Homeಮುಖಪುಟವಕ್ಫ್ ತಿದ್ದುಪಡಿ ವಿಚಾರ | ಸ್ಪೀಕರ್‌ಗೆ ಪತ್ರ ಬರೆದ ವಿಪಕ್ಷಗಳ ಸಂಸದರು

ವಕ್ಫ್ ತಿದ್ದುಪಡಿ ವಿಚಾರ | ಸ್ಪೀಕರ್‌ಗೆ ಪತ್ರ ಬರೆದ ವಿಪಕ್ಷಗಳ ಸಂಸದರು

- Advertisement -
- Advertisement -

ವಕ್ಫ್ (ತಿದ್ದುಪಡಿ) ಮಸೂದೆಯನ್ನು ಪರಿಶೀಲಿಸುವ ಜಂಟಿ ಸಂಸದೀಯ ಸಮಿತಿ (ಜೆಪಿಸಿ)ಯಲ್ಲಿ ಪ್ರತಿಪಕ್ಷಗಳು ಮತ್ತು ಆಡಳಿತಾರೂಢ ಬಿಜೆಪಿ ನಡುವೆ ಮತ್ತೊಂದು ಜಟಾಪಟಿ ನಡೆದಿದೆ. ವಿರೋಧ ಪಕ್ಷದ ಸಂಸದರು ಲೋಕಸಭೆಯ ಸ್ಪೀಕರ್ ಓಂ ಬಿರ್ಲಾ ಅವರಿಗೆ ಪತ್ರ ಬರೆದಿದ್ದು, ಸಮಿತಿಯ ಮುಖ್ಯಸ್ಥರ ಏಕಪಕ್ಷೀಯ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಿದ್ದಾರೆ ಎಂದು ಆರೋಪಿಸಿದ್ದು, ಇದು ಹೀಗೆಯೆ ಮುಂದುವರೆದರೆ, ಸಮಿತಿಯಿಂದ ತಾವು ನಿರ್ಗಮಿಸುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ. ವಕ್ಫ್ ತಿದ್ದುಪಡಿ

ಸಂಸತ್ತಿನ ಮುಂಗಾರು ಅಧಿವೇಶನದಲ್ಲಿ ಸರ್ಕಾರವು ವಕ್ಫ್ ಮಸೂದೆಯನ್ನು ಮಂಡಿಸಿದ ನಂತರ ಲೋಕಸಭೆಯು ಜಗದಾಂಬಿಕಾ ಪಾಲ್ ನೇತೃತ್ವದ ಜಂಟಿ ಸಂಸದೀಯ ಸಮಿತಿಗೆ ವಕ್ಫ್ ಮಸೂದೆಯನ್ನು ಪರಿಶೀಲಿಸಲು ವಹಿಸಿತ್ತು. ಮಸೂದೆಯ ವಿರುದ್ಧ ವಿರೋಧ ಪಕ್ಷಗಳು ಮತ್ತು ಹಲವಾರು ಮುಸ್ಲಿಂ ಸಂಘಟನೆಗಳು ತೀವ್ರ ಪ್ರತಿಭಟನೆ ಸಲ್ಲಿಸಿವೆ. ಅದಾಗ್ಯೂ ಇತ್ತೀಚೆಗಷ್ಟೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಮುಂಬರುವ ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ವಕ್ಫ್ ಮಸೂದೆಯನ್ನು ಅಂಗೀಕರಿಸಲಾಗುವುದು ಎಂದು ಪ್ರತಿಪಾದಿಸಿದ್ದಾರೆ. ವಕ್ಫ್ ತಿದ್ದುಪಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ವಿಪಕ್ಷಗಳ ಸಂಸದರು ಲೋಕಸಭೆ ಸ್ಪೀಕರ್‌ಗೆ ಬರೆದಿರುವ ಪತ್ರದಲ್ಲಿ, ‘ಬಹುಮತ’ವನ್ನು ಪ್ರಜಾಸತ್ತಾತ್ಮಕವಾಗಿ ಬಳಸದೆ ಸಂಸತ್ತಿನ ಪ್ರಕ್ರಿಯೆಯನ್ನು ನಿರ್ಲಕ್ಷಿಸಿ ಕೇಂದ್ರ ಸರ್ಕಾರವು ಬಯಸಿದಂತೆ ಮಸೂದೆಯನ್ನು ಅಂಗೀಕರಿಸಲು ಜಂಟಿ ಸಂಸದೀಯ ಸಮಿತಿಯನ್ನು ಕೇವಲ ವೆಂಟಿಲೇಷನ್ ರೂಮ್‌ ಎಂಬಂತೆ ಪರಿಗಣಿಸಬಾರದು ಎಂದು ತಿಳಿಸಿದ್ದಾರೆ.

“ಸಮಿತಿಯ ಅಧ್ಯಕ್ಷರು ಸತತ ಮೂರು ದಿನಗಳ ಕಾಲ ಕೂಡಾ ಸಭೆಯ ದಿನಾಂಕಗಳನ್ನು ನಿಗದಿಪಡಿಸುವ ಬಗ್ಗೆ ಏಕಪಕ್ಷೀಯ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಿದ್ದಾರೆ. ಅಲ್ಲಿ ವ್ಯಕ್ತಿಗಳು/ಸಂಘಟನೆಗಳನ್ನು ಸಾಕ್ಷಿಗಳಾಗಿ ಕರೆಯುತ್ತಾರೆ. ಇದು ಸಂಸದರು ಸಂವಹನ ನಡೆಸಲು ಪ್ರಾಯೋಗಿಕವಾಗಿ ತಯಾರಿ ಮಾಡಲು ಸಾಧ್ಯವಿಲ್ಲ” ಎಂದು ಪತ್ರವು ಹೇಳಿದೆ.

“ಆದ್ದರಿಂದ, ಸದಸ್ಯರ ಇಚ್ಛೆಗೆ ವಿರುದ್ಧವಾಗಿ ಸಮಂಜಸವಾದ ಸಮಯ ವಿರಾಮವನ್ನು ನೀಡದೆ ಸಮಿತಿಯ ಕಲಾಪಗಳನ್ನು ಬುಡಮೇಲು ಮಾಡುವುದು ಸಾಂವಿಧಾನಿಕ ಧರ್ಮ ಮತ್ತು ಸಂಸತ್ತಿನ ಮೇಲಿನ ದೌರ್ಜನ್ಯದ ಕೃತ್ಯವಲ್ಲದೆ ಬೇರೇನೂ ಅಲ್ಲ ಎಂದು ನೋವಿನಿಂದ ನಿಮ್ಮ ಗಮನಕ್ಕೆ ತರುವುದು ನಮ್ಮ ಕರ್ತವ್ಯ” ಎಂದು ಪತ್ರವು ಹೇಳಿದೆ. ಯಾವುದೇ ನಿರ್ಧಾರಗಳನ್ನು ತೆಗೆದುಕೊಳ್ಳುವ ಮೊದಲು ಸಮಿತಿಯ ಸದಸ್ಯರೊಂದಿಗೆ ಔಪಚಾರಿಕ ಸಮಾಲೋಚನೆ ನಡೆಸುವಂತೆ ಸಮತಿಯ ಅಧ್ಯಕ್ಷರಿಗೆ ನಿರ್ದೇಶನ ನೀಡುವಂತೆ ಸದಸ್ಯರು ಸ್ಪೀಕರ್ ಅವರನ್ನು ಪತ್ರದಲ್ಲಿ ಒತ್ತಾಯಿಸಿದ್ದಾರೆ.

ಸಮಿತಿಯು ನವೆಂಬರ್ 5-6 ರಂದು ಎರಡು ದಿನಗಳ ಸಭೆ ನಡೆಸಲಿದ್ದು, ನವೆಂಬರ್ 9 ರಿಂದ ಐದು ರಾಜ್ಯಗಳ ಪ್ರವಾಸವನ್ನು ನಡೆಸಲಿದೆ. ಸಂಸತ್ತಿನ ಚಳಿಗಾಲದ ಅಧಿವೇಶನದ ಮೊದಲ ವಾರದಲ್ಲಿ ಸಮಿತಿಯು ವರದಿಯನ್ನು ಸಲ್ಲಿಸುವ ನಿರೀಕ್ಷೆಯಿದೆ.

ಇದನ್ನೂ ಓದಿ: ‘ಕೇವಲ ಹಿಂದಿ ಏಕೆ?’ | ಹಿಂದಿಯಲ್ಲಿ ಕಲಾಪ ನಡೆಸುವಂತೆ ಕೇಳಿದ್ದ ಅರ್ಜಿ ವಜಾ ಮಾಡಿದ ಸುಪ್ರೀಂಕೋರ್ಟ್!

‘ಕೇವಲ ಹಿಂದಿ ಏಕೆ?’ | ಹಿಂದಿಯಲ್ಲಿ ಕಲಾಪ ನಡೆಸುವಂತೆ ಕೇಳಿದ್ದ ಅರ್ಜಿ ವಜಾ ಮಾಡಿದ ಸುಪ್ರೀಂಕೋರ್ಟ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...

‘ಕಾನೂನು ಪ್ರಕ್ರಿಯೆಯದುರುಪಯೋಗ’: ನ್ಯೂಸ್‌ಕ್ಲಿಕ್ ವಿರುದ್ಧದ ದೆಹಲಿ ಪೊಲೀಸ್, ಇಡಿ ಪ್ರಕರಣಗಳನ್ನು ರದ್ದುಗೊಳಿಸಿದ ಹೈಕೋರ್ಟ್

ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಯಮಗಳ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಸಂಸ್ಥೆ ಮತ್ತು ಅದರ ಮುಖ್ಯ ಸಂಪಾದಕ ಪ್ರಬೀರ್ ಪುರಕಾಯಸ್ಥ ವಿರುದ್ಧ ದೆಹಲಿ ಪೊಲೀಸರು ಹಾಗೂ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣಗಳನ್ನು ದೆಹಲಿ...

ಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

ಕಾಂಗ್ರೆಸ್ ಪಕ್ಷದೊಂದಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿಲೀನವಾಗಬಹುದು ಎಂಬ ವರದಿಗಳನ್ನು ಟಿಎಂಸಿ ಉನ್ನತ ಮೂಲಗಳು ಬುಧವಾರ (ಇಂದು) ಸಂಪೂರ್ಣವಾಗಿ ತಳ್ಳಿಹಾಕಿವೆ. "ನಮ್ಮ ಪಕ್ಷಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಮತ್ತು ವಿಲೀನಕ್ಕೆ...

ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ : ಬಿಜೆಪಿಯ ಸೀಟ್ ಚೋರಿ?

ರಾಜ್ಯಸಭಾ ಚುನಾವಣೆಗೆ ಮಧ್ಯಪ್ರದೇಶದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿರುವುದು ದೇಶದಲ್ಲಿ ದೊಡ್ಡ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಕಾಂಗ್ರೆಸ್ ಈ ವಿಚಾರವನ್ನು ಬಹಳ ಗಂಭೀರವಾಗಿ ಪರಿಗಣಿಸಿ ಬುಧವಾರ (ಜೂ. 10)...

ಒಳಮೀಸಲಾತಿ ನಾಡು ಕಂಡ ಸುದೀರ್ಘ ಹೋರಾಟದ ಕಥೆ

ಇದು ಬೆವರು ನಿಟ್ಟುಸಿರುಗಳ ಚಳವಳಿ. ತಮ್ಮ ಅನ್ನದ ಬಟ್ಟಲಿಗಾಗಿ ದಶಕಗಳ ಕಾಲ ಹಸಿವು, ಬಾಯಾರಿಕೆ, ನಿದ್ರೆ ಎಲ್ಲವನ್ನೂ ಬಿಟ್ಟು ನಡೆಸಿದ ಅಭೂತಪೂರ್ವ ಚಳವಳಿ. ರಾಜಕೀಯ ಚಕ್ರವ್ಯೂಹಗಳನ್ನು ಬೇಧಿಸಿ, ಸಾಂವಿಧಾನಿಕ ಹಕ್ಕನ್ನು ತಮ್ಮದಾಗಿಸಿಕೊಂಡ ಚಳವಳಿ....

‘ಗೋಮಾಂಸ’ ತಂದ ನೆಪ: ಅಸ್ಸಾಂನಲ್ಲಿ ಐವರು ಮುಸ್ಲಿಂ ವಿದ್ಯಾರ್ಥಿಗಳ ವಿರುದ್ಧ ಕ್ರಮ; ಸುಳ್ಳು ಪ್ರಕರಣದಡಿ ಒಂಟಿ ತಾಯಿ ಮತ್ತು ಅಪ್ರಾಪ್ತ ಮಗನ ಬಂಧನ

ಧಾರ್ಮಿಕ ಭಾವನೆಗೆ ಧಕ್ಕೆ ಎಂಬ ಹೆಸರಿನಲ್ಲಿ ಶಾಲಾ ಆವರಣಗಳೂ ಸಹ ಕೋಮು ರಾಜಕಾರಣದ ಪ್ರಯೋಗಶಾಲೆಗಳಾಗುತ್ತಿರುವುದಕ್ಕೆ ಅಸ್ಸಾಂನಿಂದ ಮತ್ತೊಂದು ಆಘಾತಕಾರಿ ಘಟನೆ ವರದಿಯಾಗಿದೆ. ಅಸ್ಸಾಂನ ಗೋಲ್‌ಪಾರ ಜಿಲ್ಲೆಯ ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆಯೊಂದರಲ್ಲಿ ಮುಸ್ಲಿಂ...

ಪ್ರಧಾನಿ ನರೇಂದ್ರ ಮೋದಿಯ 12 ವರ್ಷದ ಸಾಧನೆ ಏನು? ಅವರು ಮುರಿದ ದಾಖಲೆಯಾದರೂ ಯಾವುದು?

ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು 2014ರಿಂದ ಸತತ 12ವರ್ಷಗಳು (4,399 ದಿನಗಳು) ಪ್ರಧಾನಿ ಹುದ್ದೆ ಅಲಂಕರಿಸುವ ಮೂಲಕ ದಾಖಲೆ ನಿರ್ಮಿಸಿದ್ದಾರೆ. ಮೋದಿ ನೇತೃತ್ವದ ಸರ್ಕಾರಕ್ಕೆ 12 ವರ್ಷ ತುಂಬಿದ ಹಿನ್ನೆಲೆ ಬಿಜೆಪಿ...