Homeಮುಖಪುಟಯುಎಸ್ ಅಧ್ಯಕ್ಷೀಯ ಚುನಾವಣೆ | ಇಂದು ಮತದಾನ : ಟ್ರಂಪ್, ಹ್ಯಾರಿಸ್ ನಡುವೆ ಜಿದ್ದಾಜಿದ್ದಿನ ಸ್ಪರ್ಧೆ

ಯುಎಸ್ ಅಧ್ಯಕ್ಷೀಯ ಚುನಾವಣೆ | ಇಂದು ಮತದಾನ : ಟ್ರಂಪ್, ಹ್ಯಾರಿಸ್ ನಡುವೆ ಜಿದ್ದಾಜಿದ್ದಿನ ಸ್ಪರ್ಧೆ

- Advertisement -
- Advertisement -

ತಿಂಗಳುಗಳ ಕಾಲ ನಡೆದ ವಾಗ್ವಾದ, ಆರೋಪ-ಪ್ರತ್ಯಾರೋಪ, ಆಮಿಷ, ಓಲೈಕೆ ಡೊನಾಲ್ಡ್ ಟ್ರಂಪ್ ಅವರ ಎರಡು ಹತ್ಯೆ ಪ್ರಯತ್ನಗಳ ಬಳಿಕ ಅಂತಿಮವಾಗಿ ಇಂದು (ನ.5) ಯುಎಸ್ ಅಧ್ಯಕ್ಷ ಸ್ಥಾನದ ಚುನಾವಣೆಯ ಮತದಾನ ನಡೆಯಲಿದೆ.

ರಿಪಬ್ಲಿಕನ್ ಪಕ್ಷದಿಂದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಡೆಮಾಕ್ರಟಿಕ್ ಪಕ್ಷದಿಂದ ಹಾಲಿ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದಾರೆ. ಇಬ್ಬರ ನಡುವೆ ಜಿದ್ದಾಜಿದ್ದಿನ ಸ್ಪರ್ಧೆ ಏರ್ಪಟ್ಟಿದೆ.

ವರದಿಗಳ ಪ್ರಕಾರ, ಈಗಾಗಲೇ 7.8 ಕೋಟಿಗೂ ಅಧಿಕ ಮತದಾರರು ಮೇಲ್‌-ಇನ್ ಮೂಲಕ ತಮ್ಮ ಹಕ್ಕು ಚಲಾಯಿಸಿದ್ದಾರೆ ಎಂದು ಯೂನಿವರ್ಸಿಟಿ ಆಫ್ ಫ್ಲೋರಿಡಾ ಎಲೆಕ್ಷನ್ ಲ್ಯಾಬ್ ತಿಳಿಸಿದೆ.

ಇಂದು ಮತದಾನವಾದರೂ, ಸಂಪೂರ್ಣ ಯುಎಸ್‌ನವರಿಗೆ ಒಂದೇ ಸಮಯಕ್ಕೆ ಬೆಳಗಾಗುವುದಿಲ್ಲ. ಆದ್ದರಿಂದ ಎಲ್ಲರಿಗೂ ಒಂದೇ ಸಮಯಕ್ಕೆ ಮತದಾನ ಕೇಂದ್ರಗಳಿಗೆ ಹೋಗಲು ಆಗುವುದಿಲ್ಲ. ಯುಎಸ್‌ನ ಭೂಭಾಗವು ಆರು ಸಮಯ ವಲಯಗಳನ್ನು ಹೊಂದಿದೆ. ಆದ್ದರಿಂದ, ಭಾರತೀಯ ಕಾಲಮಾನ (ಐಎಸ್‌ಟಿ) ಪರಿಗಣಿಸಿದಾಗ ವಿವಿಧ ಸಮಯಗಳಲ್ಲಿ ಮತಗಟ್ಟೆಗಳು ತೆರೆಯಲ್ಪಡುತ್ತವೆ.

ಯುಎಸ್‌ನಾದ್ಯಂತ ಮತಗಟ್ಟೆಗಳು ಬೆಳಿಗ್ಗೆ 7 ರಿಂದ 11 ರವರೆಗೆ (ಸ್ಥಳೀಯ ಕಾಲಮಾನ) ತೆರೆಯುವ ನಿರೀಕ್ಷೆಯಿದೆ. ಇದನ್ನು ಭಾರತೀಯ ಕಾಲಮಾನಕ್ಕೆ ಹೋಲಿಸಿದರೆ, ಇಂದು ಸಂಜೆ 3.30ರಿಂದ ರಾತ್ರಿ 8.30ರ ನಡುವೆ ಮತಗಟ್ಟೆಗಳು ತೆರೆಯಬಹುದು. ಯುಎಸ್‌ ಸ್ಥಳೀಯ ಕಾಲಮಾನದ ಪ್ರಕಾರ, ಇಂದು ಸಂಜೆ 5.30ರವರೆಗೆ ಮತದಾನ ಪ್ರಕ್ರಿಯೆ ನಡೆಯಲಿದೆ. ಅಲ್ಲಿ ಮತದಾನ ಕೊನೆಗೊಳ್ಳುವ ಹೊತ್ತಿಗೆ, ಭಾರತದಲ್ಲಿ ನಾಳೆ (ನ.6, ಬುಧವಾರ) ಬೆಳಿಗ್ಗೆ 5.30 ಆಗಬಹುದು.

ಯುಎಸ್‌ನಲ್ಲಿ ಮತದಾನ ಪ್ರಕ್ರಿಯೆ ಕೊನೆಗೊಂಡ ನಂತರ ಎಣಿಕೆ ಆರಂಭವಾಗುವ ನಿರೀಕ್ಷೆ ಇದೆ. ಭಾರತೀಯ ಕಾಲಮಾನ ಪ್ರಕಾರ, ನಾಳೆ (ಬುಧವಾರ) ಮತ ಎಣಿಕೆ ಪ್ರಾರಂಭಗೊಳ್ಳಲಿದೆ. ಯುಎಸ್‌ನ ಪಶ್ಚಿಮ ಭಾಗಗಳಲ್ಲಿ ಮತದಾನ ನಡೆಯುತ್ತಿರುವಾಗಲೂ, ಪೂರ್ವ ಕರಾವಳಿ ಪ್ರದೇಶಗಳಲ್ಲಿ ಮತ ಎಣಿಕೆ ಶುರುವಾಗುವ ಸಾಧ್ಯತೆಯಿದೆ.

ಮತದಾನ ಕೊನೆಗೊಂಡ ಬಳಿಕ ಎಣಿಕೆ ಪ್ರಾರಂಭವಾದರೆ ಆರಂಭಿಕ ಟ್ರೆಂಡ್ ಮಾಹಿತಿ ನಮಗೆ ಲಭ್ಯವಾಗಬಹುದು. ಆದರೆ, ಅಂತಿಮ ಫಲಿತಾಂಶಕ್ಕೆ ಕೆಲ ದಿನಗಳು ಕಾಯಬೇಕಿದೆ. ಏಕೆಂದರೆ ವಿವಿಧ ಯುಎಸ್‌ ರಾಜ್ಯಗಳು ಮತಗಳ ಎಣಿಕೆಯ ವಿಭಿನ್ನ ವಿಧಾನಗಳನ್ನು ಹೊಂದಿವೆ. ನಂತರ ಮೇಲ್-ಇನ್ ಮತಪತ್ರಗಳ ಸಮಸ್ಯೆಯೂ ಇದೆ. ಅತಿ ಕಡಿಮೆ ಗೆಲುವಿನ ಅಂತರಗಳಿದ್ದಲ್ಲಿ, ಮತಗಟ್ಟೆ ಅಧಿಕಾರಿಗಳು ಮರು ಎಣಿಕೆ ಮಾಡಲು ನಿರ್ಧರಿಸಬಹುದು. ಮುಖ್ಯವಾಗಿ, ಫಲಿತಾಂಶಗಳಿಗೆ ಕಾನೂನು ಸವಾಲುಗಳು ಇರಬಹುದು. ಇದು ಚುನಾವಣಾ ಫಲಿತಾಂಶದ ಅಂತಿಮ ಘೋಷಣೆಯನ್ನು ಇನ್ನಷ್ಟು ವಿಳಂಬಗೊಳಿಸಬಹುದು.

ಫಲಿತಾಂಶಗಳು ತನಗೆ ವಿರುದ್ಧವಾಗಿ ಬಂದರೆ ಏನು ಮಾಡುತ್ತೇನೆ ಎಂದು ಹೇಳಲು ಮಾಜಿ ಅಧ್ಯಕ್ಷ ಟ್ರಂಪ್ ನಿರಾಕರಿಸಿದ್ದಾರೆ. ಆದರೆ, 2020 ರ ಚುನಾವಣೆಯಲ್ಲಿ ಹಾಲಿ ಅಧ್ಯಕ್ಷ ಜೋ ಬೈಡೆನ್‌ ವಿರುದ್ದ ಸೋತ ಬಳಿಕ ಟ್ರಂಪ್ ಸೃಷ್ಟಿಸಿದ ಪರಿಸ್ಥಿತಿ ಜಗತ್ತಿಗೆ ಗೊತ್ತಿದೆ.

ಯುಎಸ್‌ನಲ್ಲಿ ಮತದಾರರು ನೇರವಾಗಿ ಅಧ್ಯಕ್ಷರನ್ನು ಆಯ್ಕೆ ಮಾಡುವುದಿಲ್ಲ. ಜನರು ರಾಜ್ಯಗಳಿಂದ ತಮ್ಮ ಪ್ರತಿನಿಧಿಗಳನ್ನು ಆಯ್ಕೆ ಮಾಡುತ್ತಾರೆ. ನಂತರ ಅವರು ಅಧ್ಯಕ್ಷೀಯ ಅಭ್ಯರ್ಥಿಗೆ ಮತ ಹಾಕುತ್ತಾರೆ.

ಎಲ್ಲವೂ ವೇಳಾಪಟ್ಟಿಯ ಪ್ರಕಾರ ನಡೆದರೆ, ಹೊಸ ಯುಎಸ್ ಅಧ್ಯಕ್ಷರು ಮತ್ತು ಉಪಾಧ್ಯಕ್ಷರು ಜನವರಿ 20, 2025 ರಂದು ದೇಶದ ಅಧಿಕಾರವನ್ನು ವಹಿಸಿಕೊಳ್ಳಲಿದ್ದಾರೆ.

ಇದನ್ನೂ ಓದಿ : ಕೆನಡಾ ಹಿಂದೂ ದೇವಾಲಯದ ಭಕ್ತರ ಮೇಲೆ ದಾಳಿ ಆರೋಪ : ಪ್ರಧಾನಿ ಟ್ರುಡೊ ಖಂಡನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...