Homeಮುಖಪುಟಖಾಸಗಿ ಸ್ವತ್ತು ತೀರ್ಪು : ಅಯ್ಯರ್ ಕುರಿತ ಸಿಜೆಐ ಹೇಳಿಕೆಗೆ ನ್ಯಾ. ನಾಗರತ್ನ, ಧುಲಿಯಾ ಆಕ್ಷೇಪ

ಖಾಸಗಿ ಸ್ವತ್ತು ತೀರ್ಪು : ಅಯ್ಯರ್ ಕುರಿತ ಸಿಜೆಐ ಹೇಳಿಕೆಗೆ ನ್ಯಾ. ನಾಗರತ್ನ, ಧುಲಿಯಾ ಆಕ್ಷೇಪ

- Advertisement -
- Advertisement -

‘ಜನ ಸಾಮಾನ್ಯರ ಒಳಿತಿಗಾಗಿ’ ವಿತರಿಸಲು ಎಲ್ಲಾ ಖಾಸಗಿ ಒಡೆತನದ ಸಂಪನ್ಮೂಲಗಳನ್ನು ಸ್ವಾಧೀನಪಡಿಸಿಕೊಳ್ಳಲು ಸಂವಿಧಾನದ ಅಡಿಯಲ್ಲಿ ಪ್ರಭುತ್ವಕ್ಕೆ ಅಧಿಕಾರವಿಲ್ಲ ಎಂದು 7:2 ಬಹುಮತದ ತೀರ್ಪಿನಲ್ಲಿ ಸುಪ್ರೀಂ ಕೋರ್ಟ್ ನಿನ್ನೆ (ನ.5) ಹೇಳಿದೆ.

ಸಂವಿಧಾನದ ಪರಿಚ್ಛೇದ 39 (ಬಿ) ಅಡಿಯಲ್ಲಿ ಎಲ್ಲಾ ಖಾಸಗಿ ಒಡೆತನದ ಸಂಪನ್ಮೂಲಗಳನ್ನು ಪ್ರಭುತ್ವ ಸ್ವಾಧೀನಪಡಿಸಿಕೊಳ್ಳಬಹುದು ಎಂಬ ನ್ಯಾಯಮೂರ್ತಿ ಕೃಷ್ಣ ಅಯ್ಯರ್ ಅವರ ಹಿಂದಿನ ತೀರ್ಪನ್ನು ಸಿಜೆಐ ನೇತೃತ್ವದ ಬಹುಮತದ ತೀರ್ಪು ರದ್ದುಪಡಿಸಿದೆ.

‘ಜನ ಸಾಮಾನ್ಯರ ಒಳಿತಿಗಾಗಿ’ ಸಂವಿಧಾನದ ಪರಿಚ್ಛೇದ 39 (ಬಿ) ಅಡಿಯಲ್ಲಿ ಖಾಸಗಿ ಆಸ್ತಿಗಳನ್ನು ‘ಸಮುದಾಯದ ಸಂಪನ್ಮೂಲಗಳು ಎಂದು ಪರಿಗಣಿಸಬಹುದೇ? ಮತ್ತು ಪ್ರಭುತ್ವ ಅವುಗಳನ್ನು ಸ್ವಾಧೀನಪಡಿಸಿಕೊಳ್ಳಬಹುದೇ?’ ಎಂಬ ಕಾನೂನಾತ್ಮಕ ಪ್ರಶ್ನೆಯ ಕುರಿತು ತನ್ನ ಮತ್ತು ಪೀಠದಲ್ಲಿದ್ದ ಇತರ ಆರು ನ್ಯಾಯಾಧೀಶರಾದ ಹೃಷಿಕೇಶ್ ರಾಯ್, ಜೆ.ಬಿ. ಪರ್ದಿವಾಲಾ, ಮನೋಜ್ ಮಿಶ್ರಾ, ರಾಜೇಶ್ ಬಿಂದಾಲ್, ಸತೀಶ್ ಚಂದ್ರ ಶರ್ಮಾ ಮತ್ತು ಆಗಸ್ಟಿನ್ ಜಾರ್ಜ್ ಮಸಿಹ್ ಅವರ ತೀರ್ಪನ್ನು ಸಿಜೆಐ ಚಂದ್ರಚೂಡ್ ಬರೆದಿದ್ದಾರೆ.

ಒಟ್ಟು ಒಂಭತ್ತು ನ್ಯಾಯಾಧೀಶರ ಪೈಕಿ, ನ್ಯಾಯಮೂರ್ತಿ ಬಿ.ವಿ ನಾಗರತ್ನ ಅವರು ಸಿಜೆಐ ಬರೆದ ಬಹುಮತದ ತೀರ್ಪನ್ನು ಭಾಗಶಃ ಒಪ್ಪಿಕೊಂಡಿಲ್ಲ. ನ್ಯಾಯಮೂರ್ತಿ ಸುಧಾಂಶು ಧುಲಿಯಾ ಅವರು ಎಲ್ಲಾ ಅಂಶಗಳಲ್ಲಿ ಭಿನ್ನಾಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಏಳು ನ್ಯಾಯಾಧೀಶರ ಬಹುಮತದ ತೀರ್ಪು ಪ್ರಕಟಿಸುವ ವೇಳೆ ಸಿಜೆಐ ಚಂದ್ರಚೂಡ್ ಅವರು, 1978ರ ಕರ್ನಾಟಕ VS ರಂಗನಾಥ ರೆಡ್ಡಿ ಪ್ರಕರಣದಲ್ಲಿ ನ್ಯಾಯಮೂರ್ತಿ ಕೃಷ್ಣ ಅಯ್ಯರ್ ಅವರು ಮಾಡಿರುವ ವಿಧಿ 39 (ಬಿ) ರ ಅಲ್ಪಸಂಖ್ಯಾತರ ವ್ಯಾಖ್ಯಾನವನ್ನು ಟೀಕಿಸಿದ್ದಾರೆ. ಅಲ್ಲದೆ, 1982ರ ಸಂಜೀವ್ ಕೋಕ್ ಮ್ಯಾನುಪ್ಯಾಕ್ಚರಿಂಗ್ ಕಂಪನಿ VS ಭಾರತ್ ಕೋಕಿಂಗ್ ಕೋಲ್ ಲಿ. ಪ್ರಕರಣದ ತೀರ್ಪಿನಲ್ಲಿ ನ್ಯಾಯಮೂರ್ತಿ ನಾಗರತ್ನ ಅವರ ತಂದೆ 1989ರಲ್ಲಿ ಸಿಜೆಐ ಆಗಿದ್ದ ನ್ಯಾಯಮೂರ್ತಿ ಇ.ಎಸ್ ವೆಂಕಟರಾಮಯ್ಯ ಸೇರಿದಂತೆ ಐವರು ನ್ಯಾಯಾಧೀಶರ ಪೀಠ ನೀಡಿದ ತೀರ್ಪಿನ ವ್ಯಾಖ್ಯಾನವನ್ನೂ ಒಪ್ಪಲು ಸಾಧ್ಯವಿಲ್ಲ ಎಂದಿದ್ದಾರೆ.

“ಅಯ್ಯರ್ ಅವರ ಸಿದ್ದಾಂತವು ವಿಶಾಲವಾದ ಮತ್ತು ಹೊಂದಿಕೊಳ್ಳಬಲ್ಲ ಗುಣ ಲಕ್ಷಣಗಳನ್ನು ಹೊಂದಿರುವ ಸಂವಿಧಾನಕ್ಕೆ ಅನ್ಯಾಯ ಮಾಡಿತ್ತು” ಎಂದು ಸಿಜೆಐ ಹೇಳಿದ್ದಾರೆ.

ಸಿಜೆಐ ನೀಡಿದ ಹೇಳಿಕೆಗೆ ನ್ಯಾಯಮೂರ್ತಿಗಳಾದ ಬಿ.ವಿ ನಾಗರತ್ನ ಮತ್ತು ಸುಧಾಂಶು ಧುಲಿಯಾ ಅವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. “ಸಿಜೆಐ ಅವರ ಅಭಿಪ್ರಾಯಗಳು ಅನಪೇಕ್ಷಿತ ಹಾಗೂ ಸಮರ್ಥನೀಯವಲ್ಲ” ಎಂದು ನ್ಯಾಯಮೂರ್ತಿ ನಾಗರತ್ನ ಅವರು ಹೇಳಿದರೆ, “ಸಿಜೆಐ ಇಂಥ ಹೇಳಿಕೆಯನ್ನು ತಪ್ಪಿಸಬಹುದಿತ್ತು” ಎಂದು ನ್ಯಾಯಮೂರ್ತಿ ಸುಧಾಂಶು ಧುಲಿಯಾ ತಿಳಿಸಿದ್ದಾರೆ.

ನ್ಯಾಯಮೂರ್ತಿ ನಾಗರತ್ನ ಅವರು 130 ಪುಟಗಳ ಪ್ರತ್ಯೇಕ ತೀರ್ಪು ನೀಡಿದ್ದು, “ಆರ್ಥಿಕ ನೀತಿ ನಿರೂಪಣೆ ಮಾಡುವುದು ನ್ಯಾಯಾಲಯದ ಕೆಲಸವಲ್ಲ. ಆದರೆ, ಆರ್ಥಿಕ ಪ್ರಜಾಪ್ರಭುತ್ವವೊಂದರ ಬುನಾದಿಗೆ ಬೇಕಾದಂತಹ ಚೌಕಟ್ಟು ರಚನೆಗೆ ನೆರವು ನೀಡಬಹುದಾಗಿದೆ. ಹೀಗಾಗಿ, ನ್ಯಾಯಮೂರ್ತಿ ಅಯ್ಯರ್ ಅವರ ಸಿದ್ದಾಂತವು ಸಂವಿಧಾನಕ್ಕೆ ಅಪಚಾರವೆಸಗಿಲ್ಲ” ಎಂದಿದ್ದಾರೆ.

“ಸರ್ಕಾರದ ಆರ್ಥಿಕ ನೀತಿಗಳಲ್ಲಿ ಭಾರೀ ಬದಲಾವಣೆಗಳಾಗಿವೆ ಎಂದ ಮಾತ್ರಕ್ಕೆ ಈ ಹಿಂದಿನ ನ್ಯಾಯಮೂರ್ತಿಗಳಿಂದ ಸಂವಿಧಾನಕ್ಕೆ ಅನ್ಯಾಯವಾಗಿದೆ ಎಂದು ಹೇಳುವುದು ಸರಿಯಲ್ಲ” ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

“ನ್ಯಾಯಮೂರ್ತಿ ಅಯ್ಯರ್ ಸಿದ್ದಾಂತ ಕುರಿತಂತೆ ವ್ಯಕ್ತವಾದ ಹೇಳಿಕೆಗೆ ನನ್ನ ಬಲವಾದ ಅಸಮ್ಮತಿಯನ್ನು ದಾಖಲಿಸುತ್ತೇನೆ” ಎಂದು ನ್ಯಾಯಮೂರ್ತಿ ಸುಧಾಂಶು ಧುಲಿಯಾ ಕೂಡ ಹೇಳಿದ್ದಾರೆ.

ಇದನ್ನೂ ಓದಿ : ಎಲ್ಲಾ ಖಾಸಗಿ ಆಸ್ತಿಗಳನ್ನು ಸ್ವಾಧೀನಪಡಿಸಿಕೊಳ್ಳಲು ಪ್ರಭುತ್ವಕ್ಕೆ ಅವಕಾಶವಿಲ್ಲ : ಸುಪ್ರೀಂಕೋರ್ಟ್​

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...

ಪ್ರತಿಭಟನೆಯನ್ನು ಹತ್ತಿಕ್ಕಲು ಅಕ್ಕಾಡಕ್ಕಿಳಿದಿವೆ ಹಿಂದುತ್ವವಾದಿ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ಸ್‌ ಮತ್ತು ಉಗ್ರ ಗೂಂಡಾ ಪಡೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಜೂನ್ 20ರಂದು ಶುರುವಾಗಿದ್ದ ಈ ಆಂದೋಲನ ಇದೀಗ ದೇಶಾದ್ಯಂತ ತೀವ್ರ ಸ್ವರೂಪ ಪಡೆದುಕೊಂಡಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಸಿಜೆಪಿ ಪಟ್ಟು ಹಿಡಿದಿದ್ದು, ಇಂದು...

ಜಿರಳೆಗಳನ್ನು ಸಾಯಿಸಿ ಎಂದು ವಿವಾದಾತ್ಮಕ ಪೋಸ್ಟ್‌ ಹಾಕಿದ ಪ್ರಜ್ಞಾ ಸಿಂಗ್ ಠಾಕೂರ್

ಮಾಜಿ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರು ದೇಶದಿಂದ ಜಿರಳೆಗಳನ್ನು ಶಾಶ್ವತವಾಗಿ ನಿರ್ಮೂಲನೆ ಮಾಡಲು ವ್ಯವಸ್ಥೆ ಮಾಡುವಂತೆ ದೇಶದ ನಾಯಕರಿಗೆ ಮನವಿ ಮಾಡಿದ್ದಾರೆ. X (ಟ್ವಿಟರ್) ನಲ್ಲಿ ಮಾಡಿದ ಪೋಸ್ಟ್‌ನಲ್ಲಿ, 2008 ರ...

ಸೋನಮ್ ವಾಂಗ್ಚುಕ್ ಮತ್ತು ಸರ್ಕಾರದ ಡೀಲ್‌ನಲ್ಲಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಅಂಶವೇ ಇಲ್ಲ

ಕೇಂದ್ರದ ಮೋದಿ ಸರ್ಕಾರ ತನ್ನ ಮೂರು ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಒಪ್ಪಿಕೊಂಡ ನಂತರ, ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಜುಲೈ 23ರ ಗುರುವಾರ ತಮ್ಮ 26 ದಿನಗಳ ಸುದೀರ್ಘ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದ್ದಾರೆ....

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...