Homeಮುಖಪುಟಯುಎಸ್ ಅಧ್ಯಕ್ಷೀಯ ಚುನಾವಣೆ | ಇಂದು ಮತದಾನ : ಟ್ರಂಪ್, ಹ್ಯಾರಿಸ್ ನಡುವೆ ಜಿದ್ದಾಜಿದ್ದಿನ ಸ್ಪರ್ಧೆ

ಯುಎಸ್ ಅಧ್ಯಕ್ಷೀಯ ಚುನಾವಣೆ | ಇಂದು ಮತದಾನ : ಟ್ರಂಪ್, ಹ್ಯಾರಿಸ್ ನಡುವೆ ಜಿದ್ದಾಜಿದ್ದಿನ ಸ್ಪರ್ಧೆ

- Advertisement -
- Advertisement -

ತಿಂಗಳುಗಳ ಕಾಲ ನಡೆದ ವಾಗ್ವಾದ, ಆರೋಪ-ಪ್ರತ್ಯಾರೋಪ, ಆಮಿಷ, ಓಲೈಕೆ ಡೊನಾಲ್ಡ್ ಟ್ರಂಪ್ ಅವರ ಎರಡು ಹತ್ಯೆ ಪ್ರಯತ್ನಗಳ ಬಳಿಕ ಅಂತಿಮವಾಗಿ ಇಂದು (ನ.5) ಯುಎಸ್ ಅಧ್ಯಕ್ಷ ಸ್ಥಾನದ ಚುನಾವಣೆಯ ಮತದಾನ ನಡೆಯಲಿದೆ.

ರಿಪಬ್ಲಿಕನ್ ಪಕ್ಷದಿಂದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಡೆಮಾಕ್ರಟಿಕ್ ಪಕ್ಷದಿಂದ ಹಾಲಿ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದಾರೆ. ಇಬ್ಬರ ನಡುವೆ ಜಿದ್ದಾಜಿದ್ದಿನ ಸ್ಪರ್ಧೆ ಏರ್ಪಟ್ಟಿದೆ.

ವರದಿಗಳ ಪ್ರಕಾರ, ಈಗಾಗಲೇ 7.8 ಕೋಟಿಗೂ ಅಧಿಕ ಮತದಾರರು ಮೇಲ್‌-ಇನ್ ಮೂಲಕ ತಮ್ಮ ಹಕ್ಕು ಚಲಾಯಿಸಿದ್ದಾರೆ ಎಂದು ಯೂನಿವರ್ಸಿಟಿ ಆಫ್ ಫ್ಲೋರಿಡಾ ಎಲೆಕ್ಷನ್ ಲ್ಯಾಬ್ ತಿಳಿಸಿದೆ.

ಇಂದು ಮತದಾನವಾದರೂ, ಸಂಪೂರ್ಣ ಯುಎಸ್‌ನವರಿಗೆ ಒಂದೇ ಸಮಯಕ್ಕೆ ಬೆಳಗಾಗುವುದಿಲ್ಲ. ಆದ್ದರಿಂದ ಎಲ್ಲರಿಗೂ ಒಂದೇ ಸಮಯಕ್ಕೆ ಮತದಾನ ಕೇಂದ್ರಗಳಿಗೆ ಹೋಗಲು ಆಗುವುದಿಲ್ಲ. ಯುಎಸ್‌ನ ಭೂಭಾಗವು ಆರು ಸಮಯ ವಲಯಗಳನ್ನು ಹೊಂದಿದೆ. ಆದ್ದರಿಂದ, ಭಾರತೀಯ ಕಾಲಮಾನ (ಐಎಸ್‌ಟಿ) ಪರಿಗಣಿಸಿದಾಗ ವಿವಿಧ ಸಮಯಗಳಲ್ಲಿ ಮತಗಟ್ಟೆಗಳು ತೆರೆಯಲ್ಪಡುತ್ತವೆ.

ಯುಎಸ್‌ನಾದ್ಯಂತ ಮತಗಟ್ಟೆಗಳು ಬೆಳಿಗ್ಗೆ 7 ರಿಂದ 11 ರವರೆಗೆ (ಸ್ಥಳೀಯ ಕಾಲಮಾನ) ತೆರೆಯುವ ನಿರೀಕ್ಷೆಯಿದೆ. ಇದನ್ನು ಭಾರತೀಯ ಕಾಲಮಾನಕ್ಕೆ ಹೋಲಿಸಿದರೆ, ಇಂದು ಸಂಜೆ 3.30ರಿಂದ ರಾತ್ರಿ 8.30ರ ನಡುವೆ ಮತಗಟ್ಟೆಗಳು ತೆರೆಯಬಹುದು. ಯುಎಸ್‌ ಸ್ಥಳೀಯ ಕಾಲಮಾನದ ಪ್ರಕಾರ, ಇಂದು ಸಂಜೆ 5.30ರವರೆಗೆ ಮತದಾನ ಪ್ರಕ್ರಿಯೆ ನಡೆಯಲಿದೆ. ಅಲ್ಲಿ ಮತದಾನ ಕೊನೆಗೊಳ್ಳುವ ಹೊತ್ತಿಗೆ, ಭಾರತದಲ್ಲಿ ನಾಳೆ (ನ.6, ಬುಧವಾರ) ಬೆಳಿಗ್ಗೆ 5.30 ಆಗಬಹುದು.

ಯುಎಸ್‌ನಲ್ಲಿ ಮತದಾನ ಪ್ರಕ್ರಿಯೆ ಕೊನೆಗೊಂಡ ನಂತರ ಎಣಿಕೆ ಆರಂಭವಾಗುವ ನಿರೀಕ್ಷೆ ಇದೆ. ಭಾರತೀಯ ಕಾಲಮಾನ ಪ್ರಕಾರ, ನಾಳೆ (ಬುಧವಾರ) ಮತ ಎಣಿಕೆ ಪ್ರಾರಂಭಗೊಳ್ಳಲಿದೆ. ಯುಎಸ್‌ನ ಪಶ್ಚಿಮ ಭಾಗಗಳಲ್ಲಿ ಮತದಾನ ನಡೆಯುತ್ತಿರುವಾಗಲೂ, ಪೂರ್ವ ಕರಾವಳಿ ಪ್ರದೇಶಗಳಲ್ಲಿ ಮತ ಎಣಿಕೆ ಶುರುವಾಗುವ ಸಾಧ್ಯತೆಯಿದೆ.

ಮತದಾನ ಕೊನೆಗೊಂಡ ಬಳಿಕ ಎಣಿಕೆ ಪ್ರಾರಂಭವಾದರೆ ಆರಂಭಿಕ ಟ್ರೆಂಡ್ ಮಾಹಿತಿ ನಮಗೆ ಲಭ್ಯವಾಗಬಹುದು. ಆದರೆ, ಅಂತಿಮ ಫಲಿತಾಂಶಕ್ಕೆ ಕೆಲ ದಿನಗಳು ಕಾಯಬೇಕಿದೆ. ಏಕೆಂದರೆ ವಿವಿಧ ಯುಎಸ್‌ ರಾಜ್ಯಗಳು ಮತಗಳ ಎಣಿಕೆಯ ವಿಭಿನ್ನ ವಿಧಾನಗಳನ್ನು ಹೊಂದಿವೆ. ನಂತರ ಮೇಲ್-ಇನ್ ಮತಪತ್ರಗಳ ಸಮಸ್ಯೆಯೂ ಇದೆ. ಅತಿ ಕಡಿಮೆ ಗೆಲುವಿನ ಅಂತರಗಳಿದ್ದಲ್ಲಿ, ಮತಗಟ್ಟೆ ಅಧಿಕಾರಿಗಳು ಮರು ಎಣಿಕೆ ಮಾಡಲು ನಿರ್ಧರಿಸಬಹುದು. ಮುಖ್ಯವಾಗಿ, ಫಲಿತಾಂಶಗಳಿಗೆ ಕಾನೂನು ಸವಾಲುಗಳು ಇರಬಹುದು. ಇದು ಚುನಾವಣಾ ಫಲಿತಾಂಶದ ಅಂತಿಮ ಘೋಷಣೆಯನ್ನು ಇನ್ನಷ್ಟು ವಿಳಂಬಗೊಳಿಸಬಹುದು.

ಫಲಿತಾಂಶಗಳು ತನಗೆ ವಿರುದ್ಧವಾಗಿ ಬಂದರೆ ಏನು ಮಾಡುತ್ತೇನೆ ಎಂದು ಹೇಳಲು ಮಾಜಿ ಅಧ್ಯಕ್ಷ ಟ್ರಂಪ್ ನಿರಾಕರಿಸಿದ್ದಾರೆ. ಆದರೆ, 2020 ರ ಚುನಾವಣೆಯಲ್ಲಿ ಹಾಲಿ ಅಧ್ಯಕ್ಷ ಜೋ ಬೈಡೆನ್‌ ವಿರುದ್ದ ಸೋತ ಬಳಿಕ ಟ್ರಂಪ್ ಸೃಷ್ಟಿಸಿದ ಪರಿಸ್ಥಿತಿ ಜಗತ್ತಿಗೆ ಗೊತ್ತಿದೆ.

ಯುಎಸ್‌ನಲ್ಲಿ ಮತದಾರರು ನೇರವಾಗಿ ಅಧ್ಯಕ್ಷರನ್ನು ಆಯ್ಕೆ ಮಾಡುವುದಿಲ್ಲ. ಜನರು ರಾಜ್ಯಗಳಿಂದ ತಮ್ಮ ಪ್ರತಿನಿಧಿಗಳನ್ನು ಆಯ್ಕೆ ಮಾಡುತ್ತಾರೆ. ನಂತರ ಅವರು ಅಧ್ಯಕ್ಷೀಯ ಅಭ್ಯರ್ಥಿಗೆ ಮತ ಹಾಕುತ್ತಾರೆ.

ಎಲ್ಲವೂ ವೇಳಾಪಟ್ಟಿಯ ಪ್ರಕಾರ ನಡೆದರೆ, ಹೊಸ ಯುಎಸ್ ಅಧ್ಯಕ್ಷರು ಮತ್ತು ಉಪಾಧ್ಯಕ್ಷರು ಜನವರಿ 20, 2025 ರಂದು ದೇಶದ ಅಧಿಕಾರವನ್ನು ವಹಿಸಿಕೊಳ್ಳಲಿದ್ದಾರೆ.

ಇದನ್ನೂ ಓದಿ : ಕೆನಡಾ ಹಿಂದೂ ದೇವಾಲಯದ ಭಕ್ತರ ಮೇಲೆ ದಾಳಿ ಆರೋಪ : ಪ್ರಧಾನಿ ಟ್ರುಡೊ ಖಂಡನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: 2ಲಕ್ಷ ಮತದಾರರಲ್ಲಿ ಬಸವನಗುಡಿಯಲ್ಲಿ ಉಳಿಯುವುದು 88 ಸಾವಿರ ಮಾತ್ರಾ?: SIR ಪರಿಷ್ಕರಣೆಯ ಆಘಾತಕಾರಿ ಲೆಕ್ಕಾಚಾರ

2023ರ ಚುನಾವಣೆಯಲ್ಲಿ ಬಸವನಗುಡಿಯಲ್ಲಿ 1.28 ಲಕ್ಷ ಮತಗಳು ಚಲಾಯಿಸಲ್ಪಟ್ಟಿದ್ದವು. ಆದರೆ ಪ್ರಸ್ತುತ SIR ಪ್ರಕ್ರಿಯೆಯಲ್ಲಿ 1.13 ಲಕ್ಷ ಜನರನ್ನು ಹೊರಗಿಟ್ಟು, ಕರಡು ಪಟ್ಟಿಯಲ್ಲಿ ಕೇವಲ 1.35 ಲಕ್ಷ ಮತದಾರರನ್ನು ಮಾತ್ರ ಉಳಿಸಿಕೊಳ್ಳಲಾಗಿದೆ. ಇದರ...

ಕರ್ನಾಟಕ ಎಸ್ಐಆರ್: 43.81 ಲಕ್ಷ ಜನರಿಗೆ SIR ನೋಟಿಸ್: ಗಣ್ಯರ ಹೆಸರು ಸರಿಪಡಿಸುವ ಚುನಾವಣಾ ಆಯೋಗಕ್ಕೆ ಜನ-ಸಾಮಾನ್ಯರ ನೋವು ಕಾಣುತ್ತಿಲ್ಲವೇ?

ಕರ್ನಾಟಕದಲ್ಲಿ SIR ವೇಳೆ 43.81 ಲಕ್ಷ ಮತದಾರರ ಪ್ರಕರಣಗಳಿಗೆ ನೋಟಿಸ್‌ಗಳನ್ನು ಸೃಷ್ಟಿಸಲಾಗಿದ್ದು, ಅವರ ದಾಖಲೆಗಳ ಪರಿಶೀಲನೆಗೆ ಕ್ರಮ ಕೈಗೊಳ್ಳಲಾಗಿದೆ. ಈ ಪೈಕಿ 23.45 ಲಕ್ಷ ಪ್ರಕರಣಗಳಲ್ಲಿ 2002ರ ಮತದಾರರ ಪಟ್ಟಿಯೊಂದಿಗೆ ಮ್ಯಾಪಿಂಗ್ ಆಗದಿರುವುದು...

ಪಿಣರಾಯಿ ವಿಜಯನ್ ವಿರುದ್ಧ ಎಫ್‌ಐಆರ್‌ಗೆ ಇಡಿ ಪತ್ರ: ಕಾನೂನು ಪರಿಶೀಲನೆ ನಡೆಸಲಾಗುವುದು ಎಂದ ಸಿಎಂ ವಿ.ಡಿ. ಸತೀಶನ್

ಆರೋಪಿತ ಸಿಎಂಆರ್‌ಎಲ್ ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಪಿಐ(ಎಂ) ಹಿರಿಯ ನಾಯಕ ಪಿಣರಾಯಿ ವಿಜಯನ್ ಮತ್ತು ಇತರರ ವಿರುದ್ಧ ಎಫ್‌ಐಆರ್ ದಾಖಲಿಸಲು ಜಾರಿ ನಿರ್ದೇಶನಾಲಯ (ಇಡಿ) ನೀಡಿರುವ ಪತ್ರವನ್ನು ಕಾನೂನುಬದ್ಧವಾಗಿ ಪರಿಶೀಲಿಸಲಾಗುವುದು, ಅದರ ನಂತರ...

‘ಸಿಇಸಿ ಜ್ಞಾನೇಶ್ ಕುಮಾರ್ ಮಗಳು’ : ನೋಯ್ಡಾ ಜಿಲ್ಲಾಧಿಕಾರಿಗೆ ಅಲಹಾಬಾದ್ ಹೈಕೋರ್ಟ್ ತಪರಾಕಿ ಬೆನ್ನಲ್ಲೇ ವಿಪಕ್ಷ ನಾಯಕರ ವಾಗ್ದಾಳಿ

ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ (NSA) ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿನಿಯೊಬ್ಬರನ್ನು ಮುನ್ನೆಚ್ಚರಿಕೆ ಕ್ರಮವಾಗಿ ವಶಕ್ಕೆ ಪಡೆದಿದ್ದಕ್ಕಾಗಿ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ಮಗಳು ಹಾಗೂ ನೋಯ್ಡಾ ಜಿಲ್ಲಾಧಿಕಾರಿ ಮೇಧಾ ರೂಪಮ್ ಅವರನ್ನು...

ಮಲ್ಲಿಕಾರ್ಜುನ ಖರ್ಗೆ ಸಭೆಯ ನಂತರ ‘ಶುದ್ಧೀಕರಣ’ ವಿವಾದ: ಅಪರಿಚಿತರ ವಿರುದ್ಧ ಎಫ್‌ಐಆರ್, ತೀವ್ರ ಆಕ್ರೋಶ ವ್ಯಕ್ತಪಡಿಸಿದ ಕಾಂಗ್ರೆಸ್!

ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸಾರ್ವಜನಿಕ ಸಭೆ ನಡೆದ ನಂತರ, ಆ ಮೈದಾನವನ್ನು 'ಶುದ್ಧೀಕರಣ' (ಶುದ್ಧೀಕರಣ ಯಜ್ಞ) ಗೊಳಿಸಿದ ವಿವಾದಾತ್ಮಕ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲ್ದ್ವಾನಿಯ ಕೊತ್ವಾಲಿ...

ದೆಹಲಿ ಮತದಾರರ ಪಟ್ಟಿಗೆ ರಾಘವ್ ಚಡ್ಡಾ ಹೆಸರು ಸೇರ್ಪಡೆ; ಸೂಕ್ತ ಪ್ರಕ್ರಿಯೆ ಅನುಸರಿಸಿಲ್ಲ ಎಂದು ಎಎಪಿ ಆರೋಪ

ರಾಷ್ಟ್ರ ರಾಜಧಾನಿಯ ಮತದಾರರ ಪಟ್ಟಿಯ ಪ್ರಸ್ತುತ ನಡೆಯುತ್ತಿರುವ ವಿಶೇಷ ಪರಿಷ್ಕರಣೆ (ಎಸ್‌ಐಆರ್) ಅಡಿಯಲ್ಲಿ, ಪಂಜಾಬ್‌ನ ಬಿಜೆಪಿ ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರನ್ನು ದೆಹಲಿಯ ಮತದಾರರ ಪಟ್ಟಿಗೆ ಸೇರಿಸಲಾಗಿದೆ ಎಂದು ಚುನಾವಣಾ...

ಮಲ್ಲಿಕಾರ್ಜುನ ಖರ್ಗೆ ಭಾಷಣ ಮಾಡಿದ ವೇದಿಕೆ ‘ಶುದ್ಧೀಕರಣ’ : 29 ದಿನಗಳ ನಂತರ ಎಫ್‌ಐಆರ್ ದಾಖಲು

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ್ದ ಉತ್ತರಾಖಂಡದ ಹಲ್ದ್ವಾನಿಯ ವೇದಿಕೆಯೊಂದರಲ್ಲಿ 'ಶುದ್ಧೀಕರಣ' ನಡೆದ ಇಪ್ಪತ್ತೊಂಬತ್ತು ದಿನಗಳ ನಂತರ, ಪೊಲೀಸರು ಮಂಗಳವಾರ (ಸೆಪ್ಟೆಂಬರ್ 8) ಎಸ್‌ಸಿ/ಎಸ್‌ಟಿ ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ...

‘ಪ್ರೊ. ಸಿಎನ್ಆರ್ ರಾವ್‌ ಅವರಿಗೆ ನೋಟಿಸ್ ಕೊಟ್ಟಿಲ್ಲ..’; ಚುನಾವಣಾ ಆಯೋಗದ ಸ್ಪಷ್ಟನೆ

ಕರ್ನಾಟಕದ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (ಎಸ್‌ಐಆರ್) ವೇಳೆ ಹೆಸರಿನ ಕಾಗುಣಿತದಲ್ಲಿನ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ, ದೇಶದ ಪ್ರಸಿದ್ಧ ವಿಜ್ಞಾನಿಗಳಲ್ಲಿ ಒಬ್ಬರಾದ ಭಾರತರತ್ನ ಪ್ರೊ. ಸಿ.ಎನ್.ಆರ್. ರಾವ್ ಅವರಿಗೆ ತಮ್ಮ ಗುರುತನ್ನು ಸಾಬೀತುಪಡಿಸಲು...

‘ಬಂಗಾಳಿಗಳು ಮೀನು ಇಲ್ಲದೆ ಬದುಕಲು ಸಾಧ್ಯವಿಲ್ಲ’; ಆಹಾರ ಪದ್ಧತಿ ನಿರ್ಧಾರ ಬಿಜೆಪಿ ಕೆಲಸವಲ್ಲ: ಬಿಜೆಪಿ ಮುಖ್ಯಸ್ಥ ಸಮಿಕ್ ಭಟ್ಟಾಚಾರ್ಯ 

ಕೊಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಕೆಲವೇ ತಿಂಗಳುಗಳಲ್ಲಿ ದುರ್ಗಾ ಪೂಜೆ ಮತ್ತು ನವರಾತ್ರಿ ಆಚರಣೆಗಳ ಸಂದರ್ಭದಲ್ಲಿ ಆಹಾರ ಪದ್ಧತಿಯ ಕುರಿತು ಕೆಲವು ಧಾರ್ಮಿಕ ನಾಯಕರು ಹಾಗೂ ವಿಶ್ವ ಹಿಂದೂ...

ಮತದಾರ ಇರುವುದು ವಿದೇಶದಲ್ಲಿ, ಆದರೆ ವಿಚಾರಣೆ ನಡೆಯುತ್ತಿರುವುದು ಇಲ್ಲಿ: ಕರ್ನಾಟಕ SIR ತಂದಿಟ್ಟ ಧರ್ಮಸಂಕಟ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ, ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿದ್ದ ಅನೇಕ ಅನಿವಾಸಿ ಕನ್ನಡಿಗರಿಗೆ ಬಿಸಿ ತುಪ್ಪವಾಗಿ ಪರಿಣಮಿಸಿದೆ. ಹೆಸರಿನಲ್ಲಿನ ವ್ಯತ್ಯಾಸ, ವಯಸ್ಸಿನ ವ್ಯತ್ಯಾಸ...