Homeಅಂತರಾಷ್ಟ್ರೀಯ2050ರ ವೇಳೆಗೆ ಮುಂಬೈ, ಕೋಲ್ಕತ್ತಾ ನಗರಗಳು ಸಮುದ್ರದೊಳಗೆ ಮುಳುಗಲಿವೆಯೇ? ಹೊಸ ವರದಿ ಬಿಚ್ಚಟ್ಟ ವಾಸ್ತವ....

2050ರ ವೇಳೆಗೆ ಮುಂಬೈ, ಕೋಲ್ಕತ್ತಾ ನಗರಗಳು ಸಮುದ್ರದೊಳಗೆ ಮುಳುಗಲಿವೆಯೇ? ಹೊಸ ವರದಿ ಬಿಚ್ಚಟ್ಟ ವಾಸ್ತವ….

- Advertisement -
- Advertisement -

ಪ್ರಾಕೃತಿಕ ವಿಕೋಪದಿಂದ ಭಾರತದ ಹಲವು ಪ್ರದೇಶಗಳು ಈಗಾಗಲೇ ತತ್ತರಿಸಿ ಹೋಗಿವೆ. ಚಂಡಮಾರುತ, ಮಳೆ, ಪ್ರವಾಹಕ್ಕೆ ತುತ್ತಾಗಿ ಭಾರಿ ಹಾನಿಯುಂಟಾಗಿದೆ. ಲಕ್ಷಾಂತರ ಜನ ಸಂತ್ರಸ್ತರಾಗಿದ್ದು, ಮನೆ-ಮಠ ಕಳೆದುಕೊಂಡಿದ್ದಾರೆ. ಹೀಗಿರುವಾಗ ಅಮೆರಿಕ ಮೂಲದ ಸಂಸ್ಥೆಯಿಂದ ಬಿಡುಗಡೆ ಮಾಡಿದ ವರದಿ ಜನರನ್ನು ಮತ್ತಷ್ಟು ಗಾಬರಿ ಬೀಳಿಸುವಂತಿದೆ.

ಅಮೆರಿಕ ಮೂಲದ ಹವಾಮಾನ ಕೇಂದ್ರ ಅಧ್ಯಯನ ಜರ್ನಲ್ ನಲ್ಲಿ ಪ್ರಕಟಗೊಂಡ ವರದಿ, ಭಾರತಕ್ಕೆ ಜಲದಿಗ್ಬಂಧನ ಉಂಟಾಗುವ ಸಾಧ್ಯತೆಗಳನ್ನು ಗಂಭೀರವಾಗಿ ಉಲ್ಲೇಖಿಸಿದೆ. 2050 ರ ವೇಳೆಗೆ ಕಡಲ್ಕೊರೆತ ಮತ್ತು ಸಮುದ್ರದ ಉಬ್ಬರ, ಉಕ್ಕುವಿಕೆ, ಕಾರ್ಬನ್ ಡೈಆಕ್ಸೈಡ್ ಪ್ರಮಾಣದ ಹೆಚ್ಚಳದಿಂದ ಕರಾವಳಿ ಭಾಗಗಳಾದ ಮುಂಬೈ, ನವೀ ಮುಂಬೈ, ಕೋಲ್ಕತ್ತಾ ನಗರಗಳು ಮುಳುಗಿ ಹೋಗಲಿವೆ. ಕಡಲ್ಕೊರೆತದ ಹೆಚ್ಚಳದಿಂದ ಈಗ 50 ಲಕ್ಷ ಜನ ಮಾತ್ರ ಸಂತ್ರಸ್ತರಾಗಿದ್ದಾರೆ. ಇದನ್ನು ತಡೆಗಟ್ಟಲು ಮುಂಜಾಗ್ರತಾ ಕ್ರಮ ಕೈಗೊಳ್ಳದಿದ್ದರೆ ಮೂರೂವರೆ ಕೋಟಿ ಜನ ಸಂಕಷ್ಟ ಅನುಭವಿಸಲಿದ್ದಾರೆ ಎಂದು ವರದಿ ಹೇಳಿದೆ.

ಯುಎಸ್ ಮೂಲದ ಹವಾಮಾನ ಸಂಶೋಧನೆ ಮತ್ತು ಸಂವಹನ ಸಂಸ್ಥೆ ಹವಾಮಾನ ಕೇಂದ್ರ, ನೂತನ ಡಿಜಿಟಲ್ ಎಲಿವೇಶನ್ ಮಾದರಿಯ ಸಮುದ್ರ ಉಬ್ಬರ ಮಾಪನವನ್ನು ಸಂಶೋಧನೆ ಮಾಡಿದೆ. ಈ ಮೂಲಕ ಸಂಶೋಧನೆ ನಡೆಸಿ, ಹವಾಮಾನ ಅಧ್ಯಯನ ಕೇಂದ್ರ ವರದಿ ಬಿಡುಗಡೆ ಮಾಡಿದೆ. ಇದರ ಪ್ರಕಾರ, ನೈಸರ್ಗಿಕ ಬದಲಾವಣೆ, ಕರಾವಳಿಯಲ್ಲಿ ಪ್ರವಾಹ, ಕಡಲ್ಕೊರೆತದಂತ ವಿಷಯಗಳನ್ನು ನಾಸಾದ ಎಸ್.ಆರ್.ಟಿ.ಎಂ ( ಶಟಲ್ ರಾಡಾರ್ ಟೋಪೋಗ್ರಫಿ ಮಿಷನ್ ) ಗಂಭೀರವಾಗಿ ತೆಗೆದುಕೊಂಡಿರಲಿಲ್ಲ. ಅದೂ ಅಲ್ಲದೇ ಇವುಗಳಿಂದ ಆಗಬಹುದಾದ ಅನಾಹುತವನ್ನು ಇಲ್ಲಿಯವರೆಗೆ ಕಡಿಮೆ ಮಟ್ಟದಲ್ಲಿ ಊಹಿಸಿದೆ ಎಂದು ಉಲ್ಲೇಖಿಸಿದೆ.

ನಾಸಾ ಮಾದರಿಯಲ್ಲಿ  ಆಗಸಕ್ಕೆ ಹತ್ತಿರವಿರುವ ಸಮುದ್ರದ ಮೇಲ್ಮೆ ಉಬ್ಬರವನ್ನು ಅಳೆಯುವಾಗ, ಅಂತಹ ಜಲಪ್ರದೇಶವು ಆವರಿಸಿರುವ ಭೂಭಾಗದಲ್ಲಿರುವ ಮರದ ತುದಿಗಳು ಮತ್ತು ಕಟ್ಟಡಗಳ ಮೇಲ್ಛಾವಾಣಿಗಳನ್ನು ಪರಿಗಣಿಸಲಾಗುತ್ತಿದೆ. ಹೊಸ ಸಂಶೋಧನಾ ವಿಧಾನದಲ್ಲಿ ಇಂತಹ ದೋಷಗಳನ್ನು ಸರಿಪಡಿಸಿಕೊಂಡು ಕೃತಕ ಬುದ್ದಿಮತ್ತೆ ಸಾಧನಗಳ ಮೂಲಕ ಸಮುದ್ರದ ಮೇಲ್ಮೈ ಉಬ್ಬರವನ್ನು ಸಂಶೋಧಕರು ಮಾಪನ ಮಾಡಿದ್ದಾರೆ. ಅದರ ಪ್ರಕಾರ 2050ರ ವೇಳೆಗೆ ಸಮುದ್ರತೀರ ಪ್ರದೇಶಗಳಲ್ಲಿ ನಾಸಾ ಊಹಿಸಿದ್ದಕ್ಕಿಂತಲೂ ಗಂಭೀರ ಉಬ್ಬರ ಸಂಭವಿಸಲಿದೆ.  ಇದು ಜಾಗತಿಕವಾಗಿ 300 ದಶಲಕ್ಷ ಜನರ ಮೇಲೆ ಪರಿಣಾಮ ಬೀರಬಹುದು. ಏಷ್ಯಾ ಭಾಗಗಳಲ್ಲಿ ಕರಾವಳಿ ಭಾಗಗವನ್ನು ಅತಿಕ್ರಮಿಸಿಕೊಂಡಿರುವವರ ಭೂಮಿಯನ್ನೂ ಸಹ ಇದು ಮುಳುಗಿಸಲಿದೆ. ಸುಮಾರು 150 ದಶಲಕ್ಷ ಜನರ ಮೇಲೆ ಪರಿಣಾಮ ಬೀರಲಿದೆ.

2015ರ ಪ್ಯಾರಿಸ್ ಒಪ್ಪಂದವನ್ನು ಉಲ್ಲಂಘಿಸಿ ಹೊರಸೂಸುತ್ತಿರುವ ಕಾರ್ಬನ್ ಡೈಆಕ್ಸೈಡ್ ಪ್ರಮಾಣದ ಆಧಾರದಲ್ಲಿ ಮತ್ತು ಹಿಮಗಡ್ಡೆಗಳ ತ್ವರಿತ ಕರಗುವಿಕೆಯಿಂದಾಗಿ ಸಮುದ್ರಮಟ್ಟ ಗಣನೀಯ ಪ್ರಮಾಣದಲ್ಲಿ ಏರಿಕೆಯಾಗುತ್ತಿರುವುದರಿಂದ ಸುಮಾರು 640 ದಶಲಕ್ಷ ಜನ ವಾಸಿಸುತ್ತಿರುವ ಕರಾವಳಿ ಭೂಭಾಗವು ಅಲೆಗಳ ಅಪಾಯಕಾರಿ ಉಬ್ಬರದ ಆತಂಕಕ್ಕೆ ಈಡಾಗಲಿವೆ. ಅದರಲ್ಲಿ 340 ದಶಲಕ್ಷ ಜನ ವಾಸಿಸುತ್ತಿರುವ ಭೂಪ್ರದೇಶವು 2100ರ ವೇಳೆಗೆ ಸರಾಸರಿ ಅಲೆಗಳ ಎತ್ತರಕ್ಕಿಂತಲೂ ತಗ್ಗಿನ ಪ್ರದೇಶವಾಗಿ ರೂಪಾಂತರವಾಗಲಿದೆ. ಇದರ ಅರ್ಥ ಏಷ್ಯಾದ ಎಂಟು ದೇಶಗಳಲ್ಲಿ ಅಪಾಯ ಹೆಚ್ಚಲಿದೆ. ಕನಿಷ್ಠ 10 ದಶಲಕ್ಷ ಜನ ವಾಸಿಸುವ ಭೂಮಿಗೆ ಹೋಲಿಸಿದರೆ ಉಬ್ಬರವಿಳಿತ ಮತ್ತಷ್ಟು ಹೆಚ್ಚಲಿದೆ ಎಂದು ಹವಾಮಾನ ವರದಿ ತಿಳಿಸಿದೆ.

ಜಾಗತಿಕ ಸರಾಸರಿ ಸಮುದ್ರಮಟ್ಟ, ಇಪ್ಪತ್ತನೇ ಶತಮಾನದಲ್ಲಿ 11-16 ಸೆಂ.ಮೀ ಹೆಚ್ಚಾಗಿದೆ. ಇಂಗಾಲದ ಹೊರಸೂಸುವಿಕೆಗೆ ತೀಕ್ಷ್ಣ ಮತ್ತು ತಕ್ಷಣದ ಕಡಿತವಿದ್ದರೂ ಸಹ, ಇದು ಈ ಶತಮಾನದಲ್ಲಿ 0.5 ಮೀ. ಆಗಿದೆ. ಆದರೆ ಹೆಚ್ಚಿನ ಇಂಗಾಲ ಹೊರಸೂಸುವಿಕೆಯ ಸನ್ನಿವೇಶಗಳಲ್ಲಿ, ಇಪ್ಪತ್ತೊಂದನೇ ಶತಮಾನದಲ್ಲಿ 2 ಮೀ.ನಷ್ಟು ಮೀರಿ ಹೋಗಲಿದೆ ಎಂದು ಅಧ್ಯಯನ ಎಚ್ಚರಿಸಿದೆ. ಹೊಸ ಅಂಕಿ ಅಂಶಗಳ ಪ್ರಕಾರ, 2050ರ ವೇಳೆಗೆ ಬಾಂಗ್ಲಾದೇಶ ಮತ್ತು ಚೀನಾದಲ್ಲಿ ಕ್ರಮವಾಗಿ ಕರಾವಳಿ ಪ್ರದೇಶದ 93 ಮತ್ತು 42 ಮಿಲಿಯನ್ ಜನರ ಮೇಲೆ ಪರಿಣಾಮ ಬೀರುತ್ತದೆ ಎಂದು ಹೇಳಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...