HomeUncategorizedಆರ್‌ಎಸ್‌ಎಸ್‌, ಸಂಘ ಪರಿವಾರವನ್ನು ದ್ವೇಷ ಹರಡುವ ಗುಂಪುಗಳ ಪಟ್ಟಿಗೆ ಸೇರಿಸಿ : ದಕ್ಷಿಣ ಏಷ್ಯಾ ಸಮುದಾಯಗಳಿಂದ...

ಆರ್‌ಎಸ್‌ಎಸ್‌, ಸಂಘ ಪರಿವಾರವನ್ನು ದ್ವೇಷ ಹರಡುವ ಗುಂಪುಗಳ ಪಟ್ಟಿಗೆ ಸೇರಿಸಿ : ದಕ್ಷಿಣ ಏಷ್ಯಾ ಸಮುದಾಯಗಳಿಂದ ಕೆನಡಾ ಪ್ರಧಾನಿಗೆ ಬಹಿರಂಗ ಪತ್ರ

- Advertisement -
- Advertisement -

ಕೆನಡಾದಲ್ಲಿರುವ ದಕ್ಷಿಣ ಏಷ್ಯಾದ 25 ಸಮುದಾಯಗಳ ಸದಸ್ಯರು ದೇಶದ ಪ್ರಧಾನಿ ಜಸ್ಟಿನ್ ಟ್ರುಡೊ ಅವರಿಗೆ ಬಹಿರಂಗ ಪತ್ರ ಬರೆದಿದ್ದು, ಕೆನಡಾದಲ್ಲಿರುವ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಮತ್ತು ಅದರ ಅಂಗ ಸಂಸ್ಥೆಗಳನ್ನು ದ್ವೇಷದ ಗುಂಪುಗಳು ಅಥವಾ ತೀವ್ರ ಬಲಪಂಥೀಯ ಉಗ್ರಗಾಮಿ ಸಂಘಟನೆಗಳ ಪಟ್ಟಿಗೆ ಸೇರಿಸುವಂತೆ ಸರ್ಕಾರವನ್ನು ಒತ್ತಾಯಿಸಿದ್ದಾರೆ ಎಂದು ವರದಿಯಾಗಿದೆ.

ಖಲಿಸ್ತಾನ್ ಪ್ರತ್ಯೇಖವಾದಿ ನಾಯಕ ಹರ್ದೀಪ್ ಸಿಂಗ್ ನಿಜ್ಜರ್ ಅನ್ನು 2023ರಲ್ಲಿ ಹತ್ಯೆಗೈದ ವಿಚಾರ ಭಾರತ-ಕೆನಡಾ ನಡುವೆ ರಾಜತಾಂತ್ರಿಕ ಬಿಕ್ಕಟ್ಟು ಸೃಷ್ಟಿಸಿರುವ ನಡುವೆ ಆರ್‌ಎಸ್ಎಸ್‌ ವಿರೋಧಿ ಕೂಗು ಕೇಳಿ ಬಂದಿರುವುದು ಮಹತ್ವ ಪಡೆದುಕೊಂಡಿದೆ.

ಕೆನಡಾದಲ್ಲಿ ಸಿಖ್ ವಿರೋಧಿ ಹಿಂಸಾಚಾರದ ಹಿಂದೆ ಆರ್‌ಎಸ್‌ಎಸ್ ಮತ್ತು ಸಂಘ ಪರಿವಾರದ ಪಾತ್ರವಿದೆ ಎಂದು ಕೆನಡಾದ ಮುಸ್ಲಿಮರ ರಾಷ್ಟ್ರೀಯ ಮಂಡಳಿಯು ಪ್ರಕಟಿಸಿದ 2023ರ ವರದಿಯನ್ನು ದಕ್ಷಿಣ ಏಷ್ಯಾದ ಸಮುದಾಯಗಳ ಸದಸ್ಯರ ಹೇಳಿಕೆ ಉಲ್ಲೇಖಿಸಿದೆ.

ಕೆನಡಾದಲ್ಲಿ ಸಂಘಪರಿವಾರ ಮತ್ತು ಆರ್‌ಎಸ್‌ಎಸ್‌ ಸಂಬಂಧಿತ ಗುಂಪುಗಳು ಹಿಂದೂ ಪ್ರಾಬಲ್ಯದ ಕೃತ್ಯಗಳ ಹಿಂದೆ ಇದೆ ಎಂದು 2023ರ ವರದಿ ಹೇಳಿತ್ತು.

“ಬಿಜೆಪಿಯು ಆರ್‌ಎಸ್‌ಎಸ್‌ನ ರಾಜಕೀಯ ಅಂಗವಾಗಿದೆ. ಇದು ಯುರೋಪಿಯನ್ ಫ್ಯಾಸಿಸಂನಿಂದ ಪ್ರೇರಿತವಾದ “ಹಿಂದುತ್ವ” ಅಥವಾ ಹಿಂದೂ ರಾಷ್ಟ್ರೀಯತೆಯನ್ನು ಉತ್ತೇಜಿಸುವ ಅರೆಸೈನಿಕ ಸಂಘಟನೆಯಾಗಿದೆ” ಎಂದು ದಕ್ಷಿಣ ಏಷ್ಯಾದ ಸಮುದಾಯಗಳ ಸದಸ್ಯರ ಹೇಳಿಕೆ ತಿಳಿಸಿದೆ.

“ಆರ್‌ಎಸ್‌ಎಸ್‌ನ ಸಂಸ್ಥಾಪಕರು ಸ್ಪಷ್ಟವಾಗಿ ಫ್ಯಾಸಿಸ್ಟ್ ಸಿದ್ಧಾಂತವನ್ನು ಪ್ರತಿಪಾದಿಸಿದ್ದಾರೆ. ಭಾರತದಲ್ಲಿ ಬಿಜೆಪಿಯ ಹತ್ತು ವರ್ಷಗಳ ಆಡಳಿತದಲ್ಲಿ ನಾವು ಇದರ ಜ್ವಲಂತ ಉದಾಹರಣೆಗಳನ್ನು ನೋಡಿದ್ದೇವೆ. 200 ಮಿಲಿಯನ್ ಮುಸ್ಲಿಂ ಜನಸಂಖ್ಯೆ ಹೊಂದಿರುವ ದೇಶವನ್ನು ಹಿಂದೂ ಜನಾಂಗೀಯ-ರಾಷ್ಟ್ರೀಯ ರಾಜ್ಯವನ್ನಾಗಿ ಮಾಡುವ ಗುರಿಯತ್ತ ಭಾರತದ ಸರ್ಕಾರ ಕೊಂಡೊಯ್ಯುತ್ತಿದೆ ಮತ್ತು ಇತರ ಅಲ್ಪಸಂಖ್ಯಾತ ಜನಸಂಖ್ಯೆಗಳಾದ ಸಿಖ್, ದಲಿತ, ಆದಿವಾಸಿ (ಸ್ಥಳೀಯ ಜನರು) ಹಾಗೂ ಕ್ರಿಶ್ಚಿಯನ್ನರನ್ನು ಎರಡನೇ ದರ್ಜೆಯ ಪ್ರಜೆಗಳಾಗಿ ಮಾಡಲಾಗಿದೆ” ಎಂದು ಹೇಳಿಕೆಯಲ್ಲಿ ಸೇರಿಸಲಾಗಿದೆ.

ಹಿಂದೂಸ್ ಫಾರ್ ಹ್ಯೂಮನ್ ರೈಟ್ಸ್‌, ಕೆನಡಿಯನ್ ಕೌನ್ಸಿಲ್ ಆಫ್ ಇಂಡಿಯನ್ ಮುಸ್ಲಿಮ್ಸ್ (ಸಿಸಿಐಎಂ) ಕೆನಡಿಯನ್ ಕೌನ್ಸಿಲ್ ಆಫ್ ಮುಸ್ಲಿಂ ವುಮೆನ್, ಮಾಂಟ್ರಿಯಲ್, ಕೆನಡಿಯನ್ ಫೋರಮ್ ಫಾರ್ ಹ್ಯೂಮನ್ ರೈಟ್ಸ್ ಅಂಡ್ ಡೆಮಾಕ್ರಸಿ ಇನ್ ಇಂಡಿಯಾ, ಕೆನಡಿಯನ್ಸ್ ಅಗೇನ್ಸ್ಟ್ ಒಪ್ರೆಶನ್ ಅಂಡ್ ಪರ್ಸಿಕ್ಯೂಶನ್ (ಸಿಎಒಪಿ), ಕೆನಡಿಯನ್ಸ್ ಫಾರ್ ಇಂಡಿಯನ್ ಡೆಮಾಕ್ರಸಿ (ಸಿಐಡಿ) ಮತ್ತು ಪ್ಯಾಲೆಸ್ತೀನಿಯನ್ ಅಂಡ್ ಜ್ಯೂವಿಶ್ ಯೂನಿಟಿ (ಪಿಎಜೆಯು) ಸೇರಿದಂತೆ ವಿವಿಧ ಸಂಘಟನೆಗಳ ಸದಸ್ಯರು ಈ ಪತ್ರಕ್ಕೆ ಸಹಿ ಹಾಕಿದ್ದಾರೆ.

“ಹಿಂದೂ ರಾಷ್ಟ್ರೀಯತಾವಾದಿ ಸರ್ಕಾರದ ಅಡಿಯಲ್ಲಿ, ಭಾರತದಲ್ಲಿ ಆಗಾಗ ಅಲ್ಪಸಂಖ್ಯಾತರ ವಿರುದ್ಧದ ದೌರ್ಜನ್ಯಗಳನ್ನು ನಿರ್ಭಯದಿಂದ ಮತ್ತು ಸಹಭಾಗಿತ್ವದಿಂದ ನಡೆಸಲಾಗಿದೆ. ಇತ್ತೀಚಿನ ವರದಿಗಳಲ್ಲಿನ ಪುರಾವೆಗಳು ಈ ಉಗ್ರಗಾಮಿ ಗುಂಪುಗಳ ಜಾಲವು ಸಿಖ್ಖರು, ಕೆನಡಾ ಮತ್ತು ಯುಎಸ್‌ನಲ್ಲಿರುವ ಇತರ ವಲಸೆ ಭಾರತೀಯ ಅಲ್ಪಸಂಖ್ಯಾತ ಸಮುದಾಯಗಳು ಮತ್ತು ಕಾರ್ಯಕರ್ತರನ್ನು ಗುರಿಯಾಗಿಸಿಕೊಂಡಿದೆ ಎಂದು ಖಚಿತಪಡಿಸುತ್ತದೆ. ಕೆನಡಾ ಮತ್ತು ವಿಶ್ವದಾದ್ಯಂತ ಹಿಂದೂ ರಾಷ್ಟ್ರೀಯತಾವಾದಿಗಳು ಮತ್ತು ಅವರ ಅಂಗ ಸಂಸ್ಥೆಗಳ ವ್ಯಾಪಕವಾದ ಜಾಲ ಹಬ್ಬಿದೆ. ಈಗ ಕೆನಡಾದಲ್ಲಿ ಈ ಜಾಲವು ಗೊಂದಲದ ಮಾದರಿಯ ಬಲಾತ್ಕಾರ, ಸಂಘಟಿತ ಅಪರಾಧ ಮತ್ತು ಮಾರಣಾಂತಿಕ ಹಿಂಸಾಚಾರದಲ್ಲಿ ತೊಡಗಿಸಿಕೊಂಡಿದೆ” ಎಂದು ಬಹಿರಂಗ ಪತ್ರದಲ್ಲಿ ಹೇಳಲಾಗಿದೆ.

ಕೆನಡಾ ಸರ್ಕಾರವು ದಕ್ಷಿಣ ಏಷ್ಯನ್ನರು ಮತ್ತು ಇತರ ಅಲ್ಪಸಂಖ್ಯಾತ ಸಮುದಾಯಗಳಿಗೆ ರಕ್ಷಣೆ ಒದಗಿಸಲು ಆರ್‌ಎಸ್‌ಎಸ್ ಮತ್ತು ಅದರ ಅಂಗ ಸಂಸ್ಥೆಗಳ ಮಾನವ ಹಕ್ಕುಗಳ ಉಲ್ಲಂಘನೆ ಮತ್ತು ಪ್ರಭಾವವನ್ನು ತನಿಖೆ ಮಾಡಬೇಕು. ಕೆನಡಾದಲ್ಲಿ ಆರ್‌ಎಸ್‌ಎಸ್ ಮತ್ತು ಅದರ ಅಂಗ ಸಂಸ್ಥೆಗಳನ್ನು ದ್ವೇಷದ ಗುಂಪುಗಳು ಅಥವಾ ತೀವ್ರ ಬಲಪಂಥೀಯ ಉಗ್ರಗಾಮಿ ಗುಂಪುಗಳಾಗಿ ಪಟ್ಟಿ ಮಾಡುವಂತೆ ಬಹಿರಂಗ ಪತ್ರವು ಒತ್ತಾಯಿಸಿದೆ.

ಸೌಜನ್ಯ : thewire.in

ಇದನ್ನೂ ಓದಿ : ಮುಂದುವರಿದ ಇಸ್ರೇಲ್ ಆಕ್ರಮಣ | ಗಾಝಾದಲ್ಲಿ 84 ಸಾವು, ಲೆಬನಾನ್‌ನಲ್ಲೂ ಹಲವರ ಹತ್ಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...

ತೆಲಂಗಾಣ| ಕೆಸಿಆರ್‌ ಮನೆ ಮುಂದೆ ದಲಿತ ಮುಖಂಡರಿಂದ ಪ್ರತಿಭಟನೆ; ಬಿಆರ್‌ಎಸ್‌ ಕಾರ್ಯಕರ್ತರಿಂದ ನೀರು-ಅರಿಶಿನ ಬಳಸಿ ರಸ್ತೆ ಶುದ್ಧೀಕರಣ

ತೆಲಂಗಾಣದ ಸಿದ್ಧಾಪೇಟೆ ಜಿಲ್ಲೆಯ ಎರ್ರವಳ್ಳಿಯಲ್ಲಿರುವ ಬಿಆರ್‌ಎಸ್ ಅಧ್ಯಕ್ಷ ಕೆ. ಚಂದ್ರಶೇಖರ ರಾವ್ (ಕೆಸಿಆರ್) ಅವರ ಫಾರ್ಮ್ ಹೌಸ್ ಬಳಿ ದಲಿತ ಮುಖಂಡರು ಮತ್ತು ಕಾಂಗ್ರೆಸ್ ನಡೆಸಿದ ಪ್ರತಿಭಟನೆಯ ನಂತರ, ಬಿಆರ್‌ಎಸ್ ನಾಯಕರು ನಡೆಸಿದ...

ಉದ್ಯಮಿಗಳಾದ ನಂದನ್ ನಿಲೇಕಣಿ- ನಿಖಿಲ್ ಕಾಮತ್, ನಟ ಶಿವರಾಜ್‌ಕುಮಾರ್ ಅವರಿಗೂ ಎಸ್‌ಐಆರ್ ನೋಟಿಸ್‌

ಇನ್ಫೋಸಿಸ್ ಸಹ-ಸಂಸ್ಥಾಪಕ, ಕೇಂದ್ರ ಸರ್ಕಾರದ 'ಪರೀಕ್ಷಾ ಸುಧಾರಣಾ ಉನ್ನತ ಮಟ್ಟದ ಕಾರ್ಯಪಡೆ' ಮುಕ್ಯಸ್ಥ ನಂದನ್ ನಿಲೇಕಣಿ ಹಾಗೂ ಅವರ ಇಡೀ ಕುಟುಂಬವು, ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ಚುನಾವಣಾ...

ರಾಷ್ಟ್ರೀಯ ಮಹಿಳಾ ಆಯೋಗದ ಕಾರ್ಯಾಗಾರದಲ್ಲಿ ಬರೀ ಹಿಂದಿ ಮಾತು : ಆಕ್ಷೇಪ ವ್ಯಕ್ತಪಡಿಸಿ ಹೊರನಡೆದ ಕೇರಳದ ಶಾಸಕರು

ರಾಷ್ಟ್ರೀಯ ಮಹಿಳಾ ಆಯೋಗ (NCW) ಮಂಗಳವಾರ (ಸೆ.8) ಹಮ್ಮಿಕೊಂಡಿದ್ದ ಕಾರ್ಯಾಗಾರದಲ್ಲಿ, ಬಹುಪಾಲು ಸೆಷನ್‌ಗಳನ್ನು ಹಿಂದಿ ಭಾಷೆಯಲ್ಲೇ ನಡೆಸಲಾಗುತ್ತಿದೆ ಮತ್ತು ಹಿಂದಿ ಮಾತನಾಡದ ರಾಜ್ಯಗಳ ಭಾಗವಹಿಸುವಿಕೆಗೆ ಕರಾರುವಕ್ಕಾಗಿ ನಡವಳಿಕೆಗಳನ್ನು ಅರ್ಥಮಾಡಿಕೊಳ್ಳಲು ಕಷ್ಟವಾಗುತ್ತಿದೆ ಎಂದು ಆರೋಪಿಸಿ,...

SIR: 2ಲಕ್ಷ ಮತದಾರರಲ್ಲಿ ಬಸವನಗುಡಿಯಲ್ಲಿ ಉಳಿಯುವುದು 88 ಸಾವಿರ ಮಾತ್ರಾ?: SIR ಪರಿಷ್ಕರಣೆಯ ಆಘಾತಕಾರಿ ಲೆಕ್ಕಾಚಾರ

2023ರ ಚುನಾವಣೆಯಲ್ಲಿ ಬಸವನಗುಡಿಯಲ್ಲಿ 1.28 ಲಕ್ಷ ಮತಗಳು ಚಲಾಯಿಸಲ್ಪಟ್ಟಿದ್ದವು. ಆದರೆ ಪ್ರಸ್ತುತ SIR ಪ್ರಕ್ರಿಯೆಯಲ್ಲಿ 1.13 ಲಕ್ಷ ಜನರನ್ನು ಹೊರಗಿಟ್ಟು, ಕರಡು ಪಟ್ಟಿಯಲ್ಲಿ ಕೇವಲ 1.35 ಲಕ್ಷ ಮತದಾರರನ್ನು ಮಾತ್ರ ಉಳಿಸಿಕೊಳ್ಳಲಾಗಿದೆ. ಇದರ...

ಕರ್ನಾಟಕ ಎಸ್ಐಆರ್: 43.81 ಲಕ್ಷ ಜನರಿಗೆ SIR ನೋಟಿಸ್: ಗಣ್ಯರ ಹೆಸರು ಸರಿಪಡಿಸುವ ಚುನಾವಣಾ ಆಯೋಗಕ್ಕೆ ಜನ-ಸಾಮಾನ್ಯರ ನೋವು ಕಾಣುತ್ತಿಲ್ಲವೇ?

ಕರ್ನಾಟಕದಲ್ಲಿ SIR ವೇಳೆ 43.81 ಲಕ್ಷ ಮತದಾರರ ಪ್ರಕರಣಗಳಿಗೆ ನೋಟಿಸ್‌ಗಳನ್ನು ಸೃಷ್ಟಿಸಲಾಗಿದ್ದು, ಅವರ ದಾಖಲೆಗಳ ಪರಿಶೀಲನೆಗೆ ಕ್ರಮ ಕೈಗೊಳ್ಳಲಾಗಿದೆ. ಈ ಪೈಕಿ 23.45 ಲಕ್ಷ ಪ್ರಕರಣಗಳಲ್ಲಿ 2002ರ ಮತದಾರರ ಪಟ್ಟಿಯೊಂದಿಗೆ ಮ್ಯಾಪಿಂಗ್ ಆಗದಿರುವುದು...

ಪಿಣರಾಯಿ ವಿಜಯನ್ ವಿರುದ್ಧ ಎಫ್‌ಐಆರ್‌ಗೆ ಇಡಿ ಪತ್ರ: ಕಾನೂನು ಪರಿಶೀಲನೆ ನಡೆಸಲಾಗುವುದು ಎಂದ ಸಿಎಂ ವಿ.ಡಿ. ಸತೀಶನ್

ಆರೋಪಿತ ಸಿಎಂಆರ್‌ಎಲ್ ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಪಿಐ(ಎಂ) ಹಿರಿಯ ನಾಯಕ ಪಿಣರಾಯಿ ವಿಜಯನ್ ಮತ್ತು ಇತರರ ವಿರುದ್ಧ ಎಫ್‌ಐಆರ್ ದಾಖಲಿಸಲು ಜಾರಿ ನಿರ್ದೇಶನಾಲಯ (ಇಡಿ) ನೀಡಿರುವ ಪತ್ರವನ್ನು ಕಾನೂನುಬದ್ಧವಾಗಿ ಪರಿಶೀಲಿಸಲಾಗುವುದು, ಅದರ ನಂತರ...

‘ಸಿಇಸಿ ಜ್ಞಾನೇಶ್ ಕುಮಾರ್ ಮಗಳು’ : ನೋಯ್ಡಾ ಜಿಲ್ಲಾಧಿಕಾರಿಗೆ ಅಲಹಾಬಾದ್ ಹೈಕೋರ್ಟ್ ತಪರಾಕಿ ಬೆನ್ನಲ್ಲೇ ವಿಪಕ್ಷ ನಾಯಕರ ವಾಗ್ದಾಳಿ

ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ (NSA) ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿನಿಯೊಬ್ಬರನ್ನು ಮುನ್ನೆಚ್ಚರಿಕೆ ಕ್ರಮವಾಗಿ ವಶಕ್ಕೆ ಪಡೆದಿದ್ದಕ್ಕಾಗಿ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ಮಗಳು ಹಾಗೂ ನೋಯ್ಡಾ ಜಿಲ್ಲಾಧಿಕಾರಿ ಮೇಧಾ ರೂಪಮ್ ಅವರನ್ನು...

ಮಲ್ಲಿಕಾರ್ಜುನ ಖರ್ಗೆ ಸಭೆಯ ನಂತರ ‘ಶುದ್ಧೀಕರಣ’ ವಿವಾದ: ಅಪರಿಚಿತರ ವಿರುದ್ಧ ಎಫ್‌ಐಆರ್, ತೀವ್ರ ಆಕ್ರೋಶ ವ್ಯಕ್ತಪಡಿಸಿದ ಕಾಂಗ್ರೆಸ್!

ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸಾರ್ವಜನಿಕ ಸಭೆ ನಡೆದ ನಂತರ, ಆ ಮೈದಾನವನ್ನು 'ಶುದ್ಧೀಕರಣ' (ಶುದ್ಧೀಕರಣ ಯಜ್ಞ) ಗೊಳಿಸಿದ ವಿವಾದಾತ್ಮಕ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲ್ದ್ವಾನಿಯ ಕೊತ್ವಾಲಿ...

ದೆಹಲಿ ಮತದಾರರ ಪಟ್ಟಿಗೆ ರಾಘವ್ ಚಡ್ಡಾ ಹೆಸರು ಸೇರ್ಪಡೆ; ಸೂಕ್ತ ಪ್ರಕ್ರಿಯೆ ಅನುಸರಿಸಿಲ್ಲ ಎಂದು ಎಎಪಿ ಆರೋಪ

ರಾಷ್ಟ್ರ ರಾಜಧಾನಿಯ ಮತದಾರರ ಪಟ್ಟಿಯ ಪ್ರಸ್ತುತ ನಡೆಯುತ್ತಿರುವ ವಿಶೇಷ ಪರಿಷ್ಕರಣೆ (ಎಸ್‌ಐಆರ್) ಅಡಿಯಲ್ಲಿ, ಪಂಜಾಬ್‌ನ ಬಿಜೆಪಿ ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರನ್ನು ದೆಹಲಿಯ ಮತದಾರರ ಪಟ್ಟಿಗೆ ಸೇರಿಸಲಾಗಿದೆ ಎಂದು ಚುನಾವಣಾ...