Homeಮುಖಪುಟಆಂಬ್ಯುಲೆನ್ಸ್ ದುರ್ಬಳಕೆ ಆರೋಪ : ಕೇಂದ್ರ ಸಚಿವ ಸುರೇಶ್ ಗೋಪಿ ವಿರುದ್ದ ಪ್ರಕರಣ ದಾಖಲು

ಆಂಬ್ಯುಲೆನ್ಸ್ ದುರ್ಬಳಕೆ ಆರೋಪ : ಕೇಂದ್ರ ಸಚಿವ ಸುರೇಶ್ ಗೋಪಿ ವಿರುದ್ದ ಪ್ರಕರಣ ದಾಖಲು

- Advertisement -
- Advertisement -

ಕಳೆದ ಏಪ್ರಿಲ್‌ ತಿಂಗಳಿನಲ್ಲಿ ನಡೆದ ತ್ರಿಶೂರ್ ಪೂರಂ ಉತ್ಸವಕ್ಕೆ ತೆರಳಲು ಆಂಬ್ಯುಲೆನ್ಸ್ ದುರ್ಬಳಕೆ ಮಾಡಿಕೊಂಡ ಆರೋಪದ ಮೇಲೆ ಕೇಂದ್ರ ಪ್ರವಾಸೋದ್ಯಮ ಇಲಾಖೆಯ ರಾಜ್ಯ ಖಾತೆ ಸಚಿವ ಸುರೇಶ್ ಗೋಪಿ ವಿರುದ್ಧ ಕೇರಳ ಪೊಲೀಸರು ಭಾನುವಾರ (ನ.3) ಪ್ರಕರಣ ದಾಖಲಿಸಿದ್ದಾರೆ ಎಂದು ವರದಿಯಾಗಿದೆ.

ಗೋಪಿ ಜೊತೆಗೆ ಆಂಬ್ಯುಲೆನ್ಸ್‌ನಲ್ಲಿದ್ದ ಅಭಿಜಿತ್ ನಾಯರ್ ಎಂಬವರು ಮತ್ತು ಆಂಬ್ಯುಲೆನ್ಸ್ ಚಾಲಕನ ವಿರುದ್ಧವೂ ಪ್ರಕರಣ ದಾಖಲಾಗಿದೆ.

ಲೋಕಸಭಾ ಚುನಾವಣಾ ಪ್ರಚಾರ ಕಾರ್ಯತಂತ್ರದ ಭಾಗವಾಗಿ ಗೋಪಿ ಮತ್ತು ಇತರರು ಆಂಬ್ಯುಲೆನ್ಸ್  ದುರುಪಯೋಗಪಡಿಸಿಕೊಂಡಿದ್ದಾರೆ. ಪೂರಂ ಉತ್ಸವದ ದಿನ ರಾತ್ರಿ ತ್ರಿಶೂರ್‌ನ ಜನನಿಬಿಡ ರಸ್ತೆಯಲ್ಲಿ ಸುಖಾಸುಮ್ಮನೆ ಆಂಬ್ಯುಲೆನ್ಸ್ ಓಡಿಸಿದ್ದಾರೆ ಎಂದು ಆರೋಪಿಸಿ ವಕೀಲ ಸುಮೇಶ್ ಭವದಾಸನ್ ಎಂಬವರು ನೀಡಿರುವ ದೂರಿನ ಮೇರೆಗೆ ಪ್ರಕರಣ ದಾಖಲಿಸಲಾಗಿದೆ.

ಮೂವರ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್‌ಗಳಾದ 279 ಸಾರ್ವಜನಿಕ ರಸ್ತೆಯಲ್ಲಿ ಅತಿ ವೇಗದ ಮತ್ತು ನಿರ್ಲಕ್ಷ್ಯದ ಚಾಲನೆ, 34 ಕ್ರಿಮಿನಲ್ ಕೃತ್ಯ ಮತ್ತು ಮೋಟಾರು ವಾಹನ ಕಾಯ್ದೆಯಡಿ ಅರೋಪ ಹೊರಿಸಲಾಗಿದೆ.

ಪ್ರಕರಣದ ಹಿನ್ನೆಲೆ : ಏಪ್ರಿಲ್ 19, 2024 ರಂದು ಜನಸಂದಣಿ ನಿರ್ವಹಣೆಗಾಗಿ ಪೊಲೀಸರು ವಿಧಿಸಿದ ನಿರ್ಬಂಧಗಳಿಂದಾಗಿ ಪೂರಂ ಉತ್ಸವದ ಕೆಲವು ಕಾರ್ಯಕ್ರಮಗಳನ್ನು ಮಧ್ಯದಲ್ಲಿಯೇ ಕೈಬಿಟ್ಟಿದ್ದರಿಂದ ರಾಜಕೀಯ ಗದ್ದಲ ಭುಗಿಲೆದ್ದಿತ್ತು. ಕಾರ್ಯಕ್ರಮಗಳನ್ನು ಅರ್ಧಕ್ಕೆ ನಿಲ್ಲಿಸಿದ್ದನ್ನು ವಿರೋಧಿಸಿದ್ದ ಸುರೇಶ್ ಗೋಪಿ, ಏಪ್ರಿಲ್ 20ರಂದು ಮುಂಜಾನೆ ದೇವಸ್ಥಾನದ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ ನಂತರ, ಹಬ್ಬದ ಪ್ರಮುಖ ಆಕರ್ಷಣೆಗಳಲ್ಲಿ ಒಂದಾದ ಸಿಡಿಮದ್ದು ಪ್ರದರ್ಶನ ಹಗಲು ಹೊತ್ತಿನಲ್ಲಿ ನಡೆದಿತ್ತು.

ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಗೆ ಲಾಭ ಮಾಡಿಕೊಡುವ ಉದ್ದೇಶದಿಂದ ಉತ್ಸವವನ್ನು ಅರ್ಧಕ್ಕೆ ನಿಲ್ಲಿಸಿ ಮರುದಿನ ಹಗಲೊತ್ತು ಸಿಡಿಮದ್ದು ಪ್ರದರ್ಶನ ನಡೆಸಲಾಗಿದೆ. ಇದರ ಹಿಂದೆ ಸುರೇಶ್ ಗೋಪಿ ಕೈವಾಡ ಇದೆ. ಅಧಿಕಾರಿಗಳು ಕೂಡ ಈ ತಂತ್ರಕ್ಕೆ ಕೈ ಜೋಡಿಸಿದ್ದಾರೆ ಎಂದು ಕೇರಳದ ಪ್ರತಿಪಕ್ಷ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್‌) ಸೇರಿದಂತೆ ಹಲವರು ಆರೋಪಿಸಿದ್ದರು.

ಅಕ್ಟೋಬರ್ 3ರಂದು, ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಈ ವಿಷಯದ ಬಗ್ಗೆ ಮೂರು ಹಂತಗಳ ತನಿಖೆಯನ್ನು ಘೋಷಿಸಿದ್ದರು. ಲೋಕಸಭೆ ಚುನಾವಣೆಗೆ ಲಾಭ ಪಡೆಯಲು ಸಿಡಿಮದ್ದು ಪ್ರದರ್ಶನವನ್ನು ವಿಳಂಬ ಮಾಡುವ ತಂತ್ರ ಹೂಡಲಾಗಿತ್ತೇ? ಎಂದು ವರದಿ ನೀಡಲು ಆದೇಶಿಸಿದ್ದರು.

ಬಳಿಕ, “ರಾಜ್ಯದ ಸಾಮಾಜಿಕ ವ್ಯವಸ್ಥೆಯನ್ನು ಹಾಳುಗಡೆವುವ ಪ್ರಯತ್ನ ನಡೆದಿದೆ” ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮಾಧ್ಯಮಗಳ ಮುಂದೆ ಹೇಳಿಕೆ ಕೊಟ್ಟಿದ್ದರು.

ಈ ವಿಚಾರವಾಗಿ ಕಳೆದ ಅಕ್ಟೋಬರ್ 28ರಂದು, ಕೇರಳದ ಆಡಳಿತರೂಢ ಎಡ ಪ್ರಜಾಸತ್ತಾತ್ಮಕ ರಂಗ (ಎಲ್‌ಡಿಎಫ್‌) ಸರ್ಕಾರಕ್ಕೆ ಸವಾಲೆಸೆದಿದ್ದ ಸುರೇಶ್ ಗೋಪಿ, ತ್ರಿಶೂರ್ ಪೂರಂ ಗೊಂದಲದ ಕುರಿತು ಕೇಂದ್ರೀಯ ತನಿಖಾ ದಳ (ಸಿಬಿಐ) ತನಿಖೆಗೆ ಆದೇಶಿಸಿ ಎಂದಿದ್ದರು. ಉತ್ಸವದ ಸ್ಥಳಕ್ಕೆ ತೆರಳಲು ಆಂಬ್ಯುಲೆನ್ಸ್ ಬಳಸಲಾಗಿದೆ ಎಂಬ ತನ್ನ ಮೇಲಿನ ಆರೋಪವನ್ನು ನಿರಾಕರಿಸಿದ್ದರು.

ಚೇಲಕ್ಕರ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಪ್ರಯುಕ್ತ ಬಿಜೆಪಿ ಅಭ್ಯರ್ಥಿ ಪರ ಪ್ರಚಾರ ಸಭೆಯಲ್ಲಿ ಮಾತನಾಡಿದ್ದ ಗೋಪಿ, “ನಾನು ಬಿಜೆಪಿ ಜಿಲ್ಲಾಧ್ಯಕ್ಷರ ಕಾರಿನಲ್ಲಿ ಪೂರಂ ಸ್ಥಳಕ್ಕೆ ತೆರಳಿದ್ದೆ. ಪಿಣರಾಯಿ ಪೊಲೀಸರಿಗೆ ಸತ್ಯ ಕಂಡು ಹಿಡಿಯಲು ಸಾಧ್ಯವಾಗುತ್ತಿಲ್ಲ” ಎಂದು ವಾಗ್ದಾಳಿ ನಡೆಸಿದ್ದರು.

ಬಳಿಕ, ಮಾತು ಬದಲಿಸಿದ್ದ ಗೋಪಿ, ಆಂಬ್ಯುಲೆನ್ಸ್ ದುರ್ಬಳಕೆ ಮಾಡಿರುವುದನ್ನು ಒಪ್ಪಿಕೊಂಡಿದ್ದರು. “ನನಗೆ ಕಾಲು ನೋವಿದ್ದ ಕಾರಣ ಜನಸಂದಣಿಯಲ್ಲಿ ನಡೆಯಲು ಕಷ್ಟವಾಗಿತ್ತು. ಹಾಗಾಗಿ, ಕೆಲ ಯುವಕರು ಯಾವುದೇ ರಾಜಕೀಯ ಅಜೆಂಡಾ ಇಲ್ಲದೆ ನನಗೆ ಆಂಬ್ಯುಲೆನ್ಸ್‌ಗೆ ಸಹಾಯ ಮಾಡಿದ್ದರು” ಎಂದಿದ್ದರು. ಈ ಹೇಳಿಕೆಯನ್ನು ಅಕ್ಟೋಬರ್ 31 ರಂದು ‘ದಿ ಹಿಂದೂ‘ ತನ್ನ ವರದಿಯಲ್ಲಿ ಉಲ್ಲೇಖಿಸಿತ್ತು.

ಆರೋಪ ಪ್ರತ್ಯಾರೋಪಗಳ ನಡುವೆ ಇದೀಗ ಸುರೇಶ್ ಗೋಪಿ ಸೇರಿದಂತೆ ಮೂವರ ವಿರುದ್ದ ಆಂಬ್ಯುಲೆನ್ಸ್ ದುರ್ಬಳಕೆ ಆರೋಪದ ಮೇಲೆ ಪ್ರಕರಣ ದಾಖಲಾಗಿದೆ. ಈ ಮೂಲಕ ಪ್ರಕರಣ ಮತ್ತೊಂದು ಮಜಲಿಗೆ ಕಾಲಿಟ್ಟಿದೆ.

ಇದನ್ನೂ ಓದಿ : ಯುಪಿ ಸಿಎಂ ಯೋಗಿ ಆದಿತ್ಯನಾಥ್‌ಗೆ ಜೀವ ಬೆದರಿಕೆ; 24 ವರ್ಷದ ಯುವತಿಯನ್ನು ಬಂಧಿಸಿದ ಮುಂಬೈ ಪೊಲೀಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR : ತಂದೆಯೊಂದಿಗೆ ಮ್ಯಾಪಿಂಗ್ ಮಾಡಿದರೂ ಅಜ್ಜನ ವಯಸ್ಸಿನ ವ್ಯತ್ಯಾಸದ ನೆಪ ಹೇಳಿ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ದಿನಕ್ಕೊಂದು ವಿಲಕ್ಷಣ ಹಾಗೂ ಯಾಂತ್ರಿಕ ದೋಷಗಳನ್ನು ಹೊರಹಾಕುತ್ತಿದ್ದು, ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಲು ಬಯಸುವ ನೈಜ ಮತದಾರರನ್ನು ಆತಂಕಕ್ಕೆ ತಳ್ಳುತ್ತಿದೆ. ಬ್ಯಾಟರಾಯನಪುರ...

ಬ್ಯಾಂಕ್ ಮುಷ್ಕರ: ದೇಶಾದ್ಯಂತ ಶಾಖಾ ಸೇವೆಗಳಿಗೆ ಅಡಚಣೆ; ವಾರಾಂತ್ಯ, ಗಣೇಶ ಚತುರ್ಥಿಯಿಂದ ಹಲವು ದಿನ ಸೇವೆ ವ್ಯತ್ಯಯ 

ನವದೆಹಲಿ: ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಕರೆ ನೀಡಿರುವ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಸೆಪ್ಟೆಂಬರ್ 11ರಂದು (ಇಂದು) ನಡೆಯುತ್ತಿದ್ದು, ದೇಶದಾದ್ಯಂತ ಬ್ಯಾಂಕ್ ಗ್ರಾಹಕರ ಸಾಮಾನ್ಯ ಸೇವೆಗಳ ಮೇಲೆ ಪರಿಣಾಮ ಬೀರುವ...

ಹನೂರು ಶೂಟೌಟ್ ಪ್ರಕರಣ: ಮೂವರು ಅರಣ್ಯ ಸಿಬ್ಬಂದಿಗೆ ನಿರೀಕ್ಷಣಾ ಜಾಮೀನು.!

ಕಾವೇರಿ ವನ್ಯಜೀವಿ ಅಭಯಾರಣ್ಯದ ಹನೂರು ವ್ಯಾಪ್ತಿಯಲ್ಲಿ ಮೂವರು ಮೃತಪಟ್ಟಿದ್ದ ವಿವಾದಾತ್ಮಕ ಗುಂಡಿನ ದಾಳಿ ಪ್ರಕರಣಕ್ಕೆ ಇದೀಗ ಕಾನೂನು ತಿರುವು ಸಿಕ್ಕಿದೆ. ಪ್ರಕರಣದಲ್ಲಿ ಆರೋಪ ಎದುರಿಸುತ್ತಿರುವ ಮೂವರು ಅರಣ್ಯ ಸಿಬ್ಬಂದಿಗೆ ಕೊಳ್ಳೇಗಾಲದ ಮೊದಲ ಹೆಚ್ಚುವರಿ...

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....