Homeಕರ್ನಾಟಕವಕ್ಫ್ ಜಟಾಪಟಿ : ಪ್ರಣಾಳಿಕೆಯಲ್ಲಿ ಒತ್ತುವರಿ ತೆರವು ಭರವಸೆ ನೀಡಿತ್ತು ಬಿಜೆಪಿ

ವಕ್ಫ್ ಜಟಾಪಟಿ : ಪ್ರಣಾಳಿಕೆಯಲ್ಲಿ ಒತ್ತುವರಿ ತೆರವು ಭರವಸೆ ನೀಡಿತ್ತು ಬಿಜೆಪಿ

- Advertisement -
- Advertisement -

ರಾಜ್ಯದಲ್ಲಿ ವಿಜಯಪುರ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ರೈತರ ಜಮೀನುಗಳನ್ನು ವಕ್ಫ್ ಬೋರ್ಡ್ ಕಬಳಿಸುತ್ತಿದೆ ಎಂದು ಆರೋಪಿಸಿ ಬಿಜೆಪಿ ನಾಯಕರು ಸರ್ಕಾರದ ವಿರುದ್ದ ಮುಗಿಬಿದ್ದಿದ್ದಾರೆ. ಇದರಿಂದ ಭೂ ವ್ಯಾಜ್ಯವೊಂದು ಕೋಮು ಆಯಾಮ ಪಡೆದುಕೊಂಡಿದೆ.

ಬಿಜೆಪಿ ನಾಯಕರ ಆರೋಪಗಳಿಗೆ ಸರ್ಕಾರದ ಕಡೆಯಿಂದ ಸಿಎಂ ಆದಿಯಾಗಿ ಸಚಿವರು ಸ್ಪಷ್ಟನೆ ಕೊಟ್ಟರೂ, ರೈತರಿಗೆ ನೋಟಿಸ್ ಕೊಟ್ಟಿದ್ದರೆ ವಾಪಸ್ ಪಡೆಯುವುದಾಗಿ ಸರ್ಕಾರ ಹೇಳಿದ್ದರೂ, ಬಿಜೆಪಿ ಪ್ರತಿಭಟನೆ ನಡೆಸುದಾಗಿ ಹೇಳಿದೆ. ಇದು ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ವಾಗ್ವಾದಕ್ಕೆ ಕಾರಣವಾಗಿದೆ.

ಕೇಂದ್ರ ಸರ್ಕಾರ ವಕ್ಫ್ ತಿದ್ದುಪಡಿ ಮಸೂದೆ ಜಾರಿಗೊಳಿಸಲು ಮುಂದಾಗಿರುವುದು, ಅದಕ್ಕೆ ದೇಶದಾದ್ಯಂತ ವಿರೋಧ ವ್ಯಕ್ತವಾಗಿರುವಾಗ ಕರ್ನಾಟಕದಲ್ಲಿ ವಕ್ಫ್ ಜಮೀನು ವಿಚಾರ ಮುನ್ನಲೆಗೆ ತಂದಿರುವ ಬಿಜೆಪಿ, ವಕ್ಫ್ ಬೋರ್ಡ್‌ಗಳನ್ನೇ ರದ್ದುಗೊಳಿಸಬೇಕು ಎಂದು ಅಗ್ರಹಿಸುತ್ತಿದೆ.

ಆದರೆ, ಇದೇ ಬಿಜೆಪಿ 2014ರ ಲೋಕಸಭೆ ಚುನಾವಣೆಯ ತನ್ನ ಪ್ರಣಾಳಿಕೆಯಲ್ಲಿ ಒತ್ತುವರಿಯಾಗಿರುವ ವಕ್ಫ್‌ ಭೂಮಿಯನ್ನು ತೆರವುಗೊಳಿಸುವುದಾಗಿ ಭರವಸೆ ನೀಡಿತ್ತು.

ಬಿಜೆಪಿ ಪ್ರಣಾಳಿಕೆಯ 17ನೇ ಪುಟದಲ್ಲಿ ‘ಅಲ್ಪಸಂಖ್ಯಾತರು-ಸಮಾನ ಅವಕಾಶ‘ ಎಂಬ ಶೀರ್ಷಿಕೆಯಡಿ “ಧಾರ್ಮಿಕ ನಾಯಕರ ಜೊತೆ ಸಮಾಲೋಚನೆ ನಡೆಸಿ ವಕ್ಫ್ ಮಂಡಳಿಗಳ ಸಬಲೀಕರಣ ನಡೆಸಲಾಗುವುದು. ಅನಧಿಕೃತವಾಗಿ ಒತ್ತುವರಿಯಾಗಿರುವ ವಕ್ಫ್‌ ಜಮೀನುಗಳನ್ನು ತೆರವುಗೊಳಿಸಲು ಕ್ರಮ ಕೈಗೊಳ್ಳಲಾಗುವುದು” ಎಂದು ಸ್ಪಷ್ಟವಾಗಿ ಹೇಳಿದೆ.

ಅಲ್ಲಿಯೇ ಕೆಳಗಿನ ಪ್ಯಾರಾದಲ್ಲಿ “ಅಲ್ಪ ಸಂಖ್ಯಾತರ ಸಂಸ್ಕೃತಿ ಮತ್ತು ಸ್ಮಾರಕಗಳನ್ನು ರಕ್ಷಣೆ ಮಾಡಲಾಗುವುದು. ಉರ್ದು ಭಾಷೆಯ ಸಂರಕ್ಷಣೆ ಮತ್ತು ಪ್ರಚಾರ ಮಾಡಲಾಗುವುದು” ಎಂದು ಭರವಸೆ ಕೊಟ್ಟಿರುವುದು ಗಮನಾರ್ಹ.

ಇಲ್ಲಿ ಬಿಜೆಪಿ ಕೊಟ್ಟ ಭರವಸೆಗಳು ತಪ್ಪು ಎಂದಲ್ಲ. ಆದರೆ, ಇದೇ ಬಿಜೆಪಿ ನಾಯಕರು ಕರ್ನಾಟಕ ಸರ್ಕಾರದ ವಕ್ಫ್ ಸಚಿವರಾದ ಝಮೀರ್ ಅಹ್ಮದ್ ಅವರು ವಕ್ಫ್ ಭೂ ವ್ಯಾಜ್ಯಗಳನ್ನು ಇತ್ಯರ್ಥಪಡಿಸಲು ವಕ್ಫ್ ಅದಾಲತ್ ನಡೆಸಿರುವುದನ್ನು ಮತ್ತು ಸಾಮಾನ್ಯ ಪ್ರಕ್ರಿಯೆಯ ಭಾಗವಾಗಿ ಅಧಿಕಾರಿಗಳು ರೈತರಿಗೆ ನೋಟಿಸ್ ನೀಡಿರುವುದನ್ನು ವಿರೋಧಿಸಿ, ಅದಕ್ಕೆ ಕೋಮು ಬಣ್ಣ ಬಳಿದಿರುವುದು ವಿಪರ್ಯಾಸ.

ಪ್ರಸ್ತುತ ವಕ್ಫ್ ವಿಚಾರದಲ್ಲಿ ಸರ್ಕಾರದ ವಿರುದ್ದ ವಾಗ್ದಾಳಿ ನಡೆಸುತ್ತಿರುವ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಈ ಹಿಂದೆ “ವಕ್ಫ್ ಅಲ್ಲಾಹನ ಆಸ್ತಿ, ಅದು ಸಮುದಾಯದ ಏಳಿಗಾಗಿ ನೀಡಿರುವ ಸ್ವತ್ತು. ಅದನ್ನು ಅತಿಕ್ರಮಣ ಮಾಡಿದವರ ವಿರುದ್ದ ಕ್ರಮ ಕೈಗೊಳ್ಳಲಾಗುವುದು” ಎಂದಿದ್ದರು.

ಬೊಮ್ಮಾಯಿ ಅವರ ಹಳೆಯ ಹೇಳಿಕೆಯ ವಿಡಿಯೋವನ್ನು ಕೆಲ ಮಾಧ್ಯಮಗಳು ಪ್ರಸಾರ ಮಾಡಿದಾಗ, “ಸಚಿವರಾದ ಝಮೀರ್ ಅಹ್ಮದ್ ಅವರು ನಾನು ವಕ್ಪ್ ಬೋರ್ಡ್ ಸಮಾರಂಭದಲ್ಲಿ ಮಾತನಾಡಿರುವ ಹಳೆಯ ವಿಡಿಯೋ ಹರಿಬಿಟ್ಟು ಅಪಪ್ರಚಾರ ಮಾಡುತ್ತಿದ್ದಾರೆ” ಎಂದು ಹೇಳುತ್ತಿದ್ದಾರೆ.

ಒಟ್ಟಿನಲ್ಲಿ, ವಕ್ಫ್ ಜಮೀನು ವಿಚಾರದಲ್ಲಿ ರಾಜಕೀಯ ನಾಯಕರು ನೀಡುತ್ತಿರುವ ಹೇಳಿಕೆಗಳು ಸಮಸ್ಯೆಗಳನ್ನು ಇತ್ಯರ್ಥಪಡಿಸುವ ಬದಲು, ಪರಸ್ಪರ ರಾಜಕೀಯ ಕೆಸರೆರಚಾಟಕ್ಕೆ ಕಾರಣವಾಗಿದೆ. ಜೊತೆಗೆ ಸಿವಿಲ್ ವ್ಯಾಜ್ಯಕ್ಕೆ ಕೋಮು ಬಣ್ಣ ನೀಡಿದೆ.

ಇದನ್ನೂ ಓದಿ : ದೊಡ್ಡಬಳ್ಳಾಪುರ | ದೀಪಾವಳಿ ಹಬ್ಬದಂದೇ ದಲಿತರಿಗೆ ದೇವಸ್ಥಾನ ಪ್ರವೇಶ ನಿರಾಕರಣೆ: ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಚ್ಚಿದ ಸೇಬನ್ನು ಅಭಿಮಾನಿಗಳತ್ತ ಎಸೆದ ಸಿಎಂ ಡಿ.ಕೆ. ಶಿವಕುಮಾರ್: ವಿಡಿಯೋ ವೈರಲ್

ರಾಜಕೀಯ ನಾಯಕರು ತಮಗೆ ಸಿಕ್ಕ ಹಾರ, ತುರಾಯಿ ಅಥವಾ ಹಣ್ಣುಗಳನ್ನು ಅಭಿಮಾನಿಗಳಿಗೆ ಹಂಚುವುದು ಹೊಸದೇನಲ್ಲ. ಆದರೆ, ತಾನು ಕಚ್ಚಿದ ಹಣ್ಣನ್ನು ಸಾರ್ವಜನಿಕವಾಗಿ ಜನರತ್ತ ಎಸೆಯುವುದು ಯಾವ ರೀತಿಯ ಸಂಸ್ಕೃತಿ ಎಂಬ ಪ್ರಶ್ನೆ ಮೂಡುತ್ತದೆ....

ವೈಜಾಗ್ ಸ್ಟೀಲ್ ಅಪಘಾತಕ್ಕೆ 8 ಮಂದಿ ಬಲಿ: ಸಿಬ್ಬಂದಿ ಕೊರತೆಯ ಬಗ್ಗೆ ಕಾರ್ಮಿಕ ಸಂಘಗಳ ಆರೋಪ: ಸಾವಿನ ಅಂಚಿನಲ್ಲೂ ಕುಟುಂಬಕ್ಕಾಗಿ ಮಿಡಿದ ಕಾರ್ಮಿಕ

ಆಂಧ್ರಪ್ರದೇಶದ ವಿಶಾಖಪಟ್ಟಣದಲ್ಲಿರುವ ಪ್ರಸಿದ್ಧ ರಾಷ್ಟ್ರೀಯ ಇಸ್ಪತ್ ನಿಗಮ್ ಲಿಮಿಟೆಡ್ (RINL) ಉಕ್ಕು ಸ್ಥಾವರದಲ್ಲಿ ಸೋಮವಾರ (ಜೂನ್ 8, 2026) ಸಂಜೆ ಭೀಕರ ಕೈಗಾರಿಕಾ ದುರಂತವೊಂದು ಸಂಭವಿಸಿದೆ. ಸ್ಥಾವರದ ಸ್ಟೀಲ್ ಮೆಲ್ಟ್ ಶಾಪ್-1 (SMS-1)...

ಅಂದು ಪಿಣರಾಯಿ ಮನೆ ಮೇಲೆ ದಾಳಿ; ಈಗ ವೀಣಾ ವಿಜಯನ್‌ಗೆ ಸಮನ್ಸ್‌: ಹಿರಿಯ ಕಮ್ಯುನಿಸ್ಟ್‌ ನಾಯಕನ ಕುಟುಂಬದ ಮೇಲೆ ಇಡಿ ಕಣ್ಣು

ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಕೇರಳದ ಮಾಜಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ಮನೆ ಮೇಲೆ ಕಳೆದ ತಿಂಗಳು ಜಾರಿ ನಿರ್ದೇಶನಾಲಯ ದಾಳಿ ಮಾಡಿತ್ತು. ಕೊನೆಗೆ ಅಲ್ಲಿ ಏನೂ ಸಿಗದೆ ಬರಿಗೈನಲ್ಲಿ ಅಧಿಕಾರಿಗಳು...

ಮೋದಿ ಸರ್ಕಾರಕ್ಕೆ 12 ವರ್ಷ : 12 ರಿಂದ 4ಕ್ಕೆ ಇಳಿದ ಉಜ್ವಲ ಯೋಜನೆ ಸಿಲಿಂಡರ್

ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರದ ಎನ್‌ಡಿಎ ಸರ್ಕಾರ 12 ವರ್ಷಗಳ ಆಡಳಿತಾವಧಿಯನ್ನು ಪೂರ್ಣಗೊಳಿಸಿದೆ ಅಥವಾ ಮೋದಿ ಅವರು ಮೂರನೇ ಅವಧಿಗೆ ಪ್ರಧಾನಿಯಾಗಿ 2026ರ ಜೂನ್ 9ಕ್ಕೆ ಎರಡು ವರ್ಷಗಳು ಪೂರ್ಣಗೊಂಡಿವೆ....

ಬಿರ್ಸಾ ಮುಂಡಾ 150ನೇ ಜಯಂತಿ ಹೆಸರಿನಲ್ಲಿ ಆದಿವಾಸಿ ಹಕ್ಕುಗಳ ಮೇಲೆ ಸಂಘ ಪರಿವಾರದ ಕಣ್ಣು?

ಮೇ 24 ರಂದು ನವದೆಹಲಿಯ ಕೆಂಪುಕೋಟೆಯಲ್ಲಿ (Red Fort) ಭಾರತದಾದ್ಯಂತದ ಲಕ್ಷಾಂತರ ಪರಿಶಿಷ್ಟ ಪಂಗಡದ (ST) ಸಮುದಾಯಗಳ ಜನರು ಒಟ್ಟಿಗೆ ಸೇರಿದ್ದರು. ‘ಜಂಜಾತಿ ಸುರಕ್ಷಾ ಮಂಚ್’ (ಬುಡಕಟ್ಟು ರಕ್ಷಣಾ ವೇದಿಕೆ) ಆಯೋಜಿಸಿದ್ದ ಈ...

ಆಪರೇಷನ್ ಕಮಲ ಭೀತಿ: ರಾಜ್ಯಸಭಾ ಚುನಾವಣೆಗೂ ಮುನ್ನ ಮಧ್ಯಪ್ರದೇಶದ ಕಾಂಗ್ರೆಸ್ ಶಾಸಕರು ಕರ್ನಾಟಕಕ್ಕೆ ಶಿಫ್ಟ್‌?

ಜೂನ್ 18 ರ ರಾಜ್ಯಸಭಾ ಚುನಾವಣೆಗೆ ಮುನ್ನ ಬಿಜೆಪಿಯಿಂದ ಅಕ್ರಮವಾಗಿ ಹಣ ವರ್ಗಾವಣೆ ಪ್ರಯತ್ನಗಳು ನಡೆಯುತ್ತಿವೆ ಎಂದು ಮಧ್ಯಪ್ರದೇಶ ಕಾಂಗ್ರೆಸ್ ನಾಯಕರು ಆರೋಪಿಸಿದ್ದಾರೆ. ಅಡ್ಡ ಮತದಾನ ತಡೆಗಟ್ಟುವ ಜೊತೆಗೆ ತನ್ನ ಶಿಬಿರದ ಒಗ್ಗಟ್ಟು...

ವೀರಪ್ಪನ್ ಹೇಳಿದ ಕಥೆಗೆ 30 ವರ್ಷಗಳ ಬಳಿಕ ಕ್ಲೈಮ್ಯಾಕ್ಸ್ : ಸನ್ ಟಿವಿ ವಿರುದ್ಧ ಕಾನೂನು ಸಮರದಲ್ಲಿ ಗೆದ್ದ ನಟಿ ಸುಕನ್ಯಾ​

ತೊಂಬತ್ತರ ದಶಕದಲ್ಲಿ ತಮಿಳು ಮತ್ತು ಮಲಯಾಳಂ ಚಿತ್ರರಂಗದಲ್ಲಿ ಪ್ರಮುಖ ನಟರೊಂದಿಗೆ ನಟಿಸಿ, ಅಪಾರ ಜನಪ್ರಿಯತೆ ಗಳಿಸಿದ್ದ ನಟಿ ಸುಕನ್ಯಾ ರಮೇಶ್, ಪ್ರಸ್ತುತ ಕೆಲವು ಅಪರೂಪದ ಪಾತ್ರಗಳನ್ನು ಹೊರತುಪಡಿಸಿದರೆ ಚಿತ್ರರಂಗದಲ್ಲಿ ಅಷ್ಟಾಗಿ ಸಕ್ರಿಯರಾಗಿಲ್ಲ. ಈ ನಡುವೆ 2024ರಲ್ಲಿ...

“ರಾಜೀನಾಮೆ ನೀಡಿ, ಬಿಜೆಪಿ ಟಿಕೆಟ್‌ನಲ್ಲಿ ಸ್ಪರ್ಧಿಸಿ”: ಟಿಎಂಸಿ ಬಂಡುಕೋರರಿಗೆ ಮಹುವಾ ಮೊಯಿತ್ರಾ ನೇರ ಸವಾಲು

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (TMC) ಪಕ್ಷದೊಳಗೆ ತೀವ್ರ ಭಿನ್ನಾಭಿಪ್ರಾಯ ಸ್ಫೋಟಗೊಂಡಿದೆ. ಕೇಂದ್ರದ ಬಿಜೆಪಿ ನೇತೃತ್ವದ ಎನ್‌ಡಿಎ (NDA) ಮೈತ್ರಿಕೂಟಕ್ಕೆ ಬೆಂಬಲ ನೀಡಲು ಮುಂದಾಗಿರುವ ಸ್ವಪಕ್ಷದ ಬಂಡಾಯ ಸಂಸದರ ವಿರುದ್ಧ ಟಿಎಂಸಿ ಸಂಸದೆ...

ಪಶ್ಚಿಮ ಬಂಗಾಳದ ಸೋಲಿನ ಬಳಿಕ ‘ಇಂಡಿಯಾದ ಆಸರೆ’ ಬಯಸಿದ ಮಮತಾ

2026ರ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಸೋಲಿನ ನಂತರ ಮಮತಾ ಬ್ಯಾನರ್ಜಿ ಅವರು ಇದ್ದಕ್ಕಿದ್ದಂತೆ ‘ಇಂಡಿಯಾ’ (INDIA) ಒಕ್ಕೂಟ ಮತ್ತು ರಾಷ್ಟ್ರೀಯ ಮಟ್ಟದ ವಿರೋಧ ಪಕ್ಷಗಳ ಒಗ್ಗಟ್ಟಿಗೆ ಇಷ್ಟೊಂದು ಪ್ರಾಮುಖ್ಯತೆ ನೀಡುತ್ತಿರುವುದು ಏಕೆ? ದೀರ್ಘಕಾಲದವರೆಗೆ...

ಪಶ್ಚಿಮ ಬಂಗಾಳ| ಮತದಾರರ ಪಟ್ಟಿಯಿಂದ ಡಿಲೀಟ್‌ ಆದವರಿಗೆ ಪಡಿತರ ಪ್ರಯೋಜನಗಳಿಲ್ಲ

ಚುನಾವಣಾ ಆಯೋಗದ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಯಿಂದಾಗಿ ಪಶ್ಚಿಮ ಬಂಗಾಳದ ಚುನಾವಣಾ ಪ್ರಕ್ರಿಯೆಯಿಂದ ಹೊರಗುಳಿದವರಿಗೆ ಈಗ ಎರಡು ಹೊಡೆತ ಎದುರಾಗಿದೆ. ರಾಜ್ಯ ಸರ್ಕಾರವು ಈಗ ಅವರ ಪಡಿತರ ಚೀಟಿಗಳನ್ನು ಸಹ ನಿಷ್ಕ್ರಿಯಗೊಳಿಸಲು...