Homeಮುಖಪುಟದ್ವೇಷ ಭಾಷಣ | ಅಸ್ಸಾಂ ಸಿಎಂ ಹಿಮಂತ ವಿರುದ್ಧ ಇಂಡಿಯಾ ಒಕ್ಕೂಟ ದೂರು

ದ್ವೇಷ ಭಾಷಣ | ಅಸ್ಸಾಂ ಸಿಎಂ ಹಿಮಂತ ವಿರುದ್ಧ ಇಂಡಿಯಾ ಒಕ್ಕೂಟ ದೂರು

- Advertisement -
- Advertisement -

ಜಾರ್ಖಂಡ್‌ನಲ್ಲಿ ನಡೆದ ಚುನಾವಣಾ ಪ್ರಚಾರ ಸಭೆಯಲ್ಲಿ “ಕೋಮು ಉದ್ವಿಗ್ನ ಮತ್ತು ವಿಭಜಕ” ಹೇಳಿಕೆಗಳನ್ನು ನೀಡಿದ್ದಾರೆ ಎಂದು ಅರೋಪಿಸಿ ಅಸ್ಸಾಂ ಮುಖ್ಯಮಂತ್ರಿ, ಬಿಜೆಪಿ ನಾಯಕ ಹಿಮಂತ ಬಿಸ್ವಾ ಶರ್ಮಾ ವಿರುದ್ಧ ಇಂಡಿಯಾ ಒಕ್ಕೂಟ ಶನಿವಾರ ಚುನಾವಣಾ ಆಯೋಗಕ್ಕೆ ಔಪಚಾರಿಕ ದೂರು ದಾಖಲಿಸಿದೆ ಎಂದು ಎಎನ್‌ಐ ವರದಿ ಮಾಡಿದೆ. ದ್ವೇಷ ಭಾಷಣ

ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ), ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್‌ವಾದಿ-ಲೆನಿನಿಸ್ಟ್), ಕಾಂಗ್ರೆಸ್ ಮತ್ತು ಜಾರ್ಖಂಡ್ ಮುಕ್ತಿ ಮೋರ್ಚಾ (ಜೆಎಂಎಂ) ಪ್ರತಿನಿಧಿಗಳು ಭಾರತೀಯ ಚುನಾವಣಾ ಆಯೋಗ ಮತ್ತು ರಾಜ್ಯದ ಮುಖ್ಯ ಚುನಾವಣಾ ಅಧಿಕಾರಿಗೆ ದೂರು ಸಲ್ಲಿಸಿದ್ದಾರೆ. ದ್ವೇಷ ಭಾಷಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ನವೆಂಬರ್ 13 ಮತ್ತು 20 ರಂದು ರಾಜ್ಯದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ ಕೋಮು ಉದ್ವಿಗ್ನತೆಯನ್ನು ಪ್ರಚೋದಿಸುವ ಉದ್ದೇಶದಿಂದ ಹಿಮಂತ ಶರ್ಮಾ ಅವರು ಭಾಷಣ ಮಾಡಿದ್ದಾರೆ ಎಂದು ಇಂಡಿಯಾ ಒಕ್ಕೂಟದ ನಾಯಕರು ಆರೋಪಿಸಿದ್ದಾರೆ.

ನವೆಂಬರ್ 1 ರಂದು ಶರತ್‌ನಲ್ಲಿ ಮಾಡಿದ ಭಾಷಣದಲ್ಲಿ ಅವರು, “ಮುಸ್ಲಿಮರು ಪ್ರಧಾನವಾಗಿ ಒಂದೇ ಪಕ್ಷಕ್ಕೆ ಮತ ಹಾಕುತ್ತಾರೆ, ಆದರೆ ಹಿಂದೂ ಮತಗಳು ವಿಭಜನೆಯಾಗುತ್ತವೆ” ಎಂದು ಶರ್ಮಾ ಹೇಳಿಕೊಂಡಿದ್ದಾರೆ. ಹೇಮಂತ್ ಸೊರೆನ್ ನೇತೃತ್ವದ ರಾಜ್ಯ ಸರ್ಕಾರವು ‘ವಿಶೇಷ ಸಮುದಾಯ’ದ ಮತಕ್ಕಾಗಿ ‘ಒಳನುಸುಳುಕೋರರನ್ನು ಆಹ್ವಾನಿಸುತ್ತದೆ’ ಎಂದು ಅವರು ಆರೋಪಿಸಿದ್ದರು.

ಹಿಮಂತ ಅವರು ನೀಡಿದ ಈ ಭಾಷಣವು ಅವರು ಮತ್ತು ಅವರ ಪಕ್ಷವಾದ ಬಿಜೆಪಿಯಿಂದ ಪ್ರಚಾರ ಮಾಡುತ್ತಿರುವ ವಿಭಜಕ ರಾಜಕೀಯಕ್ಕೆ ಉದಾಹರಣೆಯಾಗಿದೆ ಎಂದು ಇಂಡಿಯಾ ಒಕ್ಕೂಟ ನಾಯಕರು ಹೇಳಿದ್ದಾರೆ.

“ಒಳನುಸುಳುವವರು” ಎಂಬಂತಹ ಪದಗಳನ್ನು ಬಳಸುವ ಮೂಲಕ ಅವರು “ದ್ವೇಷ ಮತ್ತು ಅಸಮಾಧಾನದ ಜ್ವಾಲೆಯನ್ನು ಹುಟ್ಟುಹಾಕುತ್ತಿದ್ದಾರೆ” ಎಂದು ಅವರು ಆರೋಪಿಸಿದ್ದಾರೆ. ಹಿಮಂತ ಶರ್ಮಾ ಅವರು ಕಾಂಗ್ರೆಸ್ ಅಲ್ಪಸಂಖ್ಯಾತ ನಾಯಕರನ್ನು ಗುರಿಯಾಗಿಸಿಕೊಂಡ ಸಂದರ್ಶನವನ್ನೂ ದೂರಿನಲ್ಲಿ ಉಲ್ಲೇಖಿಸಲಾಗಿದೆ.

24 ಗಂಟೆಯೊಳಗೆ ಚುನಾವಣಾ ಆಯೋಗ ಕ್ರಮ ಕೈಗೊಳ್ಳದಿದ್ದರೆ ನ್ಯಾಯಾಲಯದ ಮೊರೆ ಹೋಗುವುದಾಗಿ ಇಂಡಿಯಾ ಒಕ್ಕೂಟ ಎಚ್ಚರಿಸಿದೆ.

“ಅವರು ಉದ್ದೇಶಪೂರ್ವಕವಾಗಿ ಇಡೀ ಧಾರ್ಮಿಕ ಅಲ್ಪಸಂಖ್ಯಾತರನ್ನು ಒಂದೇ ದೃಷ್ಟಿಕೋನದಲ್ಲಿ ಚಿತ್ರಿಸುತ್ತಿದ್ದಾರೆ. ರಾಜಕೀಯ ಲಾಭಕ್ಕಾಗಿ ಸಾಮಾಜಿಕ ವಿಭಜನೆಗಳನ್ನು ಬಳಸಿಕೊಳ್ಳುವ ಉದ್ದೇಶದಿಂದ ‘ಅಲ್ಪಸಂಖ್ಯಾತರನ್ನು’ ಒಳನುಸುಳುವವರು ಎಂದು ಬ್ರಾಂಡ್ ಮಾಡುತ್ತಿದ್ದಾರೆ. ಇಂತಹ ಭಾಷಣವು ಕೋಮು ಉದ್ವಿಗ್ನತೆಯನ್ನು ಉಲ್ಬಣಗೊಳಿಸುತ್ತದೆ ಮತ್ತು ಚುನಾವಣಾ ಲಾಭಕ್ಕಾಗಿ ಜಾರ್ಖಂಡ್‌ನ ಸಾಮಾಜಿಕ ರಚನೆಯನ್ನು ಮುರಿಯುವ ಅಪಾಯವನ್ನು ಸೃಷ್ಟಿ ಮಾಡುತ್ತಿದ್ದಾರೆ” ಎಂದು ಪತ್ರದಲ್ಲಿ ತಿಳಿಸಲಾಗಿದೆ.

ಜಾರ್ಖಂಡ್‌ನ ಹೇಮಂತ್ ಸೊರೆನ್ ಸರ್ಕಾರವು ಬಾಂಗ್ಲಾದೇಶಿ ನುಸುಳುಕೋರರನ್ನು ಬೆಂಬಲಿಸುತ್ತಿದೆ ಎಂದು ಆರೋಪಿಸಿರುವ ಹಿಮಂತಾ ಶರ್ಮಾ ಅವರ ಧ್ವನಿಮುದ್ರಣಗಳನ್ನು ಇಂಡಿಯಾ ಒಕ್ಕೂಟ ದೂರಿನೊಂದಿಗೆ ಸಲ್ಲಿಸಿದೆ.

“ಈ ಅಪಾಯಕಾರಿ ತಂತ್ರವು ಪ್ರಜಾಪ್ರಭುತ್ವ ಪ್ರಕ್ರಿಯೆಯನ್ನು ದುರ್ಬಲಗೊಳಿಸುವುದು ಮಾತ್ರವಲ್ಲದೆ ನಮ್ಮ ಸಂವಿಧಾನದ ಮೂಲಭೂತ ರಚನೆಯನ್ನು ಉಲ್ಲಂಘಿಸುತ್ತದೆ. ದ್ವೇಷ ಭಾಷಣದ ವಿರುದ್ಧ ಸುಪ್ರೀಂ ಕೋರ್ಟ್ ನೀಡಿದ ವಿವಿಧ ನ್ಯಾಯಾಂಗ ಹೇಳಿಕೆಗಳನ್ನು ಮತ್ತು ತೀರ್ಪುಗಳ ವಿರುದ್ಧ ಅವರ ಈ ಹೇಳಿಕೆ ಇವೆ” ಎಂದು ಇಂಡಿಯಾ ನಾಯಕರು ಹೇಳಿದ್ದಾರೆ.

ಇದನ್ನೂ ಓದಿ: ಬಡತನ | ಬ್ಯಾಂಕ್ ಸಾಲ ತೀರಿಸಲು ಮಗುವನ್ನೆ ₹9000ಕ್ಕೆ ಮಾರಾಟ!

ಬಡತನ | ಬ್ಯಾಂಕ್ ಸಾಲ ತೀರಿಸಲು ಮಗುವನ್ನೆ ₹9000ಕ್ಕೆ ಮಾರಾಟ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್: ಸರ್ಕಾರಕ್ಕೆ ನಾಲ್ಕು ಪ್ರಮುಖ ಹಕ್ಕೊತ್ತಾಯ, ಸರ್ಕಾರದಿಂದ ಸಕಾರಾತ್ಮಕ ಸ್ಪಂದನೆ.

ಬಿಡದಿ ಸ್ಮಾರ್ಟ್ ಸಿಟಿ ಅಥವಾ ಟೌನ್‌ಶಿಪ್ ಯೋಜನೆಯ ಭೂಸ್ವಾಧೀನ ಪ್ರಕ್ರಿಯೆಯನ್ನು ವಿರೋಧಿಸಿ ಬಿಡದಿ ರೈತರು ಹಾಗೂ ಸಂಯುಕ್ತ ಹೋರಾಟದ ನೇತೃತ್ವದಲ್ಲಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ಪ್ರತಿಭಟನೆ ಮತ್ತು ವಿಧಾನಸೌಧ ಚಲೋ ಹೋರಾಟ...

ತಮಿಳುನಾಡು| ಮರ್ಯಾದೆಗೇಡು ಹತ್ಯೆ ಶಂಕೆ; 25 ವರ್ಷದ ದಲಿತ ಯುವಕನ ಭೀಕರ ಕೊಲೆ

ತಮಿಳುನಾಡಿನ ಚೆಂಗಲ್ಪಟ್ಟು ಜಿಲ್ಲೆಯಲ್ಲಿ 23 ವರ್ಷದ ದಲಿತ ಯುವಕನೊಬ್ಬನನ್ನು ಕೊಚ್ಚಿ ಕೊಲೆ ಮಾಡಲಾಗಿದ್ದು, ಮರ್ಯಾದೆಗೇಡು ಕೊಲೆಯ ಶಂಕೆ ವ್ಯಕ್ತವಾಗಿದೆ. ಆಗಸ್ಟ್ 16 ರಂದು ರಾತ್ರಿ ಚೆಂಗಲ್ಪಟ್ಟುವಿನ ಕೇಳಂಬಾಕ್ಕಂ ನಿವಾಸಿ ಪ್ರವೀಣ್ ಅವರ ಮೇಲೆ ದಾಳಿಕೋರರಾದ...

44 ಲಕ್ಷ ಮತದಾರರಿಗೆ ನೋಟಿಸ್: BLA ಗಳಿಗೆ ಪಟ್ಟಿ ನೀಡಿ, ಪಾರದರ್ಶಕತೆ ಕಾಯ್ದುಕೊಳ್ಳಲು ‘ಜಾಗೃತ ಕರ್ನಾಟಕ’ ಒತ್ತಾಯ

ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಪ್ರಕಟಗೊಳ್ಳುತ್ತಿರುವ ಕರಡು ಮತದಾರರ ಪಟ್ಟಿಯಿಂದ ಯಾವುದೇ ಅರ್ಹ ಮತದಾರರ ಹೆಸರು ಕೈಬಿಟ್ಟು ಹೋಗದಂತೆ ಎಚ್ಚರವಹಿಸಬೇಕು ಹಾಗೂ ನೋಟಿಸ್ ಪ್ರಕ್ರಿಯೆಗೆ ಕಾಲಾವಕಾಶ ವಿಸ್ತರಿಸಬೇಕು ಎಂದು ಆಗ್ರಹಿಸಿ ‘ಜಾಗೃತ...

ಕೇರಳ ಬಿಜೆಪಿಗೆ ಹಿರಿಯ ನಟ ಎಸ್. ದೇವನ್ ಗುಡ್‌ಬೈ: ‘ದಳಪತಿ’ ವಿಜಯ್ ಟಿವಿಕೆ ಪಕ್ಷ ಸೇರಲು ಒಲವು!

ಮಲಯಾಳಂ ನಟ ಹಾಗೂ ರಾಜಕಾರಣಿ ಎಸ್. ದೇವನ್ ಅವರು ತಮಿಳುನಾಡಿನ ವಿಜಯ್ ನೇತೃತ್ವದ 'ತಮಿಳಗ ವೆಟ್ರಿ ಕಳಗಂ' (ಟಿವಿಕೆ) ಪಕ್ಷವನ್ನು ಸೇರಲು ನಿರ್ಧರಿಸಿರುವುದಾಗಿ ತಿಳಿಸಿದ್ದಾರೆ. ಇತ್ತೀಚೆಗಷ್ಟೇ ಭಾರತೀಯ ಜನತಾ ಪಾರ್ಟಿಯ (ಬಿಜೆಪಿ) ಕೇರಳ...

ಮತ್ತೆ ಜೈಲಿನಿಂದ ಹೊರಬಂದ ಅತ್ಯಾಚಾರಿ ರಾಮ್ ರಹೀಮ್! 6 ವರ್ಷದಲ್ಲಿ 17ನೇ ಬಾರಿ ಪೆರೋಲ್

ನವದೆಹಲಿ/ರೋಹ್ಟಕ್: ಇಬ್ಬರು ಮಹಿಳಾ ಶಿಷ್ಯರ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ 20 ವರ್ಷಗಳ ಕಠಿಣ ಜೈಲು ಶಿಕ್ಷೆ ಅನುಭವಿಸುತ್ತಿರುವ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಸಿಂಗ್‌ಗೆ ಹರಿಯಾಣ ಸರ್ಕಾರ ಪುನಃ...

ಎಸ್‌ಐಆರ್‌ ಕರಡು ತಿರಸ್ಕರಿಸಿದ ನಾಗರಿಕ ಸಂಘಟನೆಗಳು; ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ

ಆಗಸ್ಟ್ 24 ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿರುವ ಮತದಾರರ ಎಸ್‌ಐಆರ್‌ ಕರಡು ಪಟ್ಟಿಯನ್ನು ಕರ್ನಾಟಕದ ನಾಗರಿಕ ಸಂಘಟನೆಗಳು ತಿರಸ್ಕರಿಸಿದ್ದು, ಲಕ್ಷಾಂತರ ಮತದಾರರಿಗೆ ನೋಟಿಸ್‌ ಕೊಡಲು ಸಿದ್ಧತೆ ನಡೆಸಿರುವ ಕೇಂದ್ರ ಚುನಾವಣಾ...

‘ಕೇಂದ್ರ ಸರ್ಕಾರ ಜಾತಿ ಗಣತಿಗೆ ರೂಪಿಸಿರುವ ಪ್ರಶ್ನಾವಳಿ ವಿಧಾನ ದಾರಿತಪ್ಪಿಸುವಂತಿವೆ’: ಹೊಸ ಪ್ರಶ್ನಾವಳಿ ರಚಿಸಲು ಪ್ರಧಾನಿ ಮೋದಿಗೆ ಖರ್ಗೆ-ರಾಹುಲ್ ಪತ್ರ

ರಾಷ್ಟ್ರೀಯ ಜನಗಣತಿಯಲ್ಲಿ ಜಾತಿ ದತ್ತಾಂಶ ಸಂಗ್ರಹಣೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರವು ರೂಪಿಸಿರುವ ಪ್ರಶ್ನಾವಳಿಯ ವಿಧಾನವು ಅತ್ಯಂತ ದಾರಿತಪ್ಪಿಸುವಂತಿದೆ ಎಂದು ಗಂಭೀರ ಆಕ್ಷೇಪ ವ್ಯಕ್ತಪಡಿಸಿರುವ ಕಾಂಗ್ರೆಸ್ ಅಧ್ಯಕ್ಷ ಹಾಗೂ ರಾಜ್ಯಸಭಾ ವಿರೋಧ ಪಕ್ಷದ ನಾಯಕ...

ಪತ್ರಕರ್ತ ಅಭಿಷೇಕ್ ವಿರುದ್ಧ ಯಾವುದೇ ಬಲವಂತದ ಕ್ರಮ ಜರುಗಿಸದಂತೆ ಸುಪ್ರೀಂ ಕೋರ್ಟ್ ಆದೇಶ

ರಾಮ ಮಂದಿರ ದೇಣಿಗೆ ಅಕ್ರಮದ ಕುರಿತು ವರದಿ ಮಾಡಿದ್ದ ಪತ್ರಕರ್ತ ಅಭಿಷೇಕ್ ಉಪಾಧ್ಯಾಯ ಅವರ ವಿರುದ್ಧ ಉತ್ತರ ಪ್ರದೇಶ ಪೊಲೀಸರು ದಾಖಲಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಂತರ ಆದೇಶ ನೀಡಿದ್ದು,...

2027ರ ಜನಗಣತಿಯಲ್ಲಿ ಪೋಷಕರ ಧರ್ಮ, ಜನ್ಮಸ್ಥಳದ ವಿವರ ಏಕೆ? ಕೇಂದ್ರದ ವಿರುದ್ಧ ಸಿಪಿಐ(ಎಂ) ಆಕ್ರೋಶ

2027ರ ಜನಗಣತಿ ಪ್ರಶ್ನಾವಳಿಯಲ್ಲಿ ಪೋಷಕರ ಧರ್ಮ ಹಾಗೂ ಜನ್ಮಸ್ಥಳದ ಕುರಿತಾದ ವಿವರಗಳನ್ನು ಸಂಗ್ರಹಿಸಲು ಉದ್ದೇಶಿಸಿರುವುದರ ವಿರುದ್ಧ ಸಿಪಿಐ(ಎಂ) ತೀವ್ರ ಆತಂಕ ವ್ಯಕ್ತಪಡಿಸಿದ್ದು, ಈ ಕ್ರಮವು ರಾಷ್ಟ್ರೀಯ ಪೌರತ್ವ ನೋಂದಣಿ (ಎನ್‌ಆರ್‌ಸಿ) ಜಾರಿಗೆ ತರುವ...

ಟಿಎಂಸಿ ಬಂಡಾಯ ಸಂಸದರಿಗೆ ಸುಪ್ರೀಂ ಕೋರ್ಟ್ ಶಾಕ್: 20 ಎಂಪಿಗಳಿಗೆ ನೋಟಿಸ್ ಜಾರಿ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ತೊರೆದು, ಎನ್‌ಸಿಪಿಐ (NCPI) ಎಂಬ ಅಷ್ಟಾಗಿ ಜನಪ್ರಿಯವಲ್ಲದ ಪಕ್ಷದೊಂದಿಗೆ ವಿಲೀನಗೊಂಡು ಎನ್‌ಡಿಎ ಒಕ್ಕೂಟವನ್ನು ಸೇರಿಕೊಂಡಿರುವ 20 ಬಂಡಾಯ ಸಂಸದರಿಗೆ ಸುಪ್ರೀಂ ಕೋರ್ಟ್ ಮಂಗಳವಾರ ನೋಟಿಸ್ ಜಾರಿ ಮಾಡಿದೆ. ಟಿಎಂಸಿ ಪ್ರಧಾನ...