Homeಮುಖಪುಟಸಾಮಾನ್ಯ ಬಳಕೆಯ 8 ಔಷಧಿಗಳ ಬೆಲೆ 50% ಹೆಚ್ಚಿಸಲು ಕೇಂದ್ರ ನಿರ್ಧಾರ - ಕಾಂಗ್ರೆಸ್ ವಿರೋಧ

ಸಾಮಾನ್ಯ ಬಳಕೆಯ 8 ಔಷಧಿಗಳ ಬೆಲೆ 50% ಹೆಚ್ಚಿಸಲು ಕೇಂದ್ರ ನಿರ್ಧಾರ – ಕಾಂಗ್ರೆಸ್ ವಿರೋಧ

- Advertisement -
- Advertisement -

ಎಂಟು ಅಗತ್ಯ ಔಷಧಿಗಳ ಬೆಲೆಯನ್ನು 50% ರಷ್ಟು ಹೆಚ್ಚಿಸುವ ಕೇಂದ್ರದ ಬಿಜೆಪಿಯ ಮೋದಿ ಸರ್ಕಾರದ ನಿರ್ಧಾರದ ಬಗ್ಗೆ ವಿಪಕ್ಷ ಕಾಂಗ್ರೆಸ್ ಆತಂಕ ವ್ಯಕ್ತಪಡಿಸಿದ್ದು, ಬೆಲೆ ಏರಿಕೆಯಿಂದ ರೋಗಿಗಳು ಮತ್ತು ಜನರ ಆರೋಗ್ಯ ರಕ್ಷಣೆಯ ಮೇಲೆ ಬೀರುವ ಪರಿಣಾಮವನ್ನು ನಿರ್ಣಯಿಸಲು ಸ್ವತಂತ್ರ ಪರಿಶೀಲನಾ ಸಮಿತಿ ರಚಿಸುವಂತೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಶನಿವಾರ ಒತ್ತಾಯಿಸಿದೆ. ಸಾಮಾನ್ಯ ಬಳಕೆಯ

ಸಾಮಾನ್ಯವಾಗಿ ಬಳಸುವ ಎಂಟು ಔಷಧಿಗಳ ಸೀಲಿಂಗ್ ಬೆಲೆಯನ್ನು 50%ದಷ್ಟು ಹೆಚ್ಚಿಸುವ ರಾಷ್ಟ್ರೀಯ ಔಷಧೀಯ ಬೆಲೆ ಪ್ರಾಧಿಕಾರದ (ಎನ್‌ಪಿಪಿಎ) ಇತ್ತೀಚಿನ ನಿರ್ಧಾರದ ಬಗ್ಗೆ ಆತಂಕ ವ್ಯಕ್ತಪಡಿಸಿದ ಕಾಂಗ್ರೆಸ್ ಸಂಸದ ಮಾಣಿಕಂ ಟ್ಯಾಗೋರ್ ಅವರು ಮೋದಿಗೆ ಪತ್ರ ಬರೆದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಟ್ಯಾಗೋರ್ ಅವರು ಈ ಪತ್ರವನ್ನು ಎಕ್ಸ್‌ನಲ್ಲಿ ಹಂಚಿಕೊಂಡಿದ್ದು, “ಈ ಬೆಲೆ ಹೆಚ್ಚಳಕ್ಕೆ ಸರ್ಕಾರವು ‘ಅಸಾಧಾರಣ ಸಂದರ್ಭಗಳು’ ಮತ್ತು ‘ಸಾರ್ವಜನಿಕ ಹಿತಾಸಕ್ತಿ’ ಕಾರಣಗಳನ್ನು ಉಲ್ಲೇಖಿಸಿದೆ ಎಂದು ನಾನು ಅರ್ಥಮಾಡಿಕೊಂಡಿದ್ದೇನೆ. ಆದರೆ ಅಂತಹ ಮಹತ್ವದ ನಿರ್ಧಾರದ ಹಿಂದಿನ ತಾರ್ಕಿಕತೆಯನ್ನು ಸ್ಪಷ್ಟಪಡಿಸುವುದು ನಿರ್ಣಾಯಕ ಎಂದು ನಾನು ನಂಬುತ್ತೇನೆ” ಎಂದು ಪತ್ರದಲ್ಲಿ ಕೇಳಿದ್ದಾರೆ. ಸಾಮಾನ್ಯ ಬಳಕೆಯ

“ಈ ಬೆಲೆ ಏರಿಕೆಯು ಲಕ್ಷಾಂತರ ನಾಗರಿಕರಿಗೆ ಅಗತ್ಯವಾದ ಆಸ್ತಮಾ, ಕ್ಷಯ, ಬೈಪೋಲಾರ್ ಡಿಸಾರ್ಡರ್ ಮತ್ತು ಗ್ಲುಕೋಮಾದಂತಹ ರೋಗಗಳ ಪ್ರಮುಖ ಔಷಧಿಗಳ ಮೇಲೆ ಪರಿಣಾಮ ಬೀರುತ್ತದೆ” ಎಂದು ಅವರು ಹೇಳಿದ್ದಾರೆ.

ದೇಶದ ಅನೇಕ ರೋಗಿಗಳು ಮತ್ತು ಅವರ ಕುಟುಂಬಗಳು ಅಗತ್ಯ ಚಿಕಿತ್ಸೆಗಳನ್ನು ಪಡೆಯಲು ಈಗಾಗಲೆ ಹಣಕಾಸಿನ ಸಮಸ್ಯೆ ಎದುರಿಸುತ್ತಿವೆ ಎಂದು ಅವರು ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ಔಷಧದ ಬೆಲೆಗಳಲ್ಲಿನ ಈ ಹಠಾತ್ ಹೆಚ್ಚಳವು ಇಂತಹ ವ್ಯಕ್ತಿಗಳ ಮೇಲೆ ಹೆಚ್ಚುವರಿ ಹೊರೆಯನ್ನು ಉಂಟುಮಾಡಬಹುದು ಮತ್ತು ಅವರ ಆರೋಗ್ಯದ ಮೇಲೆ ಅವರು ರಾಜಿ ಮಾಡುವ ಸಂಭವವಿರುತ್ತದೆ ಎಂದು ಅವರು ಆತಂಕ ವ್ಯಕ್ತಪಡಿಸಿದ್ದಾರೆ.

“ಈ ಬೆಲೆ ಏರಿಕೆಗೆ ಅಗತ್ಯವಾದ ಅಸಾಮಾನ್ಯ ಸಂದರ್ಭಗಳ ಬಗ್ಗೆ ಹೆಚ್ಚು ವಿವರವಾದ ವಿವರಣೆಯನ್ನು ನೀಡಲು ನಾನು ಸರ್ಕಾರವನ್ನು ಒತ್ತಾಯಿಸುತ್ತೇನೆ. ಇದಲ್ಲದೆ, ರೋಗಿಗಳು ಮತ್ತು ಆರೋಗ್ಯ ಕ್ಷೇತ್ರದ ಮೇಲೆ ಈ ಬೆಲೆ ಹೆಚ್ಚಳದ ನೈಜ ಪರಿಣಾಮವನ್ನು ನಿರ್ಣಯಿಸಲು ಸ್ವತಂತ್ರ ಪರಿಶೀಲನಾ ಸಮಿತಿಯನ್ನು ಸ್ಥಾಪಿಸಲು ನಾನು ಪ್ರಸ್ತಾಪಿಸುತ್ತೇನೆ” ಎಂದು ಅವರು ಹೇಳಿದ್ದಾರೆ.

“ಇಂತಹ ನಿರ್ಧಾರ ತೆಗೆದುಕೊಳ್ಳುವ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ಇರಬೇಕಾಗಿದ್ದು ಸಾರ್ವಜನಿಕ ನಂಬಿಕೆಯನ್ನು ಕಾಪಾಡಿಕೊಳ್ಳುವ ದೃಷ್ಟಿಯಿಂದ ಅತ್ಯಗತ್ಯವಾಗಿದೆ. ಸಂಪೂರ್ಣ ಪರಿಶೀಲನೆಯು ಒಳ್ಳೆಯ ನೀತಿಗಳು ತರುವಂತೆ ಮಾಡುತ್ತದೆ. ಹೀಗಾದರೆ ಅಗತ್ಯ ಔಷಧಗಳು ಕೈಗೆಟುಕುವ ದರರಲ್ಲಿ ಎಲ್ಲರಿಗೂ ಪಡೆಯುವಂತೆ ಇರುತ್ತದೆ” ಎಂದು ಸಂಸದ ಟ್ಯಾಗೋರ್ ಹೇಳಿದ್ದಾರೆ.

ಅಕ್ಟೋಬರ್ 14 ರಂದು ಕೇಂದ್ರ ಸರ್ಕಾರವು ಎಂಟು ಔಷಧಿಗಳ 11 ನಿಗದಿತ ಸೂತ್ರೀಕರಣಗಳನ್ನು ಅವುಗಳ ಪ್ರಸ್ತುತ ಸೀಲಿಂಗ್ ಬೆಲೆಯ ಶೇಕಡಾ 50 ರಷ್ಟು ಹೆಚ್ಚಿಸಲು ಅನುಮೋದಿಸಿದೆ ಎಂದು ಘೋಷಿಸಿತ್ತು. ಔಷಧೀಯ ಪದಾರ್ಥಗಳ ನಿರಂತರ ಹೆಚ್ಚಳವಾದ ವೆಚ್ಚ ಸೇರಿದಂತೆ ವಿವಿಧ ಕಾರಣಗಳನ್ನು ಉಲ್ಲೇಖಿಸಿ ಬೆಲೆಗಳ ಏರಿಕೆಗಾಗಿ ರಾಷ್ಟ್ರೀಯ ಔಷಧೀಯ ಬೆಲೆ ಪ್ರಾಧಿಕಾರ ಸರ್ಕಾರಕ್ಕೆ ಮನವಿ ಮಾಡಿತ್ತು.

ಇದನ್ನೂ ಓದಿ: ವಕ್ಫ್‌ ಭೂಮಿ ವಿವಾದ | ರೈತರಿಗೆ ನೀಡಿದ ನೋಟಿಸ್‌ ತಕ್ಷಣವೆ ವಾಪಸ್‌ – ಸಿಎಂ ಸಿದ್ದರಾಮಯ್ಯ

ವಕ್ಫ್‌ ಭೂಮಿ ವಿವಾದ | ರೈತರಿಗೆ ನೀಡಿದ ನೋಟಿಸ್‌ ತಕ್ಷಣವೆ ವಾಪಸ್‌ – ಸಿಎಂ ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: 2ಲಕ್ಷ ಮತದಾರರಲ್ಲಿ ಬಸವನಗುಡಿಯಲ್ಲಿ ಉಳಿಯುವುದು 88 ಸಾವಿರ ಮಾತ್ರಾ?: SIR ಪರಿಷ್ಕರಣೆಯ ಆಘಾತಕಾರಿ ಲೆಕ್ಕಾಚಾರ

2023ರ ಚುನಾವಣೆಯಲ್ಲಿ ಬಸವನಗುಡಿಯಲ್ಲಿ 1.28 ಲಕ್ಷ ಮತಗಳು ಚಲಾಯಿಸಲ್ಪಟ್ಟಿದ್ದವು. ಆದರೆ ಪ್ರಸ್ತುತ SIR ಪ್ರಕ್ರಿಯೆಯಲ್ಲಿ 1.13 ಲಕ್ಷ ಜನರನ್ನು ಹೊರಗಿಟ್ಟು, ಕರಡು ಪಟ್ಟಿಯಲ್ಲಿ ಕೇವಲ 1.35 ಲಕ್ಷ ಮತದಾರರನ್ನು ಮಾತ್ರ ಉಳಿಸಿಕೊಳ್ಳಲಾಗಿದೆ. ಇದರ...

ಕರ್ನಾಟಕ ಎಸ್ಐಆರ್: 43.81 ಲಕ್ಷ ಜನರಿಗೆ SIR ನೋಟಿಸ್: ಗಣ್ಯರ ಹೆಸರು ಸರಿಪಡಿಸುವ ಚುನಾವಣಾ ಆಯೋಗಕ್ಕೆ ಜನ-ಸಾಮಾನ್ಯರ ನೋವು ಕಾಣುತ್ತಿಲ್ಲವೇ?

ಕರ್ನಾಟಕದಲ್ಲಿ SIR ವೇಳೆ 43.81 ಲಕ್ಷ ಮತದಾರರ ಪ್ರಕರಣಗಳಿಗೆ ನೋಟಿಸ್‌ಗಳನ್ನು ಸೃಷ್ಟಿಸಲಾಗಿದ್ದು, ಅವರ ದಾಖಲೆಗಳ ಪರಿಶೀಲನೆಗೆ ಕ್ರಮ ಕೈಗೊಳ್ಳಲಾಗಿದೆ. ಈ ಪೈಕಿ 23.45 ಲಕ್ಷ ಪ್ರಕರಣಗಳಲ್ಲಿ 2002ರ ಮತದಾರರ ಪಟ್ಟಿಯೊಂದಿಗೆ ಮ್ಯಾಪಿಂಗ್ ಆಗದಿರುವುದು...

ಪಿಣರಾಯಿ ವಿಜಯನ್ ವಿರುದ್ಧ ಎಫ್‌ಐಆರ್‌ಗೆ ಇಡಿ ಪತ್ರ: ಕಾನೂನು ಪರಿಶೀಲನೆ ನಡೆಸಲಾಗುವುದು ಎಂದ ಸಿಎಂ ವಿ.ಡಿ. ಸತೀಶನ್

ಆರೋಪಿತ ಸಿಎಂಆರ್‌ಎಲ್ ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಪಿಐ(ಎಂ) ಹಿರಿಯ ನಾಯಕ ಪಿಣರಾಯಿ ವಿಜಯನ್ ಮತ್ತು ಇತರರ ವಿರುದ್ಧ ಎಫ್‌ಐಆರ್ ದಾಖಲಿಸಲು ಜಾರಿ ನಿರ್ದೇಶನಾಲಯ (ಇಡಿ) ನೀಡಿರುವ ಪತ್ರವನ್ನು ಕಾನೂನುಬದ್ಧವಾಗಿ ಪರಿಶೀಲಿಸಲಾಗುವುದು, ಅದರ ನಂತರ...

‘ಸಿಇಸಿ ಜ್ಞಾನೇಶ್ ಕುಮಾರ್ ಮಗಳು’ : ನೋಯ್ಡಾ ಜಿಲ್ಲಾಧಿಕಾರಿಗೆ ಅಲಹಾಬಾದ್ ಹೈಕೋರ್ಟ್ ತಪರಾಕಿ ಬೆನ್ನಲ್ಲೇ ವಿಪಕ್ಷ ನಾಯಕರ ವಾಗ್ದಾಳಿ

ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ (NSA) ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿನಿಯೊಬ್ಬರನ್ನು ಮುನ್ನೆಚ್ಚರಿಕೆ ಕ್ರಮವಾಗಿ ವಶಕ್ಕೆ ಪಡೆದಿದ್ದಕ್ಕಾಗಿ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ಮಗಳು ಹಾಗೂ ನೋಯ್ಡಾ ಜಿಲ್ಲಾಧಿಕಾರಿ ಮೇಧಾ ರೂಪಮ್ ಅವರನ್ನು...

ಮಲ್ಲಿಕಾರ್ಜುನ ಖರ್ಗೆ ಸಭೆಯ ನಂತರ ‘ಶುದ್ಧೀಕರಣ’ ವಿವಾದ: ಅಪರಿಚಿತರ ವಿರುದ್ಧ ಎಫ್‌ಐಆರ್, ತೀವ್ರ ಆಕ್ರೋಶ ವ್ಯಕ್ತಪಡಿಸಿದ ಕಾಂಗ್ರೆಸ್!

ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸಾರ್ವಜನಿಕ ಸಭೆ ನಡೆದ ನಂತರ, ಆ ಮೈದಾನವನ್ನು 'ಶುದ್ಧೀಕರಣ' (ಶುದ್ಧೀಕರಣ ಯಜ್ಞ) ಗೊಳಿಸಿದ ವಿವಾದಾತ್ಮಕ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲ್ದ್ವಾನಿಯ ಕೊತ್ವಾಲಿ...

ದೆಹಲಿ ಮತದಾರರ ಪಟ್ಟಿಗೆ ರಾಘವ್ ಚಡ್ಡಾ ಹೆಸರು ಸೇರ್ಪಡೆ; ಸೂಕ್ತ ಪ್ರಕ್ರಿಯೆ ಅನುಸರಿಸಿಲ್ಲ ಎಂದು ಎಎಪಿ ಆರೋಪ

ರಾಷ್ಟ್ರ ರಾಜಧಾನಿಯ ಮತದಾರರ ಪಟ್ಟಿಯ ಪ್ರಸ್ತುತ ನಡೆಯುತ್ತಿರುವ ವಿಶೇಷ ಪರಿಷ್ಕರಣೆ (ಎಸ್‌ಐಆರ್) ಅಡಿಯಲ್ಲಿ, ಪಂಜಾಬ್‌ನ ಬಿಜೆಪಿ ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರನ್ನು ದೆಹಲಿಯ ಮತದಾರರ ಪಟ್ಟಿಗೆ ಸೇರಿಸಲಾಗಿದೆ ಎಂದು ಚುನಾವಣಾ...

ಮಲ್ಲಿಕಾರ್ಜುನ ಖರ್ಗೆ ಭಾಷಣ ಮಾಡಿದ ವೇದಿಕೆ ‘ಶುದ್ಧೀಕರಣ’ : 29 ದಿನಗಳ ನಂತರ ಎಫ್‌ಐಆರ್ ದಾಖಲು

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ್ದ ಉತ್ತರಾಖಂಡದ ಹಲ್ದ್ವಾನಿಯ ವೇದಿಕೆಯೊಂದರಲ್ಲಿ 'ಶುದ್ಧೀಕರಣ' ನಡೆದ ಇಪ್ಪತ್ತೊಂಬತ್ತು ದಿನಗಳ ನಂತರ, ಪೊಲೀಸರು ಮಂಗಳವಾರ (ಸೆಪ್ಟೆಂಬರ್ 8) ಎಸ್‌ಸಿ/ಎಸ್‌ಟಿ ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ...

‘ಪ್ರೊ. ಸಿಎನ್ಆರ್ ರಾವ್‌ ಅವರಿಗೆ ನೋಟಿಸ್ ಕೊಟ್ಟಿಲ್ಲ..’; ಚುನಾವಣಾ ಆಯೋಗದ ಸ್ಪಷ್ಟನೆ

ಕರ್ನಾಟಕದ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (ಎಸ್‌ಐಆರ್) ವೇಳೆ ಹೆಸರಿನ ಕಾಗುಣಿತದಲ್ಲಿನ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ, ದೇಶದ ಪ್ರಸಿದ್ಧ ವಿಜ್ಞಾನಿಗಳಲ್ಲಿ ಒಬ್ಬರಾದ ಭಾರತರತ್ನ ಪ್ರೊ. ಸಿ.ಎನ್.ಆರ್. ರಾವ್ ಅವರಿಗೆ ತಮ್ಮ ಗುರುತನ್ನು ಸಾಬೀತುಪಡಿಸಲು...

‘ಬಂಗಾಳಿಗಳು ಮೀನು ಇಲ್ಲದೆ ಬದುಕಲು ಸಾಧ್ಯವಿಲ್ಲ’; ಆಹಾರ ಪದ್ಧತಿ ನಿರ್ಧಾರ ಬಿಜೆಪಿ ಕೆಲಸವಲ್ಲ: ಬಿಜೆಪಿ ಮುಖ್ಯಸ್ಥ ಸಮಿಕ್ ಭಟ್ಟಾಚಾರ್ಯ 

ಕೊಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಕೆಲವೇ ತಿಂಗಳುಗಳಲ್ಲಿ ದುರ್ಗಾ ಪೂಜೆ ಮತ್ತು ನವರಾತ್ರಿ ಆಚರಣೆಗಳ ಸಂದರ್ಭದಲ್ಲಿ ಆಹಾರ ಪದ್ಧತಿಯ ಕುರಿತು ಕೆಲವು ಧಾರ್ಮಿಕ ನಾಯಕರು ಹಾಗೂ ವಿಶ್ವ ಹಿಂದೂ...

ಮತದಾರ ಇರುವುದು ವಿದೇಶದಲ್ಲಿ, ಆದರೆ ವಿಚಾರಣೆ ನಡೆಯುತ್ತಿರುವುದು ಇಲ್ಲಿ: ಕರ್ನಾಟಕ SIR ತಂದಿಟ್ಟ ಧರ್ಮಸಂಕಟ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ, ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿದ್ದ ಅನೇಕ ಅನಿವಾಸಿ ಕನ್ನಡಿಗರಿಗೆ ಬಿಸಿ ತುಪ್ಪವಾಗಿ ಪರಿಣಮಿಸಿದೆ. ಹೆಸರಿನಲ್ಲಿನ ವ್ಯತ್ಯಾಸ, ವಯಸ್ಸಿನ ವ್ಯತ್ಯಾಸ...