Homeಮುಖಪುಟಪಕ್ಷಪಾತ ಆರೋಪ : ಮಹಾರಾಷ್ಟ್ರ ಡಿಜಿಪಿ ರಶ್ಮಿ ಶುಕ್ಲಾ ವರ್ಗಾವಣೆಗೆ ಚುನಾವಣಾ ಆಯೋಗ ಆದೇಶ

ಪಕ್ಷಪಾತ ಆರೋಪ : ಮಹಾರಾಷ್ಟ್ರ ಡಿಜಿಪಿ ರಶ್ಮಿ ಶುಕ್ಲಾ ವರ್ಗಾವಣೆಗೆ ಚುನಾವಣಾ ಆಯೋಗ ಆದೇಶ

- Advertisement -
- Advertisement -

ಪ್ರತಿಪಕ್ಷಗಳ ವಿರುದ್ಧ ‘ಸ್ಪಷ್ಟ ಪಕ್ಷಪಾತ’ ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿದ ಹಿನ್ನೆಲೆ ಚುನಾವಣಾ ಆಯೋಗ ಇಂದು (ನ.4) ಮಹಾರಾಷ್ಟ್ರದ ಡಿಜಿಪಿ ರಶ್ಮಿ ಶುಕ್ಲಾ ಅವರನ್ನು ವರ್ಗಾವಣೆ ಮಾಡಿದೆ.

ಡಿಜಿಪಿ ರಶ್ಮಿ ಶುಕ್ಲಾ ಅವರ ಜವಾಬ್ದಾರಿಯನ್ನು ಮಹಾರಾಷ್ಟ್ರ ಕೇಡರ್‌ನ ಮುಂದಿನ ಹಿರಿಯ ಐಪಿಎಸ್ ಅಧಿಕಾರಿಗೆ ಹಸ್ತಾಂತರಿಸುವಂತೆ ಚುನಾವಣಾ ಆಯೋಗವು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಸುಜಾತಾ ಸೌನಿಕ್ ಅವರಿಗೆ ಆದೇಶಿಸಿದೆ ಎಂದು ಎಎನ್‌ಐ ವರದಿ ಮಾಡಿದೆ.

ಹೊಸ ಡಿಜಿಪಿಯ ಆಯ್ಕೆಗೆ ನಾಳೆ (ನ.5) ಮಧ್ಯಾಹ್ನದೊಳಗೆ ಮೂವರು ಐಪಿಎಸ್ ಅಧಿಕಾರಿಗಳ ಸಮಿತಿ ರಚಿಸುವಂತೆ ಮುಖ್ಯ ಕಾರ್ಯದರ್ಶಿಗೆ ಚುನಾವಣಾ ಆಯೋಗ ಸೂಚಿಸಿದೆ.

ಕಳೆದ ತಿಂಗಳು ಮಹಾರಾಷ್ಟ್ರ ಕಾಂಗ್ರೆಸ್ ಮುಖ್ಯಸ್ಥ ನಾನಾ ಪಟೋಲೆ ಅವರು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಅವರಿಗೆ ಪತ್ರ ಬರೆದು ಡಿಜಿಪಿ ಸ್ಥಾನದಿಂದ ರಶ್ಮಿ ಶುಕ್ಲಾ ಅವರನ್ನು ವಜಾ ಅಥವಾ ಅಮಾನತುಗೊಳಿಸುವಂತೆ ಮನವಿ ಮಾಡಿದ್ದರು.

ಕಾಂಗ್ರೆಸ್, ಶಿವಸೇನೆ (ಯುಬಿಟಿ) ಮತ್ತು ಎನ್‌ಸಿಪಿ (ಎಸ್‌ಪಿ) ಸೇರಿದಂತೆ ರಾಜ್ಯದ ವಿರೋಧ ಪಕ್ಷಗಳ ವಿರುದ್ಧ ಡಿಜಿಪಿ ಶುಕ್ಲಾ ಅವರು ‘ಸ್ಪಷ್ಟ ಪಕ್ಷಪಾತ’ ಪ್ರದರ್ಶಿಸುತ್ತಿದ್ದಾರೆ ಎಂದು ಪತ್ರದಲ್ಲಿ ಪಟೋಲೆ ಆರೋಪಿಸಿದ್ದರು.

ಶುಕ್ಲಾ ಅವರು ಪುಣೆ ಪೊಲೀಸ್ ಆಯುಕ್ತರಾಗಿದ್ದಾಗ ಪ್ರತಿಪಕ್ಷ ನಾಯಕರ ಅಕ್ರಮ ಫೋನ್ ಕದ್ದಾಲಿಕೆ ಆರೋಪ ಹೊತ್ತಿದ್ದರು ಎಂದು ಅವರು ಹೇಳಿದ್ದರು.

ಸುದ್ದಿಗೋಷ್ಠಿ ಮತ್ತು ಇತರ ಹೇಳಿಕೆಗಳ ಮೂಲಕ ಡಿಜಿಪಿಯನ್ನು ವಜಾಗೊಳಿಸುವಂತೆ ನಾವು ಹಲವು ಬಾರಿ ಮನವಿ ಮಾಡಿದ್ದೇವೆ. ಕಳೆದ 20 ದಿನಗಳಿಂದ ಪ್ರತಿಪಕ್ಷಗಳ ನಾಯಕರ ವಿರುದ್ದ ರಾಜಕೀಯ ಹಿಂಸಾಚಾರ ನಡೆಯುತ್ತಿದೆ. ಪ್ರತಿಪಕ್ಷಗಳು ಮತ್ತು ನಾಯಕರ ಕಾರ್ಯಕ್ರಮಗಳಲ್ಲಿ ಕಾನೂನು ಸುವ್ಯವಸ್ಥೆ ಕ್ಷೀಣಿಸಿದೆ. ಇದರ ಹಿಂದೆ ಡಿಜಿಪಿಯವರ ಕಾಂಗ್ರೆಸ್‌, ಶಿವಸೇನೆ (ಯುಬಿಟಿ) ಮತ್ತು ಎನ್‌ಸಿಪಿ (ಎಸ್‌ಪಿ) ವಿರುದ್ದದ ಪಕ್ಷಪಾತಿ ಧೋರಣೆ ಇದೆ. ಡಿಜಿಪಿ ರಶ್ಮಿ ಶುಕ್ಲಾ ಅವರು ಪುಣೆಯ ಪೊಲೀಸ್ ಆಯುಕ್ತೆ ಮತ್ತು ರಾಜ್ಯ ಗುಪ್ತಚರ ಇಲಾಖೆ (ಎಸ್‌ಐಡಿ) ಆಯುಕ್ತೆ ಆಗಿದ್ದಾಗ ಪ್ರತಿಪಕ್ಷ ನಾಯಕರ ಫೋನ್ ಕದ್ದಾಲಿಕೆ ಮಾಡಿರುವುದು ಇದಕ್ಕೆ ಸಾಕ್ಷಿ ಎಂದು ನಾನಾ ಪಟೋಲೆ ತನ್ನ ಪತ್ರದಲ್ಲಿ ಹೇಳಿದ್ದರು.

“ರಾಜ್ಯದ ಪೊಲೀಸ್ ಮಹಾನಿರ್ದೇಶಕಿ ರಶ್ಮಿ ಶುಕ್ಲಾ ವಿರುದ್ಧ ಬಹಳ ಗಂಭೀರವಾದ ಆರೋಪವಿದೆ. 2019 ರಲ್ಲಿ ನಮ್ಮ ಸರ್ಕಾರ ರಚನೆಯಾದಾಗ ಅವರು ನೇರವಾಗಿ ಬಿಜೆಪಿ ಪರ ಕೆಲಸ ಮಾಡುತ್ತಿದ್ದರು. ನಮ್ಮೆಲ್ಲ ಫೋನ್‌ಗಳನ್ನು ಟ್ಯಾಪ್ ಮಾಡಿ, ನಾವು ಏನು ಮಾಡಲಿದ್ದೇವೆ ಎಂಬುವುದರ ಕುರಿತು ಬಿಜೆಪಿ ನಾಯಕ ದೇವೇಂದ್ರ ಫಡ್ನವೀಸ್‌ಗೆ ಸಂಪೂರ್ಣ ಮಾಹಿತಿ ನೀಡುತ್ತಿದ್ದರು” ಎಂದು ರಾಜ್ಯಸಭಾ ಸಂಸದ ಮತ್ತು ಶಿವಸೇನೆ (ಯುಬಿಟಿ) ನಾಯಕ ಸಂಜಯ್ ರಾವುತ್ ಕೂಡ ಮಾಧ್ಯಮಗಳ ಮುಂದೆ ಹೇಳಿದ್ದರು.

ಇದನ್ನೂ ಓದಿ : ಆಂಬ್ಯುಲೆನ್ಸ್ ದುರ್ಬಳಕೆ ಆರೋಪ : ಕೇಂದ್ರ ಸಚಿವ ಸುರೇಶ್ ಗೋಪಿ ವಿರುದ್ದ ಪ್ರಕರಣ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿರ್ಸಾ ಮುಂಡಾ 150ನೇ ಜಯಂತಿ ಹೆಸರಿನಲ್ಲಿ ಆದಿವಾಸಿ ಹಕ್ಕುಗಳ ಮೇಲೆ ಸಂಘ ಪರಿವಾರದ ಕಣ್ಣು?

ಮೇ 24 ರಂದು ನವದೆಹಲಿಯ ಕೆಂಪುಕೋಟೆಯಲ್ಲಿ (Red Fort) ಭಾರತದಾದ್ಯಂತದ ಲಕ್ಷಾಂತರ ಪರಿಶಿಷ್ಟ ಪಂಗಡದ (ST) ಸಮುದಾಯಗಳ ಜನರು ಒಟ್ಟಿಗೆ ಸೇರಿದ್ದರು. ‘ಜಂಜಾತಿ ಸುರಕ್ಷಾ ಮಂಚ್’ (ಬುಡಕಟ್ಟು ರಕ್ಷಣಾ ವೇದಿಕೆ) ಆಯೋಜಿಸಿದ್ದ ಈ...

ಆಪರೇಷನ್ ಕಮಲ ಭೀತಿ: ರಾಜ್ಯಸಭಾ ಚುನಾವಣೆಗೂ ಮುನ್ನ ಮಧ್ಯಪ್ರದೇಶದ ಕಾಂಗ್ರೆಸ್ ಶಾಸಕರು ಕರ್ನಾಟಕಕ್ಕೆ ಶಿಫ್ಟ್‌?

ಜೂನ್ 18 ರ ರಾಜ್ಯಸಭಾ ಚುನಾವಣೆಗೆ ಮುನ್ನ ಬಿಜೆಪಿಯಿಂದ ಅಕ್ರಮವಾಗಿ ಹಣ ವರ್ಗಾವಣೆ ಪ್ರಯತ್ನಗಳು ನಡೆಯುತ್ತಿವೆ ಎಂದು ಮಧ್ಯಪ್ರದೇಶ ಕಾಂಗ್ರೆಸ್ ನಾಯಕರು ಆರೋಪಿಸಿದ್ದಾರೆ. ಅಡ್ಡ ಮತದಾನ ತಡೆಗಟ್ಟುವ ಜೊತೆಗೆ ತನ್ನ ಶಿಬಿರದ ಒಗ್ಗಟ್ಟು...

ವೀರಪ್ಪನ್ ಹೇಳಿದ ಕಥೆಗೆ 30 ವರ್ಷಗಳ ಬಳಿಕ ಕ್ಲೈಮ್ಯಾಕ್ಸ್ : ಸನ್ ಟಿವಿ ವಿರುದ್ಧ ಕಾನೂನು ಸಮರದಲ್ಲಿ ಗೆದ್ದ ನಟಿ ಸುಕನ್ಯಾ​

ತೊಂಬತ್ತರ ದಶಕದಲ್ಲಿ ತಮಿಳು ಮತ್ತು ಮಲಯಾಳಂ ಚಿತ್ರರಂಗದಲ್ಲಿ ಪ್ರಮುಖ ನಟರೊಂದಿಗೆ ನಟಿಸಿ, ಅಪಾರ ಜನಪ್ರಿಯತೆ ಗಳಿಸಿದ್ದ ನಟಿ ಸುಕನ್ಯಾ ರಮೇಶ್, ಪ್ರಸ್ತುತ ಕೆಲವು ಅಪರೂಪದ ಪಾತ್ರಗಳನ್ನು ಹೊರತುಪಡಿಸಿದರೆ ಚಿತ್ರರಂಗದಲ್ಲಿ ಅಷ್ಟಾಗಿ ಸಕ್ರಿಯರಾಗಿಲ್ಲ. ಈ ನಡುವೆ 2024ರಲ್ಲಿ...

“ರಾಜೀನಾಮೆ ನೀಡಿ, ಬಿಜೆಪಿ ಟಿಕೆಟ್‌ನಲ್ಲಿ ಸ್ಪರ್ಧಿಸಿ”: ಟಿಎಂಸಿ ಬಂಡುಕೋರರಿಗೆ ಮಹುವಾ ಮೊಯಿತ್ರಾ ನೇರ ಸವಾಲು

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (TMC) ಪಕ್ಷದೊಳಗೆ ತೀವ್ರ ಭಿನ್ನಾಭಿಪ್ರಾಯ ಸ್ಫೋಟಗೊಂಡಿದೆ. ಕೇಂದ್ರದ ಬಿಜೆಪಿ ನೇತೃತ್ವದ ಎನ್‌ಡಿಎ (NDA) ಮೈತ್ರಿಕೂಟಕ್ಕೆ ಬೆಂಬಲ ನೀಡಲು ಮುಂದಾಗಿರುವ ಸ್ವಪಕ್ಷದ ಬಂಡಾಯ ಸಂಸದರ ವಿರುದ್ಧ ಟಿಎಂಸಿ ಸಂಸದೆ...

ಪಶ್ಚಿಮ ಬಂಗಾಳದ ಸೋಲಿನ ಬಳಿಕ ‘ಇಂಡಿಯಾದ ಆಸರೆ’ ಬಯಸಿದ ಮಮತಾ

2026ರ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಸೋಲಿನ ನಂತರ ಮಮತಾ ಬ್ಯಾನರ್ಜಿ ಅವರು ಇದ್ದಕ್ಕಿದ್ದಂತೆ ‘ಇಂಡಿಯಾ’ (INDIA) ಒಕ್ಕೂಟ ಮತ್ತು ರಾಷ್ಟ್ರೀಯ ಮಟ್ಟದ ವಿರೋಧ ಪಕ್ಷಗಳ ಒಗ್ಗಟ್ಟಿಗೆ ಇಷ್ಟೊಂದು ಪ್ರಾಮುಖ್ಯತೆ ನೀಡುತ್ತಿರುವುದು ಏಕೆ? ದೀರ್ಘಕಾಲದವರೆಗೆ...

ಪಶ್ಚಿಮ ಬಂಗಾಳ| ಮತದಾರರ ಪಟ್ಟಿಯಿಂದ ಡಿಲೀಟ್‌ ಆದವರಿಗೆ ಪಡಿತರ ಪ್ರಯೋಜನಗಳಿಲ್ಲ

ಚುನಾವಣಾ ಆಯೋಗದ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಯಿಂದಾಗಿ ಪಶ್ಚಿಮ ಬಂಗಾಳದ ಚುನಾವಣಾ ಪ್ರಕ್ರಿಯೆಯಿಂದ ಹೊರಗುಳಿದವರಿಗೆ ಈಗ ಎರಡು ಹೊಡೆತ ಎದುರಾಗಿದೆ. ರಾಜ್ಯ ಸರ್ಕಾರವು ಈಗ ಅವರ ಪಡಿತರ ಚೀಟಿಗಳನ್ನು ಸಹ ನಿಷ್ಕ್ರಿಯಗೊಳಿಸಲು...

ಇಂಡಿಯಾ ಮೈತ್ರಿಕೂಟದ ಸಭೆ: ಎಸ್‌ಐಆರ್, ಬೆಲೆ ಏರಿಕೆ, ನಿರುದ್ಯೋಗದ ಕುರಿತು ಖರ್ಗೆ ಕಳವಳ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ರಾಜಕೀಯ, ಆರ್ಥಿಕ, ಸಾಮಾಜಿಕ ಮತ್ತು ವಿದೇಶಾಂಗ ನೀತಿ ರಂಗಗಳಲ್ಲಿ ಮೋದಿ ಸರ್ಕಾರದ ವೈಫಲ್ಯಗಳನ್ನು ಎದುರಿಸಲು ತನ್ನ ಒಗ್ಗಟ್ಟನ್ನು ಬಲಪಡಿಸಿಕೊಳ್ಳುವಂತೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸೋಮವಾರ (ಜೂ.8) ಇಂಡಿಯಾ ಮೈತ್ರಿಕೂಟಕ್ಕೆ ಕರೆ...

ಟೆಹ್ರಾನ್ ಮೇಲಿನ ದಾಳಿಗೆ ಪ್ರತೀಕಾರ: ಇಸ್ರೇಲ್ ಮೇಲೆ ಕ್ಷಿಪಣಿ ಹಾರಿಸಿದ ಇರಾನ್

ಟೆಹ್ರಾನ್, ತಬ್ರಿಜ್ ಮತ್ತು ಇಸ್ಫಹಾನ್‌ ಮೇಲಿನ ದಾಲಿಗಳಿಗೆ ಪ್ರತೀಕಾರವಾಗಿ, ಇರಾನ್ ಸೇನೆಯು ಇಸ್ರೇಲ್‌ ಮೇಲೆ ಎರಡನೇ ತರಂಗದ ಕ್ಷಿಪಣಿಗಳನ್ನು ಹಾರಿಸಿದೆ. ದೇಶಾದ್ಯಂತ ಸೈರನ್‌ಗಳು ಮೊಳಗುತ್ತಿವೆ ಎಂದು ಇಸ್ರೇಲ್ ಮಿಲಿಟರಿ ಹೇಳಿದೆ ಎಂದು ಅಂತರಾಷ್ಟ್ರೀಯ...

ಭಾರತದಲ್ಲಿ ಬೆಂಕಿ ದುರಂತ ‘ದಿನವೊಂದಕ್ಕೆ ಬಲಿಯಾಗುತ್ತಿವೆ 16 ಜೀವಗಳು’ NCRB ವರದಿ

ಇತ್ತೀಚೆಗೆ ದೆಹಲಿಯ ಮಾಳವೀಯ ನಗರದ ಹೋಟೆಲ್‌ ಒಂದರಲ್ಲಿ ನಡೆದ ಭೀಕರ ಬೆಂಕಿ ದುರಂತ (ಇದರಲ್ಲಿ 22 ಜನರು ಸಜೀವ ದಹನವಾಗಿದ್ದರು) ಇಡೀ ದೇಶವನ್ನೇ ನಡುಗಿಸಿದೆ. ಈ ದುರಂತದ ಬೆನ್ನಲ್ಲೇ ಕರ್ನಾಟಕದಲ್ಲೂ ವಾಣಿಜ್ಯ ಮತ್ತು...

ಈದ್ ಹಬ್ಬದ ವೇಳೆ ಮುಸ್ಲೀಮರನ್ನು ಗುರಿಯಾಗಿಸಿ 46 ದ್ವೇಷ ಅಪರಾಧಗಳು, ಮೂವರ ಹತ್ಯೆ: APCR ಆತಂಕಕಾರಿ ವರದಿ

ಇತ್ತೀಚಿನ ಬಕ್ರೀದ್ (ಈದ್ ಉಲ್-ಅಧಾ) ಹಬ್ಬದ ಆಚರಣೆಯ ಸಂದರ್ಭದಲ್ಲಿ ದೇಶದ ವಿವಿಧೆಡೆ ಅಲ್ಪಸಂಖ್ಯಾತರನ್ನು ಗುರಿಯಾಗಿಸಿಕೊಂಡು ನಡೆದ ಕೋಮು ಕಿರುಕುಳ, ದ್ವೇಷ ಭಾಷಣ ಹಾಗೂ ಹಿಂಸಾಚಾರದ ಘಟನೆಗಳ ಕುರಿತು 'ನಾಗರಿಕ ಹಕ್ಕುಗಳ ರಕ್ಷಣಾ ಸಂಘ'...