Homeಮುಖಪುಟಯಾರನ್ನೂ ಬೆಂಬಲಿಸುವುದಿಲ್ಲ | ಮರಾಠ ಮೀಸಲಾತಿ ಹೋರಾಟಗಾರ ಜಾರಂಗೆ ಯೂ ಟರ್ನ್!

ಯಾರನ್ನೂ ಬೆಂಬಲಿಸುವುದಿಲ್ಲ | ಮರಾಠ ಮೀಸಲಾತಿ ಹೋರಾಟಗಾರ ಜಾರಂಗೆ ಯೂ ಟರ್ನ್!

- Advertisement -
- Advertisement -

ಮುಂಬರುವ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಯಾವುದೇ ಅಭ್ಯರ್ಥಿಗಳು ಅಥವಾ ರಾಜಕೀಯ ಪಕ್ಷಗಳನ್ನು ಬೆಂಬಲಿಸುವುದಿಲ್ಲ ಎಂದು ಮರಾಠ ಮೀಸಲಾತಿ ಹೋರಾಟಗಾರ ಮನೋಜ್ ಜಾರಂಗೆ ಸೋಮವಾರ ಘೋಷಿಸಿದ್ದಾರೆ. ನಾಮಪತ್ರ ಸಲ್ಲಿಸಿರುವ ತಮ್ಮ ಬೆಂಬಲಿಗರು ತಮ್ಮ ಉಮೇದುವಾರಿಕೆಯನ್ನು ಹಿಂಪಡೆಯುವಂತೆ ಅವರು ಒತ್ತಾಯಿಸಿದ್ದಾರೆ.

ನಾಮಪತ್ರ ಹಿಂಪಡೆಯಲು ಸೋಮವಾರ ಕೊನೆಯ ದಿನವಾಗಿದೆ. ನವೆಂಬರ್ 20 ರಂದು ರಾಜ್ಯ ವಿಧಾನಸಭಾ ಚುನಾವಣೆ ನಡೆಯಲಿದ್ದು, ನವೆಂಬರ್ 23 ರಂದು ಮತ ಎಣಿಕೆ ನಡೆಯಲಿದೆ. ಸೋಮವಾರ ಜಾರಂಗೆ ಅವರು ಈ ಘೋಷಣೆ ಮಾಡಿದ್ದರಾದರೂ, ಈ ಹಿಂದೆ ಕೆಲವು ಕ್ಷೇತ್ರಗಳು ಮತ್ತು ಅಭ್ಯರ್ಥಿಗಳ ಪರವಾಗಿ ಬೆಂಬಲ ಸೂಚಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಸೋಮವಾರ ಬೆಳಗ್ಗೆ ಅಂತರವಾಳಿ ಸಾರಥಿ ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಜಾರಂಗೆ, ‘‘ಬಹಳ ಸಮಾಲೋಚನೆಯ ನಂತರ ರಾಜ್ಯದಲ್ಲಿ ಯಾವುದೇ ಅಭ್ಯರ್ಥಿಯನ್ನು ಕಣಕ್ಕಿಳಿಸದಿರಲು ನಿರ್ಧರಿಸಿದ್ದೇನೆ. ಯಾರನ್ನು ಸೋಲಿಸಬೇಕು, ಯಾರನ್ನು ಆರಿಸಬೇಕು ಎಂಬುದನ್ನು ಮರಾಠ ಸಮುದಾಯವು ತಾನೇ ನಿರ್ಧರಿಸುತ್ತದೆ. ನಾನು ಯಾವುದೇ ಅಭ್ಯರ್ಥಿ ಅಥವಾ ರಾಜಕೀಯ ಪಕ್ಷದೊಂದಿಗೆ ಯಾವುದೇ ಸಂಬಂಧ ಅಥವಾ ಬೆಂಬಲವನ್ನು ಹೊಂದಿಲ್ಲ” ಎಂದು ಹೇಳಿದ್ದಾರೆ.

ಇದೇ ಅವರು ಆಡಳಿತಾರೂಢ ಮಹಾಯುತಿ ಒಕ್ಕೂಟ ಅಥವಾ ವಿರೋಧ ಪಕ್ಷವಾದ ಮಹಾ ವಿಕಾಸ್ ಅಘಾಡಿ (ಎಂವಿಎ) ಯಿಂದ ಯಾವುದೇ ಒತ್ತಡಕ್ಕೆ ಒಳಗಾಗಿಲ್ಲ ಎಂದು ಒತ್ತಿ ಹೇಳಿದ್ದಾರೆ.

“ನಾನು ಯಾರ ಒತ್ತಡಕ್ಕೂ ಒಳಗಾಗಿಲ್ಲ. ಮರಾಠಾ ಮೀಸಲಾತಿ ಹೋರಾಟಕ್ಕಾಗಿ ಅವರ ಬದ್ಧತೆಯ ಆಧಾರದ ಮೇಲೆ ಯಾರನ್ನು ಬೆಂಬಲಿಸಬೇಕೆಂದು ಸಮುದಾಯವೇ ನಿರ್ಧರಿಸುತ್ತದೆ” ಎಂದು ಅವರು ಹೇಳಿದ್ದಾರೆ. ಮರಾಠಾ ಹಿತಾಸಕ್ತಿಗಳಿಗೆ ತಮ್ಮ ಬೆಂಬಲದ ಬಗ್ಗೆ ಅಭ್ಯರ್ಥಿಗಳಿಂದ ಲಿಖಿತ ಅಥವಾ ವೀಡಿಯೊ ಮೂಲಕ ಭರವಸೆಗಳನ್ನು ಪಡೆಯುವಂತೆ ಅವರು ಮತದಾರರನ್ನು ಕೇಳಿದ್ದಾರೆ.

“ಮರಾಠರ ಬೆಂಬಲವಿಲ್ಲದೆ ಈ ರಾಜ್ಯದಲ್ಲಿ ಯಾರೂ ಆಯ್ಕೆಯಾಗಲು ಸಾಧ್ಯವಿಲ್ಲ” ಎಂದು ಹೇಳಿರುವ ಅವರು, ಮರಾಠಾ ಸಮುದಾಯದ ಸದಸ್ಯರು ರಾಜಕೀಯ ರ್ಯಾಲಿಗಳಲ್ಲಿ ಪಾಲ್ಗೊಳ್ಳುವುದನ್ನು ತಪ್ಪಿಸಬೇಕು ಮತ್ತು ಯಾವುದೇ ಪಕ್ಷಗಳಿಗೆ ಮಣಿಯಬಾರದು ಎಂದು ಅವರು ಹೇಳಿದ್ದಾರೆ. ಮರಾಠಾ ಸಮುದಾಯಕ್ಕೆ ಅನ್ಯಾಯ ಮಾಡಿದವರಿಗೆ ಅಥವಾ ಕಿರುಕುಳ ನೀಡಿದವರಿಗೆ ಮತದಾನದ ಮೂಲಕ ತಕ್ಕ ಪಾಠ ಕಲಿಸಬೇಕು ಎಂದು ಅವರು ಕರೆ ನೀಡಿದ್ದಾರೆ.

ಇತರ ಹಿಂದುಳಿದ ವರ್ಗಗಳ (ಒಬಿಸಿ) ವರ್ಗದ ಅಡಿಯಲ್ಲಿ ಮರಾಠ ಸಮುದಾಯಕ್ಕೆ ಮೀಸಲಾತಿಯನ್ನು ಪಡೆಯುವ ತನ್ನ ಬದ್ಧತೆಯನ್ನು ಜಾರಂಗೆ ಪುನರುಚ್ಚರಿಸಿದ್ದಾರೆ. ಮೀಸಲಾತಿಗಾಗಿ ತಮ್ಮ ಹೋರಾಟ ಮುಂದುವರಿಯುತ್ತದೆ ಎಂದು ಅವರು ಹೇಳಿದ್ದಾರೆ. ಅವರು ಒಂದು ದಿನದ ಹಿಂದೆಯಷ್ಟೆ, ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಪರ್ವತಿ ಮತ್ತು ದೌಂಡ್‌ ಕ್ಷೇತ್ರದ ಇಬ್ಬರು ಅಭ್ಯರ್ಥಿಗಳನ್ನು ಬೆಂಬಲಿಸುವ ಬಗ್ಗೆ ಘೋಷಿಸಿದ್ದರು, ಆದರೆ ಅವರು ಅವರ ಹೆಸರನ್ನು ಬಹಿರಂಗಪಡಿಸಿರಲಿಲ್ಲ.

ಪ್ರಸ್ತುತ ಈ ಎರಡು ಕ್ಷೇತ್ರಗಳು ಬಿಜೆಪಿ ವಶದಲ್ಲಿದ್ದು, ಮರಾಠಾ ಮೀಸಲಾತಿಯನ್ನು ಅವರು ವಿರೋಧಿಸುತ್ತಿದ್ದಾರೆ ಎಂದು ಜಾರಂಗೇ ಆಗಾಗ್ಗೆ ಆರೋಪಿಸುತ್ತಿದ್ದಾರೆ. ಈ ಹಿಂದೆ, ಅವರು ಫೂಲಂಬ್ರಿ, ಕನ್ನಡ (ಛತ್ರಪತಿ ಸಂಭಾಜಿನಗರ), ಹಿಂಗೋಲಿ, ಪಠಾರಿ (ಪರ್ಭಾನಿ), ಮತ್ತು ಹಡಗಾಂವ್ (ನಾಂದೇಡ್‌) ಅಭ್ಯರ್ಥಿಗಳನ್ನು ಬೆಂಬಲಿಸುವುದಾಗಿ ಸೂಚಿಸಿದ್ದರು.

ಅಲ್ಲದೆ, ಭೋಕರ್ದನ್ (ಜಲ್ನಾ), ಗಂಗಾಪುರ (ಛತ್ರಪತಿ ಸಂಭಾಜಿನಗರ), ಕಲಂನೂರಿ (ಹಿಂಗೋಲಿ), ಗಂಗಾಖೇಡ್, ಜಿಂಟೂರ್ (ಪರ್ಭಾನಿ), ಮತ್ತು ಔಸಾ (ಲಾತೂರ್) ನ ಮಹಾಯುತಿ ಸರ್ಕಾರದ ಹಾಲಿ ಶಾಸಕರನ್ನು ಸೋಲಿಸುವ ಬಗ್ಗೆ ಅವರು ಉಲ್ಲೇಖಿಸಿದ್ದರು. ಮರಾಠ ಮೀಸಲಾತಿ

ಇದನ್ನೂ ಓದಿ: ‘ಕೇವಲ ಹಿಂದಿ ಏಕೆ?’ | ಹಿಂದಿಯಲ್ಲಿ ಕಲಾಪ ನಡೆಸುವಂತೆ ಕೇಳಿದ್ದ ಅರ್ಜಿ ವಜಾ ಮಾಡಿದ ಸುಪ್ರೀಂಕೋರ್ಟ್!

‘ಕೇವಲ ಹಿಂದಿ ಏಕೆ?’ | ಹಿಂದಿಯಲ್ಲಿ ಕಲಾಪ ನಡೆಸುವಂತೆ ಕೇಳಿದ್ದ ಅರ್ಜಿ ವಜಾ ಮಾಡಿದ ಸುಪ್ರೀಂಕೋರ್ಟ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...

ಪ್ರತಿಭಟನೆಯನ್ನು ಹತ್ತಿಕ್ಕಲು ಅಕ್ಕಾಡಕ್ಕಿಳಿದಿವೆ ಹಿಂದುತ್ವವಾದಿ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ಸ್‌ ಮತ್ತು ಉಗ್ರ ಗೂಂಡಾ ಪಡೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಜೂನ್ 20ರಂದು ಶುರುವಾಗಿದ್ದ ಈ ಆಂದೋಲನ ಇದೀಗ ದೇಶಾದ್ಯಂತ ತೀವ್ರ ಸ್ವರೂಪ ಪಡೆದುಕೊಂಡಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಸಿಜೆಪಿ ಪಟ್ಟು ಹಿಡಿದಿದ್ದು, ಇಂದು...

ಜಿರಳೆಗಳನ್ನು ಸಾಯಿಸಿ ಎಂದು ವಿವಾದಾತ್ಮಕ ಪೋಸ್ಟ್‌ ಹಾಕಿದ ಪ್ರಜ್ಞಾ ಸಿಂಗ್ ಠಾಕೂರ್

ಮಾಜಿ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರು ದೇಶದಿಂದ ಜಿರಳೆಗಳನ್ನು ಶಾಶ್ವತವಾಗಿ ನಿರ್ಮೂಲನೆ ಮಾಡಲು ವ್ಯವಸ್ಥೆ ಮಾಡುವಂತೆ ದೇಶದ ನಾಯಕರಿಗೆ ಮನವಿ ಮಾಡಿದ್ದಾರೆ. X (ಟ್ವಿಟರ್) ನಲ್ಲಿ ಮಾಡಿದ ಪೋಸ್ಟ್‌ನಲ್ಲಿ, 2008 ರ...

ಸೋನಮ್ ವಾಂಗ್ಚುಕ್ ಮತ್ತು ಸರ್ಕಾರದ ಡೀಲ್‌ನಲ್ಲಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಅಂಶವೇ ಇಲ್ಲ

ಕೇಂದ್ರದ ಮೋದಿ ಸರ್ಕಾರ ತನ್ನ ಮೂರು ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಒಪ್ಪಿಕೊಂಡ ನಂತರ, ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಜುಲೈ 23ರ ಗುರುವಾರ ತಮ್ಮ 26 ದಿನಗಳ ಸುದೀರ್ಘ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದ್ದಾರೆ....

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...