Homeಮುಖಪುಟ370 ವಿಧಿ ರದ್ದತಿ ವಿರುದ್ಧ ನಿರ್ಣಯ | ಜಮ್ಮು ಕಾಶ್ಮೀರದ ಮೊದಲ ಅಧಿವೇಶನದಲ್ಲಿ ಗದ್ದಲ

370 ವಿಧಿ ರದ್ದತಿ ವಿರುದ್ಧ ನಿರ್ಣಯ | ಜಮ್ಮು ಕಾಶ್ಮೀರದ ಮೊದಲ ಅಧಿವೇಶನದಲ್ಲಿ ಗದ್ದಲ

- Advertisement -
- Advertisement -

ಆರು ವರ್ಷಗಳ ನಂತರ ಜಮ್ಮು ಕಾಶ್ಮೀರದ ವಿಧಾನಸಭೆಯ ಮೊದಲ ಅಧಿವೇಶನವು ಗದ್ದಲದೊಂದಿಗೆ ಸೋಮವಾರ ಆರಂಭವಾಗಿದೆ. ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ (ಪಿಡಿಪಿ) ಶಾಸಕ ವಹೀದ್ ಪಾರಾ ಅವರು ಆರ್ಟಿಕಲ್ 370 ರದ್ದತಿಯನ್ನು ವಿರೋಧಿಸಿ ಮತ್ತು ಜಮ್ಮು ಕಾಶ್ಮೀರದ ವಿಶೇಷ ಸ್ಥಾನಮಾನವನ್ನು ಮರುಸ್ಥಾಪಿಸುವಂತೆ ನಿರ್ಣಯವನ್ನು ಮಂಡಿಸಿದ್ದು, ಸದನವು ತೀವ್ರ ಗೊಂದಲಕ್ಕೆ ಸಾಕ್ಷಿಯಾಯಿತು. 370 ವಿಧಿ ರದ್ದತಿ

ಪುಲ್ವಾಮಾ ಅಸೆಂಬ್ಲಿ ಕ್ಷೇತ್ರವನ್ನು ಪ್ರತಿನಿಧಿಸುವ ಪಾರಾ ಅವರು ಹೊಸದಾಗಿ ಆಯ್ಕೆಯಾದ ಸ್ಪೀಕರ್ ಅಬ್ದುಲ್ ರಹೀಮ್ ರಾಥರ್ ಅವರಿಗೆ ನಿರ್ಣಯವನ್ನು ಸಲ್ಲಿಸಿದರು. ಐದು ದಿನಗಳ ಅಧಿವೇಶನದಲ್ಲಿ, ಅವರು ಮಂಡಿಸಿದ ವಿಷಯವು ಅಂಜೆಂಡಾದ ಭಾಗವಲ್ಲದಿದ್ದರೂ, ಈ ವಿಷಯದ ಬಗ್ಗೆ ಚರ್ಚೆ ನಡೆಸುವಂತೆ ಅವರು ವಿನಂತಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ಸದನದ ಕಾರ್ಯಸೂಚಿಯನ್ನು ಅಂತಿಮಗೊಳಿಸಲಾಗಿದದೆ. ಆದರೂ, ಸ್ಪೀಕರ್ ಆಗಿ ನಿರ್ಣಯವನ್ನು ಸೇರಿಸಲು ನಿಮಗೆ ಅಧಿಕಾರ ಇದೆ ಎಂದು ನಾವು ನಂಬುತ್ತೇವೆ. ಏಕೆಂದರೆ ಇದು ಜನರ ಭಾವನೆಯನ್ನು ಪ್ರತಿಬಿಂಬಿಸುತ್ತದೆ” ಎಂದು ಅವರು ಹೇಳಿದ್ದಾರೆ.

ನಿರ್ಣಯವನ್ನು ಸಲ್ಲಿಸಿದ ಸ್ವಲ್ಪ ಸಮಯದ ನಂತರ, ಬಿಜೆಪಿಯ ಎಲ್ಲಾ 28 ಶಾಸಕರು ಈ ಕ್ರಮವನ್ನು ವಿರೋಧಿಸಲು ಎದ್ದು ನಿಂತರು. ಇದು ವಿಧಾನಸಭೆಯೊಳಗೆ ಗದ್ದಲದ ಘಟನೆಗೆ ಕಾರಣವಾಯಿತು. ವಿಧಾನಸಭೆ ನಿಯಮಗಳನ್ನು ಉಲ್ಲಂಘಿಸಿ ನಿರ್ಣಯ ತಂದಿದ್ದಕ್ಕಾಗಿ ಪಾರಾ ಅವರನ್ನು ಅಮಾನತುಗೊಳಿಸುವಂತೆ ಬಿಜೆಪಿ ಶಾಸಕ ಶಾಮ್ ಲಾಲ್ ಶರ್ಮಾ ಒತ್ತಾಯಿಸಿದ್ದಾರೆ.

ಪ್ರತಿಭಟನಾ ನಿರತ ಸದಸ್ಯರಿಗೆ ಆಸನಗಳಲ್ಲಿ ಕುಳಿತುಕೊಳ್ಳುವಂತೆ ಸ್ಪೀಕರ್ ಪದೇ ಪದೇ ಮನವಿ ಮಾಡಿದರೂ ಅವರು ಧರಣಿ ಮುಂದುವರಿಸಿದರು. ನಿರ್ಣಯ ಇನ್ನೂ ತಮ್ಮ ಪೀಠಕ್ಕೆ ಬಂದಿಲ್ಲ ಎಂದ ಅವರು, ಅದು ಬಂದಾಗ ಪರಿಶೀಲಿಸುವುದಾಗಿ ಹೇಳಿದ್ದಾರೆ. 370 ವಿಧಿ ರದ್ದತಿ

ಬಿಜೆಪಿ ಸದಸ್ಯರು ತಮ್ಮ ಪ್ರತಿಭಟನೆಯನ್ನು ಹಿಂಪಡೆಯಲು ನಿರಾಕರಿಸಿದಾಗ, ಆಡಳಿತರೂಢ ನ್ಯಾಷನಲ್ ಕಾನ್ಫರೆನ್ಸ್ ಶಾಸಕರು ಸದನದ ಕಲಾಪಕ್ಕೆ ಅಡ್ಡಿಪಡಿಸಿದ್ದಕ್ಕಾಗಿ ಬಿಜೆಪಿ ಶಾಕಸರನ್ನು ತರಾಟೆಗೆ ತೆಗೆದುಕೊಂಡರು. ಈ ವೇಳೆ ಅಧಿವೇಶನವನ್ನು ಉದ್ದೇಶಿಸಿ ಮಾತನಾಡಿದ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ, ಈ ನಿರ್ಣಯಕ್ಕೆ ಯಾವುದೇ ಪ್ರಾಮುಖ್ಯತೆ ಇಲ್ಲ. ಇದು ಕ್ಯಾಮೆರಾಗಳಿಗೆ ಮಾತ್ರ ಸೀಮಿತ ಎಂದು ಅವರು ಹೇಳಿದ್ದಾರೆ.

ಆಗಸ್ಟ್ 5, 2019 ರಂದು 370 ನೇ ವಿಧಿಯನ್ನು ರದ್ದುಪಡಿಸಿದ ಕೇಂದ್ರ ಸರ್ಕಾರದ ನಿರ್ಧಾರವನ್ನು ಜಮ್ಮು ಕಾಶ್ಮೀರದ ಜನರು ಒಪ್ಪುವುದಿಲ್ಲ ಎಂದು ಮುಖ್ಯಮಂತ್ರಿ ಒಪ್ಪಿಕೊಂಡಿದ್ದಾರೆ.

ನಿರ್ಣಯವನ್ನು ಸಲ್ಲಿಸಿದ್ದಕ್ಕಾಗಿ ವಹೀದ್ ಪಾರಾ ಬಗ್ಗೆ “ಹೆಮ್ಮೆಯಿದೆ” ಎಂದು ಪಿಡಿಪಿ ಮುಖ್ಯಸ್ಥೆ ಮೆಹಬೂಬಾ ಮುಫ್ತಿ ಅವರು ಹೇಳಿದ್ದಾರೆ. “ಜಮ್ಮು ಕಾಶ್ಮೀರದ ಅಸೆಂಬ್ಲಿಯಲ್ಲಿ ಆರ್ಟಿಕಲ್ 370 ರದ್ದತಿಯನ್ನು ವಿರೋಧಿಸಿ ಮತ್ತು ವಿಶೇಷ ಸ್ಥಾನಮಾನವನ್ನು ಮರುಸ್ಥಾಪಿಸಲು ನಿರ್ಣಯವನ್ನು ಮಂಡಿಸಿದ ವಹೀದ್ ಪಾರಾ ಬಗ್ಗೆ ಹೆಮ್ಮೆಯಿದೆ. ದೇವರು ನಿಮ್ಮನ್ನು ಆಶೀರ್ವದಿಸುತ್ತಾನೆ” ಎಂದು ಅವರು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಪಕ್ಷಪಾತ ಆರೋಪ : ಮಹಾರಾಷ್ಟ್ರ ಡಿಜಿಪಿ ರಶ್ಮಿ ಶುಕ್ಲಾ ವರ್ಗಾವಣೆಗೆ ಚುನಾವಣಾ ಆಯೋಗ ಆದೇಶ

ಪಕ್ಷಪಾತ ಆರೋಪ : ಮಹಾರಾಷ್ಟ್ರ ಡಿಜಿಪಿ ರಶ್ಮಿ ಶುಕ್ಲಾ ವರ್ಗಾವಣೆಗೆ ಚುನಾವಣಾ ಆಯೋಗ ಆದೇಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೂತುಕುಡಿ ಸಾತನ್‌ಕುಳಂ ತಂದೆ-ಮಗನ ಕಸ್ಟಡಿ ಸಾವು ಪ್ರಕರಣ : ಅಪರಾಧಿಗಳಾದ ಎಲ್ಲಾ 9 ಪೊಲೀಸರಿಗೆ ಮರಣದಂಡನೆ ವಿಧಿಸಿದ ನ್ಯಾಯಾಲಯ

ತಮಿಳುನಾಡಿನ ತೂತುಕುಡಿ ಜಿಲ್ಲೆಯ ಸಾತನ್‌ಕುಳಂ ಪೊಲೀಸ್ ಠಾಣೆಯಲ್ಲಿ ಕೋವಿಡ್-19 ಲಾಕ್‌ಡೌನ್ ಸಮಯದಲ್ಲಿ ಸಂಭವಿಸಿದ, ವ್ಯಾಪಾರಿ ಪಿ. ಜಯರಾಜ್ (58) ಮತ್ತು ಅವರ ಮಗ ಜೆ. ಬೆನಿಕ್ಸ್ (31) ಅವರ ಕಸ್ಟಡಿ ಸಾವು ಪ್ರಕರಣದ...

ದಾವಣಗೆರೆ ದಕ್ಷಿಣ ಉಪ-ಸಮರ: ಶಾಮನೂರು ಸಾಮ್ರಾಜ್ಯದಲ್ಲಿ ಅಹಿಂದ ಬಂಡಾಯ!

ತುಂಗಭದ್ರಾ ನದಿ ಪರ‍್ವಕ್ಕೆ ಎತ್ತರದ ಪ್ರದೇಶದಲ್ಲಿರುವ ದಾವಣಗೆರೆ ಮಧ್ಯ ಕರ್ನಾಟಕದ ಪ್ರಮುಖ ವಾಣಿಜ್ಯ ನಗರಿ. ಬೆಣ್ಣೆ ದೋಸೆಯ ಘಮಲಿನ ದಾವಣಗೆರೆಯ ರಾಜಕಾರಣ ಮಾತ್ರ ಮಿರ್ಚಿ-ಮಂಡಕ್ಕಿಯ ಖಡಕ್ ಖಾರಾ ಕುರುಕುಲಿನಂತೆ! ದಾವಣಗೆರೆ ಮತ್ತದರ ಸುತಮುತ್ತಲಿನ...

‘Dr. Nimo Yadav’, ‘Nehr Who’ ಎಕ್ಸ್‌ ಖಾತೆಗಳನ್ನು ತಕ್ಷಣ ಮರುಸ್ಥಾಪಿಸಲು ದೆಹಲಿ ಹೈಕೋರ್ಟ್ ಆದೇಶ

'Dr. Nimo Yadav' ಮತ್ತು 'Nehr Who' ಎಂಬ ಎರಡು ಪರೋಡಿ ಎಕ್ಸ್‌ ಖಾತೆಗಳನ್ನು ತಕ್ಷಣ ಮರು ಸ್ಥಾಪಿಸುವಂತೆ ದೆಹಲಿ ಹೈಕೋರ್ಟ್ ಸೋಮವಾರ (ಏ.6) ಎಕ್ಸ್ ಸಂಸ್ಥೆಗೆ (X Corp) ಆದೇಶಿಸಿದೆ. 'Dr....

ಬಂಗಾಳ| ಮತದಾರರ ಪಟ್ಟಿಯಿಂದ ಹೆಸರು ತೆಗೆದ ಬಳಿಕ ಸಾವಿಗೆ ಶರಣಾದ ಮುಸ್ಲಿಂ ವ್ಯಕ್ತಿ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ನಂತರ ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿಯಿಂದ ತನ್ನ ಹೆಸರನ್ನು ತೆಗೆದುಹಾಕಿದ್ದರಿಂದ ಮನನೊಂದ ಮುಸ್ಲಿಂ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಮೃತನನ್ನು ಬಿರ್ಭುಮ್...

‘ಯೋಜನೆಯು ಕೇರಳಕ್ಕೆ ಜೀವನಾಡಿಯಾಗಲಿದೆ’: ವಯನಾಡ್ ಸುರಂಗ ಮಾರ್ಗ ವಿರುದ್ದದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಕೇರಳದ ಕೋಝಿಕ್ಕೋಡ್-ವಯನಾಡ್ ಸುರಂಗ ಮಾರ್ಗ ನಿರ್ಮಾಣಕ್ಕೆ ನೀಡಲಾದ ಪರಿಸರ ಅನುಮತಿ (ಇಸಿ) ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ (ಏ.6) ವಜಾಗೊಳಿಸಿದೆ. ಸುರಂಗ ನಿರ್ಮಾಣದ ಸಮಯದಲ್ಲಿ ಪರಿಸರ ಅನುಮತಿಯ ಷರತ್ತುಗಳ ಉಲ್ಲಂಘನೆಯಾದರೆ, ಅರ್ಜಿದಾರರು...

651 ಕೋಟಿ ರೂ. ಮೌಲ್ಯದ ನಗದು, ಮದ್ಯ, ಮಾದಕ ವಸ್ತು ವಶಪಡಿಸಿಕೊಂಡ ಚುನಾವಣಾ ಆಯೋಗ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಅಧಿಕಾರಿಗಳು 651.51 ಕೋಟಿ ರೂ.ಗೂ ಹೆಚ್ಚು ಮೌಲ್ಯದ ನಗದು, ಮದ್ಯ, ಮಾದಕ ವಸ್ತುಗಳು ಮತ್ತು ಇತರ ಉಚಿತ ವಸ್ತುಗಳನ್ನು...

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ಬಾಲಕಿಯನ್ನು ಸರಪಳಿಯಿಂದ ಕಟ್ಟಿ ಥಳಿಸಿದ ಮಾಜಿ ಸೇನಾಧಿಕಾರಿ

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ನಾಲ್ಕು ವರ್ಷದ ಬಾಲಕಿಯನ್ನು ನಿವೃತ್ತ ಸೇನಾಧಿಕಾರಿಯೊಬ್ಬರು ಸರಪಳಿಯಿಂದ ಕಟ್ಟಿಹಾಕಿ ಕ್ರೂರವಾಗಿ ಥಳಿಸಿರುವ ಆಘಾತಕಾರಿ ಘಟನೆ ಹಿಮಾಚಲ ಪ್ರದೇಶದ ಉನಾ ಜಿಲ್ಲೆಯ ಬೆಹಡಾಲ ಗ್ರಾಮದಲ್ಲಿ ನಡೆದಿದೆ. ಬಾಲಕಿಯು ನಿವೃತ್ತ ಸೇನಾಧಿಕಾರಿಯ ತೋಟದ...

ಆಂಧ್ರ ವಿಧಾನಸಭಾ ಸ್ಪೀಕರ್ ಅಯ್ಯಣ್ಣ ಪಾತ್ರುಡು ಅವರಿಂದ ದಲಿತ ವ್ಯಕ್ತಿಗೆ ಕಪಾಳಮೋಕ್ಷ: ವೈಎಸ್‌ಆರ್‌ಸಿಪಿ ವಾಗ್ದಾಳಿ

ಏಪ್ರಿಲ್ 3 ರ ಗುರುವಾರ ನರಸಿಪಟ್ಟಣದಲ್ಲಿ ದಲಿತ ವ್ಯಕ್ತಿಯೊಬ್ಬರಿಗೆ ಕಪಾಳಮೋಕ್ಷ ಮಾಡಿದ್ದಕ್ಕಾಗಿ ಆಂಧ್ರಪ್ರದೇಶ ವಿಧಾನಸಭಾ ಸ್ಪೀಕರ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಾಯಕ ಅಯ್ಯಣ್ಣ ಪಾತ್ರುಡು ಅವರ ವಿರುದ್ಧ ವೈಎಸ್‌ಆರ್ ಕಾಂಗ್ರೆಸ್...

ಪ. ಬಂಗಾಳ | ಬಿಜೆಪಿ ಪ್ರಚಾರ ಸಾಮಗ್ರಿ ಸಜ್ಜುಗೊಳಿಸಿದ ವಿಡಿಯೋ ವೈರಲ್ : ಚುನಾವಣಾ ಕರ್ತವ್ಯದಲ್ಲಿದ್ದ ಅಧಿಕಾರಿ ಅಮಾನತು

ಬಿಜೆಪಿ ಪ್ರಚಾರ ಸಾಮಗ್ರಿಗಳನ್ನು ತಯಾರಿಸಲು ಸಹಾಯ ಮಾಡಿದ ಆರೋಪದ ಮೇಲೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಪಾಣಿಹಟಿ ವಿಧಾನಸಭಾ ಕ್ಷೇತ್ರದ ಅಧಿಕಾರಿಯೊಬ್ಬರನ್ನು ಚುನಾವಣಾ ಆಯೋಗ ಅಮಾನತುಗೊಳಿಸಿದೆ ಎಂದು ದಿ ಇಂಡಿಯನ್...

ಮುಸ್ಲಿಮರ ವಿರುದ್ಧ ದ್ವೇಷ ಕಾರುವ ಅಸ್ಸಾಂ ಸಿಎಂ ಪತ್ನಿ ಬಳಿ 2 ಮುಸ್ಲಿಂ ದೇಶಗಳ ಪಾಸ್‌ಪೋರ್ಟ್ ಇದೆ : ಕಾಂಗ್ರೆಸ್ ಆರೋಪ

ಮತದಾನಕ್ಕೆ ಇನ್ನೇನು ಮೂರು ದಿನಗಳು ಬಾಕಿ ಇರುವಾಗ, ಅಸ್ಸಾಂನಲ್ಲಿ ಕಾಂಗ್ರೆಸ್‌-ಬಿಜೆಪಿ ನಡುವೆ ವೈಯಕ್ತಿಕ ವಿಚಾರಗಳ ಕುರಿತ ವಾಗ್ಯುದ್ಧ ತಾರಕಕ್ಕೇರಿದೆ. ಸಿಎಂ ಹಿಮಂತ ಬಿಸ್ವಾ ಶರ್ಮಾ ಮತ್ತು ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ...