನ್ ಮುಸ್ಲಿಮ್ಸ್ (ಸಿಸಿಐಎಂ) ಕೆನಡಿಯನ್ ಕೌನ್ಸಿಲ್ ಆಫ್ ಮುಸ್ಲಿಂ ವುಮೆನ್, ಮಾಂಟ್ರಿಯಲ್, ಕೆನಡಿಯನ್ ಫೋರಮ್ ಫಾರ್ ಹ್ಯೂಮನ್ ರೈಟ್ಸ್ ಅಂಡ್ ಡೆಮಾಕ್ರಸಿ ಇನ್ ಇಂಡಿಯಾ, ಕೆನಡಿಯನ್ಸ್ ಅಗೇನ್ಸ್ಟ್ ಒಪ್ರೆಶನ್ ಅಂಡ್ ಪರ್ಸಿಕ್ಯೂಶನ್ (ಸಿಎಒಪಿ), ಕೆನಡಿಯನ್ಸ್ ಫಾರ್ ಇಂಡಿಯನ್ ಡೆಮಾಕ್ರಸಿ (ಸಿಐಡಿ) ಮತ್ತು ಪ್ಯಾಲೆಸ್ತೀನಿಯನ್ ಅಂಡ್ ಜ್ಯೂವಿಶ್ ಯೂನಿಟಿ (ಪಿಎಜೆಯು) ಸೇರಿದಂತೆ ವಿವಿಧ ಸಂಘಟನೆಗಳ ಸದಸ್ಯರು ಈ ಪತ್ರಕ್ಕೆ ಸಹಿ ಹಾಕಿದ್ದಾರೆ.

“ಹಿಂದೂ ರಾಷ್ಟ್ರೀಯತಾವಾದಿ ಸರ್ಕಾರದ ಅಡಿಯಲ್ಲಿ, ಭಾರತದಲ್ಲಿ ಆಗಾಗ ಅಲ್ಪಸಂಖ್ಯಾತರ ವಿರುದ್ಧದ ದೌರ್ಜನ್ಯಗಳನ್ನು ನಿರ್ಭಯದಿಂದ ಮತ್ತು ಸಹಭಾಗಿತ್ವದಿಂದ ನಡೆಸಲಾಗಿದೆ. ಇತ್ತೀಚಿನ ವರದಿಗಳಲ್ಲಿನ ಪುರಾವೆಗಳು ಈ ಉಗ್ರಗಾಮಿ ಗುಂಪುಗಳ ಜಾಲವು ಸಿಖ್ಖರು, ಕೆನಡಾ ಮತ್ತು ಯುಎಸ್‌ನಲ್ಲಿರುವ ಇತರ ವಲಸೆ ಭಾರತೀಯ ಅಲ್ಪಸಂಖ್ಯಾತ ಸಮುದಾಯಗಳು ಮತ್ತು ಕಾರ್ಯಕರ್ತರನ್ನು ಗುರಿಯಾಗಿಸಿಕೊಂಡಿದೆ ಎಂದು ಖಚಿತಪಡಿಸುತ್ತದೆ. ಕೆನಡಾ ಮತ್ತು ವಿಶ್ವದಾದ್ಯಂತ ಹಿಂದೂ ರಾಷ್ಟ್ರೀಯತಾವಾದಿಗಳು ಮತ್ತು ಅವರ ಅಂಗ ಸಂಸ್ಥೆಗಳ ವ್ಯಾಪಕವಾದ ಜಾಲ ಹಬ್ಬಿದೆ. ಈಗ ಕೆನಡಾದಲ್ಲಿ ಈ ಜಾಲವು ಗೊಂದಲದ ಮಾದರಿಯ ಬಲಾತ್ಕಾರ, ಸಂಘಟಿತ ಅಪರಾಧ ಮತ್ತು ಮಾರಣಾಂತಿಕ ಹಿಂಸಾಚಾರದಲ್ಲಿ ತೊಡಗಿಸಿಕೊಂಡಿದೆ” ಎಂದು ಬಹಿರಂಗ ಪತ್ರದಲ್ಲಿ ಹೇಳಲಾಗಿದೆ.

ಕೆನಡಾ ಸರ್ಕಾರವು ದಕ್ಷಿಣ ಏಷ್ಯನ್ನರು ಮತ್ತು ಇತರ ಅಲ್ಪಸಂಖ್ಯಾತ ಸಮುದಾಯಗಳಿಗೆ ರಕ್ಷಣೆ ಒದಗಿಸಲು ಆರ್‌ಎಸ್‌ಎಸ್ ಮತ್ತು ಅದರ ಅಂಗ ಸಂಸ್ಥೆಗಳ ಮಾನವ ಹಕ್ಕುಗಳ ಉಲ್ಲಂಘನೆ ಮತ್ತು ಪ್ರಭಾವವನ್ನು ತನಿಖೆ ಮಾಡಬೇಕು. ಕೆನಡಾದಲ್ಲಿ ಆರ್‌ಎಸ್‌ಎಸ್ ಮತ್ತು ಅದರ ಅಂಗ ಸಂಸ್ಥೆಗಳನ್ನು ದ್ವೇಷದ ಗುಂಪುಗಳು ಅಥವಾ ತೀವ್ರ ಬಲಪಂಥೀಯ ಉಗ್ರಗಾಮಿ ಗುಂಪುಗಳಾಗಿ ಪಟ್ಟಿ ಮಾಡುವಂತೆ ಬಹಿರಂಗ ಪತ್ರವು ಒತ್ತಾಯಿಸಿದೆ.

ಸೌಜನ್ಯ : thewire.in

ಇದನ್ನೂ ಓದಿ : ಮುಂದುವರಿದ ಇಸ್ರೇಲ್ ಆಕ್ರಮಣ | ಗಾಝಾದಲ್ಲಿ 84 ಸಾವು, ಲೆಬನಾನ್‌ನಲ್ಲೂ ಹಲವರ ಹತ್ಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...

ಪ್ರತಿಭಟನೆಯನ್ನು ಹತ್ತಿಕ್ಕಲು ಅಕ್ಕಾಡಕ್ಕಿಳಿದಿವೆ ಹಿಂದುತ್ವವಾದಿ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ಸ್‌ ಮತ್ತು ಉಗ್ರ ಗೂಂಡಾ ಪಡೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಜೂನ್ 20ರಂದು ಶುರುವಾಗಿದ್ದ ಈ ಆಂದೋಲನ ಇದೀಗ ದೇಶಾದ್ಯಂತ ತೀವ್ರ ಸ್ವರೂಪ ಪಡೆದುಕೊಂಡಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಸಿಜೆಪಿ ಪಟ್ಟು ಹಿಡಿದಿದ್ದು, ಇಂದು...

ಜಿರಳೆಗಳನ್ನು ಸಾಯಿಸಿ ಎಂದು ವಿವಾದಾತ್ಮಕ ಪೋಸ್ಟ್‌ ಹಾಕಿದ ಪ್ರಜ್ಞಾ ಸಿಂಗ್ ಠಾಕೂರ್

ಮಾಜಿ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರು ದೇಶದಿಂದ ಜಿರಳೆಗಳನ್ನು ಶಾಶ್ವತವಾಗಿ ನಿರ್ಮೂಲನೆ ಮಾಡಲು ವ್ಯವಸ್ಥೆ ಮಾಡುವಂತೆ ದೇಶದ ನಾಯಕರಿಗೆ ಮನವಿ ಮಾಡಿದ್ದಾರೆ. X (ಟ್ವಿಟರ್) ನಲ್ಲಿ ಮಾಡಿದ ಪೋಸ್ಟ್‌ನಲ್ಲಿ, 2008 ರ...

ಸೋನಮ್ ವಾಂಗ್ಚುಕ್ ಮತ್ತು ಸರ್ಕಾರದ ಡೀಲ್‌ನಲ್ಲಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಅಂಶವೇ ಇಲ್ಲ

ಕೇಂದ್ರದ ಮೋದಿ ಸರ್ಕಾರ ತನ್ನ ಮೂರು ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಒಪ್ಪಿಕೊಂಡ ನಂತರ, ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಜುಲೈ 23ರ ಗುರುವಾರ ತಮ್ಮ 26 ದಿನಗಳ ಸುದೀರ್ಘ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದ್ದಾರೆ....

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...