Homeಮುಖಪುಟಟಿಡಿಪಿಯ ಮುಸ್ಲಿಂ ನಾಯಕರಿಂದ ವಕ್ಫ್ ತಿದ್ದುಪಡಿ ಮಸೂದೆಗೆ ವಿರೋಧ : ಇಕ್ಕಟ್ಟಿಗೆ ಸಿಲುಕಿದ ಚಂದ್ರಬಾಬು ನಾಯ್ಡು

ಟಿಡಿಪಿಯ ಮುಸ್ಲಿಂ ನಾಯಕರಿಂದ ವಕ್ಫ್ ತಿದ್ದುಪಡಿ ಮಸೂದೆಗೆ ವಿರೋಧ : ಇಕ್ಕಟ್ಟಿಗೆ ಸಿಲುಕಿದ ಚಂದ್ರಬಾಬು ನಾಯ್ಡು

- Advertisement -
- Advertisement -

ವಕ್ಫ್ ತಿದ್ದುಪಡಿ ಮಸೂದೆ ಸಮುದಾಯದ ಹಿತಾಸಕ್ತಿಗಳಿಗೆ ವಿರುದ್ದವಾಗಿದೆ ಎಂಬ ಕಾರಣಕ್ಕೆ, ಅದನ್ನು ವಿರೋಧಿಸುವಂತೆ ತೆಲುಗು ದೇಶಂ ಪಕ್ಷ (ಟಿಡಿಪಿ)ದ ಮುಸ್ಲಿಂ ನಾಯಕರು, ಪಕ್ಷದ ನಾಯಕ ಹಾಗೂ ಅಂಧ್ರ ಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರಿಗೆ ಒತ್ತಡ ಹೇರಿದ್ದಾರೆ. ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರದ ಭಾಗವಾಗಿರುವ ನಾಯ್ಡು ಅವರನ್ನು ಈ ಬೆಳವಣಿಗೆ ಇಕ್ಕಟ್ಟಿಗೆ ಸಿಲುಕಿಸಿದೆ.

ವರದಿಗಳ ಪ್ರಕಾರ, ವಕ್ಫ್ ತಿದ್ದುಪಡಿ ಮಸೂದೆ ವಿಚಾರದಲ್ಲಿ ಅತ್ತ ತನ್ನ ಪಕ್ಷದ ಮುಸ್ಲಿಂ ನಾಯಕರನ್ನು ಬಿಟ್ಟು ಕೊಡಲಾಗದೆ, ಇತ್ತ ಬಿಜೆಪಿಯನ್ನು ವಿರೋಧಿಸಲಾಗದೆ ಅಂತಿಮ ನಿರ್ಧಾರ ತೆಗೆದುಕೊಳ್ಳಲು ನಾಯ್ಡು ಹೆಣಗಾಡುತ್ತಿದ್ದಾರೆ.

ಪ್ರಸ್ತುತ, ಜಂಟಿ ಸಂಸದೀಯ ಸಮಿತಿ (ಜೆಪಿಸಿ) ಪರಿಶೀಲನೆಯಲ್ಲಿರುವ ವಕ್ಫ್ ತಿದ್ದುಪಡಿ ಮಸೂದೆಯ ಕುರಿತ ವರದಿಯು ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಮಂಡನೆಯಾಗುವ ಸಾಧ್ಯತೆ ಇದೆ. ಸಂಸತ್‌ ಒಳಗೆ ಮತ್ತು ಹೊರಗೆ ತಿದ್ದುಪಡಿ ಮಸೂದೆಯನ್ನು ಬೆಂಬಲಿಸದಂತೆ ಟಿಡಿಪಿಯ ಮುಸ್ಲಿಂ ನಾಯಕರು ನಾಯ್ಡುಅವರಿಗೆ ಒತ್ತಡ ಹೇರಿದ್ದಾರೆ ಎನ್ನಲಾಗಿದೆ.

ಕೇಂದ್ರದಲ್ಲಿ ಈ ಬಾರಿ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರ ರಚನೆಯಾಗುವಲ್ಲಿ ಪ್ರಮುಖ ಪಾತ್ರ ವಹಿಸಿರುವ ಟಿಡಿಪಿ, ಬಿಜೆಪಿ ತಂದಿರುವ ವಕ್ಫ್ ತಿದ್ದುಪಡಿ ಮಸೂದೆಯನ್ನು ವಿರೋಧಿಸಲಾಗ ಪರಿಸ್ಥಿಯಲ್ಲಿದೆ. ರಾಜ್ಯ ಮಟ್ಟದಲ್ಲಿ ಮುಸ್ಲಿಂ ನಾಯಕರನ್ನೂ ಕಡೆಗಣಿಸುವಂತಿಲ್ಲ. ಹಾಗಾಗಿ, ವಕ್ಫ್ ಮಸೂದೆ ಕುರಿತು ಟಿಡಿಪಿ ಇನ್ನೂ ಅಂತಿಮ ನಿರ್ಧಾರ ಪ್ರಕಟಿಸಿಲ್ಲ.

ವಕ್ಫ್ ತಿದ್ದುಪಡಿ ಮಸೂದೆಯು ಎನ್‌ಡಿಎ ಸರ್ಕಾರವನ್ನು ಬೆಂಬಲಿಸಿದ ಬಳಿಕ ನಾಯ್ಡು ಅವರ ಜಾತ್ಯತೀತ ಇಮೇಜ್‌ಗೆ ಎದುರಾದ ಮೊದಲ ಅಗ್ನಿ ಪರೀಕ್ಷೆ ಎಂದು ರಾಜಕೀಯ ವಿಶ್ಲೇಷಕರು ಹೇಳುತ್ತಾರೆ.

ಅಖಿಲ ಭಾರತ ಮುಸ್ಲಿಂ ವೈಯುಕ್ತಿಕ ಕಾನೂನು ಮಂಡಳಿ (ಎಐಎಂಪಿಎಲ್‌ಬಿ) ಯ ಪ್ರಧಾನ ಕಾರ್ಯದರ್ಶಿ ಮೌಲಾನಾ ಮೊಹಮ್ಮದ್ ಫಜ್ಲುರಹೀಂ ಮುಜದ್ದಿದಿ ನೇತೃತ್ವದ ಮುಸ್ಲಿಂ ಮುಖಂಡರ ನಿಯೋಗವು ಅಕ್ಟೋಬರ್ 23ರಂದು ಅಮರಾವತಿಯಲ್ಲಿ ನಾಯ್ಡು ಅವರನ್ನು ಭೇಟಿ ಮಾಡಿ ಸಂಸತ್ತಿನಲ್ಲಿ ವಕ್ಫ್ ತಿದ್ದುಪಡಿ ಮಸೂದೆ 2024 ಅನ್ನು ವಿರೋಧಿಸುವಂತೆ ಒತ್ತಾಯಿಸಿದೆ.

ನಾಯ್ಡು ಸರ್ಕಾರದ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಎನ್.ಎಂ.ಡಿ ಫಾರೂಕ್ ಮತ್ತು ಆಂಧ್ರ ಪ್ರದೇಶದ ವಿಧಾನ ಪರಿಷತ್ತಿನ ಮಾಜಿ ಅಧ್ಯಕ್ಷ ಮೊಹಮ್ಮದ್ ಅಹ್ಮದ್ ಷರೀಫ್ ಅವರು ಈ ನಿಯೋಗದಲ್ಲಿದ್ದರು. ಮುಖ್ಯಮಂತ್ರಿಗೆ ಮನವಿ ಸಲ್ಲಿಸಿರುವ ಈ ನಾಯಕರು, ನರೇಂದ್ರ ಮೋದಿ ನೇತೃತ್ವದ ಸರ್ಕಾರ ಪ್ರಸ್ತಾಪಿಸಿರುವ ವಕ್ಫ್ ತಿದ್ದುಪಡಿ ಮಸೂದೆ ಮುಸ್ಲಿಂ ಸಮುದಾಯಕ್ಕೆ ಹೇಗೆ ವಿರೋಧವಾಗಿದೆ ಎಂದು ವಿವರಿಸಿದ್ದಾರೆ.

ಈ ವಿಷಯದ ಬಗ್ಗೆ ಮಧ್ಯಸ್ಥಗಾರರೊಂದಿಗೆ ಚರ್ಚಿಸಿದ ನಂತರ ಪಕ್ಷವು ಸೂಕ್ತ ನಿರ್ಧಾರ ತೆಗೆದುಕೊಳ್ಳುತ್ತದೆ ಎಂದು ಟಿಡಿಪಿ ಮುಖ್ಯಸ್ಥರು ನಿಯೋಗಕ್ಕೆ ಭರವಸೆ ನೀಡಿದ್ದಾರೆ.

ಇದರ ಮುಂದುವರಿದ ಭಾಗವಾಗಿ, ಟಿಡಿಪಿ ತನ್ನ ರಾಜ್ಯ ಉಪಾಧ್ಯಕ್ಷ ವಿ.ಎಸ್ ಅಮೀರ್ ಬಾಬು ಅವರನ್ನು ದೆಹಲಿಗೆ ಕಳುಹಿಸಿ ವಕ್ಫ್ ತಿದ್ದುಪಡಿ ಮಸೂದೆ ವಿರುದ್ದ ಎತ್ತಿರುವ ಆಕ್ಷೇಪಣೆಗಳ ಕುರಿತು ಎಐಎಂಪಿಎಲ್‌ಬಿ ಮತ್ತು ಇತರ ಸಂಘನೆಗಳು ಮುಖಂಡರ ಜೊತೆ ಚರ್ಚಿಸುವಂತೆ ಹೇಳಿತ್ತು.

ವರದಿಗಳ ಪ್ರಕಾರ, ವಕ್ಫ್ ತಿದ್ದುಪಡಿಸ ಮಸೂದೆ ಮುಸ್ಲಿಂ ಸಮುದಾಯದ ಹಿತಾಸಕ್ತಿಗೆ ವಿರುದ್ದವಾಗಿದೆ ಎಂದಿರುವ ಟಿಡಿಪಿ, ಅದನ್ನು ವಿರೋಧಿಸಿದೆ ಎನ್ನಲಾಗುತ್ತಿದೆ. ಧಾರ್ಮಿಕ ಸಂಸ್ಥೆಗಳನ್ನು ನಡೆಸುವ ಮಂಡಳಿಯು ಆ ಸಮುದಾಯದ ಸದಸ್ಯರನ್ನು ಮಾತ್ರ ಒಳಗೊಂಡಿರಬೇಕು ಎಂಬುವುದನ್ನು ಚಂದ್ರಬಾಬು ನಾಯ್ಡು ಅವರು ಈಗಾಗಲೇ ಸ್ಪಷ್ಟಪಡಿಸಿದ್ದಾರೆ ಎಂದು ಅಮೀರ್ ಬಾಬು ಹೇಳಿಕೆ ಕೊಟ್ಟಿದ್ದಾರೆ. ಇದು ಟಿಡಿಪಿ ಮಸೂದೆಗೆ ವಿರುದ್ದವಿದೆ ಎಂಬುವುದನ್ನು ಪುಷ್ಠೀಕರಿಸಿದೆ.

ಕೇಂದ್ರೀಯ ವಕ್ಫ್ ಕೌನ್ಸಿಲ್ ಮತ್ತು ರಾಜ್ಯ ವಕ್ಫ್ ಬೋರ್ಡ್‌ಗಳಿಗೆ ಮುಸ್ಲಿಮೇತರರನ್ನು ಸದಸ್ಯರನ್ನಾಗಿ ನೇಮಿಸಲು ವಕ್ಫ್‌ ತಿದ್ದುಪಡಿ ಮಸೂದೆ ಅನುವು ಮಾಡಿಕೊಡುವುದನ್ನು ಮುಸ್ಲಿಂ ನಾಯಕರು ವಿರೋಧಿಸಿದ್ದಾರೆ ಎಂಬುವುದು ಇಲ್ಲಿ ಗಮನಾರ್ಹ ಅಂಶ.

ನಾಯ್ಡು ಜಾತ್ಯತೀತ ನಾಯಕ ಎಂದು ಪ್ರತಿಪಾದಿಸಿರುವ ಅಮೀರ್ ಬಾಬು, ಟಿಡಿಪಿ ಮುಖ್ಯಸ್ಥರು ನಿರ್ಧಾರ ತೆಗೆದುಕೊಳ್ಳುವಾಗ ಮುಸ್ಲಿಂ ಸಮುದಾಯದ ಭಾವನೆಗಳನ್ನು ಗಣನೆಗೆ ತೆಗೆದುಕೊಳ್ಳುತ್ತಾರೆ ಎಂದಿದ್ದಾರೆ.

ವಕ್ಫ್ ಮಸೂದೆ ವಿರುದ್ಧ ಡಿ.15ರಂದು ಆಂಧ್ರ ಪ್ರದೇಶದಲ್ಲಿ ಸಾರ್ವಜನಿಕ ಸಭೆ ನಡೆಸಲಾಗುವುದು ಎಂದಿರುವ ಅಮೀರ್ ಬಾಬು, ಜಂ ಇಯತುಲ್ ಉಲಮಾ-ಇ-ಹಿಂದ್ ಆಯೋಜಿಸಲು ಉದ್ದೇಶಿಸಿರುವ ಈ ಸಾರ್ವಜನಿಕ ಸಭೆಯಲ್ಲಿ ನಾಯ್ಡು ಕೂಡ ಪಾಲ್ಗೊಳ್ಳುವ ಸಾಧ್ಯತೆ ಇದೆ ಎಂದಿದ್ದಾರೆ.

ಈ ನಡುವೆ, ಜಮಾತೆ ಇಸ್ಲಾಮಿ ಹಿಂದ್ ಭಾನುವಾರ ಸಂಜೆ ವಿಜಯವಾಡದಲ್ಲಿ ಸಾರ್ವಜನಿಕ ಸಭೆ ಅಯೋಜಿಸಿತ್ತು. ಜಮಾಅತೆ ಇಸ್ಲಾಮಿ ಹಿಂದ್ ಅಧ್ಯಕ್ಷ ಸೈಯದ್ ಸಾದತುಲ್ಲಾ ಹುಸೇನಿ ಮತ್ತು ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿಯ ವಕ್ತಾರ ಎಸ್.ಖಾಸಿಂ ರಸೂಲ್ ಇಲ್ಯಾಸ್ ಅವರು ಸಭೆಯಲ್ಲಿ ಪ್ರಮುಖ ಭಾಷಣಕಾರರಾಗಿ ಭಾಗವಹಿಸಿದ್ದರು. ಈ ಸಭೆಗೆ ಟಿಡಿಪಿಯ ವಿಜಯವಾಡ ಸಂಸದ ಕೆಸಿನೇನಿ ಶಿವನಾಧ ನಾಣಿ ಅವರನ್ನು ಆಹ್ವಾನಿಸಿದ್ದರು. ಹಿರಿಯ ಟಿಡಿಪಿ ನಾಯಕ ಅಹ್ಮದ್ ಷರೀಫ್ ಕೂಡ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದ್ದಾರೆ.

ಟಿಡಿಪಿಯ ಮುಸ್ಲಿಂ ಮುಖಂಡರು ಚುನಾವಣಾ ಪ್ರಚಾರದ ಸಮಯದಲ್ಲಿ, ಟಿಡಿಪಿ ಜಾತ್ಯತೀತತೆಯ ವಿಷಯದಲ್ಲಿ ಎಂದಿಗೂ ರಾಜಿ ಮಾಡಿಕೊಳ್ಳುವುದಿಲ್ಲ ಎಂಬುವುದನ್ನು ಚಂದ್ರಬಾಬು ನಾಯ್ಡು ಸ್ಪಷ್ಟಪಡಿಸಿದ್ದಾಗಿ ಒತ್ತಿ ಹೇಳಿದ್ದರು. ಪ್ರತಿ ಸಾರ್ವಜನಿಕ ಸಭೆಯಲ್ಲಿ, ನಾಯ್ಡು ಹಿಂದೆ ಸಮ್ಮಿಶ್ರ ಸರ್ಕಾರಗಳ ಪಾಲುದಾರರಾಗಿ ಅಥವಾ ಹೊರಗಿನ ಬೆಂಬಲಿಗರಾಗಿ ಅಲ್ಪಸಂಖ್ಯಾತರ ಹಿತಾಸಕ್ತಿಗಳನ್ನು ರಕ್ಷಿಸಲು ಕೆಲಸ ಮಾಡಿದ್ದಾರೆ ಎಂದಿದ್ದರು.

ಇದೀಗ ನಾಯ್ಡು ಬೆಂಬಲಿಸಿರುವ ಬಿಜೆಪಿ ಪಕ್ಷ ವಕ್ಫ್‌ ತಿದ್ದುಪಡಿ ಮಸೂದೆ ತಂದಿದೆ. ಅದರಲ್ಲಿರುವ ಅಂಶಗಳು ಮುಸ್ಲಿಂ ಸಮುದಾಯದ ಹಿತಾಸಕ್ತಿಗೆ ವಿರುದ್ದವಿದೆ ಎಂಬುವುದು ಸಮುದಾಯಕ್ಕೆ ಮನದಟ್ಟಾಗಿದೆ. ಹಾಗಾಗಿ, ತಾವು ಬೆಂಬಲಿಸಿ ಮತ ನೀಡಿರುವ ಟಿಡಿಪಿ ಅಥವಾ ಚಂದ್ರಬಾಬು ನಾಯ್ಡು ಸಮುದಾಯದ ಪರ ನಿಲ್ಲಬೇಕು ಎಂಬುವುದು ಮುಸ್ಲಿಮರ ಆಗ್ರಹ. ಅತ್ತ ಎನ್‌ಎಡಿ ಸರ್ಕಾರವನ್ನು ಬೆಂಬಲಿಸಿ ತಮ್ಮ ಪಕ್ಷದ ಸಂಸದರಿಗೆ ಹಲವು ಸ್ಥಾನಗಳನ್ನು ಪಡೆದಿರುವ ನಾಯ್ಡು, ಮುಸ್ಲಿಮರು ಮತ್ತು ಬಿಜೆಪಿಯ ನಡುವೆ ಅಡಕತ್ತರಿಗೆ ಸಿಲುಕಿದ್ದಾರೆ.

ಇದನ್ನೂ ಓದಿ : ಜಾತಿಗಣತಿಗೆ ಆಗ್ರಹಿಸಿದ ನಟ ವಿಜಯ್ ಪಕ್ಷ ಟಿವಿಕೆ : ವಕ್ಫ್ ಮಸೂದೆ, ಒಂದು ರಾಷ್ಟ್ರ ಒಂದು ಚುನಾವಣೆ ವಿರುದ್ಧ ನಿರ್ಣಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೂತುಕುಡಿ ಸಾತನ್‌ಕುಳಂ ತಂದೆ-ಮಗನ ಕಸ್ಟಡಿ ಸಾವು ಪ್ರಕರಣ : ಅಪರಾಧಿಗಳಾದ ಎಲ್ಲಾ 9 ಪೊಲೀಸರಿಗೆ ಮರಣದಂಡನೆ ವಿಧಿಸಿದ ನ್ಯಾಯಾಲಯ

ತಮಿಳುನಾಡಿನ ತೂತುಕುಡಿ ಜಿಲ್ಲೆಯ ಸಾತನ್‌ಕುಳಂ ಪೊಲೀಸ್ ಠಾಣೆಯಲ್ಲಿ ಕೋವಿಡ್-19 ಲಾಕ್‌ಡೌನ್ ಸಮಯದಲ್ಲಿ ಸಂಭವಿಸಿದ, ವ್ಯಾಪಾರಿ ಪಿ. ಜಯರಾಜ್ (58) ಮತ್ತು ಅವರ ಮಗ ಜೆ. ಬೆನಿಕ್ಸ್ (31) ಅವರ ಕಸ್ಟಡಿ ಸಾವು ಪ್ರಕರಣದ...

ದಾವಣಗೆರೆ ದಕ್ಷಿಣ ಉಪ-ಸಮರ: ಶಾಮನೂರು ಸಾಮ್ರಾಜ್ಯದಲ್ಲಿ ಅಹಿಂದ ಬಂಡಾಯ!

ತುಂಗಭದ್ರಾ ನದಿ ಪರ‍್ವಕ್ಕೆ ಎತ್ತರದ ಪ್ರದೇಶದಲ್ಲಿರುವ ದಾವಣಗೆರೆ ಮಧ್ಯ ಕರ್ನಾಟಕದ ಪ್ರಮುಖ ವಾಣಿಜ್ಯ ನಗರಿ. ಬೆಣ್ಣೆ ದೋಸೆಯ ಘಮಲಿನ ದಾವಣಗೆರೆಯ ರಾಜಕಾರಣ ಮಾತ್ರ ಮಿರ್ಚಿ-ಮಂಡಕ್ಕಿಯ ಖಡಕ್ ಖಾರಾ ಕುರುಕುಲಿನಂತೆ! ದಾವಣಗೆರೆ ಮತ್ತದರ ಸುತಮುತ್ತಲಿನ...

‘Dr. Nimo Yadav’, ‘Nehr Who’ ಎಕ್ಸ್‌ ಖಾತೆಗಳನ್ನು ತಕ್ಷಣ ಮರುಸ್ಥಾಪಿಸಲು ದೆಹಲಿ ಹೈಕೋರ್ಟ್ ಆದೇಶ

'Dr. Nimo Yadav' ಮತ್ತು 'Nehr Who' ಎಂಬ ಎರಡು ಪರೋಡಿ ಎಕ್ಸ್‌ ಖಾತೆಗಳನ್ನು ತಕ್ಷಣ ಮರು ಸ್ಥಾಪಿಸುವಂತೆ ದೆಹಲಿ ಹೈಕೋರ್ಟ್ ಸೋಮವಾರ (ಏ.6) ಎಕ್ಸ್ ಸಂಸ್ಥೆಗೆ (X Corp) ಆದೇಶಿಸಿದೆ. 'Dr....

ಬಂಗಾಳ| ಮತದಾರರ ಪಟ್ಟಿಯಿಂದ ಹೆಸರು ತೆಗೆದ ಬಳಿಕ ಸಾವಿಗೆ ಶರಣಾದ ಮುಸ್ಲಿಂ ವ್ಯಕ್ತಿ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ನಂತರ ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿಯಿಂದ ತನ್ನ ಹೆಸರನ್ನು ತೆಗೆದುಹಾಕಿದ್ದರಿಂದ ಮನನೊಂದ ಮುಸ್ಲಿಂ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಮೃತನನ್ನು ಬಿರ್ಭುಮ್...

‘ಯೋಜನೆಯು ಕೇರಳಕ್ಕೆ ಜೀವನಾಡಿಯಾಗಲಿದೆ’: ವಯನಾಡ್ ಸುರಂಗ ಮಾರ್ಗ ವಿರುದ್ದದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಕೇರಳದ ಕೋಝಿಕ್ಕೋಡ್-ವಯನಾಡ್ ಸುರಂಗ ಮಾರ್ಗ ನಿರ್ಮಾಣಕ್ಕೆ ನೀಡಲಾದ ಪರಿಸರ ಅನುಮತಿ (ಇಸಿ) ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ (ಏ.6) ವಜಾಗೊಳಿಸಿದೆ. ಸುರಂಗ ನಿರ್ಮಾಣದ ಸಮಯದಲ್ಲಿ ಪರಿಸರ ಅನುಮತಿಯ ಷರತ್ತುಗಳ ಉಲ್ಲಂಘನೆಯಾದರೆ, ಅರ್ಜಿದಾರರು...

651 ಕೋಟಿ ರೂ. ಮೌಲ್ಯದ ನಗದು, ಮದ್ಯ, ಮಾದಕ ವಸ್ತು ವಶಪಡಿಸಿಕೊಂಡ ಚುನಾವಣಾ ಆಯೋಗ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಅಧಿಕಾರಿಗಳು 651.51 ಕೋಟಿ ರೂ.ಗೂ ಹೆಚ್ಚು ಮೌಲ್ಯದ ನಗದು, ಮದ್ಯ, ಮಾದಕ ವಸ್ತುಗಳು ಮತ್ತು ಇತರ ಉಚಿತ ವಸ್ತುಗಳನ್ನು...

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ಬಾಲಕಿಯನ್ನು ಸರಪಳಿಯಿಂದ ಕಟ್ಟಿ ಥಳಿಸಿದ ಮಾಜಿ ಸೇನಾಧಿಕಾರಿ

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ನಾಲ್ಕು ವರ್ಷದ ಬಾಲಕಿಯನ್ನು ನಿವೃತ್ತ ಸೇನಾಧಿಕಾರಿಯೊಬ್ಬರು ಸರಪಳಿಯಿಂದ ಕಟ್ಟಿಹಾಕಿ ಕ್ರೂರವಾಗಿ ಥಳಿಸಿರುವ ಆಘಾತಕಾರಿ ಘಟನೆ ಹಿಮಾಚಲ ಪ್ರದೇಶದ ಉನಾ ಜಿಲ್ಲೆಯ ಬೆಹಡಾಲ ಗ್ರಾಮದಲ್ಲಿ ನಡೆದಿದೆ. ಬಾಲಕಿಯು ನಿವೃತ್ತ ಸೇನಾಧಿಕಾರಿಯ ತೋಟದ...

ಆಂಧ್ರ ವಿಧಾನಸಭಾ ಸ್ಪೀಕರ್ ಅಯ್ಯಣ್ಣ ಪಾತ್ರುಡು ಅವರಿಂದ ದಲಿತ ವ್ಯಕ್ತಿಗೆ ಕಪಾಳಮೋಕ್ಷ: ವೈಎಸ್‌ಆರ್‌ಸಿಪಿ ವಾಗ್ದಾಳಿ

ಏಪ್ರಿಲ್ 3 ರ ಗುರುವಾರ ನರಸಿಪಟ್ಟಣದಲ್ಲಿ ದಲಿತ ವ್ಯಕ್ತಿಯೊಬ್ಬರಿಗೆ ಕಪಾಳಮೋಕ್ಷ ಮಾಡಿದ್ದಕ್ಕಾಗಿ ಆಂಧ್ರಪ್ರದೇಶ ವಿಧಾನಸಭಾ ಸ್ಪೀಕರ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಾಯಕ ಅಯ್ಯಣ್ಣ ಪಾತ್ರುಡು ಅವರ ವಿರುದ್ಧ ವೈಎಸ್‌ಆರ್ ಕಾಂಗ್ರೆಸ್...

ಪ. ಬಂಗಾಳ | ಬಿಜೆಪಿ ಪ್ರಚಾರ ಸಾಮಗ್ರಿ ಸಜ್ಜುಗೊಳಿಸಿದ ವಿಡಿಯೋ ವೈರಲ್ : ಚುನಾವಣಾ ಕರ್ತವ್ಯದಲ್ಲಿದ್ದ ಅಧಿಕಾರಿ ಅಮಾನತು

ಬಿಜೆಪಿ ಪ್ರಚಾರ ಸಾಮಗ್ರಿಗಳನ್ನು ತಯಾರಿಸಲು ಸಹಾಯ ಮಾಡಿದ ಆರೋಪದ ಮೇಲೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಪಾಣಿಹಟಿ ವಿಧಾನಸಭಾ ಕ್ಷೇತ್ರದ ಅಧಿಕಾರಿಯೊಬ್ಬರನ್ನು ಚುನಾವಣಾ ಆಯೋಗ ಅಮಾನತುಗೊಳಿಸಿದೆ ಎಂದು ದಿ ಇಂಡಿಯನ್...

ಮುಸ್ಲಿಮರ ವಿರುದ್ಧ ದ್ವೇಷ ಕಾರುವ ಅಸ್ಸಾಂ ಸಿಎಂ ಪತ್ನಿ ಬಳಿ 2 ಮುಸ್ಲಿಂ ದೇಶಗಳ ಪಾಸ್‌ಪೋರ್ಟ್ ಇದೆ : ಕಾಂಗ್ರೆಸ್ ಆರೋಪ

ಮತದಾನಕ್ಕೆ ಇನ್ನೇನು ಮೂರು ದಿನಗಳು ಬಾಕಿ ಇರುವಾಗ, ಅಸ್ಸಾಂನಲ್ಲಿ ಕಾಂಗ್ರೆಸ್‌-ಬಿಜೆಪಿ ನಡುವೆ ವೈಯಕ್ತಿಕ ವಿಚಾರಗಳ ಕುರಿತ ವಾಗ್ಯುದ್ಧ ತಾರಕಕ್ಕೇರಿದೆ. ಸಿಎಂ ಹಿಮಂತ ಬಿಸ್ವಾ ಶರ್ಮಾ ಮತ್ತು ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ...