ನೆರೆಹೊರೆಯಲ್ಲಿ ಪಟಾಕಿ ಸಿಡಿಸುವುದನ್ನು ವಿರೋಧಿಸಿದ ವೃದ್ಧರೊಬ್ಬನನ್ನು ಹೊಡೆದು ಕೊಂದಿರುವ ದಾರುಣ ಘಟನೆ ಹರಿಯಾಣದ ಫರಿದಾಬಾದ್ನಲ್ಲಿ ನಡೆದಿದೆ. ಹಲ್ಲೆಯಿಂದ ಗಾಯಗೊಂಡಿದ್ದ ವೃದ್ಧ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಫರಿದಾಬಾದ್ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಮೂವರು ಆರೋಪಿಗಳಿಗಾಗಿ ಹುಡುಕಾಟ ನಡೆಸಿದ್ದಾರೆ ಎಂದು ವರದಿಯಾಗಿದೆ. ಪಟಾಕಿಗೆ ವಿರೋಧ
ಸಂತ್ರಸ್ತೆಯ ಪುತ್ರ ವಿನೋದ್ ನೀಡಿದ ದೂರಿನ ಪ್ರಕಾರ, ಆರೋಪಿಗಳಾದ ರಾಜು, ಧೀರಜ್ ಮತ್ತು ನಂದು ಎಂಬ ಮೂವರು ವ್ಯಕ್ತಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ವರದಿಯಾಗಿದೆ. ಈ ವೇಳೆ ಅವರ ಮಗ ವಿನೋದ್ ಮತ್ತು ಅವರ ಪತ್ನಿ ಮಧ್ಯಪ್ರವೇಶಿಸಲು ಪ್ರಯತ್ನಿಸಿದರೂ, ಅವರ ಮೇಲೂ ಹಲ್ಲೆ ನಡೆಸಲಾಯಿತು ಎಂದು ವರದಿಯಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ
ಆರೋಪಿಗಳು ಗುರುವಾರ ಸಂಜೆ ಹರಿಯಾಣದ ಸೆಕ್ಟರ್ 18ರ ಹೌಸಿಂಗ್ ಬೋರ್ಡ್ ಕಾಲೋನಿಯಲ್ಲಿರುವ ತಮ್ಮ ನಿವಾಸದ ಮುಂದೆ ಪಟಾಕಿ ಸಿಡಿಸುತ್ತಿದ್ದರು. ಈ ವೇಳೆ ಶಬ್ಧ ಮಾಲಿನ್ಯದ ಬಗ್ಗೆ ವೃದ್ಧ ವ್ಯಕ್ತಿ ವಿರೋಧಿಸಿದಾಗ, ತೀವ್ರ ವಾಗ್ವಾದ ನಡೆದಿತ್ತು.
ಪರಿಸ್ಥಿತಿ ತಾತ್ಕಾಲಿಕವಾಗಿ ಶಾಂತವಾಗಿದ್ದರೂ, ಮೂವರು ಆರೋಪಿಗಳು ಮತ್ತೆ 1 ಗಂಟೆಯ ಸುಮಾರಿಗೆ ಹಿಂತಿರುಗಿ ಗದ್ದಲದ ಚಟುವಟಿಕೆಯನ್ನು ಪುನರಾರಂಭಿಸಿದ್ದರು ಎಂದು ವರದಿಯಾಗಿದೆ. ಈ ಬಗ್ಗೆ ಮತ್ತೆ ಆಕ್ಷೇಪಿಸಲು ವೃದ್ಧ ಹೊರಗೆ ಕಾಲಿಡುತ್ತಿದ್ದಂತೆಯೇ ಅವರ ಮೇಲೆ ಮೂವರು ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.
ಫರಿದಾಬಾದ್ನಲ್ಲಿ ಮತ್ತೊಂದು ಪ್ರತ್ಯೇಕ ಘಟನೆ ನಡೆದಿದ್ದು, ದೀಪಾವಳಿಯಂದು ಪಟಾಕಿ ಸಿಡಿಸುವಾಗ ಕುಟುಂಬದ ಮೇಲೆ ದೊಣ್ಣೆ ಮತ್ತು ಕಲ್ಲುಗಳಿಂದ ಹಲ್ಲೆ ನಡೆಸಲಾಗಿದೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ. ಸುಭಾಷ್ ಕಾಲೋನಿಯಲ್ಲಿ ಗುರುವಾರ ಈ ಘಟನೆ ನಡೆದಿದೆ ಎಂದು ವರದಿ ಹೇಳಿದೆ. ಪಟಾಕಿಗೆ ವಿರೋಧ
ಇದನ್ನೂ ಓದಿ: ಅತ್ಯಾಚಾರ ಸಂತ್ರಸ್ತೆಯ ಉಡುಪಿನಲ್ಲಿ ಪ್ರಜ್ವಲ್ ರೇವಣ್ಣನ ಡಿಎನ್ಎ ಪತ್ತೆ: ಎಸ್ಐಟಿ
ಅತ್ಯಾಚಾರ ಸಂತ್ರಸ್ತೆಯ ಉಡುಪಿನಲ್ಲಿ ಪ್ರಜ್ವಲ್ ರೇವಣ್ಣನ ಡಿಎನ್ಎ ಪತ್ತೆ: ಎಸ್ಐಟಿ


