Homeಕರ್ನಾಟಕ'ಪೇಮೆಂಟ್ ಸೀಟ್ ಅಧ್ಯಕ್ಷ' | ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಬಗ್ಗೆ ಸಿಎಂ ಸಿದ್ದರಾಮಯ್ಯ ವ್ಯಂಗ್ಯ

‘ಪೇಮೆಂಟ್ ಸೀಟ್ ಅಧ್ಯಕ್ಷ’ | ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಬಗ್ಗೆ ಸಿಎಂ ಸಿದ್ದರಾಮಯ್ಯ ವ್ಯಂಗ್ಯ

- Advertisement -
- Advertisement -

ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ‘ಪೇಮೆಂಟ್ ಸೀಟ್ ಅಧ್ಯಕ್ಷ’ ಎಂದು ವ್ಯಂಗ್ಯವಾಡಿದ್ದಾರೆ. ನನ್ನ ಜೊತೆಗೆ ಚರ್ಚೆ ನಡೆಸುವ ಮೊದಲು ನಿಮ್ಮದೇ ಪಕ್ಷದ ನಾಯಕರಾಗಿರುವ ಬಸನಗೌಡ ಪಾಟೀಲ್ ಯತ್ನಾಳ್ ಮತ್ತು ರಮೇಶ್ ಜಾರಕಿಹೊಳಿ ಅವರ ಜೊತೆ ಒಂದು ಸುತ್ತು ಚರ್ಚೆ ಮಾಡಿಕೊಂಡು ಬನ್ನಿ ಎಂದು ಅವರಿಗೆ ಸಿದ್ದರಾಮಯ್ಯ ಸಲಹೆ ನೀಡಿದ್ದಾರೆ.

ಈ ಬಗ್ಗೆ ಸಾಮಾಜಿಕ ಮಾಧ್ಯಮಗಳಲ್ಲಿ ‘ಪೇಮೆಂಟ್ ಸೀಟ್ ಅಧ್ಯಕ್ಷ’ ಎಂಬ ಹ್ಯಾಷ್‌ಟ್ಯಾಗ್‌ನೊಂದಿಗೆ ಪೋಸ್ಟ್ ಹಾಕಿರುವ ಸಿಎಂ ಸಿದ್ದರಾಮಯ್ಯ, “ಮಾನ್ಯ ವಿಜಯೇಂದ್ರ ಅವರೆ, ಪ್ರಧಾನಿ ನರೇಂದ್ರ ಮೋದಿ ಅವರ ಬದಲಿಗೆ ತಾವೇ ಬಹಿರಂಗ ಚರ್ಚೆಗೆ ಸಿದ್ಧ ಎಂದು ನೀವು ಹಾಕಿರುವ ಸವಾಲನ್ನು ಗಮನಿಸಿದೆ. ನನ್ನ ಜೊತೆ ಚರ್ಚೆ ನಡೆಸುವ ಮೊದಲು ನಿಮ್ಮದೇ ಪಕ್ಷದ ನಾಯಕರಾಗಿರುವ ಬಸನಗೌಡ ಪಾಟೀಲ್ ಯತ್ನಾಳ್ ಮತ್ತು ರಮೇಶ್ ಜಾರಕಿಹೊಳಿ ಅವರ ಜೊತೆ ಒಂದು ಸುತ್ತು ಚರ್ಚೆ ಮಾಡಿಕೊಂಡು ಬನ್ನಿ” ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ನಿಮ್ಮ ಪೂಜ್ಯ ತಂದೆಯವರನ್ನು ಮುಖ್ಯಮಂತ್ರಿ ಮಾಡಲು ನೀವು ಬಿಜೆಪಿ ಹೈಕಮಾಂಡ್ ಗೆ ಎರಡು ಸಾವಿರ ಕೋಟಿ ರೂಪಾಯಿ ನೀಡಿದ್ದೀರಿ..!! ನಿಮ್ಮನ್ನು ಪಕ್ಷದ ಅಧ್ಯಕ್ಷರನ್ನಾಗಿ ಮಾಡಲು ಇನ್ನೂ ಒಂದಷ್ಟು ಕೋಟಿ ರೂಪಾಯಿ ನೀಡಿದ್ದೀರಿ..!! ಎಂದು ನಿಮ್ಮ ನಾಯಕರೇ ಆರೋಪಿಸಿದ್ದಾರೆ. ಮೊದಲು ಅವರ ಜೊತೆ ಚರ್ಚೆ ಮಾಡಿ ಮುಗಿಸಿ ಬನ್ನಿ.” ಎಂದು ಮುಖ್ಯಮಂತ್ರಿ ಹೇಳಿದ್ದಾರೆ.

“ನೀವು ಕಮಿಷನ್ ಹೊಡೆಯುವುದರಲ್ಲಷ್ಟೇ ಪರಿಣತರು ಎಂದು ನಿಮ್ಮದೇ ಪಕ್ಷದ ನಾಯಕರಾದ ಯತ್ನಾಳ್, ಜಾರಕಿಹೊಳಿ, ಹೆಚ್.ವಿಶ್ವನಾಥ್ ಅವರು ಹೇಳುತ್ತಲೇ ಇದ್ದಾರೆ. ಇಲ್ಲಿಯ ವರೆಗೆ ಅವರ ಆರೋಪಗಳಿಗೆ ನೀವು ಪ್ರತಿಕ್ರಿಯೆ ನೀಡದಿರುವುದು ಮತ್ತು ಇಂತಹ ಆರೋಪ ಮಾಡುತ್ತಿರುವವರ ವಿರುದ್ಧ ನಿಮ್ಮ ಪಕ್ಷದ ಹೈಕಮಾಂಡ್ ಕೂಡಾ ಕ್ರಮ ಕೈಗೊಳ್ಳದಿರುವುದನ್ನು ನೋಡಿದರೆ ಈ ಆರೋಪಗಳನ್ನು ನೀವು ಒಪ್ಪಿಕೊಂಡಂತೆ ಕಾಣಿಸುತ್ತಿದೆ, ಇದು ನಿಜವೇ?” ಎಂದು ಅವರು ಕೇಳಿದ್ದಾರೆ.

“ಈ ಎಲ್ಲ ಬೆಳವಣಿಗೆಗಳನ್ನು ನೋಡಿದರೆ ನಿಮ್ಮ ಪದಚ್ಯುತಿಗೆ ಬಸನಗೌಡ ಪಾಟೀಲ್ ಯತ್ನಾಳ್ ಅವರು ನೀಡಿರುವ ಡಿಸೆಂಬರ್ ತಿಂಗಳ ಗಡುವು ನಿಜವಾಗುತ್ತಿರುವಂತೆ ಕಾಣುತ್ತಿದೆ. ನಮ್ಮ ಸರ್ಕಾರದ ಬಗ್ಗೆ ಚಿಂತಿಸುವ ಬದಲಿಗೆ ಮೊದಲು ನಿಮ್ಮ ಕುರ್ಚಿ ಭದ್ರ ಪಡಿಸಿಕೊಳ್ಳುವ ಯೋಚನೆ ಮಾಡಿ.” ಎಂದು ಅವರಿಗೆ ಸಲಹೆ ನೀಡಿದ್ದಾರೆ.

“ನೀವಿನ್ನೂ ಆಡಳಿತಕ್ಕೆ ಹೊಸಬರು, ತೆರಿಗೆ – ಅನುದಾನ – ಜಿಎಸ್‌ಟಿ ಇತ್ಯಾದಿ ವಿಚಾರಗಳೆಲ್ಲ ನಿಮ್ಮ ಪೂಜ್ಯ ತಂದೆಯವರಾದ ಬಿ.ಎಸ್.ಯಡಿಯೂರಪ್ಪನವರಿಗೇ ಅರ್ಥವಾಗಿಲ್ಲ, ನಿಮಗೆಷ್ಟು ಅರ್ಥವಾಗಬಹುದು? ಕೇಂದ್ರದಲ್ಲಿ ಅಧಿಕಾರದಲ್ಲಿರುವ ನಿಮ್ಮದೇ ಪಕ್ಷದ ಸರ್ಕಾರ ತೆರಿಗೆ ಹಂಚಿಕೆಯಲ್ಲಿ ಕರ್ನಾಟಕಕ್ಕೆ ಮಾಡುತ್ತಿರುವ ಅನ್ಯಾಯ ರಾಷ್ಟ್ರಮಟ್ಟದಲ್ಲಿ ಚರ್ಚೆಯಾಗುತ್ತಿದೆ. ಇತ್ತೀಚೆಗಷ್ಟೇ 28 ರಾಜ್ಯಗಳಿಗೆ ಒಟ್ಟು 1,78,193 ಕೋಟಿ ರೂಪಾಯಿ ತೆರಿಗೆ ಪಾಲನ್ನು ಬಿಡುಗಡೆಗೊಳಿಸಿರುವ ಕೇಂದ್ರ ಸರ್ಕಾರ, ಕರ್ನಾಟಕಕ್ಕೆ ನೀಡಿರುವುದು ಕೇವಲ ರೂ.6,498 ಕೋಟಿ ಮಾತ್ರ” ಎಂದು ಸಿದ್ದಾರಾಮಯ್ಯ ಹೇಳಿದ್ದಾರೆ.

“ದೇಶದ ಒಟ್ಟು ತೆರಿಗೆ ಸಂಗ್ರಹಕ್ಕೆ ಕರ್ನಾಟಕ ರೂ.4 ಲಕ್ಷ ಕೋಟಿ ರೂಪಾಯಿಗಳನ್ನು ನೀಡುತ್ತಿದ್ದರೂ ತೆರಿಗೆ ಹಂಚಿಕೆ ರೂಪದಲ್ಲಿ ನಮಗೆ ಸಿಗುತ್ತಿರುವ ಪಾಲು ರೂ.45,000 ಕೋಟಿ ಮಾತ್ರ. ಕರ್ನಾಟಕದ ಜನತೆ, ಕೇಂದ್ರ ಸರ್ಕಾರಕ್ಕೆ ನೀಡುತ್ತಿರುವ ಪ್ರತಿಯೊಂದು ರೂಪಾಯಿಗೆ ಹಿಂದಿರುಗಿ ಬರುತ್ತಿರುವುದು ಕೇವಲ 15 ಪೈಸೆ ಮಾತ್ರ. ಏಳು ಕೋಟಿ ಕನ್ನಡಿಗರಿಗೆ ಆಗುತ್ತಿರುವ ಅನ್ಯಾಯದ ವಿರುದ್ಧ ದನಿ ಎತ್ತುವ ದಮ್-ತಾಖತ್ ನಿಮಗಾಗಲಿ ನಿಮ್ಮ ಹದಿನೇಳು ಎಂಪಿಗಳಿಗಾಗಲಿ ಎಲ್ಲಿದೆ?” ಎಂದು ಅವರು ಪ್ರಶ್ನಿಸಿದ್ದಾರೆ.

“ನಮ್ಮ ಸರ್ಕಾರದ ಅವಧಿಯಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯದ ಪ್ರಕರಣಗಳು ಹೆಚ್ಚಾಗಿವೆ ಎಂದು ಆರೋಪಿಸುವಾಗ ಕನಿಷ್ಠ ನಿಮ್ಮ ಆತ್ಮಸಾಕ್ಷಿಯೂ ಚುಚ್ಚಲಿಲ್ಲವೇ? ನಿಮ್ಮ ಪಕ್ಷ ಅಧಿಕಾರದಲ್ಲಿದ್ದಾಗ ನಿಮ್ಮದೇ ಶಾಸಕರು ಹೇಗೆ ದುರ್ಯೋಧನ – ದುಶ್ಯಾಸನರ ರೀತಿಯಲ್ಲಿ ನಡೆದುಕೊಂಡಿದ್ದರು ಎನ್ನುವ ಇತಿಹಾಸವನ್ನು ನಾನು ಕೆದಕಲು ಹೋಗುವುದಿಲ್ಲ. ಆದರೆ ಪೋಕ್ಸೋ ಕಾಯ್ದೆಯಡಿ ಆರೋಪಿಯಾಗಿ ಜಾಮೀನಿನ ಮೇಲೆ ಹೊರಗಿರುವ ನಿಮ್ಮ ಪೂಜ್ಯ ತಂದೆಯವರನ್ನು ಮನೆಯಲ್ಲಿಟ್ಟುಕೊಂಡು ನಮಗೆ ಹೆಣ್ಣುಮಕ್ಕಳ ರಕ್ಷಣೆಯ ಪಾಠ ಮಾಡಲು ಕನಿಷ್ಠ ನಿಮಗೆ ನಾಚಿಕೆ ಆಗುವುದಿಲ್ಲವೇ?” ಎಂದು ಅವರು ಹೇಳಿದ್ದಾರೆ.

‘‘ಬೇಟಿ ಬಚಾವೋ ಬೇಟಿ ಪಡಾವೋ’’ ಎಂದು ಆಗಾಗ ಘೋಷಣೆ ಕೂಗುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರು ಈ ಘೋಷಣೆಗೆ ಬದ್ಧರಾಗಿದ್ದರೆ ಪೋಕ್ಸೋ ಆರೋಪಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಪಕ್ಷದ ರಾಷ್ಟ್ರೀಯ ಸಂಸದೀಯ ಮಂಡಳಿಯ ಸದಸ್ಯ ಸ್ಥಾನದಿಂದ ಮತ್ತು ಅವರನ್ನು ರಕ್ಷಿಸುತ್ತಿರುವ ನಿಮ್ಮನ್ನು ಪಕ್ಷದ ಅಧ್ಯಕ್ಷ ಸ್ಥಾನದಿಂದ ಕಿತ್ತುಹಾಕಬೇಕು ಎಂದು ಅವರು ಆಗ್ರಹಿಸಿದ್ದಾರೆ.

“ನನ್ನ ವಿರುದ್ದ ಭ್ರಷ್ಟಾಚಾರದ ಆರೋಪ ಹೊರಿಸುವ ನೈತಿಕತೆ ಈ ಜನ್ಮದಲ್ಲಿ ನೀವು ಪಡೆದುಕೊಂಡಿಲ್ಲ. ಅದನ್ನು ಮುಂದಿನ ಜನ್ಮದಲ್ಲಿ ಗಳಿಸಿಕೊಳ್ಳುವ ಪ್ರಯತ್ನ ಮಾಡಬಹುದು ಅಷ್ಟೆ. ಸಿಬಿಐ ಮತ್ತು ಇಡಿ ಸಂಸ್ಥೆಗಳು ರಾಜಕೀಯ ಒತ್ತಡಕ್ಕೆ ಮಣಿಯದೆ ನಿಷ್ಪಕ್ಷಪಾತವಾಗಿ ಕೆಲಸ ಮಾಡಿದರೆ, ಡಿನೋಟಿಪೀಕೇಷನ್, ಅಕ್ರಮ ಗಣಿಗಾರಿಕೆ, ಮನಿ ಲಾಂಡ್ರಿಂಗ್ ಹೀಗೆ ಸಾಲು ಸಾಲು ಭ್ರಷ್ಟಾಚಾರದ ಹಗರಣಗಳ ಕಿಂಗ್ ಪಿನ್ ಆಗಿರುವ ನಿಮ್ಮ ಜಾಗ ಎಲ್ಲಿರಬಹುದು ಎನ್ನುವುದನ್ನು ಒಮ್ಮೆ ಯೋಚಿಸಿ. ಗಾಜಿನ ಮನೆಯಲ್ಲಿ ಕೂತು ಕಲ್ಲು ಹೊಡೆಯುವ ದುಸ್ಸಾಹಸ ಮಾಡಬೇಡಿ.” ಎಂದು ಅವರು ಹೇಳಿದ್ದಾರೆ.

“ವಕ್ಪ್ ಆಸ್ತಿ ವಿಚಾರದಲ್ಲಿ ಸುಬಗರ ಸೋಗು ಹಾಕುವುದೇನು ಬೇಡ. ನಿಮ್ಮದೇ ಪಕ್ಷದ ಬಿ.ಎಸ್.ಯಡಿಯೂರಪ್ಪ, ಡಿ.ವಿ.ಸದಾನಂದ ಗೌಡ, ಜಗದೀಶ್ ಶೆಟ್ಟರ್ ಮತ್ತು ಈಗಿನ ನಿಮ್ಮ ಮಿತ್ರ ಪಕ್ಷವಾದ ಜೆಡಿಎಸ್ ನ ಹೆಚ್.ಡಿ.ಕುಮಾರಸ್ವಾಮಿ ಅವರು ಮುಖ್ಯಮಂತ್ರಿಗಳಾಗಿದ್ದಾಗ ನೂರಾರು ರೈತ ಕುಟುಂಬಗಳ ಆಸ್ತಿಗಳನ್ನು ವಕ್ಪ್ ಬೋರ್ಡ್ ಗೆ ಖಾತೆ ಬದಲಾಯಿಸಿದ ದಾಖಲೆಗಳನ್ನು ಶೀಘ್ರದಲ್ಲಿ ನಾವು ಬಿಡುಗಡೆ ಮಾಡುತ್ತೇವೆ. ಆಗ ನಿಮ್ಮ ಪಾಪದ ಫಲವನ್ನು ನೀವೇ ಉಣ್ಣಬೇಕಾಗುವ ಸಂದರ್ಭ ಬರಬಹುದು..!! ಅದಕ್ಕೆ ಸಿದ್ಧರಾಗಿರಿ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಚ್ಚರಿಸಿದ್ದಾರೆ.

ಇದನ್ನೂ ಓದಿ: ಅತ್ಯಾಚಾರ ಸಂತ್ರಸ್ತೆಯ ಉಡುಪಿನಲ್ಲಿ ಪ್ರಜ್ವಲ್ ರೇವಣ್ಣನ ಡಿಎನ್‌ಎ ಪತ್ತೆ: ಎಸ್‌ಐಟಿ

ಅತ್ಯಾಚಾರ ಸಂತ್ರಸ್ತೆಯ ಉಡುಪಿನಲ್ಲಿ ಪ್ರಜ್ವಲ್ ರೇವಣ್ಣನ ಡಿಎನ್‌ಎ ಪತ್ತೆ: ಎಸ್‌ಐಟಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...