Homeಮುಖಪುಟಯುಎಸ್ ಅಧ್ಯಕ್ಷೀಯ ಚುನಾವಣೆ | ಇಂದು ಮತದಾನ : ಟ್ರಂಪ್, ಹ್ಯಾರಿಸ್ ನಡುವೆ ಜಿದ್ದಾಜಿದ್ದಿನ ಸ್ಪರ್ಧೆ

ಯುಎಸ್ ಅಧ್ಯಕ್ಷೀಯ ಚುನಾವಣೆ | ಇಂದು ಮತದಾನ : ಟ್ರಂಪ್, ಹ್ಯಾರಿಸ್ ನಡುವೆ ಜಿದ್ದಾಜಿದ್ದಿನ ಸ್ಪರ್ಧೆ

- Advertisement -
- Advertisement -

ತಿಂಗಳುಗಳ ಕಾಲ ನಡೆದ ವಾಗ್ವಾದ, ಆರೋಪ-ಪ್ರತ್ಯಾರೋಪ, ಆಮಿಷ, ಓಲೈಕೆ ಡೊನಾಲ್ಡ್ ಟ್ರಂಪ್ ಅವರ ಎರಡು ಹತ್ಯೆ ಪ್ರಯತ್ನಗಳ ಬಳಿಕ ಅಂತಿಮವಾಗಿ ಇಂದು (ನ.5) ಯುಎಸ್ ಅಧ್ಯಕ್ಷ ಸ್ಥಾನದ ಚುನಾವಣೆಯ ಮತದಾನ ನಡೆಯಲಿದೆ.

ರಿಪಬ್ಲಿಕನ್ ಪಕ್ಷದಿಂದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಡೆಮಾಕ್ರಟಿಕ್ ಪಕ್ಷದಿಂದ ಹಾಲಿ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದಾರೆ. ಇಬ್ಬರ ನಡುವೆ ಜಿದ್ದಾಜಿದ್ದಿನ ಸ್ಪರ್ಧೆ ಏರ್ಪಟ್ಟಿದೆ.

ವರದಿಗಳ ಪ್ರಕಾರ, ಈಗಾಗಲೇ 7.8 ಕೋಟಿಗೂ ಅಧಿಕ ಮತದಾರರು ಮೇಲ್‌-ಇನ್ ಮೂಲಕ ತಮ್ಮ ಹಕ್ಕು ಚಲಾಯಿಸಿದ್ದಾರೆ ಎಂದು ಯೂನಿವರ್ಸಿಟಿ ಆಫ್ ಫ್ಲೋರಿಡಾ ಎಲೆಕ್ಷನ್ ಲ್ಯಾಬ್ ತಿಳಿಸಿದೆ.

ಇಂದು ಮತದಾನವಾದರೂ, ಸಂಪೂರ್ಣ ಯುಎಸ್‌ನವರಿಗೆ ಒಂದೇ ಸಮಯಕ್ಕೆ ಬೆಳಗಾಗುವುದಿಲ್ಲ. ಆದ್ದರಿಂದ ಎಲ್ಲರಿಗೂ ಒಂದೇ ಸಮಯಕ್ಕೆ ಮತದಾನ ಕೇಂದ್ರಗಳಿಗೆ ಹೋಗಲು ಆಗುವುದಿಲ್ಲ. ಯುಎಸ್‌ನ ಭೂಭಾಗವು ಆರು ಸಮಯ ವಲಯಗಳನ್ನು ಹೊಂದಿದೆ. ಆದ್ದರಿಂದ, ಭಾರತೀಯ ಕಾಲಮಾನ (ಐಎಸ್‌ಟಿ) ಪರಿಗಣಿಸಿದಾಗ ವಿವಿಧ ಸಮಯಗಳಲ್ಲಿ ಮತಗಟ್ಟೆಗಳು ತೆರೆಯಲ್ಪಡುತ್ತವೆ.

ಯುಎಸ್‌ನಾದ್ಯಂತ ಮತಗಟ್ಟೆಗಳು ಬೆಳಿಗ್ಗೆ 7 ರಿಂದ 11 ರವರೆಗೆ (ಸ್ಥಳೀಯ ಕಾಲಮಾನ) ತೆರೆಯುವ ನಿರೀಕ್ಷೆಯಿದೆ. ಇದನ್ನು ಭಾರತೀಯ ಕಾಲಮಾನಕ್ಕೆ ಹೋಲಿಸಿದರೆ, ಇಂದು ಸಂಜೆ 3.30ರಿಂದ ರಾತ್ರಿ 8.30ರ ನಡುವೆ ಮತಗಟ್ಟೆಗಳು ತೆರೆಯಬಹುದು. ಯುಎಸ್‌ ಸ್ಥಳೀಯ ಕಾಲಮಾನದ ಪ್ರಕಾರ, ಇಂದು ಸಂಜೆ 5.30ರವರೆಗೆ ಮತದಾನ ಪ್ರಕ್ರಿಯೆ ನಡೆಯಲಿದೆ. ಅಲ್ಲಿ ಮತದಾನ ಕೊನೆಗೊಳ್ಳುವ ಹೊತ್ತಿಗೆ, ಭಾರತದಲ್ಲಿ ನಾಳೆ (ನ.6, ಬುಧವಾರ) ಬೆಳಿಗ್ಗೆ 5.30 ಆಗಬಹುದು.

ಯುಎಸ್‌ನಲ್ಲಿ ಮತದಾನ ಪ್ರಕ್ರಿಯೆ ಕೊನೆಗೊಂಡ ನಂತರ ಎಣಿಕೆ ಆರಂಭವಾಗುವ ನಿರೀಕ್ಷೆ ಇದೆ. ಭಾರತೀಯ ಕಾಲಮಾನ ಪ್ರಕಾರ, ನಾಳೆ (ಬುಧವಾರ) ಮತ ಎಣಿಕೆ ಪ್ರಾರಂಭಗೊಳ್ಳಲಿದೆ. ಯುಎಸ್‌ನ ಪಶ್ಚಿಮ ಭಾಗಗಳಲ್ಲಿ ಮತದಾನ ನಡೆಯುತ್ತಿರುವಾಗಲೂ, ಪೂರ್ವ ಕರಾವಳಿ ಪ್ರದೇಶಗಳಲ್ಲಿ ಮತ ಎಣಿಕೆ ಶುರುವಾಗುವ ಸಾಧ್ಯತೆಯಿದೆ.

ಮತದಾನ ಕೊನೆಗೊಂಡ ಬಳಿಕ ಎಣಿಕೆ ಪ್ರಾರಂಭವಾದರೆ ಆರಂಭಿಕ ಟ್ರೆಂಡ್ ಮಾಹಿತಿ ನಮಗೆ ಲಭ್ಯವಾಗಬಹುದು. ಆದರೆ, ಅಂತಿಮ ಫಲಿತಾಂಶಕ್ಕೆ ಕೆಲ ದಿನಗಳು ಕಾಯಬೇಕಿದೆ. ಏಕೆಂದರೆ ವಿವಿಧ ಯುಎಸ್‌ ರಾಜ್ಯಗಳು ಮತಗಳ ಎಣಿಕೆಯ ವಿಭಿನ್ನ ವಿಧಾನಗಳನ್ನು ಹೊಂದಿವೆ. ನಂತರ ಮೇಲ್-ಇನ್ ಮತಪತ್ರಗಳ ಸಮಸ್ಯೆಯೂ ಇದೆ. ಅತಿ ಕಡಿಮೆ ಗೆಲುವಿನ ಅಂತರಗಳಿದ್ದಲ್ಲಿ, ಮತಗಟ್ಟೆ ಅಧಿಕಾರಿಗಳು ಮರು ಎಣಿಕೆ ಮಾಡಲು ನಿರ್ಧರಿಸಬಹುದು. ಮುಖ್ಯವಾಗಿ, ಫಲಿತಾಂಶಗಳಿಗೆ ಕಾನೂನು ಸವಾಲುಗಳು ಇರಬಹುದು. ಇದು ಚುನಾವಣಾ ಫಲಿತಾಂಶದ ಅಂತಿಮ ಘೋಷಣೆಯನ್ನು ಇನ್ನಷ್ಟು ವಿಳಂಬಗೊಳಿಸಬಹುದು.

ಫಲಿತಾಂಶಗಳು ತನಗೆ ವಿರುದ್ಧವಾಗಿ ಬಂದರೆ ಏನು ಮಾಡುತ್ತೇನೆ ಎಂದು ಹೇಳಲು ಮಾಜಿ ಅಧ್ಯಕ್ಷ ಟ್ರಂಪ್ ನಿರಾಕರಿಸಿದ್ದಾರೆ. ಆದರೆ, 2020 ರ ಚುನಾವಣೆಯಲ್ಲಿ ಹಾಲಿ ಅಧ್ಯಕ್ಷ ಜೋ ಬೈಡೆನ್‌ ವಿರುದ್ದ ಸೋತ ಬಳಿಕ ಟ್ರಂಪ್ ಸೃಷ್ಟಿಸಿದ ಪರಿಸ್ಥಿತಿ ಜಗತ್ತಿಗೆ ಗೊತ್ತಿದೆ.

ಯುಎಸ್‌ನಲ್ಲಿ ಮತದಾರರು ನೇರವಾಗಿ ಅಧ್ಯಕ್ಷರನ್ನು ಆಯ್ಕೆ ಮಾಡುವುದಿಲ್ಲ. ಜನರು ರಾಜ್ಯಗಳಿಂದ ತಮ್ಮ ಪ್ರತಿನಿಧಿಗಳನ್ನು ಆಯ್ಕೆ ಮಾಡುತ್ತಾರೆ. ನಂತರ ಅವರು ಅಧ್ಯಕ್ಷೀಯ ಅಭ್ಯರ್ಥಿಗೆ ಮತ ಹಾಕುತ್ತಾರೆ.

ಎಲ್ಲವೂ ವೇಳಾಪಟ್ಟಿಯ ಪ್ರಕಾರ ನಡೆದರೆ, ಹೊಸ ಯುಎಸ್ ಅಧ್ಯಕ್ಷರು ಮತ್ತು ಉಪಾಧ್ಯಕ್ಷರು ಜನವರಿ 20, 2025 ರಂದು ದೇಶದ ಅಧಿಕಾರವನ್ನು ವಹಿಸಿಕೊಳ್ಳಲಿದ್ದಾರೆ.

ಇದನ್ನೂ ಓದಿ : ಕೆನಡಾ ಹಿಂದೂ ದೇವಾಲಯದ ಭಕ್ತರ ಮೇಲೆ ದಾಳಿ ಆರೋಪ : ಪ್ರಧಾನಿ ಟ್ರುಡೊ ಖಂಡನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...

‘ಕಾನೂನು ಪ್ರಕ್ರಿಯೆಯದುರುಪಯೋಗ’: ನ್ಯೂಸ್‌ಕ್ಲಿಕ್ ವಿರುದ್ಧದ ದೆಹಲಿ ಪೊಲೀಸ್, ಇಡಿ ಪ್ರಕರಣಗಳನ್ನು ರದ್ದುಗೊಳಿಸಿದ ಹೈಕೋರ್ಟ್

ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಯಮಗಳ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಸಂಸ್ಥೆ ಮತ್ತು ಅದರ ಮುಖ್ಯ ಸಂಪಾದಕ ಪ್ರಬೀರ್ ಪುರಕಾಯಸ್ಥ ವಿರುದ್ಧ ದೆಹಲಿ ಪೊಲೀಸರು ಹಾಗೂ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣಗಳನ್ನು ದೆಹಲಿ...

ಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

ಕಾಂಗ್ರೆಸ್ ಪಕ್ಷದೊಂದಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿಲೀನವಾಗಬಹುದು ಎಂಬ ವರದಿಗಳನ್ನು ಟಿಎಂಸಿ ಉನ್ನತ ಮೂಲಗಳು ಬುಧವಾರ (ಇಂದು) ಸಂಪೂರ್ಣವಾಗಿ ತಳ್ಳಿಹಾಕಿವೆ. "ನಮ್ಮ ಪಕ್ಷಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಮತ್ತು ವಿಲೀನಕ್ಕೆ...

ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ : ಬಿಜೆಪಿಯ ಸೀಟ್ ಚೋರಿ?

ರಾಜ್ಯಸಭಾ ಚುನಾವಣೆಗೆ ಮಧ್ಯಪ್ರದೇಶದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿರುವುದು ದೇಶದಲ್ಲಿ ದೊಡ್ಡ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಕಾಂಗ್ರೆಸ್ ಈ ವಿಚಾರವನ್ನು ಬಹಳ ಗಂಭೀರವಾಗಿ ಪರಿಗಣಿಸಿ ಬುಧವಾರ (ಜೂ. 10)...

ಒಳಮೀಸಲಾತಿ ನಾಡು ಕಂಡ ಸುದೀರ್ಘ ಹೋರಾಟದ ಕಥೆ

ಇದು ಬೆವರು ನಿಟ್ಟುಸಿರುಗಳ ಚಳವಳಿ. ತಮ್ಮ ಅನ್ನದ ಬಟ್ಟಲಿಗಾಗಿ ದಶಕಗಳ ಕಾಲ ಹಸಿವು, ಬಾಯಾರಿಕೆ, ನಿದ್ರೆ ಎಲ್ಲವನ್ನೂ ಬಿಟ್ಟು ನಡೆಸಿದ ಅಭೂತಪೂರ್ವ ಚಳವಳಿ. ರಾಜಕೀಯ ಚಕ್ರವ್ಯೂಹಗಳನ್ನು ಬೇಧಿಸಿ, ಸಾಂವಿಧಾನಿಕ ಹಕ್ಕನ್ನು ತಮ್ಮದಾಗಿಸಿಕೊಂಡ ಚಳವಳಿ....

‘ಗೋಮಾಂಸ’ ತಂದ ನೆಪ: ಅಸ್ಸಾಂನಲ್ಲಿ ಐವರು ಮುಸ್ಲಿಂ ವಿದ್ಯಾರ್ಥಿಗಳ ವಿರುದ್ಧ ಕ್ರಮ; ಸುಳ್ಳು ಪ್ರಕರಣದಡಿ ಒಂಟಿ ತಾಯಿ ಮತ್ತು ಅಪ್ರಾಪ್ತ ಮಗನ ಬಂಧನ

ಧಾರ್ಮಿಕ ಭಾವನೆಗೆ ಧಕ್ಕೆ ಎಂಬ ಹೆಸರಿನಲ್ಲಿ ಶಾಲಾ ಆವರಣಗಳೂ ಸಹ ಕೋಮು ರಾಜಕಾರಣದ ಪ್ರಯೋಗಶಾಲೆಗಳಾಗುತ್ತಿರುವುದಕ್ಕೆ ಅಸ್ಸಾಂನಿಂದ ಮತ್ತೊಂದು ಆಘಾತಕಾರಿ ಘಟನೆ ವರದಿಯಾಗಿದೆ. ಅಸ್ಸಾಂನ ಗೋಲ್‌ಪಾರ ಜಿಲ್ಲೆಯ ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆಯೊಂದರಲ್ಲಿ ಮುಸ್ಲಿಂ...

ಪ್ರಧಾನಿ ನರೇಂದ್ರ ಮೋದಿಯ 12 ವರ್ಷದ ಸಾಧನೆ ಏನು? ಅವರು ಮುರಿದ ದಾಖಲೆಯಾದರೂ ಯಾವುದು?

ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು 2014ರಿಂದ ಸತತ 12ವರ್ಷಗಳು (4,399 ದಿನಗಳು) ಪ್ರಧಾನಿ ಹುದ್ದೆ ಅಲಂಕರಿಸುವ ಮೂಲಕ ದಾಖಲೆ ನಿರ್ಮಿಸಿದ್ದಾರೆ. ಮೋದಿ ನೇತೃತ್ವದ ಸರ್ಕಾರಕ್ಕೆ 12 ವರ್ಷ ತುಂಬಿದ ಹಿನ್ನೆಲೆ ಬಿಜೆಪಿ...