Homeಮುಖಪುಟಟಿಡಿಪಿಯ ಮುಸ್ಲಿಂ ನಾಯಕರಿಂದ ವಕ್ಫ್ ತಿದ್ದುಪಡಿ ಮಸೂದೆಗೆ ವಿರೋಧ : ಇಕ್ಕಟ್ಟಿಗೆ ಸಿಲುಕಿದ ಚಂದ್ರಬಾಬು ನಾಯ್ಡು

ಟಿಡಿಪಿಯ ಮುಸ್ಲಿಂ ನಾಯಕರಿಂದ ವಕ್ಫ್ ತಿದ್ದುಪಡಿ ಮಸೂದೆಗೆ ವಿರೋಧ : ಇಕ್ಕಟ್ಟಿಗೆ ಸಿಲುಕಿದ ಚಂದ್ರಬಾಬು ನಾಯ್ಡು

- Advertisement -
- Advertisement -

ವಕ್ಫ್ ತಿದ್ದುಪಡಿ ಮಸೂದೆ ಸಮುದಾಯದ ಹಿತಾಸಕ್ತಿಗಳಿಗೆ ವಿರುದ್ದವಾಗಿದೆ ಎಂಬ ಕಾರಣಕ್ಕೆ, ಅದನ್ನು ವಿರೋಧಿಸುವಂತೆ ತೆಲುಗು ದೇಶಂ ಪಕ್ಷ (ಟಿಡಿಪಿ)ದ ಮುಸ್ಲಿಂ ನಾಯಕರು, ಪಕ್ಷದ ನಾಯಕ ಹಾಗೂ ಅಂಧ್ರ ಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರಿಗೆ ಒತ್ತಡ ಹೇರಿದ್ದಾರೆ. ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರದ ಭಾಗವಾಗಿರುವ ನಾಯ್ಡು ಅವರನ್ನು ಈ ಬೆಳವಣಿಗೆ ಇಕ್ಕಟ್ಟಿಗೆ ಸಿಲುಕಿಸಿದೆ.

ವರದಿಗಳ ಪ್ರಕಾರ, ವಕ್ಫ್ ತಿದ್ದುಪಡಿ ಮಸೂದೆ ವಿಚಾರದಲ್ಲಿ ಅತ್ತ ತನ್ನ ಪಕ್ಷದ ಮುಸ್ಲಿಂ ನಾಯಕರನ್ನು ಬಿಟ್ಟು ಕೊಡಲಾಗದೆ, ಇತ್ತ ಬಿಜೆಪಿಯನ್ನು ವಿರೋಧಿಸಲಾಗದೆ ಅಂತಿಮ ನಿರ್ಧಾರ ತೆಗೆದುಕೊಳ್ಳಲು ನಾಯ್ಡು ಹೆಣಗಾಡುತ್ತಿದ್ದಾರೆ.

ಪ್ರಸ್ತುತ, ಜಂಟಿ ಸಂಸದೀಯ ಸಮಿತಿ (ಜೆಪಿಸಿ) ಪರಿಶೀಲನೆಯಲ್ಲಿರುವ ವಕ್ಫ್ ತಿದ್ದುಪಡಿ ಮಸೂದೆಯ ಕುರಿತ ವರದಿಯು ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಮಂಡನೆಯಾಗುವ ಸಾಧ್ಯತೆ ಇದೆ. ಸಂಸತ್‌ ಒಳಗೆ ಮತ್ತು ಹೊರಗೆ ತಿದ್ದುಪಡಿ ಮಸೂದೆಯನ್ನು ಬೆಂಬಲಿಸದಂತೆ ಟಿಡಿಪಿಯ ಮುಸ್ಲಿಂ ನಾಯಕರು ನಾಯ್ಡುಅವರಿಗೆ ಒತ್ತಡ ಹೇರಿದ್ದಾರೆ ಎನ್ನಲಾಗಿದೆ.

ಕೇಂದ್ರದಲ್ಲಿ ಈ ಬಾರಿ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರ ರಚನೆಯಾಗುವಲ್ಲಿ ಪ್ರಮುಖ ಪಾತ್ರ ವಹಿಸಿರುವ ಟಿಡಿಪಿ, ಬಿಜೆಪಿ ತಂದಿರುವ ವಕ್ಫ್ ತಿದ್ದುಪಡಿ ಮಸೂದೆಯನ್ನು ವಿರೋಧಿಸಲಾಗ ಪರಿಸ್ಥಿಯಲ್ಲಿದೆ. ರಾಜ್ಯ ಮಟ್ಟದಲ್ಲಿ ಮುಸ್ಲಿಂ ನಾಯಕರನ್ನೂ ಕಡೆಗಣಿಸುವಂತಿಲ್ಲ. ಹಾಗಾಗಿ, ವಕ್ಫ್ ಮಸೂದೆ ಕುರಿತು ಟಿಡಿಪಿ ಇನ್ನೂ ಅಂತಿಮ ನಿರ್ಧಾರ ಪ್ರಕಟಿಸಿಲ್ಲ.

ವಕ್ಫ್ ತಿದ್ದುಪಡಿ ಮಸೂದೆಯು ಎನ್‌ಡಿಎ ಸರ್ಕಾರವನ್ನು ಬೆಂಬಲಿಸಿದ ಬಳಿಕ ನಾಯ್ಡು ಅವರ ಜಾತ್ಯತೀತ ಇಮೇಜ್‌ಗೆ ಎದುರಾದ ಮೊದಲ ಅಗ್ನಿ ಪರೀಕ್ಷೆ ಎಂದು ರಾಜಕೀಯ ವಿಶ್ಲೇಷಕರು ಹೇಳುತ್ತಾರೆ.

ಅಖಿಲ ಭಾರತ ಮುಸ್ಲಿಂ ವೈಯುಕ್ತಿಕ ಕಾನೂನು ಮಂಡಳಿ (ಎಐಎಂಪಿಎಲ್‌ಬಿ) ಯ ಪ್ರಧಾನ ಕಾರ್ಯದರ್ಶಿ ಮೌಲಾನಾ ಮೊಹಮ್ಮದ್ ಫಜ್ಲುರಹೀಂ ಮುಜದ್ದಿದಿ ನೇತೃತ್ವದ ಮುಸ್ಲಿಂ ಮುಖಂಡರ ನಿಯೋಗವು ಅಕ್ಟೋಬರ್ 23ರಂದು ಅಮರಾವತಿಯಲ್ಲಿ ನಾಯ್ಡು ಅವರನ್ನು ಭೇಟಿ ಮಾಡಿ ಸಂಸತ್ತಿನಲ್ಲಿ ವಕ್ಫ್ ತಿದ್ದುಪಡಿ ಮಸೂದೆ 2024 ಅನ್ನು ವಿರೋಧಿಸುವಂತೆ ಒತ್ತಾಯಿಸಿದೆ.

ನಾಯ್ಡು ಸರ್ಕಾರದ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಎನ್.ಎಂ.ಡಿ ಫಾರೂಕ್ ಮತ್ತು ಆಂಧ್ರ ಪ್ರದೇಶದ ವಿಧಾನ ಪರಿಷತ್ತಿನ ಮಾಜಿ ಅಧ್ಯಕ್ಷ ಮೊಹಮ್ಮದ್ ಅಹ್ಮದ್ ಷರೀಫ್ ಅವರು ಈ ನಿಯೋಗದಲ್ಲಿದ್ದರು. ಮುಖ್ಯಮಂತ್ರಿಗೆ ಮನವಿ ಸಲ್ಲಿಸಿರುವ ಈ ನಾಯಕರು, ನರೇಂದ್ರ ಮೋದಿ ನೇತೃತ್ವದ ಸರ್ಕಾರ ಪ್ರಸ್ತಾಪಿಸಿರುವ ವಕ್ಫ್ ತಿದ್ದುಪಡಿ ಮಸೂದೆ ಮುಸ್ಲಿಂ ಸಮುದಾಯಕ್ಕೆ ಹೇಗೆ ವಿರೋಧವಾಗಿದೆ ಎಂದು ವಿವರಿಸಿದ್ದಾರೆ.

ಈ ವಿಷಯದ ಬಗ್ಗೆ ಮಧ್ಯಸ್ಥಗಾರರೊಂದಿಗೆ ಚರ್ಚಿಸಿದ ನಂತರ ಪಕ್ಷವು ಸೂಕ್ತ ನಿರ್ಧಾರ ತೆಗೆದುಕೊಳ್ಳುತ್ತದೆ ಎಂದು ಟಿಡಿಪಿ ಮುಖ್ಯಸ್ಥರು ನಿಯೋಗಕ್ಕೆ ಭರವಸೆ ನೀಡಿದ್ದಾರೆ.

ಇದರ ಮುಂದುವರಿದ ಭಾಗವಾಗಿ, ಟಿಡಿಪಿ ತನ್ನ ರಾಜ್ಯ ಉಪಾಧ್ಯಕ್ಷ ವಿ.ಎಸ್ ಅಮೀರ್ ಬಾಬು ಅವರನ್ನು ದೆಹಲಿಗೆ ಕಳುಹಿಸಿ ವಕ್ಫ್ ತಿದ್ದುಪಡಿ ಮಸೂದೆ ವಿರುದ್ದ ಎತ್ತಿರುವ ಆಕ್ಷೇಪಣೆಗಳ ಕುರಿತು ಎಐಎಂಪಿಎಲ್‌ಬಿ ಮತ್ತು ಇತರ ಸಂಘನೆಗಳು ಮುಖಂಡರ ಜೊತೆ ಚರ್ಚಿಸುವಂತೆ ಹೇಳಿತ್ತು.

ವರದಿಗಳ ಪ್ರಕಾರ, ವಕ್ಫ್ ತಿದ್ದುಪಡಿಸ ಮಸೂದೆ ಮುಸ್ಲಿಂ ಸಮುದಾಯದ ಹಿತಾಸಕ್ತಿಗೆ ವಿರುದ್ದವಾಗಿದೆ ಎಂದಿರುವ ಟಿಡಿಪಿ, ಅದನ್ನು ವಿರೋಧಿಸಿದೆ ಎನ್ನಲಾಗುತ್ತಿದೆ. ಧಾರ್ಮಿಕ ಸಂಸ್ಥೆಗಳನ್ನು ನಡೆಸುವ ಮಂಡಳಿಯು ಆ ಸಮುದಾಯದ ಸದಸ್ಯರನ್ನು ಮಾತ್ರ ಒಳಗೊಂಡಿರಬೇಕು ಎಂಬುವುದನ್ನು ಚಂದ್ರಬಾಬು ನಾಯ್ಡು ಅವರು ಈಗಾಗಲೇ ಸ್ಪಷ್ಟಪಡಿಸಿದ್ದಾರೆ ಎಂದು ಅಮೀರ್ ಬಾಬು ಹೇಳಿಕೆ ಕೊಟ್ಟಿದ್ದಾರೆ. ಇದು ಟಿಡಿಪಿ ಮಸೂದೆಗೆ ವಿರುದ್ದವಿದೆ ಎಂಬುವುದನ್ನು ಪುಷ್ಠೀಕರಿಸಿದೆ.

ಕೇಂದ್ರೀಯ ವಕ್ಫ್ ಕೌನ್ಸಿಲ್ ಮತ್ತು ರಾಜ್ಯ ವಕ್ಫ್ ಬೋರ್ಡ್‌ಗಳಿಗೆ ಮುಸ್ಲಿಮೇತರರನ್ನು ಸದಸ್ಯರನ್ನಾಗಿ ನೇಮಿಸಲು ವಕ್ಫ್‌ ತಿದ್ದುಪಡಿ ಮಸೂದೆ ಅನುವು ಮಾಡಿಕೊಡುವುದನ್ನು ಮುಸ್ಲಿಂ ನಾಯಕರು ವಿರೋಧಿಸಿದ್ದಾರೆ ಎಂಬುವುದು ಇಲ್ಲಿ ಗಮನಾರ್ಹ ಅಂಶ.

ನಾಯ್ಡು ಜಾತ್ಯತೀತ ನಾಯಕ ಎಂದು ಪ್ರತಿಪಾದಿಸಿರುವ ಅಮೀರ್ ಬಾಬು, ಟಿಡಿಪಿ ಮುಖ್ಯಸ್ಥರು ನಿರ್ಧಾರ ತೆಗೆದುಕೊಳ್ಳುವಾಗ ಮುಸ್ಲಿಂ ಸಮುದಾಯದ ಭಾವನೆಗಳನ್ನು ಗಣನೆಗೆ ತೆಗೆದುಕೊಳ್ಳುತ್ತಾರೆ ಎಂದಿದ್ದಾರೆ.

ವಕ್ಫ್ ಮಸೂದೆ ವಿರುದ್ಧ ಡಿ.15ರಂದು ಆಂಧ್ರ ಪ್ರದೇಶದಲ್ಲಿ ಸಾರ್ವಜನಿಕ ಸಭೆ ನಡೆಸಲಾಗುವುದು ಎಂದಿರುವ ಅಮೀರ್ ಬಾಬು, ಜಂ ಇಯತುಲ್ ಉಲಮಾ-ಇ-ಹಿಂದ್ ಆಯೋಜಿಸಲು ಉದ್ದೇಶಿಸಿರುವ ಈ ಸಾರ್ವಜನಿಕ ಸಭೆಯಲ್ಲಿ ನಾಯ್ಡು ಕೂಡ ಪಾಲ್ಗೊಳ್ಳುವ ಸಾಧ್ಯತೆ ಇದೆ ಎಂದಿದ್ದಾರೆ.

ಈ ನಡುವೆ, ಜಮಾತೆ ಇಸ್ಲಾಮಿ ಹಿಂದ್ ಭಾನುವಾರ ಸಂಜೆ ವಿಜಯವಾಡದಲ್ಲಿ ಸಾರ್ವಜನಿಕ ಸಭೆ ಅಯೋಜಿಸಿತ್ತು. ಜಮಾಅತೆ ಇಸ್ಲಾಮಿ ಹಿಂದ್ ಅಧ್ಯಕ್ಷ ಸೈಯದ್ ಸಾದತುಲ್ಲಾ ಹುಸೇನಿ ಮತ್ತು ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿಯ ವಕ್ತಾರ ಎಸ್.ಖಾಸಿಂ ರಸೂಲ್ ಇಲ್ಯಾಸ್ ಅವರು ಸಭೆಯಲ್ಲಿ ಪ್ರಮುಖ ಭಾಷಣಕಾರರಾಗಿ ಭಾಗವಹಿಸಿದ್ದರು. ಈ ಸಭೆಗೆ ಟಿಡಿಪಿಯ ವಿಜಯವಾಡ ಸಂಸದ ಕೆಸಿನೇನಿ ಶಿವನಾಧ ನಾಣಿ ಅವರನ್ನು ಆಹ್ವಾನಿಸಿದ್ದರು. ಹಿರಿಯ ಟಿಡಿಪಿ ನಾಯಕ ಅಹ್ಮದ್ ಷರೀಫ್ ಕೂಡ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದ್ದಾರೆ.

ಟಿಡಿಪಿಯ ಮುಸ್ಲಿಂ ಮುಖಂಡರು ಚುನಾವಣಾ ಪ್ರಚಾರದ ಸಮಯದಲ್ಲಿ, ಟಿಡಿಪಿ ಜಾತ್ಯತೀತತೆಯ ವಿಷಯದಲ್ಲಿ ಎಂದಿಗೂ ರಾಜಿ ಮಾಡಿಕೊಳ್ಳುವುದಿಲ್ಲ ಎಂಬುವುದನ್ನು ಚಂದ್ರಬಾಬು ನಾಯ್ಡು ಸ್ಪಷ್ಟಪಡಿಸಿದ್ದಾಗಿ ಒತ್ತಿ ಹೇಳಿದ್ದರು. ಪ್ರತಿ ಸಾರ್ವಜನಿಕ ಸಭೆಯಲ್ಲಿ, ನಾಯ್ಡು ಹಿಂದೆ ಸಮ್ಮಿಶ್ರ ಸರ್ಕಾರಗಳ ಪಾಲುದಾರರಾಗಿ ಅಥವಾ ಹೊರಗಿನ ಬೆಂಬಲಿಗರಾಗಿ ಅಲ್ಪಸಂಖ್ಯಾತರ ಹಿತಾಸಕ್ತಿಗಳನ್ನು ರಕ್ಷಿಸಲು ಕೆಲಸ ಮಾಡಿದ್ದಾರೆ ಎಂದಿದ್ದರು.

ಇದೀಗ ನಾಯ್ಡು ಬೆಂಬಲಿಸಿರುವ ಬಿಜೆಪಿ ಪಕ್ಷ ವಕ್ಫ್‌ ತಿದ್ದುಪಡಿ ಮಸೂದೆ ತಂದಿದೆ. ಅದರಲ್ಲಿರುವ ಅಂಶಗಳು ಮುಸ್ಲಿಂ ಸಮುದಾಯದ ಹಿತಾಸಕ್ತಿಗೆ ವಿರುದ್ದವಿದೆ ಎಂಬುವುದು ಸಮುದಾಯಕ್ಕೆ ಮನದಟ್ಟಾಗಿದೆ. ಹಾಗಾಗಿ, ತಾವು ಬೆಂಬಲಿಸಿ ಮತ ನೀಡಿರುವ ಟಿಡಿಪಿ ಅಥವಾ ಚಂದ್ರಬಾಬು ನಾಯ್ಡು ಸಮುದಾಯದ ಪರ ನಿಲ್ಲಬೇಕು ಎಂಬುವುದು ಮುಸ್ಲಿಮರ ಆಗ್ರಹ. ಅತ್ತ ಎನ್‌ಎಡಿ ಸರ್ಕಾರವನ್ನು ಬೆಂಬಲಿಸಿ ತಮ್ಮ ಪಕ್ಷದ ಸಂಸದರಿಗೆ ಹಲವು ಸ್ಥಾನಗಳನ್ನು ಪಡೆದಿರುವ ನಾಯ್ಡು, ಮುಸ್ಲಿಮರು ಮತ್ತು ಬಿಜೆಪಿಯ ನಡುವೆ ಅಡಕತ್ತರಿಗೆ ಸಿಲುಕಿದ್ದಾರೆ.

ಇದನ್ನೂ ಓದಿ : ಜಾತಿಗಣತಿಗೆ ಆಗ್ರಹಿಸಿದ ನಟ ವಿಜಯ್ ಪಕ್ಷ ಟಿವಿಕೆ : ವಕ್ಫ್ ಮಸೂದೆ, ಒಂದು ರಾಷ್ಟ್ರ ಒಂದು ಚುನಾವಣೆ ವಿರುದ್ಧ ನಿರ್ಣಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...

‘ಕಾನೂನು ಪ್ರಕ್ರಿಯೆಯದುರುಪಯೋಗ’: ನ್ಯೂಸ್‌ಕ್ಲಿಕ್ ವಿರುದ್ಧದ ದೆಹಲಿ ಪೊಲೀಸ್, ಇಡಿ ಪ್ರಕರಣಗಳನ್ನು ರದ್ದುಗೊಳಿಸಿದ ಹೈಕೋರ್ಟ್

ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಯಮಗಳ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಸಂಸ್ಥೆ ಮತ್ತು ಅದರ ಮುಖ್ಯ ಸಂಪಾದಕ ಪ್ರಬೀರ್ ಪುರಕಾಯಸ್ಥ ವಿರುದ್ಧ ದೆಹಲಿ ಪೊಲೀಸರು ಹಾಗೂ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣಗಳನ್ನು ದೆಹಲಿ...

ಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

ಕಾಂಗ್ರೆಸ್ ಪಕ್ಷದೊಂದಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿಲೀನವಾಗಬಹುದು ಎಂಬ ವರದಿಗಳನ್ನು ಟಿಎಂಸಿ ಉನ್ನತ ಮೂಲಗಳು ಬುಧವಾರ (ಇಂದು) ಸಂಪೂರ್ಣವಾಗಿ ತಳ್ಳಿಹಾಕಿವೆ. "ನಮ್ಮ ಪಕ್ಷಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಮತ್ತು ವಿಲೀನಕ್ಕೆ...

ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ : ಬಿಜೆಪಿಯ ಸೀಟ್ ಚೋರಿ?

ರಾಜ್ಯಸಭಾ ಚುನಾವಣೆಗೆ ಮಧ್ಯಪ್ರದೇಶದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿರುವುದು ದೇಶದಲ್ಲಿ ದೊಡ್ಡ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಕಾಂಗ್ರೆಸ್ ಈ ವಿಚಾರವನ್ನು ಬಹಳ ಗಂಭೀರವಾಗಿ ಪರಿಗಣಿಸಿ ಬುಧವಾರ (ಜೂ. 10)...

ಒಳಮೀಸಲಾತಿ ನಾಡು ಕಂಡ ಸುದೀರ್ಘ ಹೋರಾಟದ ಕಥೆ

ಇದು ಬೆವರು ನಿಟ್ಟುಸಿರುಗಳ ಚಳವಳಿ. ತಮ್ಮ ಅನ್ನದ ಬಟ್ಟಲಿಗಾಗಿ ದಶಕಗಳ ಕಾಲ ಹಸಿವು, ಬಾಯಾರಿಕೆ, ನಿದ್ರೆ ಎಲ್ಲವನ್ನೂ ಬಿಟ್ಟು ನಡೆಸಿದ ಅಭೂತಪೂರ್ವ ಚಳವಳಿ. ರಾಜಕೀಯ ಚಕ್ರವ್ಯೂಹಗಳನ್ನು ಬೇಧಿಸಿ, ಸಾಂವಿಧಾನಿಕ ಹಕ್ಕನ್ನು ತಮ್ಮದಾಗಿಸಿಕೊಂಡ ಚಳವಳಿ....

‘ಗೋಮಾಂಸ’ ತಂದ ನೆಪ: ಅಸ್ಸಾಂನಲ್ಲಿ ಐವರು ಮುಸ್ಲಿಂ ವಿದ್ಯಾರ್ಥಿಗಳ ವಿರುದ್ಧ ಕ್ರಮ; ಸುಳ್ಳು ಪ್ರಕರಣದಡಿ ಒಂಟಿ ತಾಯಿ ಮತ್ತು ಅಪ್ರಾಪ್ತ ಮಗನ ಬಂಧನ

ಧಾರ್ಮಿಕ ಭಾವನೆಗೆ ಧಕ್ಕೆ ಎಂಬ ಹೆಸರಿನಲ್ಲಿ ಶಾಲಾ ಆವರಣಗಳೂ ಸಹ ಕೋಮು ರಾಜಕಾರಣದ ಪ್ರಯೋಗಶಾಲೆಗಳಾಗುತ್ತಿರುವುದಕ್ಕೆ ಅಸ್ಸಾಂನಿಂದ ಮತ್ತೊಂದು ಆಘಾತಕಾರಿ ಘಟನೆ ವರದಿಯಾಗಿದೆ. ಅಸ್ಸಾಂನ ಗೋಲ್‌ಪಾರ ಜಿಲ್ಲೆಯ ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆಯೊಂದರಲ್ಲಿ ಮುಸ್ಲಿಂ...

ಪ್ರಧಾನಿ ನರೇಂದ್ರ ಮೋದಿಯ 12 ವರ್ಷದ ಸಾಧನೆ ಏನು? ಅವರು ಮುರಿದ ದಾಖಲೆಯಾದರೂ ಯಾವುದು?

ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು 2014ರಿಂದ ಸತತ 12ವರ್ಷಗಳು (4,399 ದಿನಗಳು) ಪ್ರಧಾನಿ ಹುದ್ದೆ ಅಲಂಕರಿಸುವ ಮೂಲಕ ದಾಖಲೆ ನಿರ್ಮಿಸಿದ್ದಾರೆ. ಮೋದಿ ನೇತೃತ್ವದ ಸರ್ಕಾರಕ್ಕೆ 12 ವರ್ಷ ತುಂಬಿದ ಹಿನ್ನೆಲೆ ಬಿಜೆಪಿ...