Homeಕರ್ನಾಟಕಎಲ್ಲಾ ಕೇಸುಗಳಿಂದ ದೋಷಮುಕ್ತರಾದ ಹೋರಾಟಗಾರ ನೂರ್‌ ಶ್ರೀಧರ್‌...

ಎಲ್ಲಾ ಕೇಸುಗಳಿಂದ ದೋಷಮುಕ್ತರಾದ ಹೋರಾಟಗಾರ ನೂರ್‌ ಶ್ರೀಧರ್‌…

- Advertisement -
- Advertisement -

ನಕ್ಸಲೀಯ ಚಳವಳಿಯಲ್ಲಿ ತೊಡಗಿಸಿಕೊಂಡಿದ್ದಕ್ಕಾಗಿ ಹಲವಾರು ಸುಳ್ಳುಕೇಸುಗಳಲ್ಲಿ ಸಿಕ್ಕಿಕೊಂಡು ಭೂಗತರಾಗಿದ್ದವರು ನೂರ್‌ ಶ್ರೀಧರ್‌. 2013-14ರ ಅವಧಿಯಲ್ಲಿ ದೊರೆಸ್ವಾಮಿ, ಗೌರಿಲಂಕೇಶ್‌ ಮತ್ತು ದಿವಗಂತ ಎ.ಕೆ ಸುಬ್ಬಯ್ಯನವರ ಪ್ರಯತ್ನದ ಫಲವಾಗಿ ಸರ್ಕಾರದ ಜೊತೆಗಿನ ಮಾತುಕತೆಯಂತೆ ಮುಖ್ಯವಾಹಿನಿಗೆ ಮರಳಿದ್ದ ನೂರ್ ಶ್ರೀಧರ್‌ ಮೇಲಿದ್ದ ಎಲ್ಲಾ ಕೇಸುಗಳು ಐದು ವರ್ಷಗಳ ನಂತರ ಖುಲಾಸೆಗೊಂಡಿದ್ದು ಅವರೀಗ ದೋಷಮುಕ್ತರಾಗಿದ್ದಾರೆ.

2014ರ ಡಿಸೆಂಬರ್ 08ರಂದು ತಮ್ಮ ಸಹ ಹೋರಾಟಗಾರ ಸಿರಿಮನೆ ನಾಗರಾಜುರವರೊಡನೆ ಮುಖ್ಯವಾಹಿನಿಗೆ ಮರಳಿದ್ದ ಅವರು ಒಂದು ತಿಂಗಳ ಕಾಲ ಜೈಲಿನಲ್ಲಿದ್ದು 2015ರ ಜನವರಿ 15 ರಂದು ಬಂಧಮುಕ್ತರಾಗಿದ್ದರು. ಅದಾದ ನಾಲ್ಕೂವರೆ ವರ್ಷಗಳ ನಂತರ ಇಂದು ದೋಷಮುಕ್ತರೆಂದು ಕೋರ್ಟ್‌ ಹೇಳಿದೆ. ನೂರ್‌ ಶ್ರೀಧರ್‌ರವರಿಗೆ ಸಾಮಾಜಿಕ ಮನ್ನಣೆ ಈಗಾಗಲೇ ಸಿಕ್ಕಿತ್ತು. ಇಂದಿನಿಂದ ಅವರಿಗೆ ಕಾನೂನಿನ ಮನ್ನಣೆಯು ಸಿಕ್ಕಿದೆ.

ಚಿಕ್ಕಮಗಳೂರು ಕೋರ್ಟ್‌‌ನಲ್ಲಿ ಅವರ ಮೇಲೆ ಇದ್ದ 02 ಕೇಸುಗಳು ಒಂದು ವರ್ಷದ ಹಿಂದೆಯೇ ಮುಗಿದಿದ್ದವು. ನಂತರ ಉಡುಪಿ ಕೋರ್ಟ್‌‌ನಲ್ಲಿದ್ದ 02 ಕೇಸುಗಳಲ್ಲಿ ಒಂದು ಆರು ತಿಂಗಳ ಹಿಂದೆ ಮುಗಿದಿದ್ದು ಈಗ ಕೊನೆಯ ಕೇಸ್‌ ಕೂಡ ಮುಗಿದಿದ್ದರಿಂದ ಅವರು ನಿರಾಳರಾಗಿದ್ದಾರೆ.

ಇವರು ಯಾವುದೇ ಅಪರಾಧಗಳಲ್ಲಿ ಪಾಲ್ಗೊಂಡಿಲ್ಲ, ಆ ರೀತಿಯ ಯಾವುದೇ ಸಾಕ್ಷಿಗಳ ಇಲ್ಲವೆಂದು ಕೋರ್ಟ್‌ ತೀರ್ಪು ನೀಡಿದೆ. ನೂರ್‌ ಶ್ರೀಧರ್‌ರವರೊಂದಿಗೆ ಆನಂತರ ಮುಖ್ಯವಾಹಿನಿಗೆ ಬಂದಿದ್ದ ಪದ್ಮನಾಭ್‌ 07 ಕೇಸುಗಳಲ್ಲಿ ಇದುವರೆಗೂ 05 ಕೇಸುಗಳಲ್ಲಿ ದೋಷಮುಕ್ತರಾಗಿದ್ದಾರೆ. ಇಂದು 03 ಪ್ರಕರಣಗಳಲ್ಲಿ ಅವರನ್ನು ದೋಷಮುಕ್ತರೆಂದು ಕೋರ್ಟ್‌ ಘೋಷಿಸಿದೆ.

ವಿದ್ಯಾರ್ಥಿ ದಿಸೆಯಿಂದಲೂ ಹೋರಾಟನಿರತರಾಗಿದ್ದ ನೂರ್‌ ಶ್ರೀಧರ್‌ರವರು, ಮುಖ್ಯವಾಹಿನಿಗೆ ಬಂದನಂತರ ಭೂಮಿ ವಸತಿ ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ, ದಿಡ್ಡಳ್ಳಿ ಆದಿವಾಸಿಗಳ ಹೋರಾಟಗಳಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಎಲ್ಲಾ ಜನಪರ ಚಳವಳಿಗಳ ಜೊತೆ ಸಾವಯವ ಸಂಬಂಧ ಹೊಂದಿದ್ದಾರೆ.

ನಕ್ಸಲೈಟ್‌ ಚಳವಳಿಯ ಮೂಲಕ ಭೂಗತರಾಗಿದ್ದ ಹೋರಾಟಗಾರನ ಮೇಲಿನ ಎಲ್ಲಾ ಕೇಸುಗಳು ಖುಲಾಸೆಯಾಗಿ ಬಂಧಮುಕ್ತರಾಗಿರುವ ಸಂದರ್ಭದಲ್ಲಿಯೇ ಮುಖ್ಯವಾಹಿನಿ ಚಳವಳಿಯಲ್ಲಿದ್ದ ದೊಡ್ಡಿಪಾಳ್ಯ ನರಸಿಂಹಮೂರ್ತಿಯವರನ್ನು ಹಳೆಯ ಸುಳ್ಳು ಕೇಸಿನಲ್ಲಿ ರಾಯಚೂರು ಪೊಲೀಸರು ಬಂಧಿಸಿರುವುದು ವಿಪರ್ಯಾಸವೇ ಸರಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ದೊಡ್ಡಿಪಾಳ್ಯ ನರಸಿಂಹಮೂರ್ತಿ ಯವರು ಆದಷ್ಟು ಬೇಗ ಬಿಡುಗಡೆ ಆಗಬೇಕು. ಈ ನಿಟ್ಟಿನಲ್ಲಿ ವಿಚಾರವಂತರು ಮತ್ತು ಸಾಮಾಜಿಕ ಹೋರಾಟಗಾರರು ನಿರಂತರ ಪ್ರಯತ್ನ ಮಾಡಬೇಕು.

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...